ಕಾರ್ಮಿಕರು ಸರ್ಕಾರಿ ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಿ: ಅಶ್ವಥ ಟಿ. ಮರಿಗೌಡ

ಕಾರ್ಮಿಕರು ಸರ್ಕಾರಿ ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಿ: ಅಶ್ವಥ ಟಿ. ಮರಿಗೌಡ

ರಾಯಚೂರು: ಬಹುತೇಕ ಕಾರ್ಮಿಕರು ಸರಕಾರ ಸೌಲಭ್ಯದಿಂದ ವಂಚಿತರಾಗಿದ್ದು ಸರಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಕಾರ್ಮಿಕರು ಸದ್ಬಳಕೆ ಮಾಡಿಕೊಳ್ಳಬೇಕೆಂದು ನೆರವು ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ಅಶ್ವಥ. ಟಿ ಮರಿಗೌಡ ಹೇಳಿದರು.

ರಾಯಚೂರು ಜಿಲ್ಲೆಯಲ್ಲಿ ಸುಕೋ ಬ್ಯಾಂಕ್ ಎದುರುಗಡೆ ಎಲ್. ವಿ. ಡಿ. ಕಾಲೇಜ್ ರಸ್ತೆ ವಾಸವಿ ನಗರದಲ್ಲಿ ನೆರವು ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಸಂಘಟನೆ ನೂತನ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, ಸೌಲಭ್ಯದಿಂದ ವಂಚಿತ ಕಾರ್ಮಿಕರನ್ನು ಗುರುತಿಸುವ ಕೆಲಸ ಸಂಘಟನೆ ಮಾಡುತ್ತದೆ. ಕಾರ್ಮಿಕರು ಸಂಘಟನೆ ಜೊತೆಗೆ ಕೈ ಜೋಡಿಸುವ ಮೂಲಕ ಕಾರ್ಮಿಕ ಕಾರ್ಡನಿಂದ

ದೊರೆಯುವ ಮದುವೆ ಸಹಾಯಧನ, ಹೆರಿಗೆ ಸಹಾಯಧನ, ಶಿಷ್ಯವೇತನ, ಅಪಘಾತ ಪರಿಹಾರ ಸಹಾಯಧನ, ಶಸ್ತ್ರ ಚಿಕಿತ್ಸೆ ವೈದ್ಯಕೀಯ ಸಹಾಯ ಆರೋಗ್ಯ ಸೌಲಭ್ಯ, ಪಿಂಚಣಿ ಭಾಗ್ಯ ಇತ್ಯಾದಿ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಳ್ಳಬೇಕೆಂದು ಹೇಳಿದರು.

ಕಟ್ಟಡ ಕಾರ್ಮಿಕರಿಗೆ ಕಿಟ್ ವಿತರಣೆಯಲ್ಲಿ ಭ್ರಷ್ಟಾಚಾರ ಆಗುತ್ತಿದ್ದೂ ಇದನ್ನು ನಿಲ್ಲಿಸುವಂತೆ ಕಾರ್ಮಿಕ ಸಚಿವರಿಗೆ ಎಚ್ಚರಿಸಿದರು.

ತಾಲೂಕ ಅಧ್ಯಕ್ಷರನ್ನಾಗಿ ತಿಮಪ್ಪ, ಉಪಾಧ್ಯಕ್ಷರು ಈರಣ್ಣ, ಪ್ರಧಾನ ಕಾರ್ಯದರ್ಶಿಯನ್ನಾಗಿ ಸುನಿಲ್ ಕುಮಾರ ಅವರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಸಂಘಟನೆ ರಾಜ್ಯ ಸಂಚಾಲಕರು ಪ್ರದೀಪ ಕೆ. ಆರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಾನಂದ ಬಿಡಿಕಿ, ವೆಂಕಟೇಶ, ಈರಪ್ಪ ವಲ್ಕಂದಿನ್ನಿ, ಸಚಿನ ಪವಾರ, ರವಿರಾಜ್, ಗೋಪಾಲ ದೊರೆ, ಚಂದ್ರಶೇಖರ, ಡಾ. ಶಿವು ರಾಠೋಡ ಮುಂತಾದ ಪದಾಧಿಕಾರಿಗಳು ಇದ್ದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ