Independence day celebration in Muddebihal with cultural activities

ಆರ್ಥಿಕ ಸಮಾನತೆ ಎಲ್ಲ ವರ್ಗದವರಿಗೂ ವಿಸ್ತರಿಸಲಿ: ನಾಡಗೌಡ

ಆರ್ಥಿಕ ಸಮಾನತೆ ಎಲ್ಲ ವರ್ಗದವರಿಗೂ ವಿಸ್ತರಿಸಲಿ: ನಾಡಗೌಡ



ಮುದ್ದೇಬಿಹಾಳ : ಆರ್ಥಿಕ ಅಭಿವೃದ್ಧಿ ಎನ್ನುವುದು ಕೆಲವೇ ವ್ಯಕ್ತಿಗಳಿಗೇ ಸಿಮೀತವಾಗದೇ ಎಲ್ಲರಿಗೂ ಸಮಾನವಾಗಿ ಹಂಚಿಕೆಯಾದಾಗ ದೇಶದ ಪ್ರಗತಿಗೆ ನಿಜವಾದ ಅರ್ಥ ಬರುತ್ತದೆ ಎಂದು ಕೆಎಸ್‌ಡಿಎಲ್ ನಿಗಮದ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಹೇಳಿದರು.

Join Our Telegram: https://t.me/dcgkannada

ತಾಲ್ಲೂಕಾಡಳಿತದಿಂದ ಗುರುವಾರ ಹಮ್ಮಿಕೊಂಡಿದ್ದ 78ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ದೇಶದ ಏಕತೆಗೆ ಒತ್ತುಕೊಟ್ಟು ನಾವೆಲ್ಲ ಸ್ವಾತಂತ್ರ್ಯದ ರಕ್ಷಣೆಗೆ ಪಣ ತೊಡಬೇಕು ಎಂದರು.ತಹಶೀಲ್ದಾರ್ ಬಲರಾಮ ಕಟ್ಟಿಮನಿ ಧ್ವಜಾರೋಹಣ ಮಾಡಿದರು.

ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ,ಪುರಸಭೆ ಮುಖ್ಯಾಧಿಕಾರಿ ಮಲ್ಲಿಕಾರ್ಜುನ ಬಿರಾದಾರ, ತಾಪಂ ಇಒ ಎಸ್.ಎನ್.ಮಸಳಿ,ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ,ಮಾಜಿ ಅಧ್ಯಕ್ಷ ಎಂ.ಬಿ.ನಾವದಗಿ,ಪಿಎಸ್‌ಐ ಸಂಜಯ ತಿಪರೆಡ್ಡಿ, ಬಿಇಒ ಬಿ.ಎಸ್.ಸಾವಳಗಿ, ಕರ್ನಾಟಕ ನವನಿರ್ಮಾಣ ಸೇನೆ ಅಧ್ಯಕ್ಷ ರಾಜುಗೌಡ ತುಂಬಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ಮಾಜಿ ಅಧ್ಯಕ್ಷ ಅಬ್ದುಲಗಫೂರ ಮಕಾನದಾರ, ಟಿ.ಡಿ.ಲಮಾಣಿ ಪುರಸಭೆ ಸದಸ್ಯರು, ನಾಮನಿರ್ದೇಶಿತ ಸದಸ್ಯರು ಇದ್ದರು.

ಇದನ್ನೂ ಓದಿ:Guarantee schemes: ಗ್ಯಾರಂಟಿ ಯೋಜನೆಗಳಿಗೆ ಸಿದ್ದು ಗ್ಯಾರಂಟಿ

ಸಾಂಸ್ಕೃತಿಕ ಕಾರ್ಯಕ್ರಮ :

ಸ್ವಾತಂತ್ರ್ಯದ ಪ್ರಯುಕ್ತ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪ್ರದರ್ಶನ ನೀಡಿದ ಚಿನ್ಮಯ ಜೆಸಿ ಪ್ರಥಮ, ಕೆ.ಬಿ.ಎಂ.ಪಿ.ಎಸ್ ಶಾಲೆ ದ್ವಿತೀಯ, ಬಿ.ಎಸ್.ಸೆಂಟ್ರಲ್ ಸ್ಕೂಲ್ ತೃತೀಯ ಸ್ಥಾನ ಪಡೆದುಕೊಂಡವು. ಪಥಸಂಚಲನದಲ್ಲಿ ವಿಬಿಸಿ ಪ್ರೌಢಶಾಲೆ ಪ್ರಥಮ,ಅಂಜುಮನ್ ಪ್ರೌಢಶಾಲೆ ದ್ವಿತೀಯ ಹಾಗೂ ಆಕ್ಸಫರ್ಡ್ ಪ್ರೌಢಶಾಲೆ ತೃತೀಯ ಸ್ಥಾನ ಪಡೆದುಕೊಂಡವು.

Latest News

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಅವೈಜ್ಞಾನಿಕ ಆದಾಯ ಮಿತಿ ರದ್ದುಗೊಳಿಸಲು ವಿಕಲಚೇತನರ ಆಗ್ರಹ

ಅವೈಜ್ಞಾನಿಕ ಆದಾಯ ಮಿತಿ ರದ್ದುಗೊಳಿಸಲು ವಿಕಲಚೇತನರ ಆಗ್ರಹ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಸರಕಾರ ಸಾಮಾಜಿಕ ಭದ್ರತೆ ಯೋಜನೆಗಳ ಅಡಿ ನೀಡಲಾಗುವ ಮಾಶಾಸನಕ್ಕೆ

ಎಂಎಲ್‌ಎ,ಮಂತ್ರಿಗಳ ವೇತನ,ಭತ್ಯೆ ಕಡಿತಗೊಳಿಸಿ-ಎ.ಎಸ್.ಪಾಟೀಲ್ ನಡಹಳ್ಳಿ

ಎಂಎಲ್‌ಎ,ಮಂತ್ರಿಗಳ ವೇತನ,ಭತ್ಯೆ ಕಡಿತಗೊಳಿಸಿ-ಎ.ಎಸ್.ಪಾಟೀಲ್ ನಡಹಳ್ಳಿ

ಮುದ್ದೇಬಿಹಾಳ : ಹಿಂದೆoದೂ ಕಂಡರಿಯದoತ ಭೀಕರ ಬರಗಾಲ ಈ ವರ್ಷ ಬಂದಿದ್ದು ರೈತರ ಖಾತೆಗೆ

ಅಂಜುಮನ್ ಚುನಾವಣೆಯಲ್ಲಿ ಮಹತ್ವದ ಬೆಳವಣಿಗೆ: ಮಕಾನದಾರ,ದಫೇದಾರ,ಸೋಠೆ,ಗೋಲಂದಾಜಗೆ ಹೈಕೋರ್ಟ್ ಬಿಗ್ ರಿಲೀಫ್

ಅಂಜುಮನ್ ಚುನಾವಣೆಯಲ್ಲಿ ಮಹತ್ವದ ಬೆಳವಣಿಗೆ: ಮಕಾನದಾರ,ದಫೇದಾರ,ಸೋಠೆ,ಗೋಲಂದಾಜಗೆ ಹೈಕೋರ್ಟ್ ಬಿಗ್ ರಿಲೀಫ್

ಮುದ್ದೇಬಿಹಾಳ : ಮಹತ್ವದ ಬೆಳವಣಿಗೆಯೊಂದರಲ್ಲಿ ಪಟ್ಟಣದ ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆಯಲ್ಲಿ ತಿರಸ್ಕಾರಗೊಂಡಿದ್ದ ನಾಲ್ವರ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಕನ್ನಡ ಜಾನಪದ ಪರಿಷತ್ ತಾಲೂಕು ಘಟಕದ ಉದ್ಘಾಟನೆ,ಪದ ಪ್ರದಾನ ಹಾಗೂ ಜಾನಪದ ಬುಡಕಟ್ಟು ದಿನಾಚರಣೆ ಸಮಾರಂಭ ಆ.8 ರಂದು ಮದ್ಯಾಹ್ನ 12.30ಕ್ಕೆ ಪಟ್ಟಣದ ಎಂಜಿಎoಕೆ ಶಾಲೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಪರಿಷತ್ ರಾಜ್ಯಾಧ್ಯಕ್ಷ ಜಾನಪದ ಎಸ್.ಬಾಲಾಜಿ ಉದ್ಘಾಟಿಸುವರು.ಎಂಜಿಎAಕೆ ಸಂಸ್ಥೆಯ ಅಧ್ಯಕ್ಷ ಮನೋಹರ ಕೋರಿ ಉಪಸ್ಥಿತರಿರುವರು.ಕನ್ನಡ ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಬಾಳನಗೌಡ ಪಾಟೀಲ ಅಧ್ಯಕ್ಷತೆ ವಹಿಸುವರು.ಬಾಗಲಕೋಟ ಕಜಾಪ ಜಿಲ್ಲಾಧ್ಯಕ್ಷ ಡಿ.ಎಂ.ಸಾಹುಕಾರ ಪ್ರಾಸ್ತಾವಿಕ ನುಡಿಗಳನ್ನಾಡುವರು. ಕಜಾಪ ಜಿಲ್ಲಾ ಸಂಚಾಲಕ ಪುಂಡಲೀಕ ಮುರಾಳ

ಅಂತರ್‌ರಾಜ್ಯ ಕಳ್ಳರ ಬಂಧನ :                                       ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಅಂತರ್‌ರಾಜ್ಯ ಕಳ್ಳರ ಬಂಧನ : ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ): ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ ಭೇದಿಸಿರುವ ವಿಜಯಪುರ ಜಿಲ್ಲೆಯ ಪೊಲೀಸರು ಗುಜರಾತ ಮೂಲದ ಅಂತರಾಜ್ಯ ಮಟ್ಟದ ಮೂವರು ಕಳ್ಳರನ್ನು ಬಂಧಿಸಿ ಅವರಿಂದ ತುಂಡರಿಸಿದ ಬೆಳ್ಳಿ ಹಾಗೂ ಬೆಳ್ಳಿ ತುಣುಕು ಸೇರಿ ಹಲವು ಸಾಮಗ್ರಿ ವಶಕ್ಕೆ ಪಡೆದಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಬೆಳಗಾವಿ ಉತ್ತರ ವಲಯದ ಐಜಿಪಿ ಸಂದೀಪ ಪಾಟೀಲ ಅವರು,ಕಳೆದ ಜು. 5 ರಂದು ರಾತ್ರಿ ಬಸರಕೋಡದ ಪವಾಡಬಸವೇಶ್ವರ