Land leased to government land

ಸರ್ಕಾರಿ ಜಾಗವನ್ನು ಸರ್ಕಾರಕ್ಕೆ ಬಾಡಿಗೆ ನೀಡಿದ ಭೂಪರು

ಸರ್ಕಾರಿ ಜಾಗವನ್ನು ಸರ್ಕಾರಕ್ಕೆ ಬಾಡಿಗೆ ನೀಡಿದ ಭೂಪರು

ನಾಲತವಾಡ: ಪಟ್ಟಣದ ಶೋಷಿತ, ಹಿಂದುಳಿದ ಸಮುದಾಯಗಳಿಗಾಗಿ ಮೀಸಲಿರುವ 6 ಎಕರೆ ಸ್ಮಶಾನ ಜಾಗವನ್ನು ಅತಿಕ್ರಮಿಸಿ ಸ್ವಂತದ್ದೆಂದು ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡಿದ್ದಲ್ಲದೆ ಈಗಾಗಲೇ ಈ ಸ್ಥಳದಲ್ಲಿ ಬ್ಯಾಂಕ್, ಸಂಘ-ಸಂಸ್ಥೆ ಕಚೇರಿ ಹಾಗೂ ಮನೆಗಳನ್ನು ನಿರ್ಮಿಸಿ ಬಾಡಿಗೆ ನೀಡಲಾಗಿದೆ ಎಂದು, ಈ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳಿ ಎಂದು‌ ಯುವಜನ ಸೇನೆಯ ರಾಜ್ಯಾಧ್ಯಕ್ಷ ಶಿವಾನಂದ ವಾಲಿ ದೂರು ನೀಡಿದರೂ ಸ್ಪಂದಿಸದ ಪಟ್ಣಣ ಪಂಚಾಯಿತಿ ಸಿಒ ಹಾಗೂ ತಹಸೀಲ್ದಾ‌ರ್ ವಿರುದ್ಧ ಲೋಕಾಯುಕ್ತಕ್ಕೆ ಗಂಭೀರ ಪ್ರಕರಣದ ದೂರು ದಾಖಲಿಸಿದ್ದಾರೆ.

ಏನಿದು ಪ್ರಕರಣ?: ಹಲವಾರು ವರ್ಷಗಳಿಂದ ಪಟ್ಟಣದ ವಿವಿಧ ಸಮುದಾಯಗಳ ಸ್ಮಶಾನಕ್ಕೆ ಎಂದು ಸರ್ವೆ ನಂ.615 ರ ಮೀಸಲಿಟ್ಟ 6 ಎಕರೆ 21ಗುಂಟೆ ಸುಡುಗಾಡು ಜಾಗವನ್ನು ಪ್ರಭಾವಿ ಕಾಣದ ಕೈಗಳು ನಕಲಿ ದಾಖಲೆ ಸೃಷ್ಟಿಸಿ ಖಾಸಗಿಯವರ ಅತಿಕ್ರಮಣಕ್ಕೆ ಅವಕಾಶ ನೀಡಿವೆ. ಅಧಿಕಾರಿಗಳ ಕೈಚಳಕ ಮತ್ತು ಹಿಂದೆ ಅಧಿಕಾರ ನಡೆಸಿದ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿಯ ಅಕ್ರಮ ಎರಡೂ ಸೇರಿ ಪಂಚಾಯಿತಿ ದಾಖಲೆ 9 ನಂ. ರಿಜಿಸ್ಟರ್ ನಲ್ಲಿ ಹೆಸರು ನಮೂದಿಸಿ ಸ್ಮಶಾನ ಜಾಗವನ್ನು ಕಂಡವರ ಪಾಲು ಮಾಡಿ ಉತಾರ ಸೃಷ್ಟಿಸಲಾಗಿದೆ. ಹಲವರು ಸ್ಮಶಾನದ ಜಾಗ ತಮ್ಮದೇ ಎಂದು ಹೇಳಿಕೊಂಡು ಲಕ್ಷಗಟ್ಟಲೇ ಹಣಕ್ಕೆ ಮಾರಾಟ ಮಾಡಿದ್ದಾರೆ. ಸರ್ಕಾರಕ್ಕೆ ಸೇರಿದ ಸ್ಮಶಾನ ಜಾಗದಲ್ಲೇ ಸಭಾ ಭವನ ನಿರ್ಮಿಸಿ ಸರ್ಕಾರಕ್ಕೆ ಬಾಡಿಗೆ ನೀಡಿರುವುದು ಅಚ್ಚರಿ ಮೂಡಿಸಿದೆ. ಮತ್ತೊಂದೆಡೆ ಡಿಸಿಸಿ ಬ್ಯಾಂಕ್, ಕೃಷಿ ಪತ್ತಿನ ಸಹಕಾರ ಸಂಘದ ಕಚೇರಿ ನಿರ್ಮಿಸಲಾಗಿದೆ. ಅದೇ ಜಾಗದಲ್ಲಿ ಹಲವರು ಮನೆಗಳನ್ನು ನಿರ್ಮಿಸಿಕೊಂಡು ವಾಸವಾಗಿದ್ದಾರೆ ಎನ್ನುವುದು ದೂರುದಾರರ ವಾದ.

ಸ್ಥಾನಿಕ ತನಿಖೆಗೂ ಮೀನಮೇಷ: ಸ್ಮಶಾನ ಸ್ಥಳ ಅತಿಕ್ರಮಿಸಿದ ಕುರಿತು ಜಿಲ್ಲಾಧಿಕಾರಿ, ಪಟ್ಟಣ ಪಂಚಾಯಿತಿ ಅಧಿಕಾರಿಗಳು ಹಾಗೂ ತಹಸೀಲ್ದಾರ್ ಕಚೇರಿಗೆ ದೂರು ನೀಡಿ ತನಿಖೆ ನಡೆಸುವಂತೆ ಯುವಜನ ಸೇನೆ ರಾಜ್ಯಾಧ್ಯಕ್ಷ ಶಿವಾನಂದ ವಾಲಿ ಮನವಿ ಮಾಡಿದ್ದಾರೆ. 2022 ರಿಂದ ಎರಡ್ಮೂರು ಸಲ ಪಪಂ ಹಾಗೂ ಕಂದಾಯ ಇಲಾಖೆ ಅಧಿ ಕಾರಿಗಳಿಗೆ ದಾಖಲೆ ಸಮೇತ ಮನವಿ ಸಲ್ಲಿಸಿದ್ದಾರೆ.

“ಮನವಿಗೆ ಕ್ಯಾರೆ ಎನ್ನದೆ ಕಾಟಾಚಾರಕ್ಕೆ ಪಪಂನವರು ಅತಿಕ್ರಮಣಕಾರರಿಗೆ 2022 ರಲ್ಲಿ ನೋಟಿಸ್ ನೀಡಿದ್ದು ಹೊರತುಪಡಿಸಿದರೆ ಬೇರೆ ಏನೂ ಕ್ರಮ ಕೈಗೊಂಡಿಲ್ಲ,” ಎಂದು ಶಿವಾನಂದ ವಾಲಿ” ತಿಳಿಸಿರುತ್ತಾರೆ

–ಕೋಟ್–
“ಹಿಂದುಳಿದ,ದಲಿತ ಸಮುದಾಯದವರು ಸತ್ತರೆ ಅಂತ್ಯಸಂಸ್ಕಾರ ಮಾಡಲು ಸ್ಥಳವಿಲ್ಲದ ಕಾರಣ ಅವರ ಮನೆ ಮುಂದೆಯೇ ತಮ್ಮವರ ಶವಗಳನ್ನು ಹೂಳಿದ ಘಟನೆ ಇನ್ನೂ ಮಾಸಿಲ್ಲ. ಇಷ್ಟಾದರೂ ಪಪಂ ಹಾಗೂ ಕಂದಾಯ ಇಲಾಖೆಯವರು ಸ್ಮಶಾನ ಸ್ಥಳ ಅತಿಕ್ರಮಿಸಿ ಕೊಂಡವರ ವಿರುದ್ಧ ಯಾವುದೇ ಕ್ರಮ ಜರುಗಿಸಿಲ್ಲ. ಹೀಗಾಗಿ ಲೋಕಾಯುಕ್ತರಿಗೆ ದೂರು ನೀಡಿರುವೆ.”
–ಶಿವಾನಂದ ವಾಲಿ ಯುವಜನ ಸೇನೆ ರಾಜ್ಯಾಧ್ಯಕ್ಷರು.

ವರದಿ : ಶಿವು ರಾಠೋಡ

Latest News

ಕಂದಗನೂರ-ಮುದೂರ ರಸ್ತೆ ದುರಸ್ತಿ : ರೈತರ ಹೊಲಗಳ ದರ ದುಪ್ಪಟ್ಟು-ಶಾಸಕ ಸಿ.ಎಸ್.ನಾಡಗೌಡ

ಕಂದಗನೂರ-ಮುದೂರ ರಸ್ತೆ ದುರಸ್ತಿ : ರೈತರ ಹೊಲಗಳ ದರ ದುಪ್ಪಟ್ಟು-ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿ ಹಳ್ಳಿಗಳನ್ನು ಸಂಪರ್ಕಿಸುವ ರೈತರ ಹೊಲಗಳಿಗೆ ಹೋಗುವ ರಸ್ತೆಗಳ ಸುಧಾರಣೆಯಿಂದ

ನಾನು  ಕಾಂಗ್ರೆಸ್  ಹೈಕಮಾಂಡ್  ಲಿಸ್ಟ್’ನಲ್ಲಿರುವೆ-C.S.ನಾಡಗೌಡ

ನಾನು  ಕಾಂಗ್ರೆಸ್  ಹೈಕಮಾಂಡ್  ಲಿಸ್ಟ್’ನಲ್ಲಿರುವೆ-C.S.ನಾಡಗೌಡ

ಮುದ್ದೇಬಿಹಾಳ : ‘ಕೆಲವರು ನಾನು ಡಿಕೆಶಿ ಲಿಸ್ಟ್’ನಲ್ಲಿರುವೆ,ಇನ್ನು ಕೆಲವರು ಸಿದ್ಧರಾಮಯ್ಯ ಲಿಸ್ಟ್’ನಲ್ಲಿರುವೆ ಎನ್ನುತ್ತಿದ್ದಾರೆ.ನಾನು ಅವರಿಬ್ಬರ

ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ಸವಾರಿ ಮಾಡುವರು : ಕೆ. ಶಿವಕುಮಾರ್

ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ಸವಾರಿ ಮಾಡುವರು : ಕೆ. ಶಿವಕುಮಾರ್

ಚಾಮರಾಜನಗರ : ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ನಿಮ್ಮಗಳ ಮೇಲೆ ಸವಾರಿ ಮಾಡುವರು ಎಂದು ವಿಧಾನ

ರೈತರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ತಾಲ್ಲೂಕು ಕೃಷಿ ಕಚೇರಿಗೆ ಮುತ್ತಿಗೆ

ರೈತರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ತಾಲ್ಲೂಕು ಕೃಷಿ ಕಚೇರಿಗೆ ಮುತ್ತಿಗೆ

ಬೀದರ್ ;- ರಾಜ್ಯದಲ್ಲಿ ಸಂಭವಿಸಿರುವ ನೆರೆ, ಬರ, ಪ್ರವಾಹ ಮೊದಲಾದ ಪ್ರಕೃತಿ ವಿಕೋಪಗಳಿಂದ ರೈತರು,

ಗುಳಬಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೈಕ್ ಸೌಂಡ್ ಸಿಸ್ಟಮ್ ದೇಣಿಗೆ

ಗುಳಬಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೈಕ್ ಸೌಂಡ್ ಸಿಸ್ಟಮ್ ದೇಣಿಗೆ

ಗುಳಬಾಳ : ಹುಣಸಗಿ ತಾಲ್ಲೂಕಿನ ಗುಳಬಾಳ ಗ್ರಾಮದ ನಿವಾಸಿಯಾದ ಶ್ರೀಮತಿ ಯಂಕಮ್ಮ ಬಮ್ಮನಳ್ಳಿ ಅವರು ಕಲಿತ ಶಾಲೆಗೆ ಮೈಕ್ ಸೌಂಡ್ ಸಿಸ್ಟಮ್ ದೇಣಿಗೆಯಾಗಿ ನೀಡಿದರು. "ನಾನು ಕಲಿತ ಶಾಲೆ ನನ್ನ ಹೆಮ್ಮೆ" ಎಂದು ತಿಳಿದು ಶಾಲೆಯಲ್ಲಿ ನಡೆಯುವ ರಾಷ್ಟ್ರೀಯ ಕಾರ್ಯಕ್ರಮಗಳು ಇನ್ನಿತರೆ ಜಯಂತಿಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅನುಕೂಲವಾಗುವಂತೆ ತಮ್ಮ ವೈಯಕ್ತಿಕ ಹಣದಲ್ಲಿ ಶಾಲೆಗೆ ದೇಣಿಗೆ ನೀಡಿದರು. ಹುಣಸಗಿ ತಾಲೂಕಿನ ಪದವಿದರರೂ ತಮ್ಮ ಊರಿನ ಶಾಲೆಗೆ ದೇಣಿಗೆ ನೀಡಿ ಮಾದರಿಯಾಗಿ

ಬಸರಕೋಡ ಪಿ.ಕೆ.ಪಿ.ಎಸ್ :                                         ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ, ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಅವಿರೋಧ ಆಯ್ಕೆ

ಬಸರಕೋಡ ಪಿ.ಕೆ.ಪಿ.ಎಸ್ : ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ, ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ವಿವಿದೋದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ,ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಎರಡನೇ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಕಚೇರಿಯಲ್ಲಿ ಮಂಗಳವಾರ ನಡೆದ ಅಧ್ಯಕ್ಷ,ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಗಳಿಗೆ ತಲಾ ಒಂದೊAದೇ ನಾಮಪತ್ರ ಸಲ್ಲಿಕೆ ಆದ ಹಿನ್ನೆಲೆಯಲ್ಲಿ ಎರಡೂ ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದೆ ಎಂದು ಚುನಾವಣಾಧಿಕಾರಿ, ಸಹಕಾರ ಅಭಿವೃದ್ಧಿ ಅಧಿಕಾರಿ ವಿ.ಎಸ್.ಉತ್ನಾಳ ತಿಳಿಸಿದರು. ಎರಡನೇ ಅವಧಿಗೆ