ಮುದ್ದೇಬಿಹಾಳ : ಕೆಲವು ಸರ್ವೆಗಳ ಜಮೀನಿನ ಮೇಲೆ ದಾಖಲಾಗಿರುವ ವಕ್ಭ್ ಮಂಡಳಿ, ಕರ್ನಾಟಕ ಸರ್ಕಾರ ಹೆಸರನ್ನು ಕಡಿಮೆ ಮಾಡಬೇಕು ಎಂದು ಆಗ್ರಹಿಸಿ ತಾಲ್ಲೂಕಿನ ಕುಂಟೋಜಿ, ಬಿದರಕುಂದಿ ಗ್ರಾಮದ ರೈತರು ರೈತಪರ ಸಂಘಟನೆ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.
ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಹಾಯ್ದು ತಹಶೀಲ್ದಾರ್ ಕಚೇರಿ ಆವರಣಕ್ಕೆ ಆಗಮಿಸಿದರು.ಈ ವೇಳೆ ಸರ್ಕಾರದ ಆದೇಶದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಮಾಜಿ ಸೈನಿಕ ನಾಗಲಿಂಗಯ್ಯ ಮಠ ಮಾತನಾಡಿ, ಕುಂಟೋಜಿ ಸರ್ವೆ ನಂಬರ್ 277, 278,279,289, 290,291, 300,301, 303, 304, 305, 311, 312, 313, 466/2ರಲ್ಲಿ ಅಂದಾಜು 380 ಎಕರೆ ಜಮೀನುಗಳನ್ನು ಕೆಲವರು ಖರೀದಿ ಮಾಡಿದ್ದು ಇನ್ನು ಕೆಲವರ ಆಸ್ತಿಗಳು ಪಿತ್ರಾರ್ಜಿತ ಆಸ್ತಿಗಳಿವೆ. ಈ ರೀತಿಯ ಜಮೀನುಗಳಲ್ಲಿ 2019 ಜನವೇರಿಯಲ್ಲಿ ವಕ್ಬ್ ಆಸ್ತಿ ಕರ್ನಾಟಕ ಸರಕಾರ ಅಂತ 11ನೇ ಕಾಲಂನಲ್ಲಿ ನಮೂದಿಸಲಾಗಿದೆ.ಇದರಿಂದ ಸರ್ಕಾರ ಯಾವುದೇ ಸೌಲಭ್ಯ, ಸಾಲ ಪಡೆದುಕೊಳ್ಳುವುದಕ್ಕೆ ನಮಗೆ ತೊಂದರೆಯಾಗಿದ್ದು 1973ರ ಗೆಜೆಟ್ನಲ್ಲಿ ನಮೂದಿಸಿರುವ ವಕ್ಭ್ ಆಸ್ತಿ ಹಾಗೂ ಪಹಣಿಗಳಲ್ಲಿನ ವಕ್ಭ್ ಮಂಡಳಿ ಕರ್ನಾಟಕ ಸರ್ಕಾರ ತಗೆದು ಹಾಕಬೇಕು ಎಂದು ಒತ್ತಾಯಿಸಿದರು.
ಮುಖಂಡ ಸಿದ್ದು ಹೆಬ್ಬಾಳ ಮಾತನಾಡಿ, ರೈತರ ಜಮೀನುಗಳು ಇನಾಮು ಜಮೀನುಗಳಾಗಿದ್ದು 1961ರಲ್ಲೇ ಇವುಗಳ ಉತಾರೆಯಲ್ಲಿದ್ದ ಸರ್ಕಾರವನ್ನು ವಜಾಗೊಳಿಸಲಾಗಿದೆ.ತಕ್ಷಣ ರೈತರ ಜಮೀನುಗಳ ಮೇಲೆ ಇರುವ ವಕ್ಭ್ ಬೋರ್ಡ್ ಪದವನ್ನು ತಗೆದುಹಾಕಬೇಕು.ಇಲ್ಲದಿದ್ದರೆ ತಹಶೀಲ್ದಾರ್ ಕಚೇರಿ ಎದುರಿಗೆ ನ.6 ರಿಂದ ಆಮರಣ ಉಪವಾಸ ಸತ್ಯಾಗ್ರಹ ಆರಂಭಿಸುತ್ತೇವೆ. ರೈತರಿಗೆ ತೊಂದರೆಯಾದಾಗ ಎಲ್ಲ ಹೋರಾಟಗಾರರು, ರಾಜಕೀಯ ಮುಖಂಡರು, ಜನಪ್ರತಿನಿಧಿಗಳು ಆತನೊಂದಿಗೆ ನಿಲ್ಲಬೇಕು ಎಂದು ತಿಳಿಸಿದರು.
ಪ್ರಗತಿಪರ ರೈತ ಭೀಮಸಿ ಹೂಗಾರ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬರಲು ಓಡಾಡಿ ಓಟು ಹಾಕಿಸಿಕೊಂಡವರು ಇಂದು ರೈತರಿಗೆ ತೊಂದರೆಯಾಗಿರುವುದರ ಬಗ್ಗೆ ಧ್ವನಿ ಎತ್ತಬೇಕು.ಕ್ಷೇತ್ರದ ಶಾಸಕರು ಈ ವಿಷಯದ ಕುರಿತು ಧ್ವನಿ ಎತ್ತಬೇಕು.ಕೇವಲ ಹಿಂದೂಗಳಷ್ಟೇ ಅಲ್ಲದೇ ಮುಸ್ಲಿಂರ ಜಮೀನುಗಳಲ್ಲೂ ವಕ್ಭ್ ಬೋರ್ಡ್ ಪದ ಸೇರ್ಪಡೆಯಾಗಿದ್ದು ಅದನ್ನು ತೆಗೆದುಹಾಕಬೇಕು ಎಂದು ಒತ್ತಾಯಿಸಿದರಲ್ಲದೇ ವಕ್ಬ್ ಕಾನೂನು ಸಂವಿಧಾನಕ್ಕಿಂತ ದೊಡ್ಡದಲ್ಲ ಎಂದು ಹೇಳಿದರು.
ರೈತ ಸಂಘದ ಮುಖಂಡ ಸಂಗಣ್ಣ ಬಾಗೇವಾಡಿ ಮಾತನಾಡಿದರು.ತಹಶೀಲ್ದಾರ್ ಬಲರಾಮ ಕಟ್ಟಿಮನಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಬಸವೇಶ್ವರ ದೇವಸ್ಥಾನ ಕಮೀಟಿ ಅಧ್ಯಕ್ಷ ಗುರುಲಿಂಗಪ್ಪ ಸುಲ್ಲಳ್ಳಿ, , ಸಂತೋಷಗೌಡ ಬಿರಾದಾರ , ಗುರುಪಾದ ಹೆಬ್ಬಾಳ , ಮಂಜು ಅಬ್ಬಿಹಾಳಮಠ ಮಲ್ಲಿಕಾರ್ಜುನ ನಾಟಿಕಾರ , ಸಚೀನ ಚಿನ್ನಾಪೂರ , ಈರಣ್ಣ ಹೂಗಾರ , ಸಂಗಣ್ಣ ಕುಂಬಾರ , ದುರ್ಗಪ್ಪ ಕವಡಿಮಟ್ಟಿ ಸೇರಿದಂತೆ ಕುಂಟೋಜಿ ಹಾಗೂ ಬಿದರಕುಂದಿ ರೈತರು ಹಾಗೂ ರೈತ ಸಂಘದ ಪದಾಧಿಕಾರಿಗಳು ಇದ್ದರು.ತಹಶೀಲ್ದಾರ್ ಬಲರಾಮ ಕಟ್ಟಿಮನಿ ಮಾತನಾಡಿ, ಮೇಲಧಿಕಾರಿಗಳಿಂದ ಬರುವ ನಿರ್ದೇಶನದಂತೆ ನಾನು ನಡೆದುಕೊಳ್ಳುತ್ತೇನೆ ಎಂದು ಹೇಳಿದರು.
ಕುಂಟೋಜಿ,ಬಿದರಕುಂದಿ ರೈತರಿಂದ ಪ್ರತಿಭಟನೆ: 380 ಎಕರೆ ಜಮೀನಿನ ಮೇಲೆ ವಕ್ಭ್ ಬೋರ್ಡ್ ಹೆಸರು ದಾಖಲು
ಕುಂಟೋಜಿ,ಬಿದರಕುಂದಿ ರೈತರಿಂದ ಪ್ರತಿಭಟನೆ: 380 ಎಕರೆ ಜಮೀನಿನ ಮೇಲೆ ವಕ್ಭ್ ಬೋರ್ಡ್ ಹೆಸರು ದಾಖಲು
Latest News
ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್
ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು
ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ
ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.
ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ
ಮುದ್ದೇಬಿಹಾಳ : ಈ ವರ್ಷ ಹಿಂದೆoದಿಗಿoತಲೂ ಅಧಿಕ ಪ್ರಮಾಣದಲ್ಲಿ ಬರಗಾಲ ಕಾಡುತ್ತಿದೆ.ಆದರೆ ಕೆಲವರು ಬರಗಾಲವನ್ನು
ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್
ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ
ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ
ಮುದ್ದೇಬಿಹಾಳ : ಕೆಎಸ್ಡಿಎಲ್ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಬರ ಪರಿಸ್ಥಿತಿ ಕುರಿತು ಆ.11,12 ರಂದು ಅವಲೋಕನ ನಡೆಸಿ ಬೆಳೆ ವೀಕ್ಷಣೆ ಮಾಡಲಿದ್ದಾರೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ. ಆ.11 ರದು ಬೆಳಗ್ಗೆ 11.30ಕ್ಕೆ ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಕುರಿತು ಚರ್ಚೆ, ಮದ್ಯಾಹ್ನ 2.30ಕ್ಕೆ ಬರಪೀಡಿತ ಪ್ರದೇಶಗಳಾದ ಹರಿಂದ್ರಾಳ,ಹಡಲಗೇರಿ ಗ್ರಾಮಗಳಲ್ಲಿ ಹತ್ತಿ,ತೊಗರಿ,ಸಜ್ಜೆ ಬೆಳೆಗಳ ವೀಕ್ಷಣೆ,ಸಂಜೆ 4ಕ್ಕೆ ಢವಳಗಿ ಹೋಬಳಿಯ ಹತ್ತಿ ತೊಗರಿ ಬೆಳೆಗಳ ವೀಕ್ಷಣೆ
ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ
ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ ಬದಲಿಗೆ ಪರಸ್ಪರ ಮಾತನಾಡದಿರುವುದರಿಂದ, ಮುಖ ಗಂಟು ಹಾಕಿರುವುದರಿಂದ ಬಡವನಾಗಿ ಕಾಣುತ್ತಾನೆ. ಮನುಷ್ಯ ಬದುಕಿನಲ್ಲಿ ನೂರು ಕಾಲ ಬದುಕಿರುವಷ್ಟು ನಗು ಸಂಗ್ರಹಿಸಬೇಕು. ಗೆಳೆಯರ ನಡುವೆ ಸರಿ, ತಪ್ಪುಗಳ ಆರೋಗ್ಯಕರ ಚರ್ಚೆ ನಡೆಯಬೇಕು ಎಂದು ಹಿರೂರು ಜಯಸಿದ್ದೇಶ್ವರ ಸ್ವಾಮೀಜಿ ಹೇಳಿದರು. ಪಟ್ಟಣದ ಹಡಲಗೇರಿ ರಸ್ತೆ ಪಕ್ಕದಲ್ಲಿರುವ ಶ್ರೀ ಪದ್ಮಾವತಿ ದೇವಸ್ಥಾನದ ಸಮುದಾಯ ಭವನದಲ್ಲಿ ವಿಬಿಸಿ ಪ್ರೌಢಶಾಲೆಯ 1985-86ನೇ







