ಮುದ್ದೇಬಿಹಾಳ : ಕೆಲವು ಸರ್ವೆಗಳ ಜಮೀನಿನ ಮೇಲೆ ದಾಖಲಾಗಿರುವ ವಕ್ಭ್ ಮಂಡಳಿ, ಕರ್ನಾಟಕ ಸರ್ಕಾರ ಹೆಸರನ್ನು ಕಡಿಮೆ ಮಾಡಬೇಕು ಎಂದು ಆಗ್ರಹಿಸಿ ತಾಲ್ಲೂಕಿನ ಕುಂಟೋಜಿ, ಬಿದರಕುಂದಿ ಗ್ರಾಮದ ರೈತರು ರೈತಪರ ಸಂಘಟನೆ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.
ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಹಾಯ್ದು ತಹಶೀಲ್ದಾರ್ ಕಚೇರಿ ಆವರಣಕ್ಕೆ ಆಗಮಿಸಿದರು.ಈ ವೇಳೆ ಸರ್ಕಾರದ ಆದೇಶದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಮಾಜಿ ಸೈನಿಕ ನಾಗಲಿಂಗಯ್ಯ ಮಠ ಮಾತನಾಡಿ, ಕುಂಟೋಜಿ ಸರ್ವೆ ನಂಬರ್ 277, 278,279,289, 290,291, 300,301, 303, 304, 305, 311, 312, 313, 466/2ರಲ್ಲಿ ಅಂದಾಜು 380 ಎಕರೆ ಜಮೀನುಗಳನ್ನು ಕೆಲವರು ಖರೀದಿ ಮಾಡಿದ್ದು ಇನ್ನು ಕೆಲವರ ಆಸ್ತಿಗಳು ಪಿತ್ರಾರ್ಜಿತ ಆಸ್ತಿಗಳಿವೆ. ಈ ರೀತಿಯ ಜಮೀನುಗಳಲ್ಲಿ 2019 ಜನವೇರಿಯಲ್ಲಿ ವಕ್ಬ್ ಆಸ್ತಿ ಕರ್ನಾಟಕ ಸರಕಾರ ಅಂತ 11ನೇ ಕಾಲಂನಲ್ಲಿ ನಮೂದಿಸಲಾಗಿದೆ.ಇದರಿಂದ ಸರ್ಕಾರ ಯಾವುದೇ ಸೌಲಭ್ಯ, ಸಾಲ ಪಡೆದುಕೊಳ್ಳುವುದಕ್ಕೆ ನಮಗೆ ತೊಂದರೆಯಾಗಿದ್ದು 1973ರ ಗೆಜೆಟ್ನಲ್ಲಿ ನಮೂದಿಸಿರುವ ವಕ್ಭ್ ಆಸ್ತಿ ಹಾಗೂ ಪಹಣಿಗಳಲ್ಲಿನ ವಕ್ಭ್ ಮಂಡಳಿ ಕರ್ನಾಟಕ ಸರ್ಕಾರ ತಗೆದು ಹಾಕಬೇಕು ಎಂದು ಒತ್ತಾಯಿಸಿದರು.
ಮುಖಂಡ ಸಿದ್ದು ಹೆಬ್ಬಾಳ ಮಾತನಾಡಿ, ರೈತರ ಜಮೀನುಗಳು ಇನಾಮು ಜಮೀನುಗಳಾಗಿದ್ದು 1961ರಲ್ಲೇ ಇವುಗಳ ಉತಾರೆಯಲ್ಲಿದ್ದ ಸರ್ಕಾರವನ್ನು ವಜಾಗೊಳಿಸಲಾಗಿದೆ.ತಕ್ಷಣ ರೈತರ ಜಮೀನುಗಳ ಮೇಲೆ ಇರುವ ವಕ್ಭ್ ಬೋರ್ಡ್ ಪದವನ್ನು ತಗೆದುಹಾಕಬೇಕು.ಇಲ್ಲದಿದ್ದರೆ ತಹಶೀಲ್ದಾರ್ ಕಚೇರಿ ಎದುರಿಗೆ ನ.6 ರಿಂದ ಆಮರಣ ಉಪವಾಸ ಸತ್ಯಾಗ್ರಹ ಆರಂಭಿಸುತ್ತೇವೆ. ರೈತರಿಗೆ ತೊಂದರೆಯಾದಾಗ ಎಲ್ಲ ಹೋರಾಟಗಾರರು, ರಾಜಕೀಯ ಮುಖಂಡರು, ಜನಪ್ರತಿನಿಧಿಗಳು ಆತನೊಂದಿಗೆ ನಿಲ್ಲಬೇಕು ಎಂದು ತಿಳಿಸಿದರು.
ಪ್ರಗತಿಪರ ರೈತ ಭೀಮಸಿ ಹೂಗಾರ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬರಲು ಓಡಾಡಿ ಓಟು ಹಾಕಿಸಿಕೊಂಡವರು ಇಂದು ರೈತರಿಗೆ ತೊಂದರೆಯಾಗಿರುವುದರ ಬಗ್ಗೆ ಧ್ವನಿ ಎತ್ತಬೇಕು.ಕ್ಷೇತ್ರದ ಶಾಸಕರು ಈ ವಿಷಯದ ಕುರಿತು ಧ್ವನಿ ಎತ್ತಬೇಕು.ಕೇವಲ ಹಿಂದೂಗಳಷ್ಟೇ ಅಲ್ಲದೇ ಮುಸ್ಲಿಂರ ಜಮೀನುಗಳಲ್ಲೂ ವಕ್ಭ್ ಬೋರ್ಡ್ ಪದ ಸೇರ್ಪಡೆಯಾಗಿದ್ದು ಅದನ್ನು ತೆಗೆದುಹಾಕಬೇಕು ಎಂದು ಒತ್ತಾಯಿಸಿದರಲ್ಲದೇ ವಕ್ಬ್ ಕಾನೂನು ಸಂವಿಧಾನಕ್ಕಿಂತ ದೊಡ್ಡದಲ್ಲ ಎಂದು ಹೇಳಿದರು.
ರೈತ ಸಂಘದ ಮುಖಂಡ ಸಂಗಣ್ಣ ಬಾಗೇವಾಡಿ ಮಾತನಾಡಿದರು.ತಹಶೀಲ್ದಾರ್ ಬಲರಾಮ ಕಟ್ಟಿಮನಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಬಸವೇಶ್ವರ ದೇವಸ್ಥಾನ ಕಮೀಟಿ ಅಧ್ಯಕ್ಷ ಗುರುಲಿಂಗಪ್ಪ ಸುಲ್ಲಳ್ಳಿ, , ಸಂತೋಷಗೌಡ ಬಿರಾದಾರ , ಗುರುಪಾದ ಹೆಬ್ಬಾಳ , ಮಂಜು ಅಬ್ಬಿಹಾಳಮಠ ಮಲ್ಲಿಕಾರ್ಜುನ ನಾಟಿಕಾರ , ಸಚೀನ ಚಿನ್ನಾಪೂರ , ಈರಣ್ಣ ಹೂಗಾರ , ಸಂಗಣ್ಣ ಕುಂಬಾರ , ದುರ್ಗಪ್ಪ ಕವಡಿಮಟ್ಟಿ ಸೇರಿದಂತೆ ಕುಂಟೋಜಿ ಹಾಗೂ ಬಿದರಕುಂದಿ ರೈತರು ಹಾಗೂ ರೈತ ಸಂಘದ ಪದಾಧಿಕಾರಿಗಳು ಇದ್ದರು.ತಹಶೀಲ್ದಾರ್ ಬಲರಾಮ ಕಟ್ಟಿಮನಿ ಮಾತನಾಡಿ, ಮೇಲಧಿಕಾರಿಗಳಿಂದ ಬರುವ ನಿರ್ದೇಶನದಂತೆ ನಾನು ನಡೆದುಕೊಳ್ಳುತ್ತೇನೆ ಎಂದು ಹೇಳಿದರು.
ಕುಂಟೋಜಿ,ಬಿದರಕುಂದಿ ರೈತರಿಂದ ಪ್ರತಿಭಟನೆ: 380 ಎಕರೆ ಜಮೀನಿನ ಮೇಲೆ ವಕ್ಭ್ ಬೋರ್ಡ್ ಹೆಸರು ದಾಖಲು
ಕುಂಟೋಜಿ,ಬಿದರಕುಂದಿ ರೈತರಿಂದ ಪ್ರತಿಭಟನೆ: 380 ಎಕರೆ ಜಮೀನಿನ ಮೇಲೆ ವಕ್ಭ್ ಬೋರ್ಡ್ ಹೆಸರು ದಾಖಲು
Latest News
ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ
ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್
ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ
ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ
ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ
ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು
ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು
ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ
ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ
ಮುದ್ದೇಬಿಹಾಳ : ಪಟ್ಟಣದ ಹಸಿರು ತೋರಣ ಗೆಳೆಯರ ಬಳಗ ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡಲಾಗುವ "ಪರಿಸರ ರಕ್ಷಕ" ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ. ಗಿಡಗಳನ್ನು ನೆಟ್ಟು ಬೆಳೆಸಿರುವ, ಸಂರಕ್ಷಿಸಿರುವ ವ್ಯಕ್ತಿಗಳಿಗೆ, ಶಾಲೆ ಕಾಲೇಜುಗಳ ಶಿಕ್ಷಕರು, ಸಂಘ, ಸಂಸ್ಥೆಗಳಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಮುದ್ದೇಬಿಹಾಳ ತಾಲ್ಲೂಕಿನ ವ್ಯಾಪ್ತಿಯಲ್ಲಿ ಪರಿಸರ ರಕ್ಷಣೆ ಮಾಡಿರುವ ಅರ್ಹರು ತಮ್ಮ ವಿವರಗಳುಳ್ಳ ಅರ್ಜಿಗಳನ್ನು ಜೂನ್ 3 ರೊಳಗೆ, ಅಧ್ಯಕ್ಷರು,
ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್
ಮುದ್ದೇಬಿಹಾಳ : ಎಂ.ಬಿ.ಎಲ್ ಗ್ರೂಪನಿಂದ ಪಟ್ಟಣದಲ್ಲಿ ಮೂರು ವಾರಗಳಿಂದ ಜರುಗುತ್ತಿದ್ದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಾಮೆಂಟ್ನ ಫೈನಲ್ ಪಂದ್ಯಾವಳಿ ಮೇ.24 ರಂದು ಜರುಗಲಿದೆ ಎಂದು ಆಯೋಜಕರ ಬಳಗ ತಿಳಿಸಿದೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಫೈನಲ್ ಪಂದ್ಯಾವಳಿಯ ಕುರಿತು ಮಾಹಿತಿ ನೀಡಿದ ಸಂಘಟಕರಲ್ಲೊಬ್ಬರಾದ ಕಾಮರಾಜ ಬಿರಾದಾರ, ಈಗಾಗಲೇ ನಿಡಗುಂದಿ ತಂಡವನ್ನು ಸೋಲಿಸಿ ಆಲಮಟ್ಟಿ ತಂಡ ಫೈನಲ್ ತಲುಪಿದ್ದು ಮೇ.24 ರಂದು ಜರುಗಲಿರುವ ಸೆಮಿಫೈನಲ್ ಪಂದ್ಯದಲ್ಲಿ ಮುದ್ದೇಬಿಹಾಳ ಹಾಗೂ







