ಮುದ್ದೇಬಿಹಾಳ : ಕೆಲವು ಸರ್ವೆಗಳ ಜಮೀನಿನ ಮೇಲೆ ದಾಖಲಾಗಿರುವ ವಕ್ಭ್ ಮಂಡಳಿ, ಕರ್ನಾಟಕ ಸರ್ಕಾರ ಹೆಸರನ್ನು ಕಡಿಮೆ ಮಾಡಬೇಕು ಎಂದು ಆಗ್ರಹಿಸಿ ತಾಲ್ಲೂಕಿನ ಕುಂಟೋಜಿ, ಬಿದರಕುಂದಿ ಗ್ರಾಮದ ರೈತರು ರೈತಪರ ಸಂಘಟನೆ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.
ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಹಾಯ್ದು ತಹಶೀಲ್ದಾರ್ ಕಚೇರಿ ಆವರಣಕ್ಕೆ ಆಗಮಿಸಿದರು.ಈ ವೇಳೆ ಸರ್ಕಾರದ ಆದೇಶದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಮಾಜಿ ಸೈನಿಕ ನಾಗಲಿಂಗಯ್ಯ ಮಠ ಮಾತನಾಡಿ, ಕುಂಟೋಜಿ ಸರ್ವೆ ನಂಬರ್ 277, 278,279,289, 290,291, 300,301, 303, 304, 305, 311, 312, 313, 466/2ರಲ್ಲಿ ಅಂದಾಜು 380 ಎಕರೆ ಜಮೀನುಗಳನ್ನು ಕೆಲವರು ಖರೀದಿ ಮಾಡಿದ್ದು ಇನ್ನು ಕೆಲವರ ಆಸ್ತಿಗಳು ಪಿತ್ರಾರ್ಜಿತ ಆಸ್ತಿಗಳಿವೆ. ಈ ರೀತಿಯ ಜಮೀನುಗಳಲ್ಲಿ 2019 ಜನವೇರಿಯಲ್ಲಿ ವಕ್ಬ್ ಆಸ್ತಿ ಕರ್ನಾಟಕ ಸರಕಾರ ಅಂತ 11ನೇ ಕಾಲಂನಲ್ಲಿ ನಮೂದಿಸಲಾಗಿದೆ.ಇದರಿಂದ ಸರ್ಕಾರ ಯಾವುದೇ ಸೌಲಭ್ಯ, ಸಾಲ ಪಡೆದುಕೊಳ್ಳುವುದಕ್ಕೆ ನಮಗೆ ತೊಂದರೆಯಾಗಿದ್ದು 1973ರ ಗೆಜೆಟ್ನಲ್ಲಿ ನಮೂದಿಸಿರುವ ವಕ್ಭ್ ಆಸ್ತಿ ಹಾಗೂ ಪಹಣಿಗಳಲ್ಲಿನ ವಕ್ಭ್ ಮಂಡಳಿ ಕರ್ನಾಟಕ ಸರ್ಕಾರ ತಗೆದು ಹಾಕಬೇಕು ಎಂದು ಒತ್ತಾಯಿಸಿದರು.
ಮುಖಂಡ ಸಿದ್ದು ಹೆಬ್ಬಾಳ ಮಾತನಾಡಿ, ರೈತರ ಜಮೀನುಗಳು ಇನಾಮು ಜಮೀನುಗಳಾಗಿದ್ದು 1961ರಲ್ಲೇ ಇವುಗಳ ಉತಾರೆಯಲ್ಲಿದ್ದ ಸರ್ಕಾರವನ್ನು ವಜಾಗೊಳಿಸಲಾಗಿದೆ.ತಕ್ಷಣ ರೈತರ ಜಮೀನುಗಳ ಮೇಲೆ ಇರುವ ವಕ್ಭ್ ಬೋರ್ಡ್ ಪದವನ್ನು ತಗೆದುಹಾಕಬೇಕು.ಇಲ್ಲದಿದ್ದರೆ ತಹಶೀಲ್ದಾರ್ ಕಚೇರಿ ಎದುರಿಗೆ ನ.6 ರಿಂದ ಆಮರಣ ಉಪವಾಸ ಸತ್ಯಾಗ್ರಹ ಆರಂಭಿಸುತ್ತೇವೆ. ರೈತರಿಗೆ ತೊಂದರೆಯಾದಾಗ ಎಲ್ಲ ಹೋರಾಟಗಾರರು, ರಾಜಕೀಯ ಮುಖಂಡರು, ಜನಪ್ರತಿನಿಧಿಗಳು ಆತನೊಂದಿಗೆ ನಿಲ್ಲಬೇಕು ಎಂದು ತಿಳಿಸಿದರು.
ಪ್ರಗತಿಪರ ರೈತ ಭೀಮಸಿ ಹೂಗಾರ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬರಲು ಓಡಾಡಿ ಓಟು ಹಾಕಿಸಿಕೊಂಡವರು ಇಂದು ರೈತರಿಗೆ ತೊಂದರೆಯಾಗಿರುವುದರ ಬಗ್ಗೆ ಧ್ವನಿ ಎತ್ತಬೇಕು.ಕ್ಷೇತ್ರದ ಶಾಸಕರು ಈ ವಿಷಯದ ಕುರಿತು ಧ್ವನಿ ಎತ್ತಬೇಕು.ಕೇವಲ ಹಿಂದೂಗಳಷ್ಟೇ ಅಲ್ಲದೇ ಮುಸ್ಲಿಂರ ಜಮೀನುಗಳಲ್ಲೂ ವಕ್ಭ್ ಬೋರ್ಡ್ ಪದ ಸೇರ್ಪಡೆಯಾಗಿದ್ದು ಅದನ್ನು ತೆಗೆದುಹಾಕಬೇಕು ಎಂದು ಒತ್ತಾಯಿಸಿದರಲ್ಲದೇ ವಕ್ಬ್ ಕಾನೂನು ಸಂವಿಧಾನಕ್ಕಿಂತ ದೊಡ್ಡದಲ್ಲ ಎಂದು ಹೇಳಿದರು.
ರೈತ ಸಂಘದ ಮುಖಂಡ ಸಂಗಣ್ಣ ಬಾಗೇವಾಡಿ ಮಾತನಾಡಿದರು.ತಹಶೀಲ್ದಾರ್ ಬಲರಾಮ ಕಟ್ಟಿಮನಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಬಸವೇಶ್ವರ ದೇವಸ್ಥಾನ ಕಮೀಟಿ ಅಧ್ಯಕ್ಷ ಗುರುಲಿಂಗಪ್ಪ ಸುಲ್ಲಳ್ಳಿ, , ಸಂತೋಷಗೌಡ ಬಿರಾದಾರ , ಗುರುಪಾದ ಹೆಬ್ಬಾಳ , ಮಂಜು ಅಬ್ಬಿಹಾಳಮಠ ಮಲ್ಲಿಕಾರ್ಜುನ ನಾಟಿಕಾರ , ಸಚೀನ ಚಿನ್ನಾಪೂರ , ಈರಣ್ಣ ಹೂಗಾರ , ಸಂಗಣ್ಣ ಕುಂಬಾರ , ದುರ್ಗಪ್ಪ ಕವಡಿಮಟ್ಟಿ ಸೇರಿದಂತೆ ಕುಂಟೋಜಿ ಹಾಗೂ ಬಿದರಕುಂದಿ ರೈತರು ಹಾಗೂ ರೈತ ಸಂಘದ ಪದಾಧಿಕಾರಿಗಳು ಇದ್ದರು.ತಹಶೀಲ್ದಾರ್ ಬಲರಾಮ ಕಟ್ಟಿಮನಿ ಮಾತನಾಡಿ, ಮೇಲಧಿಕಾರಿಗಳಿಂದ ಬರುವ ನಿರ್ದೇಶನದಂತೆ ನಾನು ನಡೆದುಕೊಳ್ಳುತ್ತೇನೆ ಎಂದು ಹೇಳಿದರು.
ಕುಂಟೋಜಿ,ಬಿದರಕುಂದಿ ರೈತರಿಂದ ಪ್ರತಿಭಟನೆ: 380 ಎಕರೆ ಜಮೀನಿನ ಮೇಲೆ ವಕ್ಭ್ ಬೋರ್ಡ್ ಹೆಸರು ದಾಖಲು
ಕುಂಟೋಜಿ,ಬಿದರಕುಂದಿ ರೈತರಿಂದ ಪ್ರತಿಭಟನೆ: 380 ಎಕರೆ ಜಮೀನಿನ ಮೇಲೆ ವಕ್ಭ್ ಬೋರ್ಡ್ ಹೆಸರು ದಾಖಲು
Latest News
ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು
ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ
ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ
ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.
ಡಿಸೇಲ್,ಪೆಟ್ರೋಲ್ಗಾಗಿ ಪರದಾಟ: ಖಾಲಿ ಕ್ಯಾನ್ಗಳೊಂದಿಗೆ ಬಂಕ್ಗಳ ಮುಂದೆ ಸಾಲುದ್ದ ಕ್ಯೂ
ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್ಗಾಗಿ ಗ್ರಾಹಕರು
Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ
ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್
ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ
ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ
ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ







