Led by the Madiga Reservation Struggle Committee: Govt.'s funeral funeral on August 1

ಮಾದಿಗ ಮೀಸಲಾತಿ ಹೋರಾಟ ಸಮೀತಿ ನೇತೃತ್ವ: ಆ.1 ರಂದು ಸರ್ಕಾರದ ಅಣುಕು ಶವಯಾತ್ರೆ

ಮಾದಿಗ ಮೀಸಲಾತಿ ಹೋರಾಟ ಸಮೀತಿ ನೇತೃತ್ವ: ಆ.1 ರಂದು ಸರ್ಕಾರದ ಅಣುಕು ಶವಯಾತ್ರೆ

ಮುದ್ದೇಬಿಹಾಳ : ಒಳಮೀಸಲಾತಿ ಜಾರಿಗೊಳಿಸುವಂತೆ ಆಗ್ರಹಿಸಿ ನಡೆದಿರುವ ಹೋರಾಟ ತೀವ್ರಗೊಳಿಸಲು ಆ.1 ರಂದು ರಾಜ್ಯಾದ್ಯಂತ ಮಾದಿಗ ಮೀಸಲಾತಿ ಹೋರಾಟ ಸಮೀತಿ ನೇತೃತ್ವದಲ್ಲಿ ಸರ್ಕಾರದ ಅಣುಕು ಶವಯಾತ್ರೆ ನಡೆಸಲಾಗುವುದು ಎಂದು ಮಾದಿಗ ಮೀಸಲಾತಿ ಹೋರಾಟ ಸಮೀತಿ ಮುಖಂಡ ಮಾರುತಿ ಸಿದ್ದಾಪೂರ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಆ.1 ರಂದು ಮುದ್ದೇಬಿಹಾಳ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಅಣಕು ಶವಯಾತ್ರೆ ಬೆಳಗ್ಗೆ 11ಕ್ಕೆ ಆರಂಭಿಸಲಾಗುತ್ತಿದ್ದು ಅಲ್ಲಿಂದ ಸಂಗೊಳ್ಳಿ ರಾಯಣ್ಣ ವೃತ್ತ, ಬಸ್ ನಿಲ್ದಾಣ, ಬಸವೇಶ್ವರ ವೃತ್ತದಲ್ಲಿ ಸರ್ಕಾರದ ಅಣಕು ಶವವನ್ನು ದಹಿಸಲಾಗುತ್ತದೆ. ನಂತರ ಮೆರವಣಿಗೆ ಮೂಲಕ ತಹಸಿಲ್ದಾರ್ ಕಚೇರಿಗೆ ತೆರಳಿ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

ವಕೀಲ ಕೆ.ಬಿ.ದೊಡಮನಿ ಮಾತನಾಡಿ, ಸುಪ್ರೀಂಕೋರ್ಟ್ ಒಳಮೀಸಲಾತಿ ಸೌಲಭ್ಯ ಕಲ್ಪಿಸುವಂತೆ ರಾಜ್ಯ ಸರ್ಕಾರದಿಂದ ವರದಿ ನೀಡುವಂತೆ ಸೂಚನೆ ಮಾಡಿದ್ದರೂ ಅದಕ್ಕೆ ಸ್ಪಂದಿಸದೇ ಇರುವುದು ಸರ್ಕಾರದ ಬೇಜವಾಬ್ದಾರಿತನಕ್ಕೆ ಹಿಡಿದು ಕೈಗನ್ನಡಿ ಎಂದು ಆರೋಪಿಸಿದರು.

ಮುಖಂಡರಾದ ಬಸವರಾಜ ವಣಕಿಹಾಳ, ಬಾಲಚಂದ್ರ ಹುಲ್ಲೂರ, ಶೇಖಪ್ಪ ಮಾದರ, ಆನಂದ ಮುದೂರ, ದುರ್ಗಪ್ಪ ಮಾದರ ಮಾತನಾಡಿದರು. ಮುಖಂಡರಾದ ಬಸಪ್ಪ ಕವಡಿಮಟ್ಟಿ, ಗುರು ಚಲಮಿ,ಮಲ್ಲಪ್ಪ ಬಸರಕೋಡ, ಶಂಕ್ರಪ್ಪ ಪೂಜಾರಿ, ಯಮನಪ್ಪ ಮಾದರ ಮೊದಲಾದವರು ಇದ್ದರು.

Latest News

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆದಿರುವ ಧರಣಿ ಸತ್ಯಾಗ್ರಹ ಮೂರು ದಿನ ಪೂರೈಸಿದ್ದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಯರಝರಿ ಜಿಪಂ ಭಾಗದ ರೈತರು ಬುಧವಾರದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಶಾಸಕರು,ಸರಕಾರಕ್ಕೆ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಮಳೆ ಕೊರತೆ ಇದೆ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ ಹೇಳಿಕೆಯನ್ನು ತಗೆದುಕೊಂಡರೋ ಗೊತ್ತಿಲ್ಲ.ಸದ್ಯಕ್ಕೆ ಮುಖ್ಯಮಂತ್ರಿಗಳು ಪತ್ರವ್ಯವಹಾರ ನಿಲ್ಲಿಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಸುಮ್ಮನಾಗಿದ್ದೇನೆ.ನನ್ನದು ಸಿದ್ಧಾಂತದ ಮೇಲೆ ಹೋರಾಟ ನಡೆಯುತ್ತದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಬಳಿ ತಮ್ಮನ್ನು ಎದುರಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.ನನ್ನ ಮಾನಸಿಕ ಸ್ಥಿತಿ ಹೇಗಿದೆ ? ಎಂಬುದನ್ನು ಮತ್ತೊಬ್ಬರಿಂದ ಹೇಳಿಸಿಕೊಳ್ಳಬೇಕಾಗಿಲ್ಲ.ಮಾನಸಿಕ ಚಿಕಿತ್ಸೆಯ ಬಗ್ಗೆ ಕೊಟ್ಟಿರುವ ಮಾತಿಗೆ ನಾನು