Let us, as Kannadigas, cultivate Kannada pride: Go.Ru.Cha

ಕನ್ನಡಿಗರಾದ ನಾವು ಕನ್ನಡಾಭಿಮಾನ ಬೆಳೆಸಿಕೊಳ್ಳೋಣ: ಗೊ.ರು.ಚ

ಕನ್ನಡಿಗರಾದ ನಾವು ಕನ್ನಡಾಭಿಮಾನ ಬೆಳೆಸಿಕೊಳ್ಳೋಣ: ಗೊ.ರು.ಚ

ರಾಯಚೂರು: ಕನ್ನಡಿಗರಾದ ನಾವು ಕನ್ನಡ ಸಾಹಿತ್ಯ ಒಲವು ಬೆಳೆಸಿಕೊಂಡು ಭಾಷಾ ಪ್ರೇಮವನ್ನು ಮೆರೆಯುವಂತಾಗಬೇಕು ಎಂದು ಹಿರಿಯ ಸಾಹಿತಿ ನಾಡೋಜ ಡಾ.ಗೊ.ರು.ಚನ್ನಬಸಪ್ಪ ಅವರು ಹೇಳಿದರು.

ಮಾ.6ರ ಗುರುವಾರ ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ನಡೆದ ರಾಯಚೂರು ತಾಲ್ಲೂಕು ಆರನೇ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

ಕನ್ನಡಿಗರಾದ ನಾವು ಆತ್ಮ ವಿಮರ್ಶೆ ಮಾಡಿಕೊಂಡು ಕಳೆದು ಹೋಗುತ್ತಿರುವ ನಮ್ಮನ್ನು ನಾವು ಹುಡಕಿಕೊಳ್ಳಲು ಸಮ್ಮೇಳನಗಳು ಸಹಕಾರಿಯಾಗಲಿವೆ. ಕನ್ನಡ ಸಾಹಿತ್ಯ ಸಮ್ಮೇಳನಗಳು ಸಾಂಸ್ಕೃತಿಕ ಜಾತ್ರೆಗಳಾಗಿದ್ದು, ಪರಸ್ಪರ ಮಾನವ ಸಂಬಂಧ ಬೆಸೆಯುವ ಸಾಹಿತ್ಯ ಜಾತ್ರೆಗಳಾಗಿವೆ ಎಂದರು.
ಕನ್ನಡ ಸಾಹಿತ್ಯ ಪರಿಷತ್ ಅತ್ಯಂತ ಹಳೆಯ ಸಂಸ್ಥೆಯಾಗಿದೆ. ಇದರಿಂದ ನಡೆಯುವ ಸಾಹಿತ್ಯ ಸಮ್ಮೇಳನಗಳು ಇದೀಗ ತಾಲೂಕು ಕೇಂದ್ರಗಳಿಗೂ ವಿಸ್ತರಿಸಿರುವುದು ವಿಶೇಷ ಎಂದರು. ನೂರು ಜನರ ಸದಸ್ಯರಿದ್ದ ಪರಿಷತ್ ಇಂದು ಐದು ಲಕ್ಷಕ್ಕೂ ಅಧಿಕ ಸದಸ್ಯತ್ವ ಪಡೆದು ಜಗತ್ತಿನ ವಿವಿಧೆಡೆಯೂ ಸದಸ್ಯರನ್ನು ಹೊಂದಿರುವದು ಹೆಮ್ಮೆಯ ವಿಚಾರ ಎಂದರು.

ನಾವೀಗ ಸಾಹಿತ್ಯ ಪರಿಷತ್‌ನ ಶತಮಾನೋತ್ಸವದ ಸಂಭ್ರಮದಲ್ಲಿದ್ದೇವೆ. ರಾಜಕಾರಣಿಗಳಲ್ಲಿ, ಧರ್ಮಗುರುಗಳಲ್ಲಿ ಸಹ ಸಾಹಿತ್ಯಾಸಕ್ತಿ ಬೆಳೆಸುವ ಕಾರ್ಯವನ್ನು ಇಂತಹ ಸಮ್ಮೇಳನಗಳು ಮಾಡುತ್ತಿರುವುದು ಹೆಗ್ಗಳಿಕೆಯಾಗಿದೆ. ಹೀಗೆ ಎಲ್ಲರನ್ನೂ ಒಳಗೊಂಡು ಸಾಹಿತ್ಯ ಪರಿಷತ್ ಮುನ್ನಡೆಯಬೇಕಿದೆ ಎಂದರು.

ವಚನ ಸಾಹಿತ್ಯವು ಪರ್ಯಾಯ ಸಂಸ್ಕೃತಿಯನ್ನು ಹುಟ್ಟುಹಾಕಿದೆ. ಸಾಹಿತ್ಯವು ಜನ ಸಂಕಷ್ಟಕ್ಕೆ, ನೋವಿಗೆ ಪರಿಹಾರ ಹುಡುಕುವಂತಾಗಬೇಕು. ರಾಜ್ಯ ಸರ್ಕಾರವು ಪುಸ್ತಕ ಓದುವ ಅಭಿರುಚಿ, ವೈಚಾರಿಕ ಅಭಿಪ್ರಾಯಗಳಿಗೆ ಒಲವು ತೋರಿಸುತ್ತಿರುವುದು ಸಮಧಾನಕರ ಬೆಳವಣಿಗೆಯಾಗಿದೆ ಎಂದರು.

ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಹೋರಾಟಕ್ಕೆ ತಾವು ಬೆಂಬಲಿಸುವುದಾಗಿ ಹೇಳಿದರು.

ಇದೇ ಸಂದರ್ಭದಲ್ಲಿ ಕಿಲ್ಲೆ ಬೃಹನ್ಮಠದ ಶ್ರೀಶಾಂತಮಲ್ಲ ಶಿವಾಚಾರ್ಯರು, ಸಂಸದರಾದ ಜಿ.ಕುಮಾರನಾಯಕ, ಮಹಾನಗರ ಪಾಲಿಕೆಯ ಮಹಾಪೌರರಾದ ನರಸಮ್ಮ ನರಸಿಂಹಲು ಮಾಡಗಿರಿ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ರಂಗಣ್ಣ ಪಾಟೀಲ್ ಅಳ್ಳುಂಡಿ, ರಾಯಚೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ವೆಂಕಟೇಶ ಬೇವಿನಬೆಂಚಿ, ಸಮ್ಮೇಳನಾಧ್ಯಕ್ಷರಾದ ಅಯ್ಯಪ್ಪಯ್ಯ ಹುಡಾ, ಮಹಾನಗರ ಪಾಲಿಕೆಯ ಸದಸ್ಯರಾದ ಜಯಣ್ಣ, ಐದನೇ ಸಾಹಿತ್ಯ ಸಮ್ಮೇಳನಾಧ್ಯಕ್ಷ ಬಾಬು ಬಂಡಾರಿಗಲ್, ಹಿರಿಯ ಪತ್ರಕರ್ತರಾದ ಬಸವರಾಜ ಸ್ವಾಮಿ, ಅರವಿಂದ ಕುಲಕರ್ಣಿ, ಚನ್ನಬಸವಣ್ಣ, ಸಾಹಿತಿಗಳಾದ ಬಾಬು ಬಂಢಾರಿಗಲ್, ಭಗತರಾಜ ನಿಜಾಮಕಾರಿ, ನಾಗರಾಜ ಮಸ್ಕಿ, ತಾಯಪ್ಪ ಹೊಸೂರು, ಜಿ.ಸುರೇಶ ಇದ್ದರು.

Latest News

ತೆರಿಗೆ ವಸೂಲಾತಿಯಲ್ಲಿ ಸಾಧನೆ: ಆಲೂರು ಗ್ರಾ.ಪಂಗೆ ಪ್ರಶಸ್ತಿ ಪ್ರದಾನ

ತೆರಿಗೆ ವಸೂಲಾತಿಯಲ್ಲಿ ಸಾಧನೆ: ಆಲೂರು ಗ್ರಾ.ಪಂಗೆ ಪ್ರಶಸ್ತಿ ಪ್ರದಾನ

ನಾಲತವಾಡ : ತೆರಿಗೆ ವಸೂಲಾತಿಯಲ್ಲಿ ವಿಜಯಪುರ ಜಿಲ್ಲೆಗೆ ಮೂರನೇ ಸ್ಥಾನ ಪಡೆದುಕೊಂಡ ಹಿನ್ನೆಲೆಯಲ್ಲಿ ಮುದ್ದೇಬಿಹಾಳ

ರಾಜ್ಯದ ಟಾಪರ್ ಸ್ಥಾನಕ್ಕೆ ಒಂದೇ ಅಂಕ ಮಿಸ್ :  ವಿದ್ಯಾರ್ಥಿನಿ ಕಣ್ಣೀರು…!                                                                 ನಾಗರಬೆಟ್ಟ ಎಸ್.ಡಿ.ಕೆ ಪ್ರೌಢಶಾಲೆ ವಿದ್ಯಾರ್ಥಿನಿ ಪೂಜಾ ಲಮಾಣಿ ಸಾಧನೆ

ರಾಜ್ಯದ ಟಾಪರ್ ಸ್ಥಾನಕ್ಕೆ ಒಂದೇ ಅಂಕ ಮಿಸ್ : ವಿದ್ಯಾರ್ಥಿನಿ ಕಣ್ಣೀರು…! ನಾಗರಬೆಟ್ಟ ಎಸ್.ಡಿ.ಕೆ ಪ್ರೌಢಶಾಲೆ ವಿದ್ಯಾರ್ಥಿನಿ ಪೂಜಾ ಲಮಾಣಿ ಸಾಧನೆ

ಮುದ್ದೇಬಿಹಾಳ : ಸನ್ 2025-26 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶದಲ್ಲಿ ನಾಗರಬೆಟ್ಟದ ಎಸ್.ಡಿ.ಇ

ಸೌಜನ್ಯಾ ಕಂದಕೂರಗೆ 625 ಅಂಕ :                        ನಾಗರಬೆಟ್ಟದ ಆಕ್ಸಫರ್ಡ ಪಾಟೀಲ್ಸ್ ಪ್ರೌಢಶಾಲೆಗೆ ಈ ವರ್ಷವೂ ಸ್ಟೇಟ್ ರ‍್ಯಾಂಕ್..!

ಸೌಜನ್ಯಾ ಕಂದಕೂರಗೆ 625 ಅಂಕ : ನಾಗರಬೆಟ್ಟದ ಆಕ್ಸಫರ್ಡ ಪಾಟೀಲ್ಸ್ ಪ್ರೌಢಶಾಲೆಗೆ ಈ ವರ್ಷವೂ ಸ್ಟೇಟ್ ರ‍್ಯಾಂಕ್..!

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ ಪಾಟೀಲ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿಯೊಬ್ಬಳು ಈ

ವಿದ್ಯಾರ್ಥಿಗೆ ಬೆಳೆಸಿದ ಶಾಲೆಗಳತ್ತ ಪಾಲಕರ ಗಮನವಿರಲಿ ಎಂ.ಎನ್.ಮದರಿ

ವಿದ್ಯಾರ್ಥಿಗೆ ಬೆಳೆಸಿದ ಶಾಲೆಗಳತ್ತ ಪಾಲಕರ ಗಮನವಿರಲಿ ಎಂ.ಎನ್.ಮದರಿ

ಮುದ್ದೇಬಿಹಾಳ : ಹಿಂದುಳಿದ,ಬಡವರ ಮಕ್ಕಳಿಗೆ ಉಚಿತ,ರಿಯಾಯಿತಿ ಶಿಕ್ಷಣ ಕೊಟ್ಟು ಒಳ್ಳೆಯ ಫಲಿತಾಂಶ ತಂದ ಮಕ್ಕಳನ್ನು

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ-1 ರಲ್ಲಿ ಅಮೋಘ ಸಾಧನೆ ಮಾಡಿದ್ದಾರೆ.ಕಾಲೇಜಿನ ವಿದ್ಯಾರ್ಥಿಗಳು ಈ ವರ್ಷವೂ ರಾಜ್ಯಮಟ್ಟದಲ್ಲಿ ರ‍್ಯಾಂಕ್ ಪಡೆದುಕೊಳ್ಳುವ ಮೂಲಕ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಲಕ್ಷ್ಮೀ ಅಡಗಿಮನಿ 592 ಅಂಕ ಪಡೆದು ರಾಜ್ಯಕ್ಕೆ ಆರನೇ ಸ್ಥಾನ ಪಡೆದುಕೊಂಡಿದ್ದು ವಿಜಯಪುರ ಜಿಲ್ಲೆಗೆ ಎರಡನೇ ಸ್ಥಾನ ಗಳಿಸಿದ್ದಾಳೆ.ಭಾಗ್ಯಾ ಹೊಸಮನಿ ಹಾಗೂ ನಂದಿತಾ ರೆಡ್ಡಿ 591ಅಂಕ ಪಡೆದು ದ್ವಿತೀಯ,ಸಂಜನಾ ಡಿ. 590

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ ಸಮಾಜದ ಬಾಂಧವರನ್ನು ಸೇರಿಕೊಂಡು ಅದ್ದೂರಿಯಾಗಿ ಆಚರಣೆ ಮಾಡಲು ನಿರ್ಧರಿಸಲಾಗಿದೆ. ಪಟ್ಟಣದ ಖಾಸ್ಗತೇಶ್ವರ ಮಠದಲ್ಲಿ ಶುಕ್ರವಾರ ಸಂಜೆ ನಡೆದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.ಬಸವ ಜಯಂತಿಯ ದಿನದಂದು ಕಿಲ್ಲಾದಲ್ಲಿರುವ ಹೊಸಮಠದಲ್ಲಿ ಸಂಜೆ 4ಕ್ಕೆ ಧರ್ಮಸಭೆ ನಡೆಸಿ ಅಲ್ಲಿ ಬಸವಣ್ಣನವರ ಕುರಿತು ಉಪನ್ಯಾಸವನ್ನು ನುರಿತ ಅನುಭಾವಿಗಳಿಂದ ನಡೆಸಲಾಗುವುದು.ಧರ್ಮಸಭೆಗೆ ಹೊಸಮಠದ ಅಮರೇಶ್ವರ ದೇವರು ದಿವ್ಯ ಸಾನಿಧ್ಯದಲ್ಲಿ ಕಾರ್ಯಕ್ರಮ