Leave politics and come to Mathadola - God Amareshwar

ರಾಜಕಾರಣ ಹೊರಗಿಟ್ಟು ಮಠದೊಳಕ್ಕೆ ಬನ್ನಿ-ಅಮರೇಶ್ವರ ದೇವರು

ರಾಜಕಾರಣ ಹೊರಗಿಟ್ಟು ಮಠದೊಳಕ್ಕೆ ಬನ್ನಿ-ಅಮರೇಶ್ವರ ದೇವರು

ಮುದ್ದೇಬಿಹಾಳ : ಆಸ್ತಿ ನೋಡಿಕೊಂಡು ನಾವು ಈ ಮಠಕ್ಕೆ ಬಂದಿಲ್ಲ. ಭಕ್ತರ ಭಕ್ತಿಯೇ ಶ್ರೀಮಠಕ್ಕೆ ಆಸ್ತಿ. ಹುನಗುಂದದಲ್ಲಿರುವ ಗಚ್ಚಿನಮಠಕ್ಕೆ ಹಿಂದೂ, ಮುಸ್ಲಿಂ, ಕ್ರೈಸ್ತ ಬಾಂಧವರನ್ನು ಕರೆಯುತ್ತೇವೆ. ಆ ಸಂಪ್ರದಾಯ ಮುದ್ದೇಬಿಹಾಳದ ಮಠದಲ್ಲೂ ಮುಂದುವರೆಸುತ್ತೇವೆ. ಮಠಕ್ಕೆ ಬರುವವರು ರಾಜಕಾರಣ ಹೊರಗಿಟ್ಟು ಸಾಮಾನ್ಯ ಭಕ್ತರಂತೆ ಬರಬೇಕು ಎಂದು ಮುದ್ದೇಬಿಹಾಳ ಹೊಸಮಠದ ನೂತನ ಸ್ವಾಮೀಜಿ ಅಮರೇಶ್ವರ ದೇವರು ಹೇಳಿದರು.

ಮುದ್ದೇಬಿಹಾಳ ಭಕ್ತರ ಆಹ್ವಾನದ ಮೇರೆಗೆ ಪಟ್ಟಣದ ಕಿಲ್ಲಾದಲ್ಲಿರುವ ಹೊಸಮಠಕ್ಕೆ ಭಾನುವಾರ ಆಗಮಿಸಿದ್ದ ಅವರಿಗೆ ಮುದ್ದೇಬಿಹಾಳ ವೀರಶೈವ ಲಿಂಗಾಯತ ಸಮಾಜದಿಂದ ನೀಡಿದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಸಮಾಜದಲ್ಲಿ ಸಂಸ್ಕಾರ ಕೊಡಬೇಕು ಎಂದರೆ ಗುರು ಶಿಷ್ಯರ ಪರಂಪರೆ ಬಹುಮುಖ್ಯವಾದದ್ದು. ಶಿಷ್ಯ ನೀರು, ಗುರುಗಳು ಬೆಂಕಿ ಆಗಿರಬೇಕು, ಇಲ್ಲವೇ ಶಿಷ್ಯಂದಿರು ಬೆಂಕಿ ಗುರುಗಳು ನೀರಿನಂತಿರಬೇಕು. ಭಕ್ತರು ಇದ್ದ ಹಾಗೆ ನಾನು ಇರುತ್ತೇನೆ. ಯಾವುದೇ ವ್ಯಕ್ತಿಗಳು ಬಂದರೂ ಮಠಕ್ಕೆ ಅವರು ಭಕ್ತರಾಗಿ ಬಂದು ಭಕ್ತರಾಗಿ ಹೋಗಬೇಕು. ಇದು ಯಾವುದೇ ಪಕ್ಷಕ್ಕೆ ಸಿಮೀತವಾದ ಮಠವಲ್ಲ ಎಂದು ಹೇಳಬಯಸುತ್ತೇವೆ. ಅಂತಹ ಭಾವನೆ ಬರುವುದಕ್ಕೆ ನಾವು ಬಿಡುವುದಿಲ್ಲ. ಎಲ್ಲರೂ ತಿರುಗಿ ನೋಡುವ ಮಠವನ್ನಾಗಿ ಹೊಸಮಠವನ್ನು ಮಾಡುತ್ತೇವೆ. ಜೀರ್ಣೋದ್ಧಾರಗೊಳಿಸಬೇಕಾದ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು.

ಸಾಹಿತಿ ರುದ್ರೇಶ ಕಿತ್ತೂರ ಮಾತನಾಡಿ, ಮುದ್ದೇಬಿಹಾಳದಲ್ಲಿ ಹಿಂದೆ ಏಳು ಮಠಗಳಿದ್ದವು. ಆದರೆ ಒಬ್ಬರೂ ಸ್ವಾಮೀಜಿಗಳಿರಲಿಲ್ಲ. ಧರ್ಮ ಮಾರ್ಗದರ್ಶಕರ ಅಗತ್ಯತೆ ಇದ್ದು ಆಧ್ಯಾತ್ಮಿಕ ಚಿಂತನೆ ಕೊರತೆಯನ್ನು ತುಂಬುವ ಸ್ವಾಮೀಜಿಯವರನ್ನು ನಾವು ಬರಮಾಡಿಕೊಂಡಿದ್ದೇವೆ. ಮುದ್ದೇಬಿಹಾಳ ಸೌಹಾರ್ದತೆಗೆ ಹೆಸರಾಗಿದ್ದು ಹೊಸಮಠವನ್ನು ಜೀರ್ಣೋದ್ಧಾರಗೊಳಿಸಿ ಅದರ ಇತಿಹಾಸ ಮರಳಿ ಜನತೆಗೆ ಅರಿವು ಮೂಡಿಸಬೇಕು. ಅಳಿವಿನಂಚಿನಲ್ಲಿದ್ದ ಮಠವನ್ನು ಜೀರ್ಣೋದ್ಧಾರಗೊಳಿಸುವ ಸವಾಲು ಸ್ವೀಕರಿಸಿರುವ ಅಮರೇಶ್ವರ ಶ್ರೀಗಳ ಕರ್ತೃತ್ವ ಶಕ್ತಿ ಬಗ್ಗೆ ಅಭಿಮಾನ,ಗೌರವ ಮುದ್ದೇಬಿಹಾಳದ ಭಕ್ತರು ಹೊಂದಿದ್ದೇವೆ ಎಂದರು.

ನಿವೃತ್ತ ಪ್ರೊ.ಎಸ್.ಎಸ್.ಹೂಗಾರ ಮಾತನಾಡಿ, ಹೊಸಮಠದ ಜೀರ್ಣೋದ್ಧಾರಕ್ಕೆ 25 ಸಾವಿರ ರೂ ದೇಣಿಗೆ ನೀಡುವುದಾಗಿ ತಿಳಿಸಿದರು. ಹುನಗುಂದ ತಾಲ್ಲೂಕಿನ ಭಕ್ತರಾದ ಅರುಣ ದುದ್ದಗಿ, ಪ್ರಭು ಮಾಲಗತ್ತಿಮಠ ಮಾತನಾಡಿ, ಹುನಗುಂದದಲ್ಲಿ ಗಚ್ಚಿನಮಠ ಬೃಹದಾಕಾರವಾಗಿ ಬೆಳೆದಿದೆ. ಮುದ್ದೇಬಿಹಾಳದ ಭಕ್ತರ ಅಪೇಕ್ಷೆಯ ಮೇರೆಗೆ ಇಲ್ಲಿನ ಮಠವನ್ನು, ಜನರನ್ನು ಉದ್ಧರಿಸಲು ಶ್ರೀಗಳು ತಮ್ಮ ಜ್ಞಾನದ ದಾಸೋಹ ಕಾರ್ಯ ಕೈಗೊಳ್ಳಲಿದ್ದು ಭಕ್ತರು ಪೂಜ್ಯರಿಗೆ ಬೆಂಬಲವಾಗಿ ನಿಲ್ಲಬೇಕು ಎಂದರು.

ವೀರೇಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ, ಹುನಗುಂದದ ಮಹಾಂತೇಶ ಮಠ, ಮುಖಂಡರಾದ ವೆಂಕನಗೌಡ ಪಾಟೀಲ, ಶಿವಕುಮಾರ ಬಿರಾದಾರ, ಪತ್ರಕರ್ತ ಶಂಕರ ಹೆಬ್ಬಾಳ, ಪ್ರತಿಭಾ ಅಂಗಡಗೇರಿ, ದಾನಯ್ಯಸ್ವಾಮಿ ಹಿರೇಮಠ, ಬಸವರಾಜ ನಂದಿಕೇಶ್ವರಮಠ ಮಾತನಾಡಿದರು.

ಹುನಗುಂದ ಹಾಗೂ ಮುದ್ದೇಬಿಹಾಳದಿಂದ ಆಗಮಿಸಿದ್ದ ನೂರಾರು ಭಕ್ತರು ಇದ್ದರು. ಹೊಸಮಠಕ್ಕೆ ಮೊದಲ ಬಾರಿಗ ಆಗಮಿಸಿದ ಅಮರೇಶ್ವರ ದೇವರನ್ನು ಪುಷ್ಪಾರ್ಚನೆ ಮೂಲಕ ಭಕ್ತರು ಮಠಕ್ಕೆ ಸ್ವಾಗತಿಸಿದರು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ