Land leased to government land

ಸರ್ಕಾರಿ ಜಾಗವನ್ನು ಸರ್ಕಾರಕ್ಕೆ ಬಾಡಿಗೆ ನೀಡಿದ ಭೂಪರು

ಸರ್ಕಾರಿ ಜಾಗವನ್ನು ಸರ್ಕಾರಕ್ಕೆ ಬಾಡಿಗೆ ನೀಡಿದ ಭೂಪರು

ನಾಲತವಾಡ: ಪಟ್ಟಣದ ಶೋಷಿತ, ಹಿಂದುಳಿದ ಸಮುದಾಯಗಳಿಗಾಗಿ ಮೀಸಲಿರುವ 6 ಎಕರೆ ಸ್ಮಶಾನ ಜಾಗವನ್ನು ಅತಿಕ್ರಮಿಸಿ ಸ್ವಂತದ್ದೆಂದು ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡಿದ್ದಲ್ಲದೆ ಈಗಾಗಲೇ ಈ ಸ್ಥಳದಲ್ಲಿ ಬ್ಯಾಂಕ್, ಸಂಘ-ಸಂಸ್ಥೆ ಕಚೇರಿ ಹಾಗೂ ಮನೆಗಳನ್ನು ನಿರ್ಮಿಸಿ ಬಾಡಿಗೆ ನೀಡಲಾಗಿದೆ ಎಂದು, ಈ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳಿ ಎಂದು‌ ಯುವಜನ ಸೇನೆಯ ರಾಜ್ಯಾಧ್ಯಕ್ಷ ಶಿವಾನಂದ ವಾಲಿ ದೂರು ನೀಡಿದರೂ ಸ್ಪಂದಿಸದ ಪಟ್ಣಣ ಪಂಚಾಯಿತಿ ಸಿಒ ಹಾಗೂ ತಹಸೀಲ್ದಾ‌ರ್ ವಿರುದ್ಧ ಲೋಕಾಯುಕ್ತಕ್ಕೆ ಗಂಭೀರ ಪ್ರಕರಣದ ದೂರು ದಾಖಲಿಸಿದ್ದಾರೆ.

ಏನಿದು ಪ್ರಕರಣ?: ಹಲವಾರು ವರ್ಷಗಳಿಂದ ಪಟ್ಟಣದ ವಿವಿಧ ಸಮುದಾಯಗಳ ಸ್ಮಶಾನಕ್ಕೆ ಎಂದು ಸರ್ವೆ ನಂ.615 ರ ಮೀಸಲಿಟ್ಟ 6 ಎಕರೆ 21ಗುಂಟೆ ಸುಡುಗಾಡು ಜಾಗವನ್ನು ಪ್ರಭಾವಿ ಕಾಣದ ಕೈಗಳು ನಕಲಿ ದಾಖಲೆ ಸೃಷ್ಟಿಸಿ ಖಾಸಗಿಯವರ ಅತಿಕ್ರಮಣಕ್ಕೆ ಅವಕಾಶ ನೀಡಿವೆ. ಅಧಿಕಾರಿಗಳ ಕೈಚಳಕ ಮತ್ತು ಹಿಂದೆ ಅಧಿಕಾರ ನಡೆಸಿದ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿಯ ಅಕ್ರಮ ಎರಡೂ ಸೇರಿ ಪಂಚಾಯಿತಿ ದಾಖಲೆ 9 ನಂ. ರಿಜಿಸ್ಟರ್ ನಲ್ಲಿ ಹೆಸರು ನಮೂದಿಸಿ ಸ್ಮಶಾನ ಜಾಗವನ್ನು ಕಂಡವರ ಪಾಲು ಮಾಡಿ ಉತಾರ ಸೃಷ್ಟಿಸಲಾಗಿದೆ. ಹಲವರು ಸ್ಮಶಾನದ ಜಾಗ ತಮ್ಮದೇ ಎಂದು ಹೇಳಿಕೊಂಡು ಲಕ್ಷಗಟ್ಟಲೇ ಹಣಕ್ಕೆ ಮಾರಾಟ ಮಾಡಿದ್ದಾರೆ. ಸರ್ಕಾರಕ್ಕೆ ಸೇರಿದ ಸ್ಮಶಾನ ಜಾಗದಲ್ಲೇ ಸಭಾ ಭವನ ನಿರ್ಮಿಸಿ ಸರ್ಕಾರಕ್ಕೆ ಬಾಡಿಗೆ ನೀಡಿರುವುದು ಅಚ್ಚರಿ ಮೂಡಿಸಿದೆ. ಮತ್ತೊಂದೆಡೆ ಡಿಸಿಸಿ ಬ್ಯಾಂಕ್, ಕೃಷಿ ಪತ್ತಿನ ಸಹಕಾರ ಸಂಘದ ಕಚೇರಿ ನಿರ್ಮಿಸಲಾಗಿದೆ. ಅದೇ ಜಾಗದಲ್ಲಿ ಹಲವರು ಮನೆಗಳನ್ನು ನಿರ್ಮಿಸಿಕೊಂಡು ವಾಸವಾಗಿದ್ದಾರೆ ಎನ್ನುವುದು ದೂರುದಾರರ ವಾದ.

ಸ್ಥಾನಿಕ ತನಿಖೆಗೂ ಮೀನಮೇಷ: ಸ್ಮಶಾನ ಸ್ಥಳ ಅತಿಕ್ರಮಿಸಿದ ಕುರಿತು ಜಿಲ್ಲಾಧಿಕಾರಿ, ಪಟ್ಟಣ ಪಂಚಾಯಿತಿ ಅಧಿಕಾರಿಗಳು ಹಾಗೂ ತಹಸೀಲ್ದಾರ್ ಕಚೇರಿಗೆ ದೂರು ನೀಡಿ ತನಿಖೆ ನಡೆಸುವಂತೆ ಯುವಜನ ಸೇನೆ ರಾಜ್ಯಾಧ್ಯಕ್ಷ ಶಿವಾನಂದ ವಾಲಿ ಮನವಿ ಮಾಡಿದ್ದಾರೆ. 2022 ರಿಂದ ಎರಡ್ಮೂರು ಸಲ ಪಪಂ ಹಾಗೂ ಕಂದಾಯ ಇಲಾಖೆ ಅಧಿ ಕಾರಿಗಳಿಗೆ ದಾಖಲೆ ಸಮೇತ ಮನವಿ ಸಲ್ಲಿಸಿದ್ದಾರೆ.

“ಮನವಿಗೆ ಕ್ಯಾರೆ ಎನ್ನದೆ ಕಾಟಾಚಾರಕ್ಕೆ ಪಪಂನವರು ಅತಿಕ್ರಮಣಕಾರರಿಗೆ 2022 ರಲ್ಲಿ ನೋಟಿಸ್ ನೀಡಿದ್ದು ಹೊರತುಪಡಿಸಿದರೆ ಬೇರೆ ಏನೂ ಕ್ರಮ ಕೈಗೊಂಡಿಲ್ಲ,” ಎಂದು ಶಿವಾನಂದ ವಾಲಿ” ತಿಳಿಸಿರುತ್ತಾರೆ

–ಕೋಟ್–
“ಹಿಂದುಳಿದ,ದಲಿತ ಸಮುದಾಯದವರು ಸತ್ತರೆ ಅಂತ್ಯಸಂಸ್ಕಾರ ಮಾಡಲು ಸ್ಥಳವಿಲ್ಲದ ಕಾರಣ ಅವರ ಮನೆ ಮುಂದೆಯೇ ತಮ್ಮವರ ಶವಗಳನ್ನು ಹೂಳಿದ ಘಟನೆ ಇನ್ನೂ ಮಾಸಿಲ್ಲ. ಇಷ್ಟಾದರೂ ಪಪಂ ಹಾಗೂ ಕಂದಾಯ ಇಲಾಖೆಯವರು ಸ್ಮಶಾನ ಸ್ಥಳ ಅತಿಕ್ರಮಿಸಿ ಕೊಂಡವರ ವಿರುದ್ಧ ಯಾವುದೇ ಕ್ರಮ ಜರುಗಿಸಿಲ್ಲ. ಹೀಗಾಗಿ ಲೋಕಾಯುಕ್ತರಿಗೆ ದೂರು ನೀಡಿರುವೆ.”
–ಶಿವಾನಂದ ವಾಲಿ ಯುವಜನ ಸೇನೆ ರಾಜ್ಯಾಧ್ಯಕ್ಷರು.

ವರದಿ : ಶಿವು ರಾಠೋಡ

Latest News

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮುದ್ದೇಬಿಹಾಳ : ಕರಾವಳಿ ಮತ್ತು ಒಳನಾಡು ಮೀನುಗಾರರ ಮೂಲಸೌಕರ್ಯ ಅಭಿವೃದ್ಧಿಗಾಗಿ ರಾಜ್ಯ ಬಜೆಟ್‌ನಲ್ಲಿ ಘೋಷಿಸಿರುವ

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ:           ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಮುದ್ದೇಬಿಹಾಳ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ-ನೌಕರರ ವಿವಿಧ ಬೇಡಿಕೆಗಳನ್ನು ರಾಜ್ಯ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ಅಗ್ನಿಶಾಮಕ ತಂಡದಿOದ ಕಾರ್ಮಿಕನ ರಕ್ಷಣೆ;                ಕಾಂಕ್ರಿಟ್ ಮಿಕ್ಸರ್ ಯಂತ್ರದಲ್ಲಿ ಕೈ ಸಿಲುಕಿ ಎಲುಬುಗಳ ತುಂಡು..!

ಅಗ್ನಿಶಾಮಕ ತಂಡದಿOದ ಕಾರ್ಮಿಕನ ರಕ್ಷಣೆ; ಕಾಂಕ್ರಿಟ್ ಮಿಕ್ಸರ್ ಯಂತ್ರದಲ್ಲಿ ಕೈ ಸಿಲುಕಿ ಎಲುಬುಗಳ ತುಂಡು..!

ಮುದ್ದೇಬಿಹಾಳ : ಕಾಂಕ್ರೀಟ್ ಮಿಕ್ಸರ್‌ನಲ್ಲಿ ಕಾರ್ಮಿಕನೊಬ್ಬನ ಕೈ ಸಿಲುಕಿಕೊಂಡು ಎಲುಬುಗಳು ತುಂಡಾಗಿರುವ ಘಟನೆ ಮಂಗಳವಾರ ಇಲ್ಲಿನ ಪಟ್ಟಣದಲ್ಲಿ ಅಂಬೇಡ್ಕರ್ ಸಮುದಾಯ ಭವನದ ಬಳಿ ನಡೆದಿದೆ. ಅಬ್ಬಿಹಾಳ ಗ್ರಾಮದ ಕಾರ್ಮಿಕ ಗಂಗಣ್ಣ ಬಸಪ್ಪ ಕಂಬಳಿ(25) ಘಟನೆಯಲ್ಲಿ ಅವರ ಬಲಗೈ ಮಣಿಕಟ್ಟಿಗೆ ತೀವ್ರ ಗಾಯವಾಗಿ ನರಗಳು ಮತ್ತು ಎಲಬು ತುಂಡಾಗಿದೆ.ವಿಷಯ ತಿಳಿದ ತಕ್ಷಣ ಹತ್ತಿರದಲ್ಲಿಯೇ ಇದ್ದ ಅಗ್ನಿಶಾಮಕ ಇಲಾಖೆ ಇಡೀ ತಂಡದ ಸಿಬ್ಬಂದಿ ಧಾವಿಸಿ ಬಂದು ಕಾರ್ಮಿಕನನ್ನು ಪ್ರಾಣಾಪಾಯದಿಂದ ರಕ್ಷಣೆ ಮಾಡಿದರು. ಕಾಂಕ್ರಿಟ್

ಪ್ರೇರಣಾ ಕಿಂಡರ್‌ಗಾರ್ಟನ್ ಶಾಲೆ ವಾರ್ಷಿಕೋತ್ಸವ: ವಿದ್ಯಾರ್ಥಿಗಳಿಗೆ ಶಿಕ್ಷಕರೇ ರೋಲ್ ಮಾಡೆಲ್-ಡಾ.ಪ್ರಕಾಶ ನರಗುಂದ

ಪ್ರೇರಣಾ ಕಿಂಡರ್‌ಗಾರ್ಟನ್ ಶಾಲೆ ವಾರ್ಷಿಕೋತ್ಸವ: ವಿದ್ಯಾರ್ಥಿಗಳಿಗೆ ಶಿಕ್ಷಕರೇ ರೋಲ್ ಮಾಡೆಲ್-ಡಾ.ಪ್ರಕಾಶ ನರಗುಂದ

ಮುದ್ದೇಬಿಹಾಳ : ಪ್ರಾಚೀನ ಗುರುಕುಲ ಪದ್ದತಿಯಿಂದ ಇಂದಿನವರೆಗೂ ಶಿಕ್ಷಕರಿಗೆ ಗೌರವದ ಭಾವನೆ ಇದೆ.ವಿದ್ಯಾರ್ಥಿಗಳಿಗೆ ಇಂದಿಗೂ ಒಳ್ಳೆಯ ಶಿಕ್ಷಕರು ರೋಲ್ ಮಾಡೆಲ್ ಆಗಿರುತ್ತಾರೆ ಎಂದು ಎಂ.ಜಿ.ವ್ಹಿ.ಸಿ ಪದವಿ ಮಹಾವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಪ್ರಕಾಶ ನರಗುಂದ ಹೇಳಿದರು. ಪಟ್ಟಣದ ಪ್ರೇರಣಾ ಕಿಂಡರ್ ಗಾರ್ಟನ್ ಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ 11ನೇ ವರ್ಷದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜರ್ಮನಿಯ ಶಿಕ್ಷಣ ತಜ್ಞ ಫ್ರೆಡ್ರಿಕ್ ಪ್ರೋಬೆಲ್ ಕಿಂಡರ್ ಗಾರ್ಟನ್ ಕಲ್ಪನೆಯನ್ನು ಬಿತ್ತಿದರು.ಈ ವ್ಯವಸ್ಥೆಯಲ್ಲಿ