ಮುದ್ದೇಬಿಹಾಳ : ಕೆಲವು ಸರ್ವೆಗಳ ಜಮೀನಿನ ಮೇಲೆ ದಾಖಲಾಗಿರುವ ವಕ್ಭ್ ಮಂಡಳಿ, ಕರ್ನಾಟಕ ಸರ್ಕಾರ ಹೆಸರನ್ನು ಕಡಿಮೆ ಮಾಡಬೇಕು ಎಂದು ಆಗ್ರಹಿಸಿ ತಾಲ್ಲೂಕಿನ ಕುಂಟೋಜಿ, ಬಿದರಕುಂದಿ ಗ್ರಾಮದ ರೈತರು ರೈತಪರ ಸಂಘಟನೆ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.
ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಹಾಯ್ದು ತಹಶೀಲ್ದಾರ್ ಕಚೇರಿ ಆವರಣಕ್ಕೆ ಆಗಮಿಸಿದರು.ಈ ವೇಳೆ ಸರ್ಕಾರದ ಆದೇಶದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಮಾಜಿ ಸೈನಿಕ ನಾಗಲಿಂಗಯ್ಯ ಮಠ ಮಾತನಾಡಿ, ಕುಂಟೋಜಿ ಸರ್ವೆ ನಂಬರ್ 277, 278,279,289, 290,291, 300,301, 303, 304, 305, 311, 312, 313, 466/2ರಲ್ಲಿ ಅಂದಾಜು 380 ಎಕರೆ ಜಮೀನುಗಳನ್ನು ಕೆಲವರು ಖರೀದಿ ಮಾಡಿದ್ದು ಇನ್ನು ಕೆಲವರ ಆಸ್ತಿಗಳು ಪಿತ್ರಾರ್ಜಿತ ಆಸ್ತಿಗಳಿವೆ. ಈ ರೀತಿಯ ಜಮೀನುಗಳಲ್ಲಿ 2019 ಜನವೇರಿಯಲ್ಲಿ ವಕ್ಬ್ ಆಸ್ತಿ ಕರ್ನಾಟಕ ಸರಕಾರ ಅಂತ 11ನೇ ಕಾಲಂನಲ್ಲಿ ನಮೂದಿಸಲಾಗಿದೆ.ಇದರಿಂದ ಸರ್ಕಾರ ಯಾವುದೇ ಸೌಲಭ್ಯ, ಸಾಲ ಪಡೆದುಕೊಳ್ಳುವುದಕ್ಕೆ ನಮಗೆ ತೊಂದರೆಯಾಗಿದ್ದು 1973ರ ಗೆಜೆಟ್ನಲ್ಲಿ ನಮೂದಿಸಿರುವ ವಕ್ಭ್ ಆಸ್ತಿ ಹಾಗೂ ಪಹಣಿಗಳಲ್ಲಿನ ವಕ್ಭ್ ಮಂಡಳಿ ಕರ್ನಾಟಕ ಸರ್ಕಾರ ತಗೆದು ಹಾಕಬೇಕು ಎಂದು ಒತ್ತಾಯಿಸಿದರು.
ಮುಖಂಡ ಸಿದ್ದು ಹೆಬ್ಬಾಳ ಮಾತನಾಡಿ, ರೈತರ ಜಮೀನುಗಳು ಇನಾಮು ಜಮೀನುಗಳಾಗಿದ್ದು 1961ರಲ್ಲೇ ಇವುಗಳ ಉತಾರೆಯಲ್ಲಿದ್ದ ಸರ್ಕಾರವನ್ನು ವಜಾಗೊಳಿಸಲಾಗಿದೆ.ತಕ್ಷಣ ರೈತರ ಜಮೀನುಗಳ ಮೇಲೆ ಇರುವ ವಕ್ಭ್ ಬೋರ್ಡ್ ಪದವನ್ನು ತಗೆದುಹಾಕಬೇಕು.ಇಲ್ಲದಿದ್ದರೆ ತಹಶೀಲ್ದಾರ್ ಕಚೇರಿ ಎದುರಿಗೆ ನ.6 ರಿಂದ ಆಮರಣ ಉಪವಾಸ ಸತ್ಯಾಗ್ರಹ ಆರಂಭಿಸುತ್ತೇವೆ. ರೈತರಿಗೆ ತೊಂದರೆಯಾದಾಗ ಎಲ್ಲ ಹೋರಾಟಗಾರರು, ರಾಜಕೀಯ ಮುಖಂಡರು, ಜನಪ್ರತಿನಿಧಿಗಳು ಆತನೊಂದಿಗೆ ನಿಲ್ಲಬೇಕು ಎಂದು ತಿಳಿಸಿದರು.
ಪ್ರಗತಿಪರ ರೈತ ಭೀಮಸಿ ಹೂಗಾರ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬರಲು ಓಡಾಡಿ ಓಟು ಹಾಕಿಸಿಕೊಂಡವರು ಇಂದು ರೈತರಿಗೆ ತೊಂದರೆಯಾಗಿರುವುದರ ಬಗ್ಗೆ ಧ್ವನಿ ಎತ್ತಬೇಕು.ಕ್ಷೇತ್ರದ ಶಾಸಕರು ಈ ವಿಷಯದ ಕುರಿತು ಧ್ವನಿ ಎತ್ತಬೇಕು.ಕೇವಲ ಹಿಂದೂಗಳಷ್ಟೇ ಅಲ್ಲದೇ ಮುಸ್ಲಿಂರ ಜಮೀನುಗಳಲ್ಲೂ ವಕ್ಭ್ ಬೋರ್ಡ್ ಪದ ಸೇರ್ಪಡೆಯಾಗಿದ್ದು ಅದನ್ನು ತೆಗೆದುಹಾಕಬೇಕು ಎಂದು ಒತ್ತಾಯಿಸಿದರಲ್ಲದೇ ವಕ್ಬ್ ಕಾನೂನು ಸಂವಿಧಾನಕ್ಕಿಂತ ದೊಡ್ಡದಲ್ಲ ಎಂದು ಹೇಳಿದರು.
ರೈತ ಸಂಘದ ಮುಖಂಡ ಸಂಗಣ್ಣ ಬಾಗೇವಾಡಿ ಮಾತನಾಡಿದರು.ತಹಶೀಲ್ದಾರ್ ಬಲರಾಮ ಕಟ್ಟಿಮನಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಬಸವೇಶ್ವರ ದೇವಸ್ಥಾನ ಕಮೀಟಿ ಅಧ್ಯಕ್ಷ ಗುರುಲಿಂಗಪ್ಪ ಸುಲ್ಲಳ್ಳಿ, , ಸಂತೋಷಗೌಡ ಬಿರಾದಾರ , ಗುರುಪಾದ ಹೆಬ್ಬಾಳ , ಮಂಜು ಅಬ್ಬಿಹಾಳಮಠ ಮಲ್ಲಿಕಾರ್ಜುನ ನಾಟಿಕಾರ , ಸಚೀನ ಚಿನ್ನಾಪೂರ , ಈರಣ್ಣ ಹೂಗಾರ , ಸಂಗಣ್ಣ ಕುಂಬಾರ , ದುರ್ಗಪ್ಪ ಕವಡಿಮಟ್ಟಿ ಸೇರಿದಂತೆ ಕುಂಟೋಜಿ ಹಾಗೂ ಬಿದರಕುಂದಿ ರೈತರು ಹಾಗೂ ರೈತ ಸಂಘದ ಪದಾಧಿಕಾರಿಗಳು ಇದ್ದರು.ತಹಶೀಲ್ದಾರ್ ಬಲರಾಮ ಕಟ್ಟಿಮನಿ ಮಾತನಾಡಿ, ಮೇಲಧಿಕಾರಿಗಳಿಂದ ಬರುವ ನಿರ್ದೇಶನದಂತೆ ನಾನು ನಡೆದುಕೊಳ್ಳುತ್ತೇನೆ ಎಂದು ಹೇಳಿದರು.
ಕುಂಟೋಜಿ,ಬಿದರಕುಂದಿ ರೈತರಿಂದ ಪ್ರತಿಭಟನೆ: 380 ಎಕರೆ ಜಮೀನಿನ ಮೇಲೆ ವಕ್ಭ್ ಬೋರ್ಡ್ ಹೆಸರು ದಾಖಲು
ಕುಂಟೋಜಿ,ಬಿದರಕುಂದಿ ರೈತರಿಂದ ಪ್ರತಿಭಟನೆ: 380 ಎಕರೆ ಜಮೀನಿನ ಮೇಲೆ ವಕ್ಭ್ ಬೋರ್ಡ್ ಹೆಸರು ದಾಖಲು
Latest News
Redbet Local casino Opinion 2025 £2 hundred Earliest Deposit Incentive
ArticlesRedbet Cellular Gambling enterprise | william hill alkalmazásokRedbet Local casino acceptance
Betfair Extra Code & Register Provide: Bet £ten for £fifty totally free bets Oct 2025
PostsTippek a sportfogadások megnyeréséhez: 18+ T&Cs Implement Delight Play Sensibly Gambleaware.orgBetfair
Übersicht zum Betitall Casino und seinen Merkmalen
Das Betitall Casino ist ein online-Angebot, das den Spielern ermöglicht, ihre
MineDrop
La slot "MineDrop" è un gioco di probabilità progettato per simularne l'esperienza del giocatore, immerso nel mondo dei pozzi minatori e della corsa all'oro. È sviluppata da una società specializzata in giochi online e disponibile su diversi siti web che offrono gioco d'azzardo virtuale. Tema e Progetto Visivo Il tema
Spielbank Merkur
Als ein führendes Online-Casino-Branche in Deutschland, bietet Spielbank Merkur seinen Kunden eine umfangreiche Auswahl an Automatenspielen und anderen Casinoklassikern. Im Folgenden werden wir uns mit dem Brand-Überblick, Registrierungsprozess, Account-Funktionen, Boni, Zahlungen und Auszahlungen, Spielkategorien, Software-Anbietern, mobiler Version, Sicherheit und Lizenz, Kundenunterstützung, Benutzererfahrung und Leistungsvorgaben befassen. Brand-Überblick Spielbank Merkur wurde im



