Let us, as Kannadigas, cultivate Kannada pride: Go.Ru.Cha

ಕನ್ನಡಿಗರಾದ ನಾವು ಕನ್ನಡಾಭಿಮಾನ ಬೆಳೆಸಿಕೊಳ್ಳೋಣ: ಗೊ.ರು.ಚ

ಕನ್ನಡಿಗರಾದ ನಾವು ಕನ್ನಡಾಭಿಮಾನ ಬೆಳೆಸಿಕೊಳ್ಳೋಣ: ಗೊ.ರು.ಚ

ರಾಯಚೂರು: ಕನ್ನಡಿಗರಾದ ನಾವು ಕನ್ನಡ ಸಾಹಿತ್ಯ ಒಲವು ಬೆಳೆಸಿಕೊಂಡು ಭಾಷಾ ಪ್ರೇಮವನ್ನು ಮೆರೆಯುವಂತಾಗಬೇಕು ಎಂದು ಹಿರಿಯ ಸಾಹಿತಿ ನಾಡೋಜ ಡಾ.ಗೊ.ರು.ಚನ್ನಬಸಪ್ಪ ಅವರು ಹೇಳಿದರು.

ಮಾ.6ರ ಗುರುವಾರ ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ನಡೆದ ರಾಯಚೂರು ತಾಲ್ಲೂಕು ಆರನೇ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

ಕನ್ನಡಿಗರಾದ ನಾವು ಆತ್ಮ ವಿಮರ್ಶೆ ಮಾಡಿಕೊಂಡು ಕಳೆದು ಹೋಗುತ್ತಿರುವ ನಮ್ಮನ್ನು ನಾವು ಹುಡಕಿಕೊಳ್ಳಲು ಸಮ್ಮೇಳನಗಳು ಸಹಕಾರಿಯಾಗಲಿವೆ. ಕನ್ನಡ ಸಾಹಿತ್ಯ ಸಮ್ಮೇಳನಗಳು ಸಾಂಸ್ಕೃತಿಕ ಜಾತ್ರೆಗಳಾಗಿದ್ದು, ಪರಸ್ಪರ ಮಾನವ ಸಂಬಂಧ ಬೆಸೆಯುವ ಸಾಹಿತ್ಯ ಜಾತ್ರೆಗಳಾಗಿವೆ ಎಂದರು.
ಕನ್ನಡ ಸಾಹಿತ್ಯ ಪರಿಷತ್ ಅತ್ಯಂತ ಹಳೆಯ ಸಂಸ್ಥೆಯಾಗಿದೆ. ಇದರಿಂದ ನಡೆಯುವ ಸಾಹಿತ್ಯ ಸಮ್ಮೇಳನಗಳು ಇದೀಗ ತಾಲೂಕು ಕೇಂದ್ರಗಳಿಗೂ ವಿಸ್ತರಿಸಿರುವುದು ವಿಶೇಷ ಎಂದರು. ನೂರು ಜನರ ಸದಸ್ಯರಿದ್ದ ಪರಿಷತ್ ಇಂದು ಐದು ಲಕ್ಷಕ್ಕೂ ಅಧಿಕ ಸದಸ್ಯತ್ವ ಪಡೆದು ಜಗತ್ತಿನ ವಿವಿಧೆಡೆಯೂ ಸದಸ್ಯರನ್ನು ಹೊಂದಿರುವದು ಹೆಮ್ಮೆಯ ವಿಚಾರ ಎಂದರು.

ನಾವೀಗ ಸಾಹಿತ್ಯ ಪರಿಷತ್‌ನ ಶತಮಾನೋತ್ಸವದ ಸಂಭ್ರಮದಲ್ಲಿದ್ದೇವೆ. ರಾಜಕಾರಣಿಗಳಲ್ಲಿ, ಧರ್ಮಗುರುಗಳಲ್ಲಿ ಸಹ ಸಾಹಿತ್ಯಾಸಕ್ತಿ ಬೆಳೆಸುವ ಕಾರ್ಯವನ್ನು ಇಂತಹ ಸಮ್ಮೇಳನಗಳು ಮಾಡುತ್ತಿರುವುದು ಹೆಗ್ಗಳಿಕೆಯಾಗಿದೆ. ಹೀಗೆ ಎಲ್ಲರನ್ನೂ ಒಳಗೊಂಡು ಸಾಹಿತ್ಯ ಪರಿಷತ್ ಮುನ್ನಡೆಯಬೇಕಿದೆ ಎಂದರು.

ವಚನ ಸಾಹಿತ್ಯವು ಪರ್ಯಾಯ ಸಂಸ್ಕೃತಿಯನ್ನು ಹುಟ್ಟುಹಾಕಿದೆ. ಸಾಹಿತ್ಯವು ಜನ ಸಂಕಷ್ಟಕ್ಕೆ, ನೋವಿಗೆ ಪರಿಹಾರ ಹುಡುಕುವಂತಾಗಬೇಕು. ರಾಜ್ಯ ಸರ್ಕಾರವು ಪುಸ್ತಕ ಓದುವ ಅಭಿರುಚಿ, ವೈಚಾರಿಕ ಅಭಿಪ್ರಾಯಗಳಿಗೆ ಒಲವು ತೋರಿಸುತ್ತಿರುವುದು ಸಮಧಾನಕರ ಬೆಳವಣಿಗೆಯಾಗಿದೆ ಎಂದರು.

ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಹೋರಾಟಕ್ಕೆ ತಾವು ಬೆಂಬಲಿಸುವುದಾಗಿ ಹೇಳಿದರು.

ಇದೇ ಸಂದರ್ಭದಲ್ಲಿ ಕಿಲ್ಲೆ ಬೃಹನ್ಮಠದ ಶ್ರೀಶಾಂತಮಲ್ಲ ಶಿವಾಚಾರ್ಯರು, ಸಂಸದರಾದ ಜಿ.ಕುಮಾರನಾಯಕ, ಮಹಾನಗರ ಪಾಲಿಕೆಯ ಮಹಾಪೌರರಾದ ನರಸಮ್ಮ ನರಸಿಂಹಲು ಮಾಡಗಿರಿ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ರಂಗಣ್ಣ ಪಾಟೀಲ್ ಅಳ್ಳುಂಡಿ, ರಾಯಚೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ವೆಂಕಟೇಶ ಬೇವಿನಬೆಂಚಿ, ಸಮ್ಮೇಳನಾಧ್ಯಕ್ಷರಾದ ಅಯ್ಯಪ್ಪಯ್ಯ ಹುಡಾ, ಮಹಾನಗರ ಪಾಲಿಕೆಯ ಸದಸ್ಯರಾದ ಜಯಣ್ಣ, ಐದನೇ ಸಾಹಿತ್ಯ ಸಮ್ಮೇಳನಾಧ್ಯಕ್ಷ ಬಾಬು ಬಂಡಾರಿಗಲ್, ಹಿರಿಯ ಪತ್ರಕರ್ತರಾದ ಬಸವರಾಜ ಸ್ವಾಮಿ, ಅರವಿಂದ ಕುಲಕರ್ಣಿ, ಚನ್ನಬಸವಣ್ಣ, ಸಾಹಿತಿಗಳಾದ ಬಾಬು ಬಂಢಾರಿಗಲ್, ಭಗತರಾಜ ನಿಜಾಮಕಾರಿ, ನಾಗರಾಜ ಮಸ್ಕಿ, ತಾಯಪ್ಪ ಹೊಸೂರು, ಜಿ.ಸುರೇಶ ಇದ್ದರು.

Latest News

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ಕುಳಗೇರಿ ಕ್ರಾಸ್: ಸಮೀಪದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸೋಮನಕೊಪ್ಪದಲ್ಲಿ ಸನ್ 2025-26ನೇ ಸಾಲಿನ

ಉತ್ತಮ ಜಿಲ್ಲಾಧ್ಯಕ್ಷ ಪ್ರಶಸ್ತಿ ಪುರಸ್ಕೃತ ಶಿವಕುಮಾರಗೆ ಸನ್ಮಾನ

ಉತ್ತಮ ಜಿಲ್ಲಾಧ್ಯಕ್ಷ ಪ್ರಶಸ್ತಿ ಪುರಸ್ಕೃತ ಶಿವಕುಮಾರಗೆ ಸನ್ಮಾನ

ಮುದ್ದೇಬಿಹಾಳ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಕರಾಟೆ ಶಿಕ್ಷಕರ ಸಂಘದಿಂದ ಕೊಡಮಾಡುವ ಉತ್ತಮ

ಬಸ್‌ಗೆ ಅಟೋ ಡಿಕ್ಕಿ: ಓರ್ವನಿಗೆ ಗಾಯ

ಬಸ್‌ಗೆ ಅಟೋ ಡಿಕ್ಕಿ: ಓರ್ವನಿಗೆ ಗಾಯ

ಮುದ್ದೇಬಿಹಾಳ : ಹಾಲು ಪೂರೈಸುವ ಗೂಡ್ಸ್ ವಾಹನವನ್ನು ಅಜಾಗರೂಕತೆಯಿಂದ ಚಲಾಯಿಸಿ ಬಸ್‌ಗೆ ಡಿಕ್ಕಿ ಹೊಡೆದ

ಗ್ರಾಮದೇವತೆ ಜಾತ್ರೆಗೆ ಕ್ಷಣಗಣನೆ: ಮದುವಣಗಿತ್ತಿಯಂತೆ ಶೃಂಗಾರಗೊಂಡ ಮುದ್ದೇಬಿಹಾಳ ನಗರ

ಗ್ರಾಮದೇವತೆ ಜಾತ್ರೆಗೆ ಕ್ಷಣಗಣನೆ: ಮದುವಣಗಿತ್ತಿಯಂತೆ ಶೃಂಗಾರಗೊಂಡ ಮುದ್ದೇಬಿಹಾಳ ನಗರ

ಮುದ್ದೇಬಿಹಾಳ : ಪ್ರತಿ ಮೂರು ವರ್ಷಕ್ಕೊಮ್ಮೆ ಜರುಗುವ ಗ್ರಾಮದೇವತೆ ಜಾತ್ರೆಗೆ ಮುದ್ದೇಬಿಹಾಳ ಪಟ್ಟಣ ಮದುವಣಗಿತ್ತಿಯಂತೆ

ಹೃದಯಾಘಾತದಿಂದ ಕುಸಿದು ಬಿದ್ದ ಯುವತಿ ಸಾವು!

ಹೃದಯಾಘಾತದಿಂದ ಕುಸಿದು ಬಿದ್ದ ಯುವತಿ ಸಾವು!

ಹಾಸನ: ಇತ್ತೀಚೆಗೆ ಯುವ ಜನರೇ ಹೃದಯಾಘತಕ್ಕೆ ಬಲಿಯಾಗುತ್ತಿರುವುದು ಹೆಚ್ಚಾಗಿದ್ದು, ಇದೀಗ ಹೃದಯಾಘಾತದಿಂದ ಕುಸಿದುಬಿದ್ದು ಪದವಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಹಾಸನ ತಾಲೂಕಿನ ಕೆಲವತ್ತಿ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ಕೆಲವತ್ತಿ ಗ್ರಾಮದ ಪಾಪಣ್ಣ ಹಾಗೂ ಗಾಯತ್ರಿ ದಂಪತಿ ಪುತ್ರಿ ಕವನಾ ಕೆ.ವಿ. (21) ಎಂದು ಗುರುತಿಸಲಾಗಿದೆ. ಈಕೆ ಹಾಸನ ಸರ್ಕಾರಿ ಕಾಲೇಜಿನಲ್ಲಿ ಅಂತಿಮ ಬಿಕಾಂ ವ್ಯಾಸಂಗ ಮಾಡುತ್ತಿದ್ದಳು. ಕಾಲೇಜು ಮುಗಿಸಿ ಸಂಜೆ ಮನೆಗೆ ಬಂದ ಕವನಾಗೆ ಧಿಡೀರ್ ಆಗಿ ಎದೆನೋವು

ನಿಗದಿಯಂತೆ ಕಾರ್ಯಕ್ರಮ: ಮೇ.30 ರಂದು ಗ್ರಾಮ ದೇವತೆ ಜಾತ್ರೆಗೆ ಸಿದ್ಧತೆ ಪೂರ್ಣ

ನಿಗದಿಯಂತೆ ಕಾರ್ಯಕ್ರಮ: ಮೇ.30 ರಂದು ಗ್ರಾಮ ದೇವತೆ ಜಾತ್ರೆಗೆ ಸಿದ್ಧತೆ ಪೂರ್ಣ

ಮುದ್ದೇಬಿಹಾಳ : ಮೇ.30 ರಿಂದ ಪಟ್ಟಣದಲ್ಲಿ ಗ್ರಾಮದೇವತೆ ಜಾತ್ರೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ಕಮೀಟಿಯ ಮುಖಂಡ ಪ್ರಭುರಾಜ ಕಲ್ಬುರ್ಗಿ ಹೇಳಿದರು. ಪಟ್ಟಣದ ಹಳೆ ತಹಸೀಲ್ದಾರ್ ಕಚೇರಿ ಬಳಿ ಇರುವ ಪೊಲೀಸ್ ಕ್ವಾರ್ಟರ್ಸ್ನಲ್ಲಿ ಮುದ್ದೇಬಿಹಾಳ ಗ್ರಾಮ ದೇವತೆ ಜಾತ್ರಾ ಕಮೀಟಿ ನೇತೃತ್ವದಲ್ಲಿ ಬುಧವಾರ ಸಂಜೆ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಅಂದು ಬೆಳಗ್ಗೆ 8 ರಿಂದ ಗ್ರಾಮದೇವತೆ ಹಾಗೂ ಶಾರದಾ ದೇವಿಯವರ ಮೂರ್ತಿಗಳ ಭವ್ಯ ಮೆರವಣಿಗೆ ಕಿಲ್ಲಾದ ಹೊಸಮಠದಿಂದ