ಕುಂಟೋಜಿ,ಬಿದರಕುಂದಿ ರೈತರಿಂದ ಪ್ರತಿಭಟನೆ: 380 ಎಕರೆ ಜಮೀನಿನ ಮೇಲೆ ವಕ್ಭ್ ಬೋರ್ಡ್ ಹೆಸರು ದಾಖಲು

ಕುಂಟೋಜಿ,ಬಿದರಕುಂದಿ ರೈತರಿಂದ ಪ್ರತಿಭಟನೆ: 380 ಎಕರೆ ಜಮೀನಿನ ಮೇಲೆ ವಕ್ಭ್ ಬೋರ್ಡ್ ಹೆಸರು ದಾಖಲು



ಮುದ್ದೇಬಿಹಾಳ : ಕೆಲವು ಸರ್ವೆಗಳ ಜಮೀನಿನ ಮೇಲೆ ದಾಖಲಾಗಿರುವ ವಕ್ಭ್ ಮಂಡಳಿ, ಕರ್ನಾಟಕ ಸರ್ಕಾರ ಹೆಸರನ್ನು ಕಡಿಮೆ ಮಾಡಬೇಕು ಎಂದು ಆಗ್ರಹಿಸಿ ತಾಲ್ಲೂಕಿನ ಕುಂಟೋಜಿ, ಬಿದರಕುಂದಿ ಗ್ರಾಮದ ರೈತರು ರೈತಪರ ಸಂಘಟನೆ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.

ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಹಾಯ್ದು ತಹಶೀಲ್ದಾರ್ ಕಚೇರಿ ಆವರಣಕ್ಕೆ ಆಗಮಿಸಿದರು.ಈ ವೇಳೆ ಸರ್ಕಾರದ ಆದೇಶದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಮಾಜಿ ಸೈನಿಕ ನಾಗಲಿಂಗಯ್ಯ ಮಠ ಮಾತನಾಡಿ, ಕುಂಟೋಜಿ ಸರ್ವೆ ನಂಬರ್ 277, 278,279,289, 290,291, 300,301, 303, 304, 305, 311, 312, 313, 466/2ರಲ್ಲಿ ಅಂದಾಜು 380 ಎಕರೆ ಜಮೀನುಗಳನ್ನು ಕೆಲವರು ಖರೀದಿ ಮಾಡಿದ್ದು ಇನ್ನು ಕೆಲವರ ಆಸ್ತಿಗಳು ಪಿತ್ರಾರ್ಜಿತ ಆಸ್ತಿಗಳಿವೆ. ಈ ರೀತಿಯ ಜಮೀನುಗಳಲ್ಲಿ 2019 ಜನವೇರಿಯಲ್ಲಿ ವಕ್ಬ್ ಆಸ್ತಿ ಕರ್ನಾಟಕ ಸರಕಾರ ಅಂತ 11ನೇ ಕಾಲಂನಲ್ಲಿ ನಮೂದಿಸಲಾಗಿದೆ.ಇದರಿಂದ ಸರ್ಕಾರ ಯಾವುದೇ ಸೌಲಭ್ಯ, ಸಾಲ ಪಡೆದುಕೊಳ್ಳುವುದಕ್ಕೆ ನಮಗೆ ತೊಂದರೆಯಾಗಿದ್ದು 1973ರ ಗೆಜೆಟ್‌ನಲ್ಲಿ ನಮೂದಿಸಿರುವ ವಕ್ಭ್ ಆಸ್ತಿ ಹಾಗೂ ಪಹಣಿಗಳಲ್ಲಿನ ವಕ್ಭ್ ಮಂಡಳಿ ಕರ್ನಾಟಕ ಸರ್ಕಾರ ತಗೆದು ಹಾಕಬೇಕು ಎಂದು ಒತ್ತಾಯಿಸಿದರು.

ಮುಖಂಡ ಸಿದ್ದು ಹೆಬ್ಬಾಳ ಮಾತನಾಡಿ, ರೈತರ ಜಮೀನುಗಳು ಇನಾಮು ಜಮೀನುಗಳಾಗಿದ್ದು 1961ರಲ್ಲೇ ಇವುಗಳ ಉತಾರೆಯಲ್ಲಿದ್ದ ಸರ್ಕಾರವನ್ನು ವಜಾಗೊಳಿಸಲಾಗಿದೆ.ತಕ್ಷಣ ರೈತರ ಜಮೀನುಗಳ ಮೇಲೆ ಇರುವ ವಕ್ಭ್ ಬೋರ್ಡ್ ಪದವನ್ನು ತಗೆದುಹಾಕಬೇಕು.ಇಲ್ಲದಿದ್ದರೆ ತಹಶೀಲ್ದಾರ್ ಕಚೇರಿ ಎದುರಿಗೆ ನ.6 ರಿಂದ ಆಮರಣ ಉಪವಾಸ ಸತ್ಯಾಗ್ರಹ ಆರಂಭಿಸುತ್ತೇವೆ. ರೈತರಿಗೆ ತೊಂದರೆಯಾದಾಗ ಎಲ್ಲ ಹೋರಾಟಗಾರರು, ರಾಜಕೀಯ ಮುಖಂಡರು, ಜನಪ್ರತಿನಿಧಿಗಳು ಆತನೊಂದಿಗೆ ನಿಲ್ಲಬೇಕು ಎಂದು ತಿಳಿಸಿದರು.

ಪ್ರಗತಿಪರ ರೈತ ಭೀಮಸಿ ಹೂಗಾರ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬರಲು ಓಡಾಡಿ ಓಟು ಹಾಕಿಸಿಕೊಂಡವರು ಇಂದು ರೈತರಿಗೆ ತೊಂದರೆಯಾಗಿರುವುದರ ಬಗ್ಗೆ ಧ್ವನಿ ಎತ್ತಬೇಕು.ಕ್ಷೇತ್ರದ ಶಾಸಕರು ಈ ವಿಷಯದ ಕುರಿತು ಧ್ವನಿ ಎತ್ತಬೇಕು.ಕೇವಲ ಹಿಂದೂಗಳಷ್ಟೇ ಅಲ್ಲದೇ ಮುಸ್ಲಿಂರ ಜಮೀನುಗಳಲ್ಲೂ ವಕ್ಭ್ ಬೋರ್ಡ್ ಪದ ಸೇರ್ಪಡೆಯಾಗಿದ್ದು ಅದನ್ನು ತೆಗೆದುಹಾಕಬೇಕು ಎಂದು ಒತ್ತಾಯಿಸಿದರಲ್ಲದೇ ವಕ್ಬ್ ಕಾನೂನು ಸಂವಿಧಾನಕ್ಕಿಂತ ದೊಡ್ಡದಲ್ಲ ಎಂದು ಹೇಳಿದರು.

ರೈತ ಸಂಘದ ಮುಖಂಡ ಸಂಗಣ್ಣ ಬಾಗೇವಾಡಿ ಮಾತನಾಡಿದರು.ತಹಶೀಲ್ದಾರ್ ಬಲರಾಮ ಕಟ್ಟಿಮನಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಬಸವೇಶ್ವರ ದೇವಸ್ಥಾನ ಕಮೀಟಿ ಅಧ್ಯಕ್ಷ ಗುರುಲಿಂಗಪ್ಪ ಸುಲ್ಲಳ್ಳಿ, , ಸಂತೋಷಗೌಡ ಬಿರಾದಾರ , ಗುರುಪಾದ ಹೆಬ್ಬಾಳ , ಮಂಜು ಅಬ್ಬಿಹಾಳಮಠ ಮಲ್ಲಿಕಾರ್ಜುನ ನಾಟಿಕಾರ , ಸಚೀನ ಚಿನ್ನಾಪೂರ , ಈರಣ್ಣ ಹೂಗಾರ , ಸಂಗಣ್ಣ ಕುಂಬಾರ , ದುರ್ಗಪ್ಪ ಕವಡಿಮಟ್ಟಿ ಸೇರಿದಂತೆ ಕುಂಟೋಜಿ ಹಾಗೂ ಬಿದರಕುಂದಿ ರೈತರು ಹಾಗೂ ರೈತ ಸಂಘದ ಪದಾಧಿಕಾರಿಗಳು ಇದ್ದರು.ತಹಶೀಲ್ದಾರ್ ಬಲರಾಮ ಕಟ್ಟಿಮನಿ ಮಾತನಾಡಿ, ಮೇಲಧಿಕಾರಿಗಳಿಂದ ಬರುವ ನಿರ್ದೇಶನದಂತೆ ನಾನು ನಡೆದುಕೊಳ್ಳುತ್ತೇನೆ ಎಂದು ಹೇಳಿದರು.

Latest News

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ಮುದ್ದೇಬಿಹಾಳ : ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳು ಸಂಪೂರ್ಣವಾಗಿ ತಮ್ಮನ್ನು ಆಧುನಿಕ ಮಾಧ್ಯಮಗಳಲ್ಲಿ ಮಗ್ನರಾಗಿದ್ದು ಮಾನವೀಯ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್‌ದಿಂದ ಎ.ಎಲ್.ಬಿ.ಸಿ ಕಾಲುವೆಯ ಕೆಲಸಕ್ಕೆಂದು ಬಂದಿದ್ದ ಕಾರ್ಮಿಕನೋರ್ವ ಸಿಡಿಲಿಗೆ ಬಲಿಯಾಗಿರುವ ಘಟನೆ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ತಾಂಡಾದ ಮಾರುತೇಶ್ವರ ಜಾತ್ರೆಯ ಅಂಗವಾಗಿ ಹಮ್ಮಿಕೊಂಡಿದ್ದ ತೆರಬಂಡಿ ಸ್ಪರ್ಧೆಯಲ್ಲಿ ಶ್ರೀ ಲಕ್ಷ್ಮಿದೇವಿ ಕಮೀಟಿ ರೂಢಗಿ ಎತ್ತುಗಳು ಪ್ರಥಮ, ರೂಢಗಿ ಎಸ್.ಕೆ.ಟಿ ತಂಡ ದ್ವಿತೀಯ ಸ್ಥಾನ ಪಡೆದುಕೊಂಡವು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸಂತೋಷ ಚವ್ಹಾಣ, ಗ್ರಾಮೀಣ ಪ್ರದೇಶದಲ್ಲಿ ರೈತರು ಎತ್ತುಗಳ ಸಂಸ್ಕೃತಿಯನ್ನು ಜೀವಂತವಾಗಿಡುವ ಸಲುವಾಗಿ ಇಂತಹ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ ಎಂದರು. ಗ್ರಾಪಂ ಸದಸ್ಯ ಶಿವಾನಂದ ಲಮಾಣಿ, ಮಾಜಿ ಸದಸ್ಯ ಥಾವರಪ್ಪ

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಬಾಗಲಕೋಟೆ :ಮುರನಾಳ ಗ್ರಾಮದ ಶ್ರೀ ಗದಿಗೆಪ್ಪಗೌಡ ವೆಂಕಪ್ಪ ಕೋನಪ್ಪನವರ ( ೮೩ ) ಇವರು ವಿದ್ಯಾಗಿರಿ , ಬಾಗಲಕೋಟೆ ನಿವಾಸದಲ್ಲಿ ಸ್ವರ್ಗಸ್ಥರಾದರು. ಸೋಮವಾರ ದಿ ೧೨ ಮೇ ೨೦೨೫ ರಂದು ಬೆಳಿಗ್ಗೆ ೧೦ ಗಂಟೆಗೆ ನಂದೀಶ್ವರ ನಗರ, ವಿದ್ಯಾಗಿರಿ ಬಾಗಲಕೋಟೆ ದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವದು. ಸಂಪರ್ಕ ಮೊಬೈಲ್ ನಂಬರ್9740339050 _ಓಂ ಶಾಂತಿ