Let the work of providing benefits to the poor be done: Veerabhadra Swamiji of Ankali Math

ಬಡವರಿಗೆ ಅನುಕೂಲ ಒದಗಿಸುವ ಕಾರ್ಯ ನಡೆಯಲಿ: ಅಂಕಲಿಮಠದ ವೀರಭದ್ರ ಸ್ವಾಮೀಜಿ

ಬಡವರಿಗೆ ಅನುಕೂಲ ಒದಗಿಸುವ ಕಾರ್ಯ ನಡೆಯಲಿ: ಅಂಕಲಿಮಠದ ವೀರಭದ್ರ ಸ್ವಾಮೀಜಿ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದಲ್ಲಿ ಅತ್ಯಾಧುನಿಕ ಸೌಲಭ್ಯ ಒದಗಿಸುವ ಉದ್ದೇಶದಿಂದ ಆರಂಭಗೊಂಡಿರುವ ಕರೇಕಲ್ಲ ಪಾಟೀಲ್ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆಯಿಂದ ಬಡವರಿಗೆ ಅನುಕೂಲ ಕಲ್ಪಿಸುವ ಕಾರ್ಯ ಆಗಬೇಕು ಎಂದು ಅಂಕಲಿಮಠದ ವೀರಭದ್ರ ಸ್ವಾಮೀಜಿ ಹೇಳಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಪಟ್ಟಣದಲ್ಲಿ ನೂತನ ಕರೇಕಲ್ಲ ಪಾಟೀಲ್ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ಮತ್ತು ಡಯಾಗ್ನಸ್ಟಿಕ್ ಸ್ಕ್ಯಾನ್ ಸೆಂಟರ್ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಮೊದಲಿನ ಆಹಾರ ಪದ್ಧತಿಯಿಂದ ಆರೋಗ್ಯದಿಂದ ಇದ್ದೇವು.ಆಧುನಿಕ ಕಾಲದಲ್ಲಿ ಆಹಾರ ಪದ್ಧತಿಯಿಂದ ಹಲವು ಕಾಯಿಲೆಗಳು ಬರುತ್ತಿವೆ. ಸಿರಿವಂತರಿಗೆ ತುಸು ತುಟ್ಟಿ, ಬಡವರಿಗೆ ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ದೊರೆಯವ ವ್ಯವಸ್ಥೆ ಮಾಡಿ ಎಂದು ಸಲಹೆ ಮಾಡಿದರು.

ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಮಾತನಾಡಿ, ಉತ್ತಮ ಜ್ಞಾನ ಹಾಗೂ ಕೌಶಲ್ಯ,ನುರಿತ ಅನುಭವಿಗಳಾಗಿರುವ ವೈದ್ಯರು ಇಲ್ಲಿ ಚಿಕಿತ್ಸೆಗೆ ದೊರೆಯುತ್ತಿರುವುದು ನಮ್ಮ ತಾಲ್ಲೂಕಿನ ಭಾಗ್ಯ ಎಂದರು.

ಇದನ್ನೂ ಓದಿ: ವಿಘ್ನೇಶ್ವರ ಮೂರ್ತಿ ವಿಸರ್ಜನೆ ಡಿಜೆ ಕುಣಿತ : ಪಟಾಕಿ ಸಿಡಿದು ಅಂಧನಾದ ಯುವಕ

ಕುಂಟೋಜಿ ಸಂಸ್ಥಾನ ಹಿರೇಮಠದ ಚೆನ್ನವೀರ ಶಿವಾಚಾರ್ಯರು, ದೇವರಹಿಪ್ಪರಗಿ ಮಾಜಿ ಶಾಸಕ ಸೋಮನಗೌಡ ಪಾಟೀಲ್ ಸಾಸನೂರ, ವಿಜಯಪುರದ ಬಿದರಿ ಆಸ್ಪತ್ರೆ ವೈದ್ಯ ಡಾ.ಆರ್.ಸಿ.ಬಿದರಿ,ಕರೇಕಲ್ ಪಾಟೀಲ್ ಆಸ್ಪತ್ರೆಯ ಮುಖ್ಯಸ್ಥ ಡಾ.ಬಸನಗೌಡ ಕರೇಕಲ್ಲ ಪಾಟೀಲ್, ಡಾ.ಅನುಪಮಾ ಕರೇಕಲ್ ಪಾಟೀಲ್, ಜೀರಲಭಾವಿ ಆನಂದಯ್ಯ ಸ್ವಾಮೀಜಿ, ಪರಮಾನಂದ ಸ್ವಾಮೀಜಿ, ಕೃಷ್ಣಾನಂದ ಶರಣರು, ಕಸಾಪ ಮಾಜಿ ಅಧ್ಯಕ್ಷ ಎಂ.ಬಿ.ನಾವದಗಿ, ಬಾಲಾಜಿ ಶುರ‍್ಸ್ ಚೇರಮನ್ ಹಣಮಂತಗೌಡ್ರು ಪಾಟೀಲ್, ನಿರ್ದೇಶಕರಾದ ರಾಹುಲಗೌಡ ಪಾಟೀಲ್, ಕೆಎಸ್‌ಆರ್‌ಟಿಸಿ ನಿವೃತ್ತ ಡಿಸಿ ವಿ.ಎಸ್.ಪಾಟೀಲ್, ವಿಜಯಪುರ ಹೇಮರಡ್ಡಿ ಮಲ್ಲಮ್ಮ ಬ್ಯಾಂಕ್ ಅಧ್ಯಕ್ಷ ಬಿ.ಬಿ.ಪಾಟೀಲ್, ಡಾ.ಶೈಲಜಾ ಬಿದರಿ,ಜಿಪಂ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ವಿಜಯಪುರದ ಆಹಾರ ಇಲಾಖೆ ಉಪನಿರ್ದೇಶಕ ವಿನಯಕುಮಾರ ಪಾಟೀಲ್, ತಹಶೀಲ್ದಾರ್ ಬಲರಾಮ ಕಟ್ಟಿಮನಿ, ನಿವೃತ್ತ ಡಿಎಚ್‌ಒ ಡಾ.ನೇತಾಜಿ ಬಿರಾದಾರ, ಅನುಗ್ರಹ ಆಸ್ಪತ್ರೆ ವೈದ್ಯ ಡಾ.ಪ್ರಭುಗೌಡ ಲಿಂಗದಳ್ಳಿ, ಡಾ.ಅನಿಲಕುಮಾರ ಶೇಗುಣಸಿ, ನಿವೃತ್ತ ಡಿವೈಎಸ್ಪಿ ಎಸ್.ಎಸ್.ಹುಲ್ಲೂರ, ಡಾ.ಅಜಿತ ಕನಕರಡ್ಡಿ ಮೊದಲಾದವರು ಇದ್ದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ