ಮುದ್ದೇಬಿಹಾಳ : ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಸಿಎಸ್ಆರ್ ಅನುದಾನದಲ್ಲಿ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕು ಆಸ್ಪತ್ರೆಗಳಿಗೆ ತಲಾ ಒಂದು ಅಂಬ್ಯುಲೆನ್ಸ್ ಜನಸೇವೆಗೆ ಅರ್ಪಿಸಲಾಗುತ್ತಿದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.
ಪಟ್ಟಣದ ದ್ಯಾಮವ್ವನ ಕಟ್ಟೆ ಬಳಿ ಶುಕ್ರವಾರ ಕೆಎಸ್ಡಿಎಲ್ನಿಂದ ವಿತರಿಸಲಾದ ಎರಡು ಅಂಬ್ಯುಲೆನ್ಸ್ಗಳನ್ನು ಸರ್ಕಾರಿ ಆಸ್ಪತ್ರೆಗಳಿಗೆ ಹಸ್ತಾಂತರಿಸಿ ಮಾತನಾಡಿದರು.ಸರ್ಕಾರಿ ಆಸ್ಪತ್ರೆಯಲ್ಲಿ ಒಳ್ಳೆಯ ಸೇವೆ ದೊರೆಯತ್ತಿದೆ.ಆದರೆ ಅಲ್ಲಿ ಚೀಟಿ ಮಾಡುವ ಸಿಬ್ಬಂದಿ ಕೊರತೆ ಇದೆ ಎಂದು ಸುದ್ದಿಗಾರರು ಪ್ರಶ್ನಿಸಿದಾಗ ಉತ್ತರಿಸಿದ ಶಾಸಕರು, ನಮ್ಮ ಸರ್ಕಾರದಲ್ಲಿ ಶಿಕ್ಷಣ,ಆರೋಗ್ಯ ಸೇರಿದಂತೆ ಹಲವು ಇಲಾಖೆಗಳಲ್ಲಿ ಖಾಲಿ ಇರುವ ೭೦ ಸಾವಿರ ಹುದ್ದೆಗಳನ್ನು ತುಂಬಲು ಅಧಿಸೂಚನೆ ಹೊರಡಿಸಲಾಗಿದ್ದರೂ ಕೆಲವರು ಮೀಸಲಾತಿ ಗೊಂದಲದ ಕುರಿತು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿರುವ ಕಾರಣ ನೇಮಕಾತಿ ಪ್ರಕ್ರಿಯೆ ಸ್ಥಗಿತಗೊಂಡಿದೆ.ಇದರಲ್ಲಿ ನಮ್ಮ ಸರ್ಕಾರ ರಾಜಕೀಯ ಮಾಡುವುದಿಲ್ಲ.ಸ್ಥಳೀಯ ಆಸ್ಪತ್ರೆಯಲ್ಲಿ ಅನುದಾನದ ಲಭ್ಯತೆ ಮೇಲೆ ಹೊರಗುತ್ತಿಗೆ ಸಿಬ್ಬಂದಿ ನೇಮಕದ ಕುರಿತು ಅವಕಾಶಗಳಿದ್ದಲ್ಲಿ ನೇಮಿಸಿಕೊಳ್ಳಲು ವೈದ್ಯಾಧಿಕಾರಿಗಳಿಗೆ ತಿಳಿಸಿರುವುದಾಗಿ ಹೇಳಿದರು.
ಕೆಎಸ್ಡಿಎಲ್ ನಿಗಮದಿಂದ ಶಾಲೆಗಳ ದತ್ತು ಯೋಜನೆ,ವಿಪತ್ತು ಸಂದರ್ಭಗಳಲ್ಲಿ ಅದನ್ನು ತ್ವರಿತವಾಗಿ ತಲುಪಲು ವನ್ಯಜೀವಿಗಳ ದಾಳಿಯಿಂದ ತೊಂದರೆಗೊಳಗಾಗುವವರಿಗಾಗಿ ಜಿಲ್ಲೆಗೊಂದರoತೆ ಅಂಬ್ಯುಲೆನ್ಸ್ ನೀಡಲಾಗುತ್ತಿದೆ.ಬಡವರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸುವುದು ನಮ್ಮ ಬದ್ಧತೆಯಾಗಿದೆ ಎಂದು ಉತ್ತರಿಸಿದರು.
ಜಿಲ್ಲಾ ವೈದ್ಯಾಧಿಕಾರಿ ಡಾ.ಮಲ್ಲನಗೌಡ ಬಿರಾದಾರ, ಗಣ್ಯ ವರ್ತಕ ಬಿ.ಸಿ.ಮೋಟಗಿ,ಆಡಳಿತ ವೈದ್ಯಾಧಿಕಾರಿ ಡಾ.ಸತೀಶ ತಿವಾರಿ,ಸರ್ಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ರಂಗನಾಥ ವೈದ್ಯ,ಕಾಂಗ್ರೆಸ್ ಮುಖಂಡ ಅಬ್ದುಲಗಫೂರ ಮಕಾನದಾರ,ವರ್ತಕರಾದ ರಮೇಶ ಓಸ್ವಾಲ್,ವಾಸುದೇವ ಶಾಸ್ತಿçÃ,ಉದ್ಯಮಿ ಸತೀಶ ಓಸ್ವಾಲ್,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಕರ್ನಾಟಕ ರಾಜ್ಯ ಪಟ್ಟಣ ಸಹಕಾರ ಬ್ಯಾಂಕುಗಳ ಮಹಾಮಂಡಳದ ನಿರ್ದೇಶಕ ಆನಂದಗೌಡ ಬಿರಾದಾರ,ಸರ್ಕಾರಿ ನೌಕರ ಸಂಘದ ಉಪಾಧ್ಯಕ್ಷ ವಿಠ್ಠಲ ಕಿಲಾರಟ್ಟಿ,ಯುವ ಕಾಂಗ್ರೆಸ್ ಮುಖಂಡ ಮೊಹ್ಮದರಫೀಕ ಶಿರೋಳ,ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ ಸೇರಿದಂತೆ ಹಲವರು ಇದ್ದರು.







