Land leased to government land

ಸರ್ಕಾರಿ ಜಾಗವನ್ನು ಸರ್ಕಾರಕ್ಕೆ ಬಾಡಿಗೆ ನೀಡಿದ ಭೂಪರು

ಸರ್ಕಾರಿ ಜಾಗವನ್ನು ಸರ್ಕಾರಕ್ಕೆ ಬಾಡಿಗೆ ನೀಡಿದ ಭೂಪರು

ನಾಲತವಾಡ: ಪಟ್ಟಣದ ಶೋಷಿತ, ಹಿಂದುಳಿದ ಸಮುದಾಯಗಳಿಗಾಗಿ ಮೀಸಲಿರುವ 6 ಎಕರೆ ಸ್ಮಶಾನ ಜಾಗವನ್ನು ಅತಿಕ್ರಮಿಸಿ ಸ್ವಂತದ್ದೆಂದು ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡಿದ್ದಲ್ಲದೆ ಈಗಾಗಲೇ ಈ ಸ್ಥಳದಲ್ಲಿ ಬ್ಯಾಂಕ್, ಸಂಘ-ಸಂಸ್ಥೆ ಕಚೇರಿ ಹಾಗೂ ಮನೆಗಳನ್ನು ನಿರ್ಮಿಸಿ ಬಾಡಿಗೆ ನೀಡಲಾಗಿದೆ ಎಂದು, ಈ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳಿ ಎಂದು‌ ಯುವಜನ ಸೇನೆಯ ರಾಜ್ಯಾಧ್ಯಕ್ಷ ಶಿವಾನಂದ ವಾಲಿ ದೂರು ನೀಡಿದರೂ ಸ್ಪಂದಿಸದ ಪಟ್ಣಣ ಪಂಚಾಯಿತಿ ಸಿಒ ಹಾಗೂ ತಹಸೀಲ್ದಾ‌ರ್ ವಿರುದ್ಧ ಲೋಕಾಯುಕ್ತಕ್ಕೆ ಗಂಭೀರ ಪ್ರಕರಣದ ದೂರು ದಾಖಲಿಸಿದ್ದಾರೆ.

ಏನಿದು ಪ್ರಕರಣ?: ಹಲವಾರು ವರ್ಷಗಳಿಂದ ಪಟ್ಟಣದ ವಿವಿಧ ಸಮುದಾಯಗಳ ಸ್ಮಶಾನಕ್ಕೆ ಎಂದು ಸರ್ವೆ ನಂ.615 ರ ಮೀಸಲಿಟ್ಟ 6 ಎಕರೆ 21ಗುಂಟೆ ಸುಡುಗಾಡು ಜಾಗವನ್ನು ಪ್ರಭಾವಿ ಕಾಣದ ಕೈಗಳು ನಕಲಿ ದಾಖಲೆ ಸೃಷ್ಟಿಸಿ ಖಾಸಗಿಯವರ ಅತಿಕ್ರಮಣಕ್ಕೆ ಅವಕಾಶ ನೀಡಿವೆ. ಅಧಿಕಾರಿಗಳ ಕೈಚಳಕ ಮತ್ತು ಹಿಂದೆ ಅಧಿಕಾರ ನಡೆಸಿದ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿಯ ಅಕ್ರಮ ಎರಡೂ ಸೇರಿ ಪಂಚಾಯಿತಿ ದಾಖಲೆ 9 ನಂ. ರಿಜಿಸ್ಟರ್ ನಲ್ಲಿ ಹೆಸರು ನಮೂದಿಸಿ ಸ್ಮಶಾನ ಜಾಗವನ್ನು ಕಂಡವರ ಪಾಲು ಮಾಡಿ ಉತಾರ ಸೃಷ್ಟಿಸಲಾಗಿದೆ. ಹಲವರು ಸ್ಮಶಾನದ ಜಾಗ ತಮ್ಮದೇ ಎಂದು ಹೇಳಿಕೊಂಡು ಲಕ್ಷಗಟ್ಟಲೇ ಹಣಕ್ಕೆ ಮಾರಾಟ ಮಾಡಿದ್ದಾರೆ. ಸರ್ಕಾರಕ್ಕೆ ಸೇರಿದ ಸ್ಮಶಾನ ಜಾಗದಲ್ಲೇ ಸಭಾ ಭವನ ನಿರ್ಮಿಸಿ ಸರ್ಕಾರಕ್ಕೆ ಬಾಡಿಗೆ ನೀಡಿರುವುದು ಅಚ್ಚರಿ ಮೂಡಿಸಿದೆ. ಮತ್ತೊಂದೆಡೆ ಡಿಸಿಸಿ ಬ್ಯಾಂಕ್, ಕೃಷಿ ಪತ್ತಿನ ಸಹಕಾರ ಸಂಘದ ಕಚೇರಿ ನಿರ್ಮಿಸಲಾಗಿದೆ. ಅದೇ ಜಾಗದಲ್ಲಿ ಹಲವರು ಮನೆಗಳನ್ನು ನಿರ್ಮಿಸಿಕೊಂಡು ವಾಸವಾಗಿದ್ದಾರೆ ಎನ್ನುವುದು ದೂರುದಾರರ ವಾದ.

ಸ್ಥಾನಿಕ ತನಿಖೆಗೂ ಮೀನಮೇಷ: ಸ್ಮಶಾನ ಸ್ಥಳ ಅತಿಕ್ರಮಿಸಿದ ಕುರಿತು ಜಿಲ್ಲಾಧಿಕಾರಿ, ಪಟ್ಟಣ ಪಂಚಾಯಿತಿ ಅಧಿಕಾರಿಗಳು ಹಾಗೂ ತಹಸೀಲ್ದಾರ್ ಕಚೇರಿಗೆ ದೂರು ನೀಡಿ ತನಿಖೆ ನಡೆಸುವಂತೆ ಯುವಜನ ಸೇನೆ ರಾಜ್ಯಾಧ್ಯಕ್ಷ ಶಿವಾನಂದ ವಾಲಿ ಮನವಿ ಮಾಡಿದ್ದಾರೆ. 2022 ರಿಂದ ಎರಡ್ಮೂರು ಸಲ ಪಪಂ ಹಾಗೂ ಕಂದಾಯ ಇಲಾಖೆ ಅಧಿ ಕಾರಿಗಳಿಗೆ ದಾಖಲೆ ಸಮೇತ ಮನವಿ ಸಲ್ಲಿಸಿದ್ದಾರೆ.

“ಮನವಿಗೆ ಕ್ಯಾರೆ ಎನ್ನದೆ ಕಾಟಾಚಾರಕ್ಕೆ ಪಪಂನವರು ಅತಿಕ್ರಮಣಕಾರರಿಗೆ 2022 ರಲ್ಲಿ ನೋಟಿಸ್ ನೀಡಿದ್ದು ಹೊರತುಪಡಿಸಿದರೆ ಬೇರೆ ಏನೂ ಕ್ರಮ ಕೈಗೊಂಡಿಲ್ಲ,” ಎಂದು ಶಿವಾನಂದ ವಾಲಿ” ತಿಳಿಸಿರುತ್ತಾರೆ

–ಕೋಟ್–
“ಹಿಂದುಳಿದ,ದಲಿತ ಸಮುದಾಯದವರು ಸತ್ತರೆ ಅಂತ್ಯಸಂಸ್ಕಾರ ಮಾಡಲು ಸ್ಥಳವಿಲ್ಲದ ಕಾರಣ ಅವರ ಮನೆ ಮುಂದೆಯೇ ತಮ್ಮವರ ಶವಗಳನ್ನು ಹೂಳಿದ ಘಟನೆ ಇನ್ನೂ ಮಾಸಿಲ್ಲ. ಇಷ್ಟಾದರೂ ಪಪಂ ಹಾಗೂ ಕಂದಾಯ ಇಲಾಖೆಯವರು ಸ್ಮಶಾನ ಸ್ಥಳ ಅತಿಕ್ರಮಿಸಿ ಕೊಂಡವರ ವಿರುದ್ಧ ಯಾವುದೇ ಕ್ರಮ ಜರುಗಿಸಿಲ್ಲ. ಹೀಗಾಗಿ ಲೋಕಾಯುಕ್ತರಿಗೆ ದೂರು ನೀಡಿರುವೆ.”
–ಶಿವಾನಂದ ವಾಲಿ ಯುವಜನ ಸೇನೆ ರಾಜ್ಯಾಧ್ಯಕ್ಷರು.

ವರದಿ : ಶಿವು ರಾಠೋಡ

Latest News

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಕನ್ನಡ ಜಾನಪದ ಪರಿಷತ್ ತಾಲೂಕು ಘಟಕದ ಉದ್ಘಾಟನೆ,ಪದ ಪ್ರದಾನ ಹಾಗೂ ಜಾನಪದ

ಅಂತರ್‌ರಾಜ್ಯ ಕಳ್ಳರ ಬಂಧನ :                                       ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಅಂತರ್‌ರಾಜ್ಯ ಕಳ್ಳರ ಬಂಧನ : ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ): ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಮತಗಟ್ಟೆ ಅಧಿಕಾರಿಗಳು ಉತ್ತಮ ಸೇವೆ ಸಲ್ಲಿಸುತ್ತಿದ್ದು ಈವರೆಗೆ ಶೇ.82.47ರಷ್ಟು ಗಣತಿ ನಮೂನೆಗಳನ್ನು ಗಣಕೀಕರಣಗೊಳಿಸಲಾಗಿದೆ ಎಂದು ಮತದಾರರ ನೋಂದಣಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಿದ ಮೇಲ್ವಿಚಾರಕರು,ಬಿಎಲ್‌ಓಗಳ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಗೈರು ಹಾಜರಿ 1483, ಶಾಶ್ವತವಾಗಿ ಸ್ಥಳಾಂತರಗೊAಡವರು 16331,8505 ಮತದಾರರು ಮರಣ ಹೊಂದಿದ್ದಾರೆ ಎಂದು ತಿಳಿಸಿದರು. ಇದೇ ವೇಳೆ ಬಿಎಲ್‌ಓಗಳ ಸಹಕಾರದಿಂದ ಉತ್ತಮ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ ವಿದ್ಯಾಕಣ್ವವಿರಾಜ್ ತೀರ್ಥ ಶ್ರೀಗಳು ತಮ್ಮ ಏಳನೇ ಚಾತುರ್ಮಾಸ್ಯವನ್ನು ಆ.8 ರಿಂದ ಸೆ.26ರವರೆಗೆ ಕೈಗೊಳ್ಳಲಿದ್ದಾರೆ ಎಂದು ಮಹೋತ್ಸವ ಸಮೀತಿ ಅಧ್ಯಕ್ಷ ಅನೀಲಕುಮಾರ ಕುಲಕರ್ಣಿ ಹೇಳಿದರು. ಪಟ್ಟಣದ ಪಟ್ಟಣದ ಶ್ರೀ ಶಿವ ಚಿದಂಬರ ದೇವಸ್ಥಾನದಲ್ಲಿ ಮಂಗಳವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಸಪ್ತಮ ಚಾತುರ್ಮಾಸ್ಯದ ಕುರಿತು ಅವರು ವಿವರಿಸಿದರು.ಮುದ್ದೇಬಿಹಾಳ ಪಟ್ಟಣದಲ್ಲಿ ಸುಮಾರು 58 ವರ್ಷಗಳ ಹಿಂದೆ ಹುಣಶಿಹೊಳೆ ಕಣ್ವಮಠದ ವಿದ್ಯಾತಪೋನಿಧಿ