Let the Government Women's College be a model for women's education: District In-charge Minister Santosh Lad

ಸರಕಾರಿ ಮಹಿಳಾ ಕಾಲೇಜು ಮಹಿಳಾ ಶಿಕ್ಷಣಕ್ಕೆ ಮಾದರಿಯಾಗಲಿ: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌

ಸರಕಾರಿ ಮಹಿಳಾ ಕಾಲೇಜು ಮಹಿಳಾ ಶಿಕ್ಷಣಕ್ಕೆ ಮಾದರಿಯಾಗಲಿ: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌

ಧಾರವಾಡ, ಮೇ.27: 2014 ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧಾರವಾಡಕ್ಕೆ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಪ್ರಾರಂಭಿಸಲು ಅನುಮೋದನೆ ನೀಡಿದ್ದು, 10 ಮಕ್ಕಳೊಂದಿಗೆ ಪ್ರಾರಂಭವಾದ ಈ ಕಾಲೇಜಿನಲ್ಲಿ ಈಗ 450 ಕ್ಕೂ ಹೆಚ್ಚು ಮಕ್ಕಳು ವಿದ್ಯಾಭ್ಯಾಸ ಪಡೆಯುತ್ತಿದ್ದಾರೆ. ಈ ನೂತನ ಕಟ್ಟಡವು 3.5 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಹೇಳಿದರು.

ಬೆಳಗ್ಗೆ ನಗರದ ಜಿಲ್ಲಾ ಕ್ರೀಡಾಂಗಣದ ಮುಂಭಾಗದಲ್ಲಿ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ನೂತನ ಕಟ್ಟಡದ ಭೂಮಿ ಪೂಜೆ ಹಾಗೂ ಅಡಿಗಲ್ಲು ಕಾರ್ಯಕ್ರಮವನ್ನು ನೆರವೇರಿಸಿ ಅವರು ಮಾತನಾಡಿದರು.

ಮೊದಲು ಹಳ್ಳಿಗಳಲ್ಲಿ ಹೆಣ್ಣು ಮಕ್ಕಳು ಶಾಲೆಗೆ ಹೋಗುತ್ತಿರಲಿಲ್ಲ. ಬಿಸಿ ಊಟ ಪ್ರಾರಂಭವಾದ ಮೇಲೆ ಬಡವರ ಮಕ್ಕಳಿಗೆ ಅನುಕೂಲವಾಗಿ ಹೆಣ್ಣು ಮಕ್ಕಳು ಶಾಲೆಗೆ ಹೋಗಲು ಪ್ರಾರಂಭಿಸಿದರು. ಆ ಸಮಯದಿಂದ ತರಗತಿಯಲ್ಲಿ ಹೆಣ್ಣು ಮತ್ತು ಗಂಡು ಮಕ್ಕಳು ಸಮವಾಗಿರಲು ಆರಂಭವಾಯಿತು. ಆದರೆ ಈ ದಿನಗಳಲ್ಲಿ ಕೆಲವೊಂದು ಶಾಲಾ ಕೊಠಡಿಗಳಲ್ಲಿ ಗಂಡು ಮಕ್ಕಳಿಗಿಂತ ಹೆಣ್ಣು ಮಕ್ಕಳು ಹೆಚ್ಚಾಗಿ ಕಾಣುತ್ತಿದ್ದಾರೆ ಎಂದು ಸಚಿವರು ಹೇಳಿದರು.

ಈಗೀಗ ರಾಜ್ಯಮಟ್ಟದಲ್ಲಿ ಹೆಣ್ಣು ಮಕ್ಕಳು ಪ್ರಥಮ ಸ್ಥಾನ ಪಡೆಯುತ್ತಿದ್ದಾರೆ. ಹಾಗೆ ವಿಶ್ವವಿದ್ಯಾಲಯದಲ್ಲಿ ಮೊದಲನೆಯ ರ್ಯಾಂಕ್ ಕೂಡ ಹೆಣ್ಣುಮಕ್ಕಳದೇ ಆಗಿರುತ್ತದೆ. ಹೆಣ್ಣು ಮಕ್ಕಳಿಗೆ ಅನುಕೂಲವಾಗಲಿ ಎಂದು ಪ್ರತ್ಯೇಕ ಕಾಲೇಜು ತೆರೆಯಲು ಸರ್ಕಾರ ಅನುಮತಿ ನೀಡಿದೆ ಎಂದು ಹೇಳಿದರು.

ಬಸವಣ್ಣವರು ಮತ್ತು ಅಂಬೇಡ್ಕರ್ ಅವರ ತತ್ವಗಳನ್ನು ಅರಿತುಕೊಳ್ಳಬೇಕು. ಅವರು ಸಮಾಜದಲ್ಲಿ ಹೆಣ್ಣು ಮಕ್ಕಳಿಗೆ ಸಮಾನತೆಯನ್ನು ತೋರಿಸಿಕೊಟ್ಟವರು. ಹಾಗೆ ಬದುಕಲು ದಾರಿ ಕಲ್ಪಿಸಿದವರು. ಅಂಬೇಡ್ಕರ್ ಅವರು ಸಂವಿಧಾನವನ್ನು ರಚಿಸುವ ಮೂಲಕ ಸಮಾಜದಲ್ಲಿ ಹೆಣ್ಣು ಮಕ್ಕಳ ಗೌರವವನ್ನು ಹೆಚ್ಚಿಸಿದ್ದಾರೆ. ಈಗಿನ ಕಾಲಘಟ್ಟದಲ್ಲಿ ಹೆಣ್ಣು ಮಕ್ಕಳು ಐಎಎಸ್ ಅಧಿಕಾರಿಯಾಗಬಹುದು. ಹುಟ್ಟಿದ ಮನೆಯಲ್ಲಿ ಹೊಲ ಮತ್ತು ಮನೆಯಲ್ಲಿ ಪಾಲುದಾರರಾಗಬಹುದು. ಇದಕ್ಕೆ ಮೂಲ ಕಾರಣಿಕರ್ತರು ಅಂಬೇಡ್ಕರ್ ಅವರು ನೀಡಿದ ಸಂವಿಧಾನ. ಹೆಣ್ಣು ಮಕ್ಕಳು ಅಂಬೇಡ್ಕರ್ ಅವರ ಕೊಡುಗೆಗಳನ್ನು ಸದಾ ಸ್ಮರಿಸಬೇಕು ಎಂದು ಸಚಿವರು ತಿಳಿಸಿದರು.

ಈಗಿನ ಪೀಳಿಗೆಯವರ ಮೇಲೆ ಜವಾಬ್ದಾರಿ ಹೆಚ್ಚಾಗಿದೆ. ಸಮಾಜವನ್ನು ಕಟ್ಟುವ ನಿರ್ಧಾರವನ್ನು ಮಾಡಿ, ರಾಜಕಾರಣದಲ್ಲಿ ಆಗುಹೋಗುಗಳನ್ನು ಹತ್ತಿರದಿಂದ ಗಮನಿಸಿ, ದೇಶದ ಒಳ್ಳೆಯ ಪ್ರಜೆಯಾಗಿ ಬೆಳೆಯಬೇಕು ಎಂದು ವಿದ್ಯಾರ್ಥಿಗಳಿಗೆ ಬುದ್ಧಿಮಾತು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶಾಸಕ ಅರವಿಂದ ಬೆಲ್ಲದ ಅವರು ಮಾತನಾಡಿದರು.

ಜಿಲ್ಲಾಧಿಕಾರಿ ದಿವ್ಯ ಪ್ರಭು, ಕಾಲೇಜು ಪ್ರಾಂಶುಪಾಲ ಡಾ.ಎಸ್.ಎಸ್.ಅಂಗಡಿ, ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಮಹಾಪೌರ ರಾಮಣ್ಣ ಬಡಿಗೇರ, ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ ಸನದಿ, ಮಹಾನಗರ ಪೊಲೀಸ ಆಯುಕ್ತ ಎನ್.ಶಶಿಕುಮಾರ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್‌ ಅಧೀಕ್ಷಕ ಡಾ.ಗೋಪಾಲ ಬ್ಯಾಕೋಡ, ಮಹಾನಗರ ಪಾಲಿಕೆ ಸದಸ್ಯರಾದ ಸುರೇಶ ಬೆದ್ರೆ, ಡಾ.ಮಯೂರ ಮೋರೆ, ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ಪ್ರಕಾಶ ಹೊಸಮನಿ ಸೇರಿದಂತೆ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು, ಕಾಲೇಜು ಅಧ್ಯಾಪಕರು, ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ