ಜಾತಿಯ ಮೇಲಿನ ಅಭಿಮಾನ ಧರ್ಮದ ಮೇಲೂ ಇರಲಿ-ಸಿದ್ಧಲಿಂಗ ದೇವರು

ಜಾತಿಯ ಮೇಲಿನ ಅಭಿಮಾನ ಧರ್ಮದ ಮೇಲೂ ಇರಲಿ-ಸಿದ್ಧಲಿಂಗ ದೇವರು

ಮುದ್ದೇಬಿಹಾಳ : ನನ್ನ ಜಾತಿಯ ಮೇಲಿನ ಅಭಿಮಾನ ಧರ್ಮದ ಮೇಲೂ ಇರಬೇಕು.ಇಂದು ಅರ್ಧ ಮರ್ಧ ಕಲಿತವರಿಂದಲೇ ಸಮಾಜ ಹಾಳಾಗುತ್ತಿದೆ.ಯುವಕರು ಭಾರತ ಮಾತೆಯನ್ನು ಎದೆಯಲ್ಲಿಟ್ಟು ಪ್ರೀತಿಸಬೇಕೆ ಹೊರತು ಯಾರನ್ನೋ ಪ್ರೀತಿಸುವುದಕ್ಕೆ ಅಲ್ಲ ಎಂದು ತಾಳಿಕೋಟಿ ಖಾಸ್ಗತೇಶ್ವರ ಮಠದ ಸಿದ್ಧಲಿಂಗ ದೇವರು ಹೇಳಿದರು.

ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಭಾನುವಾರ ಹಿಂದೂ ಸಮ್ಮೇಳನ ಸಂಚಲನಾ ಸಮೀತಿ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಹಿಂದು ಸಮ್ಮೇಳನದಲ್ಲಿ ಅವರು ಮಾತನಾಡಿದರು.
ನಿಜವಾದ ಸಿರಿವಂತಿಕೆ, ನಾಗರಿಕತೆಯನ್ನು ಕಲಿಸಿದ ದೇಶ ಭಾರತ.ಯಾರಿಗೂ ಟೀಕಿಸಬಾರದು, ಒಳ್ಳೆಯರಾಗಬೇಕು ಎಂದರು.

ಸಾಮಾಜಿಕ ಕಾರ್ಯಕರ್ತ ಹಣಮಂತ ಮಳಲಿ, ವಿದೇಶಿ ವಸ್ತುಗಳನ್ನು ಬಹಿಷ್ಕರಿಸಿದರೆ ಭಾರತದ ದೇಶಕ್ಕೆ ಟ್ರಂಪ್ ಬಂದು ಕಾಲಿಗೆ ಬೀಳುತ್ತಾನೆ.ನಮ್ಮಲ್ಲಿ ಒಡಕು. ನಿಶ್ಚಲವಾದ ಒಗ್ಗಟ್ಟು ದೇಶವಾಸಿಗಳು ಪ್ರದರ್ಶನ ಮಾಡಿದಾಗ ಮಾತ್ರ ಇನ್ನೊಂದು ದೇಶ ನಮ್ಮತ್ತ ತಿರುಗಿ ನೋಡುವುದಿಲ್ಲ. ಜನಸಂಖ್ಯೆ ನಿಯಂತ್ರಣ ಕಾನೂನು ಜಾರಿಗೆ ಮಾಡುವವರೆಗೂ ಜನಸಂಖ್ಯೆ ನಿಯಂತ್ರಣ ಮಾಡಬಾರದು. ಕನಿಷ್ಠ ಮೂರು ನಾಲ್ಕು ಮಕ್ಕಳಾದರೂ ಇರಲಿ. ದೇಶದ ಬಗ್ಗೆ ಹೆಮ್ಮೆ ಇರಬೇಕು. ಸೊನ್ನೆ,ಸಂಸ್ಕೃತ,ಯೋಗ, ಕೃಷಿ,ಸಂಗೀತ,ಬಟ್ಟೆ,ನೌಕಾಯನ,ಶಿಲ್ಪಿ ಕಲೆ, ಅಡುಗೆ ಕೊಟ್ಟಿದ್ದು ಭಾರತೀಯರು.ಆತ್ಮಸಾಕ್ಷಾತ್ಕಾರಕ್ಕೆ ಆಧ್ಯಾತ್ಮ ಕೊಟ್ಟಿದ್ದು ಭಾರತ. ಭಾರತದಲ್ಲಿ ಮಠಗಳಿರಲಿಲ್ಲವೆಂದರೆ ದೇಶ ಸ್ಮಶಾನವಾಗಬೇಕಾಗುತ್ತದೆ ಎಂದರು.
ಪಾಶ್ಚಿಮಾತ್ಯರ ಅನುಕರಣೆ ಮಾಡುವುದು ಬೇಡ. ವಿದೇಶಿ ವಸ್ತುಗಳನ್ನು ಖರೀದಿ ಮಾಡಬೇಡಿ. ಸಂಸ್ಕಾರ ಆಧಾರಿತ ಶಿಕ್ಷಣ ಕೊಡಬೇಕು.ಹಿಂದೂ ಧರ್ಮವನ್ನು ಯಾರಿಂದಲೂ ನಾಶ ಮಾಡಲು ಸಾಧ್ಯವಿಲ್ಲ. ಆರ್ಥಿಕ ಸ್ಥಿತಿ ಉನ್ನತಿ ಇದೆ.ಆದರೆ ಆರೋಗ್ಯಕರ ಸ್ಥಿತಿ ಅವನತಿಯತ್ತ ಸಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದ ಉದ್ಯಮಿ ಬಸವರಾಜ ನಾವದಗಿ, ವಕೀಲೆ ಜಯಶ್ರೀ ಸಾಲಿಮಠ ಮಾತನಾಡಿದರು.ಗುಂಡಕನಾಳದ ಗುರುಲಿಂಗ ಶ್ರೀ,ಯಂಕAಚಿಯ ಅಭಿನವ ರುದ್ರಮುನಿ ಸ್ವಾಮೀಜಿ, ತುಂಬಗಿಯ ಮಹಾಂತಲಿAಗ ಶ್ರೀ, ಪಡೇಕನೂರದ ಮಲ್ಲಿಕಾರ್ಜುನ ಸ್ವಾಮೀಜಿ, ಢವಳಗಿಯ ಘನಮಠೇಶ್ವರ ಸ್ವಾಮೀಜಿ, ಮುದ್ದೇಬಿಹಾಳ ಹೊಸಮಠದ ಅಮರೇಶ್ವರ ದೇವರು, ಶರಣ ಸೋಮನಾಳದ ಮಹದೇವಯ್ಯ ಶಾಸ್ತಿçÃ, ಲೊಟಗೇರಿಯ ಗುರುಮೂರ್ತಿ ಕಣಕಾಲಮಠ, ಕವಡಿಮಟ್ಟಿ ಬಸವಪ್ರಭು ಹಿರೇಮಠ, ಜಮ್ಮಲದಿನ್ನಿಯ ಸಿದ್ದಾರೂಢ ಸ್ವಾಮೀಜಿ, ನಾಲತವಾಡ ಪಂಪಾಪತಿ ಸ್ವಾಮೀಜಿ, ಕುಂಚಗನೂರದ ರಂಗನಾಥ ಸ್ವಾಮೀಜಿ, ವೇ.ಈರಯ್ಯ ಹಿರೇಮಠ, ಮಿಣಜಗಿಯ ಸೋಮಶೇಖರಯ್ಯ ಶ್ರೀ, ವಿವಿಧ ಸಮಾಜಗಳ ಅಧ್ಯಕ್ಷರುಗಳು ಇದ್ದರು.ವೆಂಕನಗೌಡ ಪಾಟೀಲ ಸ್ವಾಗತಿಸಿದರು.ಟಿ.ಡಿ.ಲಮಾಣಿ ನಿರೂಪಿಸಿದರು.

Latest News

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪಟ್ಟಣದ ಹಸಿರು ತೋರಣ ಗೆಳೆಯರ ಬಳಗ ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡಲಾಗುವ "ಪರಿಸರ ರಕ್ಷಕ" ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ. ಗಿಡಗಳನ್ನು ನೆಟ್ಟು ಬೆಳೆಸಿರುವ, ಸಂರಕ್ಷಿಸಿರುವ ವ್ಯಕ್ತಿಗಳಿಗೆ, ಶಾಲೆ ಕಾಲೇಜುಗಳ ಶಿಕ್ಷಕರು, ಸಂಘ, ಸಂಸ್ಥೆಗಳಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಮುದ್ದೇಬಿಹಾಳ ತಾಲ್ಲೂಕಿನ ವ್ಯಾಪ್ತಿಯಲ್ಲಿ ಪರಿಸರ ರಕ್ಷಣೆ ಮಾಡಿರುವ ಅರ್ಹರು ತಮ್ಮ ವಿವರಗಳುಳ್ಳ ಅರ್ಜಿಗಳನ್ನು ಜೂನ್ 3 ರೊಳಗೆ, ಅಧ್ಯಕ್ಷರು,

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಎಂ.ಬಿ.ಎಲ್ ಗ್ರೂಪನಿಂದ ಪಟ್ಟಣದಲ್ಲಿ ಮೂರು ವಾರಗಳಿಂದ ಜರುಗುತ್ತಿದ್ದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಾಮೆಂಟ್‌ನ ಫೈನಲ್ ಪಂದ್ಯಾವಳಿ ಮೇ.24 ರಂದು ಜರುಗಲಿದೆ ಎಂದು ಆಯೋಜಕರ ಬಳಗ ತಿಳಿಸಿದೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಫೈನಲ್ ಪಂದ್ಯಾವಳಿಯ ಕುರಿತು ಮಾಹಿತಿ ನೀಡಿದ ಸಂಘಟಕರಲ್ಲೊಬ್ಬರಾದ ಕಾಮರಾಜ ಬಿರಾದಾರ, ಈಗಾಗಲೇ ನಿಡಗುಂದಿ ತಂಡವನ್ನು ಸೋಲಿಸಿ ಆಲಮಟ್ಟಿ ತಂಡ ಫೈನಲ್ ತಲುಪಿದ್ದು ಮೇ.24 ರಂದು ಜರುಗಲಿರುವ ಸೆಮಿಫೈನಲ್ ಪಂದ್ಯದಲ್ಲಿ ಮುದ್ದೇಬಿಹಾಳ ಹಾಗೂ