Let us, as Kannadigas, cultivate Kannada pride: Go.Ru.Cha

ಕನ್ನಡಿಗರಾದ ನಾವು ಕನ್ನಡಾಭಿಮಾನ ಬೆಳೆಸಿಕೊಳ್ಳೋಣ: ಗೊ.ರು.ಚ

ಕನ್ನಡಿಗರಾದ ನಾವು ಕನ್ನಡಾಭಿಮಾನ ಬೆಳೆಸಿಕೊಳ್ಳೋಣ: ಗೊ.ರು.ಚ

ರಾಯಚೂರು: ಕನ್ನಡಿಗರಾದ ನಾವು ಕನ್ನಡ ಸಾಹಿತ್ಯ ಒಲವು ಬೆಳೆಸಿಕೊಂಡು ಭಾಷಾ ಪ್ರೇಮವನ್ನು ಮೆರೆಯುವಂತಾಗಬೇಕು ಎಂದು ಹಿರಿಯ ಸಾಹಿತಿ ನಾಡೋಜ ಡಾ.ಗೊ.ರು.ಚನ್ನಬಸಪ್ಪ ಅವರು ಹೇಳಿದರು.

ಮಾ.6ರ ಗುರುವಾರ ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ನಡೆದ ರಾಯಚೂರು ತಾಲ್ಲೂಕು ಆರನೇ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

ಕನ್ನಡಿಗರಾದ ನಾವು ಆತ್ಮ ವಿಮರ್ಶೆ ಮಾಡಿಕೊಂಡು ಕಳೆದು ಹೋಗುತ್ತಿರುವ ನಮ್ಮನ್ನು ನಾವು ಹುಡಕಿಕೊಳ್ಳಲು ಸಮ್ಮೇಳನಗಳು ಸಹಕಾರಿಯಾಗಲಿವೆ. ಕನ್ನಡ ಸಾಹಿತ್ಯ ಸಮ್ಮೇಳನಗಳು ಸಾಂಸ್ಕೃತಿಕ ಜಾತ್ರೆಗಳಾಗಿದ್ದು, ಪರಸ್ಪರ ಮಾನವ ಸಂಬಂಧ ಬೆಸೆಯುವ ಸಾಹಿತ್ಯ ಜಾತ್ರೆಗಳಾಗಿವೆ ಎಂದರು.
ಕನ್ನಡ ಸಾಹಿತ್ಯ ಪರಿಷತ್ ಅತ್ಯಂತ ಹಳೆಯ ಸಂಸ್ಥೆಯಾಗಿದೆ. ಇದರಿಂದ ನಡೆಯುವ ಸಾಹಿತ್ಯ ಸಮ್ಮೇಳನಗಳು ಇದೀಗ ತಾಲೂಕು ಕೇಂದ್ರಗಳಿಗೂ ವಿಸ್ತರಿಸಿರುವುದು ವಿಶೇಷ ಎಂದರು. ನೂರು ಜನರ ಸದಸ್ಯರಿದ್ದ ಪರಿಷತ್ ಇಂದು ಐದು ಲಕ್ಷಕ್ಕೂ ಅಧಿಕ ಸದಸ್ಯತ್ವ ಪಡೆದು ಜಗತ್ತಿನ ವಿವಿಧೆಡೆಯೂ ಸದಸ್ಯರನ್ನು ಹೊಂದಿರುವದು ಹೆಮ್ಮೆಯ ವಿಚಾರ ಎಂದರು.

ನಾವೀಗ ಸಾಹಿತ್ಯ ಪರಿಷತ್‌ನ ಶತಮಾನೋತ್ಸವದ ಸಂಭ್ರಮದಲ್ಲಿದ್ದೇವೆ. ರಾಜಕಾರಣಿಗಳಲ್ಲಿ, ಧರ್ಮಗುರುಗಳಲ್ಲಿ ಸಹ ಸಾಹಿತ್ಯಾಸಕ್ತಿ ಬೆಳೆಸುವ ಕಾರ್ಯವನ್ನು ಇಂತಹ ಸಮ್ಮೇಳನಗಳು ಮಾಡುತ್ತಿರುವುದು ಹೆಗ್ಗಳಿಕೆಯಾಗಿದೆ. ಹೀಗೆ ಎಲ್ಲರನ್ನೂ ಒಳಗೊಂಡು ಸಾಹಿತ್ಯ ಪರಿಷತ್ ಮುನ್ನಡೆಯಬೇಕಿದೆ ಎಂದರು.

ವಚನ ಸಾಹಿತ್ಯವು ಪರ್ಯಾಯ ಸಂಸ್ಕೃತಿಯನ್ನು ಹುಟ್ಟುಹಾಕಿದೆ. ಸಾಹಿತ್ಯವು ಜನ ಸಂಕಷ್ಟಕ್ಕೆ, ನೋವಿಗೆ ಪರಿಹಾರ ಹುಡುಕುವಂತಾಗಬೇಕು. ರಾಜ್ಯ ಸರ್ಕಾರವು ಪುಸ್ತಕ ಓದುವ ಅಭಿರುಚಿ, ವೈಚಾರಿಕ ಅಭಿಪ್ರಾಯಗಳಿಗೆ ಒಲವು ತೋರಿಸುತ್ತಿರುವುದು ಸಮಧಾನಕರ ಬೆಳವಣಿಗೆಯಾಗಿದೆ ಎಂದರು.

ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಹೋರಾಟಕ್ಕೆ ತಾವು ಬೆಂಬಲಿಸುವುದಾಗಿ ಹೇಳಿದರು.

ಇದೇ ಸಂದರ್ಭದಲ್ಲಿ ಕಿಲ್ಲೆ ಬೃಹನ್ಮಠದ ಶ್ರೀಶಾಂತಮಲ್ಲ ಶಿವಾಚಾರ್ಯರು, ಸಂಸದರಾದ ಜಿ.ಕುಮಾರನಾಯಕ, ಮಹಾನಗರ ಪಾಲಿಕೆಯ ಮಹಾಪೌರರಾದ ನರಸಮ್ಮ ನರಸಿಂಹಲು ಮಾಡಗಿರಿ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ರಂಗಣ್ಣ ಪಾಟೀಲ್ ಅಳ್ಳುಂಡಿ, ರಾಯಚೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ವೆಂಕಟೇಶ ಬೇವಿನಬೆಂಚಿ, ಸಮ್ಮೇಳನಾಧ್ಯಕ್ಷರಾದ ಅಯ್ಯಪ್ಪಯ್ಯ ಹುಡಾ, ಮಹಾನಗರ ಪಾಲಿಕೆಯ ಸದಸ್ಯರಾದ ಜಯಣ್ಣ, ಐದನೇ ಸಾಹಿತ್ಯ ಸಮ್ಮೇಳನಾಧ್ಯಕ್ಷ ಬಾಬು ಬಂಡಾರಿಗಲ್, ಹಿರಿಯ ಪತ್ರಕರ್ತರಾದ ಬಸವರಾಜ ಸ್ವಾಮಿ, ಅರವಿಂದ ಕುಲಕರ್ಣಿ, ಚನ್ನಬಸವಣ್ಣ, ಸಾಹಿತಿಗಳಾದ ಬಾಬು ಬಂಢಾರಿಗಲ್, ಭಗತರಾಜ ನಿಜಾಮಕಾರಿ, ನಾಗರಾಜ ಮಸ್ಕಿ, ತಾಯಪ್ಪ ಹೊಸೂರು, ಜಿ.ಸುರೇಶ ಇದ್ದರು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ