Independence day celebration in Muddebihal with cultural activities

ಆರ್ಥಿಕ ಸಮಾನತೆ ಎಲ್ಲ ವರ್ಗದವರಿಗೂ ವಿಸ್ತರಿಸಲಿ: ನಾಡಗೌಡ

ಆರ್ಥಿಕ ಸಮಾನತೆ ಎಲ್ಲ ವರ್ಗದವರಿಗೂ ವಿಸ್ತರಿಸಲಿ: ನಾಡಗೌಡ



ಮುದ್ದೇಬಿಹಾಳ : ಆರ್ಥಿಕ ಅಭಿವೃದ್ಧಿ ಎನ್ನುವುದು ಕೆಲವೇ ವ್ಯಕ್ತಿಗಳಿಗೇ ಸಿಮೀತವಾಗದೇ ಎಲ್ಲರಿಗೂ ಸಮಾನವಾಗಿ ಹಂಚಿಕೆಯಾದಾಗ ದೇಶದ ಪ್ರಗತಿಗೆ ನಿಜವಾದ ಅರ್ಥ ಬರುತ್ತದೆ ಎಂದು ಕೆಎಸ್‌ಡಿಎಲ್ ನಿಗಮದ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಹೇಳಿದರು.

Join Our Telegram: https://t.me/dcgkannada

ತಾಲ್ಲೂಕಾಡಳಿತದಿಂದ ಗುರುವಾರ ಹಮ್ಮಿಕೊಂಡಿದ್ದ 78ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ದೇಶದ ಏಕತೆಗೆ ಒತ್ತುಕೊಟ್ಟು ನಾವೆಲ್ಲ ಸ್ವಾತಂತ್ರ್ಯದ ರಕ್ಷಣೆಗೆ ಪಣ ತೊಡಬೇಕು ಎಂದರು.ತಹಶೀಲ್ದಾರ್ ಬಲರಾಮ ಕಟ್ಟಿಮನಿ ಧ್ವಜಾರೋಹಣ ಮಾಡಿದರು.

ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ,ಪುರಸಭೆ ಮುಖ್ಯಾಧಿಕಾರಿ ಮಲ್ಲಿಕಾರ್ಜುನ ಬಿರಾದಾರ, ತಾಪಂ ಇಒ ಎಸ್.ಎನ್.ಮಸಳಿ,ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ,ಮಾಜಿ ಅಧ್ಯಕ್ಷ ಎಂ.ಬಿ.ನಾವದಗಿ,ಪಿಎಸ್‌ಐ ಸಂಜಯ ತಿಪರೆಡ್ಡಿ, ಬಿಇಒ ಬಿ.ಎಸ್.ಸಾವಳಗಿ, ಕರ್ನಾಟಕ ನವನಿರ್ಮಾಣ ಸೇನೆ ಅಧ್ಯಕ್ಷ ರಾಜುಗೌಡ ತುಂಬಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ಮಾಜಿ ಅಧ್ಯಕ್ಷ ಅಬ್ದುಲಗಫೂರ ಮಕಾನದಾರ, ಟಿ.ಡಿ.ಲಮಾಣಿ ಪುರಸಭೆ ಸದಸ್ಯರು, ನಾಮನಿರ್ದೇಶಿತ ಸದಸ್ಯರು ಇದ್ದರು.

ಇದನ್ನೂ ಓದಿ:Guarantee schemes: ಗ್ಯಾರಂಟಿ ಯೋಜನೆಗಳಿಗೆ ಸಿದ್ದು ಗ್ಯಾರಂಟಿ

ಸಾಂಸ್ಕೃತಿಕ ಕಾರ್ಯಕ್ರಮ :

ಸ್ವಾತಂತ್ರ್ಯದ ಪ್ರಯುಕ್ತ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪ್ರದರ್ಶನ ನೀಡಿದ ಚಿನ್ಮಯ ಜೆಸಿ ಪ್ರಥಮ, ಕೆ.ಬಿ.ಎಂ.ಪಿ.ಎಸ್ ಶಾಲೆ ದ್ವಿತೀಯ, ಬಿ.ಎಸ್.ಸೆಂಟ್ರಲ್ ಸ್ಕೂಲ್ ತೃತೀಯ ಸ್ಥಾನ ಪಡೆದುಕೊಂಡವು. ಪಥಸಂಚಲನದಲ್ಲಿ ವಿಬಿಸಿ ಪ್ರೌಢಶಾಲೆ ಪ್ರಥಮ,ಅಂಜುಮನ್ ಪ್ರೌಢಶಾಲೆ ದ್ವಿತೀಯ ಹಾಗೂ ಆಕ್ಸಫರ್ಡ್ ಪ್ರೌಢಶಾಲೆ ತೃತೀಯ ಸ್ಥಾನ ಪಡೆದುಕೊಂಡವು.

Latest News

ಶೋಷಿತರ ಧ್ವನಿ ಡಾ. ಬಿ.ಆರ್.ಅಂಬೇಡ್ಕರ್ – ಇಂದಿರಾ ಕುಂಬಾರ

ಶೋಷಿತರ ಧ್ವನಿ ಡಾ. ಬಿ.ಆರ್.ಅಂಬೇಡ್ಕರ್ – ಇಂದಿರಾ ಕುಂಬಾರ

​ಮುದ್ದೇಬಿಹಾಳ : ತಾಲ್ಲೂಕಿನ ಚವನಭಾವಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಮಂಗಳವಾರ ಸಂವಿಧಾನ ಶಿಲ್ಪಿ ಡಾ.

ಡಾ.ಬಿ.ಆರ್.ಅಂಬೇಡ್ಕರ್ ಭಾರತ ದೇಶದ ಆತ್ಮ-ಶಾಸಕ ಸಿ.ಎಸ್.ನಾಡಗೌಡ

ಡಾ.ಬಿ.ಆರ್.ಅಂಬೇಡ್ಕರ್ ಭಾರತ ದೇಶದ ಆತ್ಮ-ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಭಾರತದ ರಾಷ್ಟçಪಿತ ಮಹಾತ್ಮಾ ಗಾಂಧೀಜಿ ಆಗಿದ್ದರೆ,ಡಾ.ಅಂಬೇಡ್ಕರ್ ಅವರು ಈ ದೇಶದ ಆತ್ಮವಾಗಿದ್ದಾರೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ಬಳಬಟ್ಟಿ ಗ್ರಾಮದೇವತೆ ಜಾತ್ರೆ :                                            ಕುಸ್ತಿ ಪಂದ್ಯದಲ್ಲಿ ರಿಯಾಜ ಮುಳಕೋಟಗೆ ಬಹುಮಾನ

ಬಳಬಟ್ಟಿ ಗ್ರಾಮದೇವತೆ ಜಾತ್ರೆ : ಕುಸ್ತಿ ಪಂದ್ಯದಲ್ಲಿ ರಿಯಾಜ ಮುಳಕೋಟಗೆ ಬಹುಮಾನ

ಮುದ್ದೇಬಿಹಾಳ : ತಾಲ್ಲೂಕಿನ ಬಳಬಟ್ಟಿ ಗ್ರಾಮದಲ್ಲಿ ಶ್ರೀ ನಾಗಲಿಂಗೇಶ್ವರ, ಮಾರುತೇಶ್ವರ ಹಾಗೂಗ್ರಾಮ ದೇವತೆ ಜಾತ್ರಾ ಮಹೋತ್ಸವದ ಅಂಗವಾಗಿ ಏರ್ಪಡಿಸಿದ್ದ ಕುಸ್ತಿ ಪಂದ್ಯಾವಳಿಯಲ್ಲಿ (ಪುಣೆ ತಾಲೀಮು) ರಿಯಾಜ ಮುಳಕೋಟೆ ಬಹುಮಾನವನ್ನು ತಮ್ಮದಾಗಿಸಿಕೊಂಡರು. ಪಂದ್ಯಾವಳಿಯಲ್ಲಿ ಒಟ್ಟು 30 ಜೋಡಿ ಕುಸ್ತಿ ಪಟುಗಳು ರಾಜ್ಯದ ವಿವಿಧ ಕಡೆಯಿಂದ ಪಾಲ್ಗೊಂಡಿದ್ದರು. ಬಳಬಟ್ಟಿ ಗ್ರಾಮದ ಮಾಜಿ ಕುಸ್ತಿಪಟು ಕರಿಯಪ್ಪ ಆಸಂಗಿ ಹಾಗೂ ಯಮನಪ್ಪ ಮಾಳಗೊಂಡ ಇವರ ನೇತೃತ್ವದಲ್ಲಿ ಭರ್ಜರಿಯಾಗಿ ಕುಸ್ತಿ ಪಂದ್ಯಗಳು ನಡೆದವು. ಒನ್ ನಂಬರ ಕುಸ್ತಿ

ಮುದ್ದೇಬಿಹಾಳ : ಸರ್ಕಾರಿ ನಿವೃತ್ತ ನೌಕರರ ಸಂಘಕ್ಕೆ ಅಶೋಕ ಮಣಿ ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಸರ್ಕಾರಿ ನಿವೃತ್ತ ನೌಕರರ ಸಂಘಕ್ಕೆ ಅಶೋಕ ಮಣಿ ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ನೂತನ ಪದಾಧಿಕಾರಿಗಳನ್ನು ಬುಧವಾರ ಆಯ್ಕೆ ಮಾಡಲಾಗಿದೆ. ಪಟ್ಟಣದ ಬಸವೇಶ್ವರ ವೃತ್ತದ ಹತ್ತಿರ ಇರುವ ಸಂಘದ ಕಾರ್ಯಾಲಯದಲ್ಲಿ ನಡೆದ ಸದಸ್ಯರ ಸಭೆಯಲ್ಲಿ ಸಂಘದ ತಾಲೂಕ ಘಟಕದ ನೂತನ ಅಧ್ಯಕ್ಷರಾಗಿ ಬಸರಕೋಡದ ಶ್ರೀ ಪವಾಡ ಬಸವೇಶ್ವರ ಪ್ರೌಢಶಾಲೆಯ ನಿವೃತ್ತ ಮುಖ್ಯಗುರು,ಹಿರಿಯ ಸಾಹಿತಿ ಅಶೋಕ ಪಿ.ಮಣಿ ಅವಿರೋಧವಾಗಿ ಆಯ್ಕೆಯಾದರು. ಗೌರವಾಧ್ಯಕ್ಷರಾಗಿ ಬಾಪುಗೌಡ ಪಿ.ಪಾಟೀಲ್,ಉಪಾಧ್ಯಕ್ಷರಾಗಿ ಸದಾಶಿವ ಮಾಗಿ,ಪ್ರಧಾನ ಕಾರ್ಯದರ್ಶಿಗಳಾಗಿ ಎಸ.ಎ.ಬೇವಿನಗಿಡದ,ಖಜಾಂಚಿಯಾಗಿ ಬಿ.ಎಚ್.ಬಳಬಟ್ಟಿ,ಜಂಟಿ ಕಾರ್ಯದರ್ಶಿ ಡಿ.ಬಿ.ಓಲೇಕಾರ,ಯು.ಕೆ.ಬಾಗವಾನ,ಸಂಘಟನಾ ಕಾರ್ಯದರ್ಶಿಗಳಾಗಿ