ಮುದ್ದೇಬಿಹಾಳ : ಕೆಲವು ಸರ್ವೆಗಳ ಜಮೀನಿನ ಮೇಲೆ ದಾಖಲಾಗಿರುವ ವಕ್ಭ್ ಮಂಡಳಿ, ಕರ್ನಾಟಕ ಸರ್ಕಾರ ಹೆಸರನ್ನು ಕಡಿಮೆ ಮಾಡಬೇಕು ಎಂದು ಆಗ್ರಹಿಸಿ ತಾಲ್ಲೂಕಿನ ಕುಂಟೋಜಿ, ಬಿದರಕುಂದಿ ಗ್ರಾಮದ ರೈತರು ರೈತಪರ ಸಂಘಟನೆ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.
ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಹಾಯ್ದು ತಹಶೀಲ್ದಾರ್ ಕಚೇರಿ ಆವರಣಕ್ಕೆ ಆಗಮಿಸಿದರು.ಈ ವೇಳೆ ಸರ್ಕಾರದ ಆದೇಶದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಮಾಜಿ ಸೈನಿಕ ನಾಗಲಿಂಗಯ್ಯ ಮಠ ಮಾತನಾಡಿ, ಕುಂಟೋಜಿ ಸರ್ವೆ ನಂಬರ್ 277, 278,279,289, 290,291, 300,301, 303, 304, 305, 311, 312, 313, 466/2ರಲ್ಲಿ ಅಂದಾಜು 380 ಎಕರೆ ಜಮೀನುಗಳನ್ನು ಕೆಲವರು ಖರೀದಿ ಮಾಡಿದ್ದು ಇನ್ನು ಕೆಲವರ ಆಸ್ತಿಗಳು ಪಿತ್ರಾರ್ಜಿತ ಆಸ್ತಿಗಳಿವೆ. ಈ ರೀತಿಯ ಜಮೀನುಗಳಲ್ಲಿ 2019 ಜನವೇರಿಯಲ್ಲಿ ವಕ್ಬ್ ಆಸ್ತಿ ಕರ್ನಾಟಕ ಸರಕಾರ ಅಂತ 11ನೇ ಕಾಲಂನಲ್ಲಿ ನಮೂದಿಸಲಾಗಿದೆ.ಇದರಿಂದ ಸರ್ಕಾರ ಯಾವುದೇ ಸೌಲಭ್ಯ, ಸಾಲ ಪಡೆದುಕೊಳ್ಳುವುದಕ್ಕೆ ನಮಗೆ ತೊಂದರೆಯಾಗಿದ್ದು 1973ರ ಗೆಜೆಟ್ನಲ್ಲಿ ನಮೂದಿಸಿರುವ ವಕ್ಭ್ ಆಸ್ತಿ ಹಾಗೂ ಪಹಣಿಗಳಲ್ಲಿನ ವಕ್ಭ್ ಮಂಡಳಿ ಕರ್ನಾಟಕ ಸರ್ಕಾರ ತಗೆದು ಹಾಕಬೇಕು ಎಂದು ಒತ್ತಾಯಿಸಿದರು.
ಮುಖಂಡ ಸಿದ್ದು ಹೆಬ್ಬಾಳ ಮಾತನಾಡಿ, ರೈತರ ಜಮೀನುಗಳು ಇನಾಮು ಜಮೀನುಗಳಾಗಿದ್ದು 1961ರಲ್ಲೇ ಇವುಗಳ ಉತಾರೆಯಲ್ಲಿದ್ದ ಸರ್ಕಾರವನ್ನು ವಜಾಗೊಳಿಸಲಾಗಿದೆ.ತಕ್ಷಣ ರೈತರ ಜಮೀನುಗಳ ಮೇಲೆ ಇರುವ ವಕ್ಭ್ ಬೋರ್ಡ್ ಪದವನ್ನು ತಗೆದುಹಾಕಬೇಕು.ಇಲ್ಲದಿದ್ದರೆ ತಹಶೀಲ್ದಾರ್ ಕಚೇರಿ ಎದುರಿಗೆ ನ.6 ರಿಂದ ಆಮರಣ ಉಪವಾಸ ಸತ್ಯಾಗ್ರಹ ಆರಂಭಿಸುತ್ತೇವೆ. ರೈತರಿಗೆ ತೊಂದರೆಯಾದಾಗ ಎಲ್ಲ ಹೋರಾಟಗಾರರು, ರಾಜಕೀಯ ಮುಖಂಡರು, ಜನಪ್ರತಿನಿಧಿಗಳು ಆತನೊಂದಿಗೆ ನಿಲ್ಲಬೇಕು ಎಂದು ತಿಳಿಸಿದರು.
ಪ್ರಗತಿಪರ ರೈತ ಭೀಮಸಿ ಹೂಗಾರ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬರಲು ಓಡಾಡಿ ಓಟು ಹಾಕಿಸಿಕೊಂಡವರು ಇಂದು ರೈತರಿಗೆ ತೊಂದರೆಯಾಗಿರುವುದರ ಬಗ್ಗೆ ಧ್ವನಿ ಎತ್ತಬೇಕು.ಕ್ಷೇತ್ರದ ಶಾಸಕರು ಈ ವಿಷಯದ ಕುರಿತು ಧ್ವನಿ ಎತ್ತಬೇಕು.ಕೇವಲ ಹಿಂದೂಗಳಷ್ಟೇ ಅಲ್ಲದೇ ಮುಸ್ಲಿಂರ ಜಮೀನುಗಳಲ್ಲೂ ವಕ್ಭ್ ಬೋರ್ಡ್ ಪದ ಸೇರ್ಪಡೆಯಾಗಿದ್ದು ಅದನ್ನು ತೆಗೆದುಹಾಕಬೇಕು ಎಂದು ಒತ್ತಾಯಿಸಿದರಲ್ಲದೇ ವಕ್ಬ್ ಕಾನೂನು ಸಂವಿಧಾನಕ್ಕಿಂತ ದೊಡ್ಡದಲ್ಲ ಎಂದು ಹೇಳಿದರು.
ರೈತ ಸಂಘದ ಮುಖಂಡ ಸಂಗಣ್ಣ ಬಾಗೇವಾಡಿ ಮಾತನಾಡಿದರು.ತಹಶೀಲ್ದಾರ್ ಬಲರಾಮ ಕಟ್ಟಿಮನಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಬಸವೇಶ್ವರ ದೇವಸ್ಥಾನ ಕಮೀಟಿ ಅಧ್ಯಕ್ಷ ಗುರುಲಿಂಗಪ್ಪ ಸುಲ್ಲಳ್ಳಿ, , ಸಂತೋಷಗೌಡ ಬಿರಾದಾರ , ಗುರುಪಾದ ಹೆಬ್ಬಾಳ , ಮಂಜು ಅಬ್ಬಿಹಾಳಮಠ ಮಲ್ಲಿಕಾರ್ಜುನ ನಾಟಿಕಾರ , ಸಚೀನ ಚಿನ್ನಾಪೂರ , ಈರಣ್ಣ ಹೂಗಾರ , ಸಂಗಣ್ಣ ಕುಂಬಾರ , ದುರ್ಗಪ್ಪ ಕವಡಿಮಟ್ಟಿ ಸೇರಿದಂತೆ ಕುಂಟೋಜಿ ಹಾಗೂ ಬಿದರಕುಂದಿ ರೈತರು ಹಾಗೂ ರೈತ ಸಂಘದ ಪದಾಧಿಕಾರಿಗಳು ಇದ್ದರು.ತಹಶೀಲ್ದಾರ್ ಬಲರಾಮ ಕಟ್ಟಿಮನಿ ಮಾತನಾಡಿ, ಮೇಲಧಿಕಾರಿಗಳಿಂದ ಬರುವ ನಿರ್ದೇಶನದಂತೆ ನಾನು ನಡೆದುಕೊಳ್ಳುತ್ತೇನೆ ಎಂದು ಹೇಳಿದರು.
ಕುಂಟೋಜಿ,ಬಿದರಕುಂದಿ ರೈತರಿಂದ ಪ್ರತಿಭಟನೆ: 380 ಎಕರೆ ಜಮೀನಿನ ಮೇಲೆ ವಕ್ಭ್ ಬೋರ್ಡ್ ಹೆಸರು ದಾಖಲು
ಕುಂಟೋಜಿ,ಬಿದರಕುಂದಿ ರೈತರಿಂದ ಪ್ರತಿಭಟನೆ: 380 ಎಕರೆ ಜಮೀನಿನ ಮೇಲೆ ವಕ್ಭ್ ಬೋರ್ಡ್ ಹೆಸರು ದಾಖಲು
Latest News
ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ
ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ
ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ
ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ
ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ
ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು
650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ
ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್
ಎನ್ರೋಲ್ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ
ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್ಆಯ್ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ
32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ
ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ







