Let us, as Kannadigas, cultivate Kannada pride: Go.Ru.Cha

ಕನ್ನಡಿಗರಾದ ನಾವು ಕನ್ನಡಾಭಿಮಾನ ಬೆಳೆಸಿಕೊಳ್ಳೋಣ: ಗೊ.ರು.ಚ

ಕನ್ನಡಿಗರಾದ ನಾವು ಕನ್ನಡಾಭಿಮಾನ ಬೆಳೆಸಿಕೊಳ್ಳೋಣ: ಗೊ.ರು.ಚ

ರಾಯಚೂರು: ಕನ್ನಡಿಗರಾದ ನಾವು ಕನ್ನಡ ಸಾಹಿತ್ಯ ಒಲವು ಬೆಳೆಸಿಕೊಂಡು ಭಾಷಾ ಪ್ರೇಮವನ್ನು ಮೆರೆಯುವಂತಾಗಬೇಕು ಎಂದು ಹಿರಿಯ ಸಾಹಿತಿ ನಾಡೋಜ ಡಾ.ಗೊ.ರು.ಚನ್ನಬಸಪ್ಪ ಅವರು ಹೇಳಿದರು.

ಮಾ.6ರ ಗುರುವಾರ ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ನಡೆದ ರಾಯಚೂರು ತಾಲ್ಲೂಕು ಆರನೇ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

ಕನ್ನಡಿಗರಾದ ನಾವು ಆತ್ಮ ವಿಮರ್ಶೆ ಮಾಡಿಕೊಂಡು ಕಳೆದು ಹೋಗುತ್ತಿರುವ ನಮ್ಮನ್ನು ನಾವು ಹುಡಕಿಕೊಳ್ಳಲು ಸಮ್ಮೇಳನಗಳು ಸಹಕಾರಿಯಾಗಲಿವೆ. ಕನ್ನಡ ಸಾಹಿತ್ಯ ಸಮ್ಮೇಳನಗಳು ಸಾಂಸ್ಕೃತಿಕ ಜಾತ್ರೆಗಳಾಗಿದ್ದು, ಪರಸ್ಪರ ಮಾನವ ಸಂಬಂಧ ಬೆಸೆಯುವ ಸಾಹಿತ್ಯ ಜಾತ್ರೆಗಳಾಗಿವೆ ಎಂದರು.
ಕನ್ನಡ ಸಾಹಿತ್ಯ ಪರಿಷತ್ ಅತ್ಯಂತ ಹಳೆಯ ಸಂಸ್ಥೆಯಾಗಿದೆ. ಇದರಿಂದ ನಡೆಯುವ ಸಾಹಿತ್ಯ ಸಮ್ಮೇಳನಗಳು ಇದೀಗ ತಾಲೂಕು ಕೇಂದ್ರಗಳಿಗೂ ವಿಸ್ತರಿಸಿರುವುದು ವಿಶೇಷ ಎಂದರು. ನೂರು ಜನರ ಸದಸ್ಯರಿದ್ದ ಪರಿಷತ್ ಇಂದು ಐದು ಲಕ್ಷಕ್ಕೂ ಅಧಿಕ ಸದಸ್ಯತ್ವ ಪಡೆದು ಜಗತ್ತಿನ ವಿವಿಧೆಡೆಯೂ ಸದಸ್ಯರನ್ನು ಹೊಂದಿರುವದು ಹೆಮ್ಮೆಯ ವಿಚಾರ ಎಂದರು.

ನಾವೀಗ ಸಾಹಿತ್ಯ ಪರಿಷತ್‌ನ ಶತಮಾನೋತ್ಸವದ ಸಂಭ್ರಮದಲ್ಲಿದ್ದೇವೆ. ರಾಜಕಾರಣಿಗಳಲ್ಲಿ, ಧರ್ಮಗುರುಗಳಲ್ಲಿ ಸಹ ಸಾಹಿತ್ಯಾಸಕ್ತಿ ಬೆಳೆಸುವ ಕಾರ್ಯವನ್ನು ಇಂತಹ ಸಮ್ಮೇಳನಗಳು ಮಾಡುತ್ತಿರುವುದು ಹೆಗ್ಗಳಿಕೆಯಾಗಿದೆ. ಹೀಗೆ ಎಲ್ಲರನ್ನೂ ಒಳಗೊಂಡು ಸಾಹಿತ್ಯ ಪರಿಷತ್ ಮುನ್ನಡೆಯಬೇಕಿದೆ ಎಂದರು.

ವಚನ ಸಾಹಿತ್ಯವು ಪರ್ಯಾಯ ಸಂಸ್ಕೃತಿಯನ್ನು ಹುಟ್ಟುಹಾಕಿದೆ. ಸಾಹಿತ್ಯವು ಜನ ಸಂಕಷ್ಟಕ್ಕೆ, ನೋವಿಗೆ ಪರಿಹಾರ ಹುಡುಕುವಂತಾಗಬೇಕು. ರಾಜ್ಯ ಸರ್ಕಾರವು ಪುಸ್ತಕ ಓದುವ ಅಭಿರುಚಿ, ವೈಚಾರಿಕ ಅಭಿಪ್ರಾಯಗಳಿಗೆ ಒಲವು ತೋರಿಸುತ್ತಿರುವುದು ಸಮಧಾನಕರ ಬೆಳವಣಿಗೆಯಾಗಿದೆ ಎಂದರು.

ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಹೋರಾಟಕ್ಕೆ ತಾವು ಬೆಂಬಲಿಸುವುದಾಗಿ ಹೇಳಿದರು.

ಇದೇ ಸಂದರ್ಭದಲ್ಲಿ ಕಿಲ್ಲೆ ಬೃಹನ್ಮಠದ ಶ್ರೀಶಾಂತಮಲ್ಲ ಶಿವಾಚಾರ್ಯರು, ಸಂಸದರಾದ ಜಿ.ಕುಮಾರನಾಯಕ, ಮಹಾನಗರ ಪಾಲಿಕೆಯ ಮಹಾಪೌರರಾದ ನರಸಮ್ಮ ನರಸಿಂಹಲು ಮಾಡಗಿರಿ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ರಂಗಣ್ಣ ಪಾಟೀಲ್ ಅಳ್ಳುಂಡಿ, ರಾಯಚೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ವೆಂಕಟೇಶ ಬೇವಿನಬೆಂಚಿ, ಸಮ್ಮೇಳನಾಧ್ಯಕ್ಷರಾದ ಅಯ್ಯಪ್ಪಯ್ಯ ಹುಡಾ, ಮಹಾನಗರ ಪಾಲಿಕೆಯ ಸದಸ್ಯರಾದ ಜಯಣ್ಣ, ಐದನೇ ಸಾಹಿತ್ಯ ಸಮ್ಮೇಳನಾಧ್ಯಕ್ಷ ಬಾಬು ಬಂಡಾರಿಗಲ್, ಹಿರಿಯ ಪತ್ರಕರ್ತರಾದ ಬಸವರಾಜ ಸ್ವಾಮಿ, ಅರವಿಂದ ಕುಲಕರ್ಣಿ, ಚನ್ನಬಸವಣ್ಣ, ಸಾಹಿತಿಗಳಾದ ಬಾಬು ಬಂಢಾರಿಗಲ್, ಭಗತರಾಜ ನಿಜಾಮಕಾರಿ, ನಾಗರಾಜ ಮಸ್ಕಿ, ತಾಯಪ್ಪ ಹೊಸೂರು, ಜಿ.ಸುರೇಶ ಇದ್ದರು.

Latest News

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ;                                                                                 ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ; ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಮುದ್ದೇಬಿಹಾಳ : ಪಟ್ಟಣದ ಅಭ್ಯುದಯ ಪಿಯು ಸೈನ್ಸ್ ಕಾಲೇಜಿನ ದ್ವಿತೀಯ ಪಿಯುಸಿ ಫಲಿತಾಂಶ ಶೇ.100ರಷ್ಟಾಗಿದೆ.ಪರೀಕ್ಷೆಗೆ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS  ವಿದ್ಯಾರ್ಥಿಗಳ ಸನ್ಮಾನ                                                                         ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS ವಿದ್ಯಾರ್ಥಿಗಳ ಸನ್ಮಾನ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಮುದ್ದೇಬಿಹಾಳ : ಮುದ್ದೇಬಿಹಾಳ ತಾಲ್ಲೂಕು ಗುರುತಿಸಿಕೊಳ್ಳುವುದೇ ನಾಗರಬೆಟ್ಟದ ಶಿಕ್ಷಣ ಸಂಸ್ಥೆಯ ಶೈಕ್ಷಣಿಕ ಸಾಧನೆಯ ಕಾರಣಕ್ಕಾಗಿ.ಈ ಭಾಗದಲ್ಲಿ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ ಎಂದು ಸಮಾಜ ಸೇವಕ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಸೈನ್ಸ್ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಆಕ್ಸಫರ್ಡ್ ಪಾಟೀಲ್ಸ್ ಜೀನಿಯಸ್ ಅವಾರ್ಡ್ ಸ್ಪರ್ಧೆಯಲ್ಲಿ ಅವರು ಮಾತನಾಡಿದರು. ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳಿಗೆ ಸಂಸ್ಕಾರ,ಸoಸ್ಕೃತಿ,ಪರoಪರೆ ನೀಡುವಲ್ಲಿ ನಾವು ಮರೆತಿದ್ದೇವೆ.ಅದನ್ನು ನೀಡುವ ಕಾರ್ಯ