Leave politics and come to Mathadola - God Amareshwar

ರಾಜಕಾರಣ ಹೊರಗಿಟ್ಟು ಮಠದೊಳಕ್ಕೆ ಬನ್ನಿ-ಅಮರೇಶ್ವರ ದೇವರು

ರಾಜಕಾರಣ ಹೊರಗಿಟ್ಟು ಮಠದೊಳಕ್ಕೆ ಬನ್ನಿ-ಅಮರೇಶ್ವರ ದೇವರು

ಮುದ್ದೇಬಿಹಾಳ : ಆಸ್ತಿ ನೋಡಿಕೊಂಡು ನಾವು ಈ ಮಠಕ್ಕೆ ಬಂದಿಲ್ಲ. ಭಕ್ತರ ಭಕ್ತಿಯೇ ಶ್ರೀಮಠಕ್ಕೆ ಆಸ್ತಿ. ಹುನಗುಂದದಲ್ಲಿರುವ ಗಚ್ಚಿನಮಠಕ್ಕೆ ಹಿಂದೂ, ಮುಸ್ಲಿಂ, ಕ್ರೈಸ್ತ ಬಾಂಧವರನ್ನು ಕರೆಯುತ್ತೇವೆ. ಆ ಸಂಪ್ರದಾಯ ಮುದ್ದೇಬಿಹಾಳದ ಮಠದಲ್ಲೂ ಮುಂದುವರೆಸುತ್ತೇವೆ. ಮಠಕ್ಕೆ ಬರುವವರು ರಾಜಕಾರಣ ಹೊರಗಿಟ್ಟು ಸಾಮಾನ್ಯ ಭಕ್ತರಂತೆ ಬರಬೇಕು ಎಂದು ಮುದ್ದೇಬಿಹಾಳ ಹೊಸಮಠದ ನೂತನ ಸ್ವಾಮೀಜಿ ಅಮರೇಶ್ವರ ದೇವರು ಹೇಳಿದರು.

ಮುದ್ದೇಬಿಹಾಳ ಭಕ್ತರ ಆಹ್ವಾನದ ಮೇರೆಗೆ ಪಟ್ಟಣದ ಕಿಲ್ಲಾದಲ್ಲಿರುವ ಹೊಸಮಠಕ್ಕೆ ಭಾನುವಾರ ಆಗಮಿಸಿದ್ದ ಅವರಿಗೆ ಮುದ್ದೇಬಿಹಾಳ ವೀರಶೈವ ಲಿಂಗಾಯತ ಸಮಾಜದಿಂದ ನೀಡಿದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಸಮಾಜದಲ್ಲಿ ಸಂಸ್ಕಾರ ಕೊಡಬೇಕು ಎಂದರೆ ಗುರು ಶಿಷ್ಯರ ಪರಂಪರೆ ಬಹುಮುಖ್ಯವಾದದ್ದು. ಶಿಷ್ಯ ನೀರು, ಗುರುಗಳು ಬೆಂಕಿ ಆಗಿರಬೇಕು, ಇಲ್ಲವೇ ಶಿಷ್ಯಂದಿರು ಬೆಂಕಿ ಗುರುಗಳು ನೀರಿನಂತಿರಬೇಕು. ಭಕ್ತರು ಇದ್ದ ಹಾಗೆ ನಾನು ಇರುತ್ತೇನೆ. ಯಾವುದೇ ವ್ಯಕ್ತಿಗಳು ಬಂದರೂ ಮಠಕ್ಕೆ ಅವರು ಭಕ್ತರಾಗಿ ಬಂದು ಭಕ್ತರಾಗಿ ಹೋಗಬೇಕು. ಇದು ಯಾವುದೇ ಪಕ್ಷಕ್ಕೆ ಸಿಮೀತವಾದ ಮಠವಲ್ಲ ಎಂದು ಹೇಳಬಯಸುತ್ತೇವೆ. ಅಂತಹ ಭಾವನೆ ಬರುವುದಕ್ಕೆ ನಾವು ಬಿಡುವುದಿಲ್ಲ. ಎಲ್ಲರೂ ತಿರುಗಿ ನೋಡುವ ಮಠವನ್ನಾಗಿ ಹೊಸಮಠವನ್ನು ಮಾಡುತ್ತೇವೆ. ಜೀರ್ಣೋದ್ಧಾರಗೊಳಿಸಬೇಕಾದ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು.

ಸಾಹಿತಿ ರುದ್ರೇಶ ಕಿತ್ತೂರ ಮಾತನಾಡಿ, ಮುದ್ದೇಬಿಹಾಳದಲ್ಲಿ ಹಿಂದೆ ಏಳು ಮಠಗಳಿದ್ದವು. ಆದರೆ ಒಬ್ಬರೂ ಸ್ವಾಮೀಜಿಗಳಿರಲಿಲ್ಲ. ಧರ್ಮ ಮಾರ್ಗದರ್ಶಕರ ಅಗತ್ಯತೆ ಇದ್ದು ಆಧ್ಯಾತ್ಮಿಕ ಚಿಂತನೆ ಕೊರತೆಯನ್ನು ತುಂಬುವ ಸ್ವಾಮೀಜಿಯವರನ್ನು ನಾವು ಬರಮಾಡಿಕೊಂಡಿದ್ದೇವೆ. ಮುದ್ದೇಬಿಹಾಳ ಸೌಹಾರ್ದತೆಗೆ ಹೆಸರಾಗಿದ್ದು ಹೊಸಮಠವನ್ನು ಜೀರ್ಣೋದ್ಧಾರಗೊಳಿಸಿ ಅದರ ಇತಿಹಾಸ ಮರಳಿ ಜನತೆಗೆ ಅರಿವು ಮೂಡಿಸಬೇಕು. ಅಳಿವಿನಂಚಿನಲ್ಲಿದ್ದ ಮಠವನ್ನು ಜೀರ್ಣೋದ್ಧಾರಗೊಳಿಸುವ ಸವಾಲು ಸ್ವೀಕರಿಸಿರುವ ಅಮರೇಶ್ವರ ಶ್ರೀಗಳ ಕರ್ತೃತ್ವ ಶಕ್ತಿ ಬಗ್ಗೆ ಅಭಿಮಾನ,ಗೌರವ ಮುದ್ದೇಬಿಹಾಳದ ಭಕ್ತರು ಹೊಂದಿದ್ದೇವೆ ಎಂದರು.

ನಿವೃತ್ತ ಪ್ರೊ.ಎಸ್.ಎಸ್.ಹೂಗಾರ ಮಾತನಾಡಿ, ಹೊಸಮಠದ ಜೀರ್ಣೋದ್ಧಾರಕ್ಕೆ 25 ಸಾವಿರ ರೂ ದೇಣಿಗೆ ನೀಡುವುದಾಗಿ ತಿಳಿಸಿದರು. ಹುನಗುಂದ ತಾಲ್ಲೂಕಿನ ಭಕ್ತರಾದ ಅರುಣ ದುದ್ದಗಿ, ಪ್ರಭು ಮಾಲಗತ್ತಿಮಠ ಮಾತನಾಡಿ, ಹುನಗುಂದದಲ್ಲಿ ಗಚ್ಚಿನಮಠ ಬೃಹದಾಕಾರವಾಗಿ ಬೆಳೆದಿದೆ. ಮುದ್ದೇಬಿಹಾಳದ ಭಕ್ತರ ಅಪೇಕ್ಷೆಯ ಮೇರೆಗೆ ಇಲ್ಲಿನ ಮಠವನ್ನು, ಜನರನ್ನು ಉದ್ಧರಿಸಲು ಶ್ರೀಗಳು ತಮ್ಮ ಜ್ಞಾನದ ದಾಸೋಹ ಕಾರ್ಯ ಕೈಗೊಳ್ಳಲಿದ್ದು ಭಕ್ತರು ಪೂಜ್ಯರಿಗೆ ಬೆಂಬಲವಾಗಿ ನಿಲ್ಲಬೇಕು ಎಂದರು.

ವೀರೇಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ, ಹುನಗುಂದದ ಮಹಾಂತೇಶ ಮಠ, ಮುಖಂಡರಾದ ವೆಂಕನಗೌಡ ಪಾಟೀಲ, ಶಿವಕುಮಾರ ಬಿರಾದಾರ, ಪತ್ರಕರ್ತ ಶಂಕರ ಹೆಬ್ಬಾಳ, ಪ್ರತಿಭಾ ಅಂಗಡಗೇರಿ, ದಾನಯ್ಯಸ್ವಾಮಿ ಹಿರೇಮಠ, ಬಸವರಾಜ ನಂದಿಕೇಶ್ವರಮಠ ಮಾತನಾಡಿದರು.

ಹುನಗುಂದ ಹಾಗೂ ಮುದ್ದೇಬಿಹಾಳದಿಂದ ಆಗಮಿಸಿದ್ದ ನೂರಾರು ಭಕ್ತರು ಇದ್ದರು. ಹೊಸಮಠಕ್ಕೆ ಮೊದಲ ಬಾರಿಗ ಆಗಮಿಸಿದ ಅಮರೇಶ್ವರ ದೇವರನ್ನು ಪುಷ್ಪಾರ್ಚನೆ ಮೂಲಕ ಭಕ್ತರು ಮಠಕ್ಕೆ ಸ್ವಾಗತಿಸಿದರು.

Latest News

​🌅 ಶುಭೋದಯದ ಪದ್ಯ

​🌅 ಶುಭೋದಯದ ಪದ್ಯ

​ಹೊಸ ಆಸೆಯ ಹೊತ್ತು ಸೂರ್ಯ ಮೂಡಿದ,ಹೊಸ ಕನಸಿನ ಬುತ್ತಿ ಹಕ್ಕಿ ಹಾಡಿದ.ಮಬ್ಬು ಮರೆತು, ಬೆಳಕು

ದಿನಕ್ಕೊಂದು ಧನಾತ್ಮಕ ಕಥೆ: ಸಣ್ಣ ಬದಲಾವಣೆ, ದೊಡ್ಡ ಪರಿಣಾಮ

ದಿನಕ್ಕೊಂದು ಧನಾತ್ಮಕ ಕಥೆ: ಸಣ್ಣ ಬದಲಾವಣೆ, ದೊಡ್ಡ ಪರಿಣಾಮ

ಒಂದು ದೊಡ್ಡ ನಗರದ ಹೊರವಲಯದಲ್ಲಿ ಒಬ್ಬ ಅನುಭವಿ ಕುಂಬಾರ ವಾಸಿಸುತ್ತಿದ್ದನು. ಆತನ ಹೆಸರು ರಾಘವ.

ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆಗೆ ಪ್ರಸ್ತಾವನೆ-ಶಾಸಕ ನಾಡಗೌಡ

ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆಗೆ ಪ್ರಸ್ತಾವನೆ-ಶಾಸಕ ನಾಡಗೌಡ

ಮುದ್ದೇಬಿಹಾಳ : ಪಟ್ಟಣದ ವ್ಯಾಪ್ತಿಯಲ್ಲಿ ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆ ಆರಂಭಿಸಲು ಪ್ರಸ್ತಾವನೆ ಕಳಿಸಲಾಗಿದೆ

ಪ್ರಸ್ತುತ ಕರ್ನಾಟಕ ರಾಜಕೀಯ ಚಿತ್ರಣ: ಸವಾಲು ಮತ್ತು ಗ್ಯಾರಂಟಿಗಳು

ಪ್ರಸ್ತುತ ಕರ್ನಾಟಕ ರಾಜಕೀಯ ಚಿತ್ರಣ: ಸವಾಲು ಮತ್ತು ಗ್ಯಾರಂಟಿಗಳು

ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೇರಿದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು

MUDDEBIHAL : PWD AEE ರೆಡ್ಡಿ ಅಧಿಕಾರ ಸ್ವೀಕಾರ

MUDDEBIHAL : PWD AEE ರೆಡ್ಡಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ತಾಲ್ಲೂಕಿನ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರಾಗಿ ಅಯ್ಯಪ್ಪಗೌಡ ರೆಡ್ಡಿ ಶುಕ್ರವಾರ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಅವರನ್ನು ಗುತ್ತಿಗೆದಾರರ ಸಂಘದ ತಾಲ್ಲೂಕು ಅಧ್ಯಕ್ಷ ಸುರೇಶಗೌಡ ಪಾಟೀಲ ಇಂಗಳಗೇರಿ, ಯುವ ಕಾಂಗ್ರೆಸ್ ಅಧ್ಯಕ್ಷ ಸಚಿನಗೌಡ ಪಾಟೀಲ, ಗುತ್ತಿಗೆದಾರ ಶ್ರೀಕಾಂತಗೌಡ ಪಾಟೀಲ, ಮುಖಂಡ ರುದ್ರಗೌಡ ಅಂಗಡಗೇರಿ ಸನ್ಮಾನಿಸಿದರು. ಅಯ್ಯಪ್ಪಗೌಡ ರೆಡ್ಡಿ ಅವರು ಈ ಮುಂಚೆ ಶಿರಸಿ ಸಿದ್ದಾಪುರ,ಮುದ್ದೇಬಿಹಾಳ,ಆಲಮಟ್ಟಿ,ತಾಳಿಕೋಟಿ ಭಾಗದಲ್ಲಿ ವಿವಿಧ ಇಲಾಖೆಗಳಲ್ಲಿ ಸಹಾಯಕ ಅಭಿಯಂತರರಾಗಿ ಸೇವೆ ಸಲ್ಲಿಸಿದ್ದು ಅವರಿಗೆ ಸರ್ಕಾರ ಈ

ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಆಯ್ಕೆ;                                 ಮುದ್ದೇಬಿಹಾಳ ಕಾನಿಪ ಸಂಘಕ್ಕೆ ಚುನಾವಣೆ : ವಡವಡಗಿ ಪೆನಲ್‌ಗೆ ಜಯ

ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಆಯ್ಕೆ; ಮುದ್ದೇಬಿಹಾಳ ಕಾನಿಪ ಸಂಘಕ್ಕೆ ಚುನಾವಣೆ : ವಡವಡಗಿ ಪೆನಲ್‌ಗೆ ಜಯ

ಮುದ್ದೇಬಿಹಾಳ : ಕಾನಿಪ ಸಂಘದ ತಾಲ್ಲೂಕು ಘಟಕದ 2025-28ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಗೆ ಬುಧವಾರ ಚುನಾವಣೆ ನಡೆಸಲಾಗಿದ್ದು ವಡವಡಗಿ-ಬನ್ನೆಟ್ಟಿ ಪೆನಲ್ ಮಧ್ಯೆ ಏರ್ಪಟ್ಟ ಸ್ಪರ್ಧೆಯಲ್ಲಿ ವಡವಡಗಿ ಪೆನಲ್ ಪದಾಧಿಕಾರಿಗಳು ಭರ್ಜರಿ ಜಯ ಸಾಧಿಸಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಡಿ.ಬಿ.ವಡವಡಗಿ ಹಾಗೂ ಮಕ್ಬೂಲ್ ಬನ್ನೆಟ್ಟಿ ನಾಮಪತ್ರ ಸಲ್ಲಿಸಿದ್ದು ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಅವರು 19 ಮತ ಪಡೆದು ಆಯ್ಕೆಯಾಗಿ ಪ್ರತಿಸ್ಪರ್ಧಿ ಮಕ್ಬುಲ್ ಬನ್ನೆಟ್ಟಿ ಅವರನ್ನು 10 ಮತಗಳ ಅಂತರದಿoದ ಪರಾಭವಗೊಳಿಸಿದರು. ಉಪಾಧ್ಯಕ್ಷ