ಜನಸ್ನೇಹಿ ಸೇವೆ ನೌಕರರ ಮೂಲ ಮಂತ್ರವಾಗಲಿ-ಜಹಾಗೀರದಾರ

ಜನಸ್ನೇಹಿ ಸೇವೆ ನೌಕರರ ಮೂಲ ಮಂತ್ರವಾಗಲಿ-ಜಹಾಗೀರದಾರ

ಮುದ್ದೇಬಿಹಾಳ : ಕೆಪಿಟಿಸಿಎಲ್ ಹಾಗೂ ಹೆಸ್ಕಾಂನಲ್ಲಿ ಕಾರ್ಯನಿರ್ವಹಿಸುವ ನಮ್ಮ ಸಮಾಜದ ಬಾಂಧವರು ಇನ್ನಿತರ ಸಮುದಾಯದವರೊಂದಿಗೆ ಒಳ್ಳೆಯ ಸ್ನೇಹ ಬಾಂಧವ್ಯದೊoದಿಗೆ ಸಾರ್ವಜನಿಕರಿಗೆ ಜನಸ್ನೇಹಿ ಸೇವೆ ನೀಡಬೇಕು ಎಂದು ಕವಿಪ್ರನಿನಿ ಮುಸ್ಲಿಂ ನೌಕರರ ಕಲ್ಯಾಣ ಮಂಡಳಿ ಸಂಘದ ವಿಜಯಪುರ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮೈನೂದ್ದೀನ ಜಹಾಗೀರದಾರ ಹೇಳಿದರು.

ಪಟ್ಟಣದ ದಿ ಬಾಗವಾನ ಅಲ್ಪಸಂಖ್ಯಾತರ ಕೋ ಆಪರೇಟಿವ್ ಸೊಸೈಟಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸಂಘಟನಾ ಸಭೆಯಲ್ಲಿ ಅವರು ಮಾತನಾಡಿದರು. ನಾವು ಸೇವೆ ಸಲ್ಲಿಸುವುದು ಸಾರ್ವಜನಿಕರು,ರೈತರಿಗಾಗಿ ಎಂಬುದನ್ನು ಮರೆಯಬಾರದು.ನಮ್ಮ ನಡುವಳಿಕೆ ಬಗ್ಗೆ ಇತರರು ಬೆರಳು ಮಾಡಿ ತೋರಿಸದಂತೆ ಇರಬೇಕು.ಮುಸ್ಲಿಂ ನೌಕರರ ಕಲ್ಯಾಣ ಸಂಘಟನೆ ಸಲುವಾಗಿ ಈ ಸಂಘ ಅಸ್ತಿತ್ವದಲ್ಲಿದ್ದು ಜಿಲ್ಲೆಯಲ್ಲಿ ನಮ್ಮ ಸಮಾಜದವರನ್ನು ಒಗ್ಗೂಡಿಸುವ ಜೊತೆಗೆ ಸಾರ್ವಜನಿಕರೊಂದಿಗೆ ಬೆರೆಯುವ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಕೇoದ್ರ ಸಮೀತಿ ಸಂಘಟನಾ ಕಾರ್ಯದರ್ಶಿ ಇಬ್ರಾಹಿಂ ನಾಯ್ಕೋಡಿ ಮಾತನಾಡಿ, ವಿಜಯಪುರ ಜಿಲ್ಲೆಯಲ್ಲಿ ವಿದ್ಯುತ್ ಸಂಬoಧಿ ಇಲಾಖೆಯಲ್ಲಿ ನಮ್ಮ ಸಮಾಜದ ನೌಕರರ ಸಂಖ್ಯೆ ಹೆಚ್ಚಿದ್ದರೂ ಸಂಘಟನೆಯಾಗಿಲ್ಲ ಎಂಬ ಕೊರಗು ಇತ್ತು.ಅದನ್ನು ಕವಿಪ್ರನಿನಿ ಮೆವಾ ಸಂಘಟನೆ ನೀಗಿಸುವತ್ತ ಹೆಜ್ಜೆ ಇರಿಸಿದೆ.ಪ್ರತಿ ಶಾಖೆಗಳಲ್ಲೂ ನಮ್ಮ ನೌಕರರನ್ನು ಸಂಘಟಿಸುವ ಜೊತೆಗೆ ಇನ್ನಿತರರ ಜತೆಗೆ ಹೇಗೆ ನಡೆದುಕೊಳ್ಳಬೇಕು ಎಂಬ ಬಗ್ಗೆ ತಿಳಿವಳಿಕೆ ಸಂಘದಿAದ ನೀಡಲಾಗುತ್ತದೆ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಸದಸ್ಯ ಮೈನೂದ್ದೀನ ನಾಯ್ಕೋಡಿ, ನಮ್ಮ ಸಮಾಜದ ನೌಕರ ವರ್ಗದವರ ಸಂಘಟನೆಗಾಗಿ ನಿಡಗುಂದಿ,ತಾಳಿಕೋಟಿ,ಮುದ್ದೇಬಿಹಾಳ ಹಾಗೂ ಬ.ಬಾಗೇವಾಡಿ ಶಾಖೆಗಳಲ್ಲಿ ಆರಂಭಿಕವಾಗಿ ಪದಾಧಿಕಾರಿಗಳ ಆಯ್ಕೆ ನಡೆಸಲಾಗುತ್ತಿದ್ದು ನೌಕರರ ಬೇಕು ಬೇಡಗಳಿಗೆ ನಮ್ಮ ಸಂಘ ಸ್ಪಂದಿಸಲಿದೆ ಎಂದರು.

ಸಭೆಯಲ್ಲಿ ಅಧ್ಯಕ್ಷತೆ ವಹಿಸಿದ್ದ ಇಲಿಯಾಸ್ ಮೋಮಿನ,ಸಂಘದ ಹಿರಿಯ ನಾಯಕ ಬಬ್ಲು ಇನಾಮದಾರ, ಎ.ಬಿ.ಮುಜಾವರ, ಝಡ್.ಎಂ.ರಿಸಾಲ್ದಾರ್,ಆರ್.ಆರ್.ಮಕಾನದಾರ, ಅಯ್ಯೂಬ ಮನಗೂಳಿ, ಅಸ್ಲಂ ವತನದಾರ,ಅಲ್ತಾಪ ಕಿತ್ತೂರ ಇದ್ದರು.

ಸಭೆಯಲ್ಲಿ ಈಚೇಗೆ ಬಿಎಸ್‌ಎಫ್‌ಗೆ ಆಯ್ಕೆಯಾದ ಸಿದ್ದಾಪೂರ ಪಿ.ಟಿ ಗ್ರಾಮದ ಆಯೇಷಾ ವಾಲೀಕಾರ ಹಾಗೂ ಕೆಪಿಟಿಸಿಎಲ್ ಅಂತರರಾಜ್ಯ ಕಬಡ್ಡಿ ಕ್ರೀಡಾಪಟು ಯಾಸೀನ ಸುರಪೂರ ಅವರನ್ನು ಸನ್ಮಾನಿಸಲಾಯಿತು.
ನಯೀಮ ಮಕಾನದಾರ ಹಾಗೂ ನಿಶಾತ್ ನಾಯ್ಕೋಡಿ ಖುರಾನ್ ಪಠಿಸಿದರು.ಡಿ.ಎಲ್.ಮಮದಾಪೂರ ನಿರೂಪಿಸಿದರು.ಮುತ್ತು ಅವಟಗೇರ ಸ್ವಾಗತಿಸಿದರು.ಅಬ್ದುಲಗಣಿ ಖಾನ್ಯಾಳ ವಂದಿಸಿದರು.ನಿಡಗುoದಿ,ತಾಳಿಕೋಟಿ,ಬಸವನಬಾಗೇವಾಡಿ,ಮುದ್ದೇಬಿಹಾಳ ತಾಲ್ಲೂಕಿನ ಕವಿಪ್ರನಿನಿ ಹಾಗೂ ಹೆಸ್ಕಾಂ ನೌಕರರು ಇದ್ದರು.

Latest News

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ:                                           ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ: ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ಮುದ್ದೇಬಿಹಾಳ : ಕಲುಷಿತಗೊಂಡಿರುವ ರಾಜಕೀಯ ಕ್ಷೇತ್ರದ ಶುದ್ಧೀಕರಣಕ್ಕೆ ದೇಶಮುಖ ಮನೆತನದಂತ ಕುಟುಂಬದವರು ಸಕ್ರಿಯ ರಾಜಕಾರಣದಲ್ಲಿರಬೇಕು

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ತಮಗೆ ಷಡ್ಯಂತ್ರದಿಂದ ಸಚಿವ ಸ್ಥಾನ ಕೈ ತಪ್ಪಿದ್ದು ಇದಕ್ಕಾಗಿ ತಮ್ಮ ಸ್ಥಾನಕ್ಕೆ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ:                            ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ: ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಮುದ್ದೇಬಿಹಾಳ : ಸ್ವಾತಂತ್ರ ಪೂರ್ವದಲ್ಲಿ ಹುಟ್ಟಿರುವ ಅಂಜುಮನ್ ಇಸ್ಲಾಂ ಕಮೀಟಿಯ ಆರಂಭದಲ್ಲಿದ್ದ ವೈಭವವನ್ನು ಮರಳಿ

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು ಶಿಕ್ಷಣ ಸೇವಾ ಟ್ರಸ್ಟ್(ರಿ) ಸಹಯೋಗದಲ್ಲಿ ಪತ್ರಿಕಾ ಹಾಗೂ ವೈದ್ಯರ ದಿನಾಚರಣೆಯ ಅಂಗವಾಗಿ ಜು.26 ರಂದು ಬೆಳಗ್ಗೆ 10.00ಕ್ಕೆ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಿವೃತ್ತ ನೌಕರರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ, ಪ್ರತಿಭಾ ಪುರಸ್ಕಾರ ಸಮಾರಂಭ ಆಯೋಜಿಸಲಾಗಿದೆ. ಹುನಗುಂದ-ಮುದ್ದೇಬಿಹಾಳದ ಗಚ್ಚಿನಮಠ-ಹೊಸಮಠದ ಅಮರೇಶ್ವರ ದೇವರು ದಿವ್ಯ ಸಾನಿಧ್ಯ ವಹಿಸುವರು.ಕಾನಿಪ ಧ್ವನಿ ರಾಜ್ಯ ಅಧ್ಯಕ್ಷ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್ ಅಕಾಡೆಮಿಯ 2026ರ ನೀಟ್ ಫಲಿತಾಂಶ ಪ್ರಕಟಗೊಂಡಿದ್ದು 12 ವಿದ್ಯಾರ್ಥಿಗಳು 600ಕ್ಕೂ ಅಧಿಕ ಅಂಕ ಪಡೆದುಕೊಂಡಿದ್ದಾರೆ. ನೀಟ್ ಫಲಿತಾಂಶದ ಕುರಿತು ಮಾಹಿತಿ ನೀಡಿರುವ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ್, ಆಡಳಿತಾಧಿಕಾರಿ ಅಮೀತಗೌಡ ಪಾಟೀಲ ಅವರು, ಈ ಬಾರಿ 190ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟು ದೊರೆಯುವ ನಿರೀಕ್ಷೆ ಇದೆ ಎಂದು ತಿಳಿಸಿದರು.ನೀಟ್‌ನಲ್ಲಿ 500ಕ್ಕೂ ಅಧಿಕ 140 ವಿದ್ಯಾರ್ಥಿಗಳು,