Legislate to create fear for rapists: Karnataka Muslim Forum

ಅತ್ಯಾಚಾರಿಗಳಿಗೆ ಭಯ ಹುಟ್ಟಿಸುವ ಕಾನೂನು ರೂಪಿಸಿ: ಕರ್ನಾಟಕ ಮುಸ್ಲಿಂ ಫೋರಂ ಆಗ್ರಹ (ವಿಡಿಯೋ ನೋಡಿ)

ಅತ್ಯಾಚಾರಿಗಳಿಗೆ ಭಯ ಹುಟ್ಟಿಸುವ ಕಾನೂನು ರೂಪಿಸಿ: ಕರ್ನಾಟಕ ಮುಸ್ಲಿಂ ಫೋರಂ ಆಗ್ರಹ (ವಿಡಿಯೋ ನೋಡಿ)

ಮುದ್ದೇಬಿಹಾಳ : ಕೋಲ್ಕತ್ತಾ ನಗರದ ಆರ್.ಜಿ.ಕರ್ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ತರಬೇತಿ ಅವಧಿಯಲ್ಲಿ ಅತ್ಯಾಚಾರ ಎಸಗಿ ಹತ್ಯೆ ಹಾಗೂ ಉತ್ತರಾಖಂಡ ರಾಜ್ಯದ ರುದ್ರಾಪೂರದಲ್ಲಿ ನರ್ಸ್ ಒಬ್ಬರನ್ನು ಅತ್ಯಾಚಾರ ಮಾಡಿ ಹತ್ಯೆಗೈದಿರುವ ಘಟನೆಯನ್ನು ಖಂಡಿಸಿ ಶುಕ್ರವಾರ ಪಟ್ಟಣದಲ್ಲಿ ಕರ್ನಾಟಕ ಮುಸ್ಲಿಂ ಫೋರಂ ಸಂಘಟನೆಯಿಂದ ಮೌನವಾಗಿ ಪ್ರತಿಭಟನೆ ನಡೆಸಲಾಯಿತು.

Join Our Telegram: https://t.me/dcgkannada

ಪಟ್ಟಣದ ಕಿಲ್ಲಾದ ಟಿಪ್ಪು ಸುಲ್ತಾನ್ ವೃತ್ತದಿಂದ ಪ್ರಮುಖ ಬೀದಿಗಳಲ್ಲಿ ಹಾಯ್ದು ತಹಶೀಲ್ದಾರ್ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು ತಮ್ಮ ಆಕ್ರೋಶವನ್ನು ಮೌನವಾಗಿಯೇ ಹೊರ ಹಾಕಿದರು.

ತಹಶೀಲ್ದಾರ್ ಕಚೇರಿ ಆವರಣದಲ್ಲಿ ಮಾತನಾಡಿದ ಡಾ.ಎ.ಎಂ.ಮುಲ್ಲಾ, ಇಂತಹ ಘಟನೆಗಳು ದೇಶದಲ್ಲಿ ಮಹಿಳೆಯರು ಅಸುರಕ್ಷಿತ ಎಂಬ ಭಾವನೆಗೆ ಮತ್ತಷ್ಟು ಸಾಕ್ಷಿ ಒದಗಿಸುತ್ತವೆ.ದೇಶದಲ್ಲಿ ಬೇಟಿ ಬಚಾವ್ ಬೇಟಿ ಪಡಾವ್ ಎಂಬ ಘೋಷವಾಕ್ಯ ಇದ್ದರೂ ಬೇಟಿ ಬಚಾವ್ ಆಗದೇ ಇರುವುದು ದುರ್ದೈವ.ಅಲ್ಲಿಯ ಸರ್ಕಾರದ ನಿರ್ಲಕ್ಷ್ಯಕ್ಕೆ ಚಾಟಿ ಬೀಸಿರುವ ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತವಾಗಿ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವುದು ಅಲ್ಲಿನ ಸರ್ಕಾರದಲ್ಲಿರುವ ಜನಪ್ರತಿನಿಧಿಗಳು ವಿವೇಚನೆ ಇಲ್ಲದ ವ್ಯಕ್ತಿಗಳು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜನರ ಜೀವ ಕಾಪಾಡುವ ವೈದ್ಯರ ಜೀವಕ್ಕೆ ಇಲ್ಲಿ ಭದ್ರತೆ ಇಲ್ಲದಂತಾಗಿದೆ. ಇಂತಹ ಅತ್ಯಾಚಾರ ಎಸಗುವ ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ಜಾರಿಗೊಳಿಸಬೇಕು. ಅತ್ಯಾಚಾರಿಗಳಲ್ಲಿ ಶಿಕ್ಷೆಯ ಬಗ್ಗೆ ಭಯ ಹುಟ್ಟಿಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ರಾಷ್ಟ್ರಪತಿಗಳಿಗೆ ಬರೆದ ಮನವಿಯನ್ನು ಶಿರಸ್ತೇದಾರ ಎಂ.ಎಸ್.ಬಾಗೇವಾಡಿ ಅವರಿಗೆ ಸಲ್ಲಿಸಲಾಯಿತು.

ಮುಸ್ಲಿಂ ಫೋರಂ ಅಧ್ಯಕ್ಷ ಡಿ.ಎಂ.ಚೌದ್ರಿ, ಅಬ್ದುಲಜಬ್ಬಾರ ಗೋಲಂದಾಜ,ಪುರಸಭೆ ಸದಸ್ಯರಾದ ಮಹೆಬೂಬ ಗೊಳಸಂಗಿ,ರಿಯಾಜ್ ನಾಯ್ಕೋಡಿ, ಮೌಲಾನಾ ಅಲ್ಲಾಭಕ್ಷö್ಯ ಖಾಜಿ, ಹುಸೇನ್ ಮುಲ್ಲಾ, ಹುಸೇನ ಮೌಲಾನಾ, ಮುನ್ನಾ ಮಕಾನದಾರ, ಸಾಹೇಬಲಾಲ ದೇಸಾಯಿ, ರಫೀಕ ಜಾನ್ವೇಕರ, ರಫೀಕ ನಾಗರಾಳ, ಅಬ್ದುಲ ಜಬ್ಬಾರ ಮಕಾನದಾರ ಮೊದಲಾದವರು ಇದ್ದರು.

ಇದನ್ನೂ ಓದಿ: ಆ.24 ರಂದು ಕೆಯುಸಿ ಬ್ಯಾಂಕ್‌ನ 65ನೇ ವಾರ್ಷಿಕ ಮಹಾಸಭೆ

ಪಿಎಸ್‌ಐ ಸಂಜಯ ತಿಪರೆಡ್ಡಿ ಹಾಗೂ ಸಿಬ್ಬಂದಿ ಭದ್ರತೆ ಒದಗಿಸಿದ್ದರು.

Latest News

ಇ.ಆರ್.ಟಿ ಅನುಷ್ಠಾನ; ಜನಪ್ರತಿನಿಧಿಗಳ, ಸಾರ್ವಜನಿಕರ ಅಭಿಪ್ರಾಯಕ್ಕೆ ಮನ್ನಣೆ

ಇ.ಆರ್.ಟಿ ಅನುಷ್ಠಾನ; ಜನಪ್ರತಿನಿಧಿಗಳ, ಸಾರ್ವಜನಿಕರ ಅಭಿಪ್ರಾಯಕ್ಕೆ ಮನ್ನಣೆ

ಧಾರವಾಡ, ಜೂನ್‌16: ವೇಗವಾಗಿ ಬೆಳೆಯುತ್ತಿರುವ ಹುಬ್ಬಳ್ಳಿ- ಧಾರವಾಡ ಅವಳಿ ನಗರಗಳಲ್ಲಿ ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ

ಅಧಿಕಾರಿಗಳ ನಿರ್ಲಕ್ಷ್ಯದಿಂದ ಯಾವುದೇ ಜೀವಹಾನಿ ಉಂಟಾದರೆ ಅವರ ವಿರುದ್ಧ ಕ್ರಮ: ಸಚಿವ ಸಂತೋಷ್‌ ಲಾಡ್

ಅಧಿಕಾರಿಗಳ ನಿರ್ಲಕ್ಷ್ಯದಿಂದ ಯಾವುದೇ ಜೀವಹಾನಿ ಉಂಟಾದರೆ ಅವರ ವಿರುದ್ಧ ಕ್ರಮ: ಸಚಿವ ಸಂತೋಷ್‌ ಲಾಡ್

ಧಾರವಾಡ, ಜೂನ್‌ 16: ಮಳೆಗಾಲದ ಸಂಕಷ್ಟ ಸಂದರ್ಭದಲ್ಲಿಯೂ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಸಾರ್ವಜನಿಕ ಸ್ನೇಹಿಯಾಗಿ

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಯೊಬ್ಬರು ನೀಟ್

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ಮುದ್ದೇಬಿಹಾಳ : ಹುನಗುಂದ ತಾಲ್ಲೂಕಿನಿಂದ ತಂಗಡಗಿ ಮುಖಾಂತರ ತಾಳಿಕೋಟಿಯವರೆಗೆ ನಿರ್ಮಿಸಿರುವ ರಾಜ್ಯ ಹೆದ್ದಾರಿ ಕಾಮಗಾರಿಯನ್ನು

ಬಸವಸಾಗರ ಜಲಾಶಯದಿಂದ 8 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ಬಸವಸಾಗರ ಜಲಾಶಯದಿಂದ 8 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ನಾರಾಯಣಪುರ: ಬಸವಸಾಗರವು ಶೇ.83 ಭರ್ತಿಯಾಗಿದ್ದು, ಈ ಹಿನ್ನೆಲೆಯಲ್ಲಿ ಶುಕ್ರವಾರ ಜಲಾಶಯದ ಕ್ರಸ್ಟ್ ಗೇಟ್‌ಗೆ ಸಂಪ್ರದಾಯದಂತೆ ಪೂಜೆ ಸಲ್ಲಿಸಿ ಕ್ರಸ್ಟ್ ಗೇಟ್ ಮೂಲಕ 5 ಸಾವಿರ ಕ್ಯೂಸೆಕ್ ಹಾಗೂ ಎಂಪಿಸಿಎಲ್ ಖಾಸಗಿ ಜಲವಿದ್ಯುತ್ ಸ್ಥಾವರದಿಂದ 3 ಸಾವಿರ ಕ್ಯೂಸೆಕ್ ಸೇರಿ 8 ಸಾವಿರ ಕ್ಯೂಸೆಕ್‌ನಷ್ಟು ನೀರನ್ನು ಕೃಷ್ಣಾ ನದಿಗೆ ಹರಿಸಲಾಗುತ್ತಿದೆ. ಕೃಷ್ಣಾ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಹೀಗಾಗಿ ಬಸವಸಾಗರಕ್ಕೆ ಆಲಮಟ್ಟಿ ಶಾಸ್ತ್ರೀ ಜಲಾಶಯದಿಂದ ಒಳಹರಿವು ಸದ್ಯ 20 ಸಾವಿರ ಕ್ಯೂಸೆಕ್‌ನಷ್ಟಿದೆ

ರಾತ್ರಿ ವೇಳೆ ಕಲಬುರಗಿಯಿಂದ ವಿಜಯಪುರಕ್ಕೆ ಹೊಸ ಬಸ್ ಸಂಚಾರಕ್ಕೆ ಮನವಿ

ರಾತ್ರಿ ವೇಳೆ ಕಲಬುರಗಿಯಿಂದ ವಿಜಯಪುರಕ್ಕೆ ಹೊಸ ಬಸ್ ಸಂಚಾರಕ್ಕೆ ಮನವಿ

ನಾರಾಯಣಪುರ: ನಾರಾಯಣಪುರ ಮಾರ್ಗವಾಗಿ ರಾತ್ರಿ ವೇಳೆ ಕಲಬುರಗಿಯಿಂದ ವಿಜಯಪುರಕ್ಕೆ ಹಾಗೂ ಕೊಡೇಕಲ್ ಮಾರ್ಗವಾಗಿ ತಾಳಿಕೋಟಿಗೆ ಹೊಸ ಬಸ್ ಸಂಚಾರ ಶನಿವಾರ ಯಾದಗಿರಿ ಸಾರಿಗೆ ಡಿಸಿ (ಡಿವಿಜನಲ್ ಕಂಟ್ರೋಲರ್) ಅವರಿಗೆ ಬರೆದ ಮನವಿಯನ್ನು ಸಾರಿಗೆ ನಿಯಂತ್ರಕ ಐ.ಎ ಕರಣಿ ಅವರಿಗೆ ಗ್ರಾಮಸ್ಥರ ಸಲ್ಲಿಸಿದರು. ಈ ವೇಳೆ ಮುಖಂಡ ಸಂಗಮೇಶ ತಾಳಿಕೋಟಿ ಮಾತನಾಡಿ ಜಿಲ್ಲೆಯ ಗಡಿಗ್ರಾಮವಾಗಿರುವನಾರಾಯಣಪುರ ಸೇರಿ ಸುತ್ತಮುತ್ತಲಿನ ವಿವಿಧ ಗ್ರಾಮಗಳ ಗ್ರಾಮಸ್ಥರಿಗೆ ರಾತ್ರಿ ವೇಳೆ ನಾರಾಯಣಪುರ ಮಾರ್ಗವಾಗಿ ಬಸ್ಸುಗಳ ಸಂಚಾರ ಇಲ್ಲದೆ