ಜಾತಿಯ ಮೇಲಿನ ಅಭಿಮಾನ ಧರ್ಮದ ಮೇಲೂ ಇರಲಿ-ಸಿದ್ಧಲಿಂಗ ದೇವರು

ಜಾತಿಯ ಮೇಲಿನ ಅಭಿಮಾನ ಧರ್ಮದ ಮೇಲೂ ಇರಲಿ-ಸಿದ್ಧಲಿಂಗ ದೇವರು

ಮುದ್ದೇಬಿಹಾಳ : ನನ್ನ ಜಾತಿಯ ಮೇಲಿನ ಅಭಿಮಾನ ಧರ್ಮದ ಮೇಲೂ ಇರಬೇಕು.ಇಂದು ಅರ್ಧ ಮರ್ಧ ಕಲಿತವರಿಂದಲೇ ಸಮಾಜ ಹಾಳಾಗುತ್ತಿದೆ.ಯುವಕರು ಭಾರತ ಮಾತೆಯನ್ನು ಎದೆಯಲ್ಲಿಟ್ಟು ಪ್ರೀತಿಸಬೇಕೆ ಹೊರತು ಯಾರನ್ನೋ ಪ್ರೀತಿಸುವುದಕ್ಕೆ ಅಲ್ಲ ಎಂದು ತಾಳಿಕೋಟಿ ಖಾಸ್ಗತೇಶ್ವರ ಮಠದ ಸಿದ್ಧಲಿಂಗ ದೇವರು ಹೇಳಿದರು.

ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಭಾನುವಾರ ಹಿಂದೂ ಸಮ್ಮೇಳನ ಸಂಚಲನಾ ಸಮೀತಿ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಹಿಂದು ಸಮ್ಮೇಳನದಲ್ಲಿ ಅವರು ಮಾತನಾಡಿದರು.
ನಿಜವಾದ ಸಿರಿವಂತಿಕೆ, ನಾಗರಿಕತೆಯನ್ನು ಕಲಿಸಿದ ದೇಶ ಭಾರತ.ಯಾರಿಗೂ ಟೀಕಿಸಬಾರದು, ಒಳ್ಳೆಯರಾಗಬೇಕು ಎಂದರು.

ಸಾಮಾಜಿಕ ಕಾರ್ಯಕರ್ತ ಹಣಮಂತ ಮಳಲಿ, ವಿದೇಶಿ ವಸ್ತುಗಳನ್ನು ಬಹಿಷ್ಕರಿಸಿದರೆ ಭಾರತದ ದೇಶಕ್ಕೆ ಟ್ರಂಪ್ ಬಂದು ಕಾಲಿಗೆ ಬೀಳುತ್ತಾನೆ.ನಮ್ಮಲ್ಲಿ ಒಡಕು. ನಿಶ್ಚಲವಾದ ಒಗ್ಗಟ್ಟು ದೇಶವಾಸಿಗಳು ಪ್ರದರ್ಶನ ಮಾಡಿದಾಗ ಮಾತ್ರ ಇನ್ನೊಂದು ದೇಶ ನಮ್ಮತ್ತ ತಿರುಗಿ ನೋಡುವುದಿಲ್ಲ. ಜನಸಂಖ್ಯೆ ನಿಯಂತ್ರಣ ಕಾನೂನು ಜಾರಿಗೆ ಮಾಡುವವರೆಗೂ ಜನಸಂಖ್ಯೆ ನಿಯಂತ್ರಣ ಮಾಡಬಾರದು. ಕನಿಷ್ಠ ಮೂರು ನಾಲ್ಕು ಮಕ್ಕಳಾದರೂ ಇರಲಿ. ದೇಶದ ಬಗ್ಗೆ ಹೆಮ್ಮೆ ಇರಬೇಕು. ಸೊನ್ನೆ,ಸಂಸ್ಕೃತ,ಯೋಗ, ಕೃಷಿ,ಸಂಗೀತ,ಬಟ್ಟೆ,ನೌಕಾಯನ,ಶಿಲ್ಪಿ ಕಲೆ, ಅಡುಗೆ ಕೊಟ್ಟಿದ್ದು ಭಾರತೀಯರು.ಆತ್ಮಸಾಕ್ಷಾತ್ಕಾರಕ್ಕೆ ಆಧ್ಯಾತ್ಮ ಕೊಟ್ಟಿದ್ದು ಭಾರತ. ಭಾರತದಲ್ಲಿ ಮಠಗಳಿರಲಿಲ್ಲವೆಂದರೆ ದೇಶ ಸ್ಮಶಾನವಾಗಬೇಕಾಗುತ್ತದೆ ಎಂದರು.
ಪಾಶ್ಚಿಮಾತ್ಯರ ಅನುಕರಣೆ ಮಾಡುವುದು ಬೇಡ. ವಿದೇಶಿ ವಸ್ತುಗಳನ್ನು ಖರೀದಿ ಮಾಡಬೇಡಿ. ಸಂಸ್ಕಾರ ಆಧಾರಿತ ಶಿಕ್ಷಣ ಕೊಡಬೇಕು.ಹಿಂದೂ ಧರ್ಮವನ್ನು ಯಾರಿಂದಲೂ ನಾಶ ಮಾಡಲು ಸಾಧ್ಯವಿಲ್ಲ. ಆರ್ಥಿಕ ಸ್ಥಿತಿ ಉನ್ನತಿ ಇದೆ.ಆದರೆ ಆರೋಗ್ಯಕರ ಸ್ಥಿತಿ ಅವನತಿಯತ್ತ ಸಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದ ಉದ್ಯಮಿ ಬಸವರಾಜ ನಾವದಗಿ, ವಕೀಲೆ ಜಯಶ್ರೀ ಸಾಲಿಮಠ ಮಾತನಾಡಿದರು.ಗುಂಡಕನಾಳದ ಗುರುಲಿಂಗ ಶ್ರೀ,ಯಂಕAಚಿಯ ಅಭಿನವ ರುದ್ರಮುನಿ ಸ್ವಾಮೀಜಿ, ತುಂಬಗಿಯ ಮಹಾಂತಲಿAಗ ಶ್ರೀ, ಪಡೇಕನೂರದ ಮಲ್ಲಿಕಾರ್ಜುನ ಸ್ವಾಮೀಜಿ, ಢವಳಗಿಯ ಘನಮಠೇಶ್ವರ ಸ್ವಾಮೀಜಿ, ಮುದ್ದೇಬಿಹಾಳ ಹೊಸಮಠದ ಅಮರೇಶ್ವರ ದೇವರು, ಶರಣ ಸೋಮನಾಳದ ಮಹದೇವಯ್ಯ ಶಾಸ್ತಿçÃ, ಲೊಟಗೇರಿಯ ಗುರುಮೂರ್ತಿ ಕಣಕಾಲಮಠ, ಕವಡಿಮಟ್ಟಿ ಬಸವಪ್ರಭು ಹಿರೇಮಠ, ಜಮ್ಮಲದಿನ್ನಿಯ ಸಿದ್ದಾರೂಢ ಸ್ವಾಮೀಜಿ, ನಾಲತವಾಡ ಪಂಪಾಪತಿ ಸ್ವಾಮೀಜಿ, ಕುಂಚಗನೂರದ ರಂಗನಾಥ ಸ್ವಾಮೀಜಿ, ವೇ.ಈರಯ್ಯ ಹಿರೇಮಠ, ಮಿಣಜಗಿಯ ಸೋಮಶೇಖರಯ್ಯ ಶ್ರೀ, ವಿವಿಧ ಸಮಾಜಗಳ ಅಧ್ಯಕ್ಷರುಗಳು ಇದ್ದರು.ವೆಂಕನಗೌಡ ಪಾಟೀಲ ಸ್ವಾಗತಿಸಿದರು.ಟಿ.ಡಿ.ಲಮಾಣಿ ನಿರೂಪಿಸಿದರು.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ