Let us, as Kannadigas, cultivate Kannada pride: Go.Ru.Cha

ಕನ್ನಡಿಗರಾದ ನಾವು ಕನ್ನಡಾಭಿಮಾನ ಬೆಳೆಸಿಕೊಳ್ಳೋಣ: ಗೊ.ರು.ಚ

ಕನ್ನಡಿಗರಾದ ನಾವು ಕನ್ನಡಾಭಿಮಾನ ಬೆಳೆಸಿಕೊಳ್ಳೋಣ: ಗೊ.ರು.ಚ

ರಾಯಚೂರು: ಕನ್ನಡಿಗರಾದ ನಾವು ಕನ್ನಡ ಸಾಹಿತ್ಯ ಒಲವು ಬೆಳೆಸಿಕೊಂಡು ಭಾಷಾ ಪ್ರೇಮವನ್ನು ಮೆರೆಯುವಂತಾಗಬೇಕು ಎಂದು ಹಿರಿಯ ಸಾಹಿತಿ ನಾಡೋಜ ಡಾ.ಗೊ.ರು.ಚನ್ನಬಸಪ್ಪ ಅವರು ಹೇಳಿದರು.

ಮಾ.6ರ ಗುರುವಾರ ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ನಡೆದ ರಾಯಚೂರು ತಾಲ್ಲೂಕು ಆರನೇ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

ಕನ್ನಡಿಗರಾದ ನಾವು ಆತ್ಮ ವಿಮರ್ಶೆ ಮಾಡಿಕೊಂಡು ಕಳೆದು ಹೋಗುತ್ತಿರುವ ನಮ್ಮನ್ನು ನಾವು ಹುಡಕಿಕೊಳ್ಳಲು ಸಮ್ಮೇಳನಗಳು ಸಹಕಾರಿಯಾಗಲಿವೆ. ಕನ್ನಡ ಸಾಹಿತ್ಯ ಸಮ್ಮೇಳನಗಳು ಸಾಂಸ್ಕೃತಿಕ ಜಾತ್ರೆಗಳಾಗಿದ್ದು, ಪರಸ್ಪರ ಮಾನವ ಸಂಬಂಧ ಬೆಸೆಯುವ ಸಾಹಿತ್ಯ ಜಾತ್ರೆಗಳಾಗಿವೆ ಎಂದರು.
ಕನ್ನಡ ಸಾಹಿತ್ಯ ಪರಿಷತ್ ಅತ್ಯಂತ ಹಳೆಯ ಸಂಸ್ಥೆಯಾಗಿದೆ. ಇದರಿಂದ ನಡೆಯುವ ಸಾಹಿತ್ಯ ಸಮ್ಮೇಳನಗಳು ಇದೀಗ ತಾಲೂಕು ಕೇಂದ್ರಗಳಿಗೂ ವಿಸ್ತರಿಸಿರುವುದು ವಿಶೇಷ ಎಂದರು. ನೂರು ಜನರ ಸದಸ್ಯರಿದ್ದ ಪರಿಷತ್ ಇಂದು ಐದು ಲಕ್ಷಕ್ಕೂ ಅಧಿಕ ಸದಸ್ಯತ್ವ ಪಡೆದು ಜಗತ್ತಿನ ವಿವಿಧೆಡೆಯೂ ಸದಸ್ಯರನ್ನು ಹೊಂದಿರುವದು ಹೆಮ್ಮೆಯ ವಿಚಾರ ಎಂದರು.

ನಾವೀಗ ಸಾಹಿತ್ಯ ಪರಿಷತ್‌ನ ಶತಮಾನೋತ್ಸವದ ಸಂಭ್ರಮದಲ್ಲಿದ್ದೇವೆ. ರಾಜಕಾರಣಿಗಳಲ್ಲಿ, ಧರ್ಮಗುರುಗಳಲ್ಲಿ ಸಹ ಸಾಹಿತ್ಯಾಸಕ್ತಿ ಬೆಳೆಸುವ ಕಾರ್ಯವನ್ನು ಇಂತಹ ಸಮ್ಮೇಳನಗಳು ಮಾಡುತ್ತಿರುವುದು ಹೆಗ್ಗಳಿಕೆಯಾಗಿದೆ. ಹೀಗೆ ಎಲ್ಲರನ್ನೂ ಒಳಗೊಂಡು ಸಾಹಿತ್ಯ ಪರಿಷತ್ ಮುನ್ನಡೆಯಬೇಕಿದೆ ಎಂದರು.

ವಚನ ಸಾಹಿತ್ಯವು ಪರ್ಯಾಯ ಸಂಸ್ಕೃತಿಯನ್ನು ಹುಟ್ಟುಹಾಕಿದೆ. ಸಾಹಿತ್ಯವು ಜನ ಸಂಕಷ್ಟಕ್ಕೆ, ನೋವಿಗೆ ಪರಿಹಾರ ಹುಡುಕುವಂತಾಗಬೇಕು. ರಾಜ್ಯ ಸರ್ಕಾರವು ಪುಸ್ತಕ ಓದುವ ಅಭಿರುಚಿ, ವೈಚಾರಿಕ ಅಭಿಪ್ರಾಯಗಳಿಗೆ ಒಲವು ತೋರಿಸುತ್ತಿರುವುದು ಸಮಧಾನಕರ ಬೆಳವಣಿಗೆಯಾಗಿದೆ ಎಂದರು.

ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಹೋರಾಟಕ್ಕೆ ತಾವು ಬೆಂಬಲಿಸುವುದಾಗಿ ಹೇಳಿದರು.

ಇದೇ ಸಂದರ್ಭದಲ್ಲಿ ಕಿಲ್ಲೆ ಬೃಹನ್ಮಠದ ಶ್ರೀಶಾಂತಮಲ್ಲ ಶಿವಾಚಾರ್ಯರು, ಸಂಸದರಾದ ಜಿ.ಕುಮಾರನಾಯಕ, ಮಹಾನಗರ ಪಾಲಿಕೆಯ ಮಹಾಪೌರರಾದ ನರಸಮ್ಮ ನರಸಿಂಹಲು ಮಾಡಗಿರಿ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ರಂಗಣ್ಣ ಪಾಟೀಲ್ ಅಳ್ಳುಂಡಿ, ರಾಯಚೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ವೆಂಕಟೇಶ ಬೇವಿನಬೆಂಚಿ, ಸಮ್ಮೇಳನಾಧ್ಯಕ್ಷರಾದ ಅಯ್ಯಪ್ಪಯ್ಯ ಹುಡಾ, ಮಹಾನಗರ ಪಾಲಿಕೆಯ ಸದಸ್ಯರಾದ ಜಯಣ್ಣ, ಐದನೇ ಸಾಹಿತ್ಯ ಸಮ್ಮೇಳನಾಧ್ಯಕ್ಷ ಬಾಬು ಬಂಡಾರಿಗಲ್, ಹಿರಿಯ ಪತ್ರಕರ್ತರಾದ ಬಸವರಾಜ ಸ್ವಾಮಿ, ಅರವಿಂದ ಕುಲಕರ್ಣಿ, ಚನ್ನಬಸವಣ್ಣ, ಸಾಹಿತಿಗಳಾದ ಬಾಬು ಬಂಢಾರಿಗಲ್, ಭಗತರಾಜ ನಿಜಾಮಕಾರಿ, ನಾಗರಾಜ ಮಸ್ಕಿ, ತಾಯಪ್ಪ ಹೊಸೂರು, ಜಿ.ಸುರೇಶ ಇದ್ದರು.

Latest News

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಅವರಿಗೆ ಸಂಪುಟ ವಿಸ್ತರಣೆಯಲ್ಲಿ ಅವಕಾಶ ಕಲ್ಪಿಸಬೇಕೆಂದು ಆಗ್ರಹಿಸಿ ಮುದ್ದೇಬಿಹಾಳ ಮತ್ತು ತಾಳಿಕೋಟೆ ತಾಲೂಕಿನಿಂದ ಕಾಂಗ್ರೆಸ್ ಪಕ್ಷದ ನಿಯೋಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ. ಬೆಂಗಳೂರಿನಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸದಾಶಿವ ನಗರದಲ್ಲಿರುವ ನಿವಾಸಕ್ಕೆ ತೆರಳಿದ ನಿಯೋಗವು ಖರ್ಗೆ ಅವರನ್ನು ಭೇಟಿಯಾದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ನಿಯೋಗದ ಉಸ್ತುವಾರಿ ವಹಿಸಿದ್ದ ವಾಯ್.ಎಚ್.ವಿಜಯಕರ್