Land leased to government land

ಸರ್ಕಾರಿ ಜಾಗವನ್ನು ಸರ್ಕಾರಕ್ಕೆ ಬಾಡಿಗೆ ನೀಡಿದ ಭೂಪರು

ಸರ್ಕಾರಿ ಜಾಗವನ್ನು ಸರ್ಕಾರಕ್ಕೆ ಬಾಡಿಗೆ ನೀಡಿದ ಭೂಪರು

ನಾಲತವಾಡ: ಪಟ್ಟಣದ ಶೋಷಿತ, ಹಿಂದುಳಿದ ಸಮುದಾಯಗಳಿಗಾಗಿ ಮೀಸಲಿರುವ 6 ಎಕರೆ ಸ್ಮಶಾನ ಜಾಗವನ್ನು ಅತಿಕ್ರಮಿಸಿ ಸ್ವಂತದ್ದೆಂದು ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡಿದ್ದಲ್ಲದೆ ಈಗಾಗಲೇ ಈ ಸ್ಥಳದಲ್ಲಿ ಬ್ಯಾಂಕ್, ಸಂಘ-ಸಂಸ್ಥೆ ಕಚೇರಿ ಹಾಗೂ ಮನೆಗಳನ್ನು ನಿರ್ಮಿಸಿ ಬಾಡಿಗೆ ನೀಡಲಾಗಿದೆ ಎಂದು, ಈ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳಿ ಎಂದು‌ ಯುವಜನ ಸೇನೆಯ ರಾಜ್ಯಾಧ್ಯಕ್ಷ ಶಿವಾನಂದ ವಾಲಿ ದೂರು ನೀಡಿದರೂ ಸ್ಪಂದಿಸದ ಪಟ್ಣಣ ಪಂಚಾಯಿತಿ ಸಿಒ ಹಾಗೂ ತಹಸೀಲ್ದಾ‌ರ್ ವಿರುದ್ಧ ಲೋಕಾಯುಕ್ತಕ್ಕೆ ಗಂಭೀರ ಪ್ರಕರಣದ ದೂರು ದಾಖಲಿಸಿದ್ದಾರೆ.

ಏನಿದು ಪ್ರಕರಣ?: ಹಲವಾರು ವರ್ಷಗಳಿಂದ ಪಟ್ಟಣದ ವಿವಿಧ ಸಮುದಾಯಗಳ ಸ್ಮಶಾನಕ್ಕೆ ಎಂದು ಸರ್ವೆ ನಂ.615 ರ ಮೀಸಲಿಟ್ಟ 6 ಎಕರೆ 21ಗುಂಟೆ ಸುಡುಗಾಡು ಜಾಗವನ್ನು ಪ್ರಭಾವಿ ಕಾಣದ ಕೈಗಳು ನಕಲಿ ದಾಖಲೆ ಸೃಷ್ಟಿಸಿ ಖಾಸಗಿಯವರ ಅತಿಕ್ರಮಣಕ್ಕೆ ಅವಕಾಶ ನೀಡಿವೆ. ಅಧಿಕಾರಿಗಳ ಕೈಚಳಕ ಮತ್ತು ಹಿಂದೆ ಅಧಿಕಾರ ನಡೆಸಿದ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿಯ ಅಕ್ರಮ ಎರಡೂ ಸೇರಿ ಪಂಚಾಯಿತಿ ದಾಖಲೆ 9 ನಂ. ರಿಜಿಸ್ಟರ್ ನಲ್ಲಿ ಹೆಸರು ನಮೂದಿಸಿ ಸ್ಮಶಾನ ಜಾಗವನ್ನು ಕಂಡವರ ಪಾಲು ಮಾಡಿ ಉತಾರ ಸೃಷ್ಟಿಸಲಾಗಿದೆ. ಹಲವರು ಸ್ಮಶಾನದ ಜಾಗ ತಮ್ಮದೇ ಎಂದು ಹೇಳಿಕೊಂಡು ಲಕ್ಷಗಟ್ಟಲೇ ಹಣಕ್ಕೆ ಮಾರಾಟ ಮಾಡಿದ್ದಾರೆ. ಸರ್ಕಾರಕ್ಕೆ ಸೇರಿದ ಸ್ಮಶಾನ ಜಾಗದಲ್ಲೇ ಸಭಾ ಭವನ ನಿರ್ಮಿಸಿ ಸರ್ಕಾರಕ್ಕೆ ಬಾಡಿಗೆ ನೀಡಿರುವುದು ಅಚ್ಚರಿ ಮೂಡಿಸಿದೆ. ಮತ್ತೊಂದೆಡೆ ಡಿಸಿಸಿ ಬ್ಯಾಂಕ್, ಕೃಷಿ ಪತ್ತಿನ ಸಹಕಾರ ಸಂಘದ ಕಚೇರಿ ನಿರ್ಮಿಸಲಾಗಿದೆ. ಅದೇ ಜಾಗದಲ್ಲಿ ಹಲವರು ಮನೆಗಳನ್ನು ನಿರ್ಮಿಸಿಕೊಂಡು ವಾಸವಾಗಿದ್ದಾರೆ ಎನ್ನುವುದು ದೂರುದಾರರ ವಾದ.

ಸ್ಥಾನಿಕ ತನಿಖೆಗೂ ಮೀನಮೇಷ: ಸ್ಮಶಾನ ಸ್ಥಳ ಅತಿಕ್ರಮಿಸಿದ ಕುರಿತು ಜಿಲ್ಲಾಧಿಕಾರಿ, ಪಟ್ಟಣ ಪಂಚಾಯಿತಿ ಅಧಿಕಾರಿಗಳು ಹಾಗೂ ತಹಸೀಲ್ದಾರ್ ಕಚೇರಿಗೆ ದೂರು ನೀಡಿ ತನಿಖೆ ನಡೆಸುವಂತೆ ಯುವಜನ ಸೇನೆ ರಾಜ್ಯಾಧ್ಯಕ್ಷ ಶಿವಾನಂದ ವಾಲಿ ಮನವಿ ಮಾಡಿದ್ದಾರೆ. 2022 ರಿಂದ ಎರಡ್ಮೂರು ಸಲ ಪಪಂ ಹಾಗೂ ಕಂದಾಯ ಇಲಾಖೆ ಅಧಿ ಕಾರಿಗಳಿಗೆ ದಾಖಲೆ ಸಮೇತ ಮನವಿ ಸಲ್ಲಿಸಿದ್ದಾರೆ.

“ಮನವಿಗೆ ಕ್ಯಾರೆ ಎನ್ನದೆ ಕಾಟಾಚಾರಕ್ಕೆ ಪಪಂನವರು ಅತಿಕ್ರಮಣಕಾರರಿಗೆ 2022 ರಲ್ಲಿ ನೋಟಿಸ್ ನೀಡಿದ್ದು ಹೊರತುಪಡಿಸಿದರೆ ಬೇರೆ ಏನೂ ಕ್ರಮ ಕೈಗೊಂಡಿಲ್ಲ,” ಎಂದು ಶಿವಾನಂದ ವಾಲಿ” ತಿಳಿಸಿರುತ್ತಾರೆ

–ಕೋಟ್–
“ಹಿಂದುಳಿದ,ದಲಿತ ಸಮುದಾಯದವರು ಸತ್ತರೆ ಅಂತ್ಯಸಂಸ್ಕಾರ ಮಾಡಲು ಸ್ಥಳವಿಲ್ಲದ ಕಾರಣ ಅವರ ಮನೆ ಮುಂದೆಯೇ ತಮ್ಮವರ ಶವಗಳನ್ನು ಹೂಳಿದ ಘಟನೆ ಇನ್ನೂ ಮಾಸಿಲ್ಲ. ಇಷ್ಟಾದರೂ ಪಪಂ ಹಾಗೂ ಕಂದಾಯ ಇಲಾಖೆಯವರು ಸ್ಮಶಾನ ಸ್ಥಳ ಅತಿಕ್ರಮಿಸಿ ಕೊಂಡವರ ವಿರುದ್ಧ ಯಾವುದೇ ಕ್ರಮ ಜರುಗಿಸಿಲ್ಲ. ಹೀಗಾಗಿ ಲೋಕಾಯುಕ್ತರಿಗೆ ದೂರು ನೀಡಿರುವೆ.”
–ಶಿವಾನಂದ ವಾಲಿ ಯುವಜನ ಸೇನೆ ರಾಜ್ಯಾಧ್ಯಕ್ಷರು.

ವರದಿ : ಶಿವು ರಾಠೋಡ

Latest News

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ಮುದ್ದೇಬಿಹಾಳ : ರಂಜಾನ್ ಹಬ್ಬ ಎಲ್ಲ ಹಬ್ಬಗಳ ಜೊತೆಗೆ ಆಚರಣೆಗೆ ಬರುತ್ತದೆ.ನಾವೆಲ್ಲ ಯುದ್ಧವನ್ನು ಖಂಡಿಸಬೇಕು.ವಿಶೇಷವಾಗಿ

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮುದ್ದೇಬಿಹಾಳ : ಪಟ್ಟಣದ ಮಹಾಂತೇಶ ನಗರದಲ್ಲಿರುವ ವಿಶ್ವಭಾರತಿ ಪಬ್ಲಿಕ್ ಸ್ಕೂಲ್‌ನ ಎಂಟನೇ ವಾರ್ಷಿಕೋತ್ಸವ ಕಾರ್ಯಕ್ರಮ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮುದ್ದೇಬಿಹಾಳ : ಕರಾವಳಿ ಮತ್ತು ಒಳನಾಡು ಮೀನುಗಾರರ ಮೂಲಸೌಕರ್ಯ ಅಭಿವೃದ್ಧಿಗಾಗಿ ರಾಜ್ಯ ಬಜೆಟ್‌ನಲ್ಲಿ ಘೋಷಿಸಿರುವ

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ:           ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಮುದ್ದೇಬಿಹಾಳ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ-ನೌಕರರ ವಿವಿಧ ಬೇಡಿಕೆಗಳನ್ನು ರಾಜ್ಯ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಮುದ್ದೇಬಿಹಾಳ : ಬಣ್ಣದ ಹಬ್ಬ ಪ್ರೀತಿ ಮತ್ತು ವಸಂತಗಳ ಸಂಕೇತವಾಗಿ ಆಚರಿಸಲಾಗುವ ಪ್ರಮುಖ ಹಿಂದೂ ಹಬ್ಬವಾಗಿದೆ.ದೇವತೆಗಳ ಶಾಶ್ವತ ಮತ್ತು ದೈವಿಕ ಪ್ರೀತಿಯನ್ನು ಇದು ಸೂಚಿಸುತ್ತದೆ.ಈ ದಿನವು ದುಷ್ಟರ ಮೇಲೆ ಒಳ್ಳೆಯದರ ವಿಜಯವನ್ನು ಸೂಚಿಸುತ್ತದೆ ಎಂದು ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾಲಯದ ರೇಣುಕಾ ಅಕ್ಕನವರು ಹೇಳಿದರು. ಪಟ್ಟಣದ ಹುಡ್ಕೋ ಗವಿಸಿದ್ಧೇಶ್ವರ ವೇದಿಕೆಯ ಆವರಣದಲ್ಲಿ ಸಮಾನ ಮನಸ್ಕ ಯುವ ಬಳಗದ ಆಶ್ರಯದಲ್ಲಿ ಬುಧವಾರ ಚಿಣ್ಣರ ಬಣ್ಣದ ಓಕುಳಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮುದ್ದೇಬಿಹಾಳ : ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಮುದ್ದೇಬಿಹಾಳ : ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಮುದ್ದೇಬಿಹಾಳ : ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದ ಹಳೇ ಸರಕಾರಿ ಆಸ್ಪತ್ರೆಯ ಹಿಂಭಾಗದಲ್ಲಿ ಬುಧವಾರ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡವನನ್ನು ಮುದ್ದೇಬಿಹಾಳ ತಾಲ್ಲೂಕಿನ ತಂಗಡಗಿ ಗ್ರಾಮದ ಶರಣಬಸಪ್ಪ ಸಾಯಬಣ್ಣ ಗೋನಾಳ(45) ಎಂದು ಗುರುತಿಸಲಾಗಿದೆ. ಕುಡಿದ ಮತ್ತಿನಲ್ಲಿ ಯಾವುದೋ ವಿಚಾರಕ್ಕೆ ಮಾನಸಿಕ ಮಾಡಿಕೊಂಡು ತನ್ನ ಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಮೃತನ ಪತ್ನಿ V.S ಗೋನಾಳ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ (ಬಿಎನ್‌ಎಸ್-194) ಪ್ರಕರಣ