Let's live selflessly on the Earth with the award of the Eco Protector Award: Balarama Kattimani

ಪರಿಸರ ರಕ್ಷಕ” ಪ್ರಶಸ್ತಿ ಪ್ರದಾನ ಭೂಮಿ ಮೇಲೆ ಸ್ವಾರ್ಥವಿಲ್ಲದೇ ಬದುಕು ನಡೆಸೋಣ: ಬಲರಾಮ ಕಟ್ಟಿಮನಿ

ಪರಿಸರ ರಕ್ಷಕ” ಪ್ರಶಸ್ತಿ ಪ್ರದಾನ ಭೂಮಿ ಮೇಲೆ ಸ್ವಾರ್ಥವಿಲ್ಲದೇ ಬದುಕು ನಡೆಸೋಣ: ಬಲರಾಮ ಕಟ್ಟಿಮನಿ

ಮುದ್ದೇಬಿಹಾಳ : ಭೂಮಿಯ ಮೇಳೆ ಮನುಷ್ಯ ಸ್ವಾರ್ಥವಿಲ್ಲದ ಜೀವನ ನಡೆಸಬೇಕು. ಈ ಭೂಮಿಯ ಮೇಲೆ ಮನುಷ್ಯನಿಗೆ ಇರುವಷ್ಟೇ ಹಕ್ಕು ಪ್ರಾಣಿ, ಪಕ್ಷಿಗಳಿಗೂ ಇದೆ ಎಂಬುದನ್ನು ಅರಿತುಕೊಂಡು ಜೀವನ ನಡೆಸಬೇಕು ಎಂದು ತಹಶೀಲ್ದಾರ್ ಬಲರಾಮ ಕಟ್ಟಿಮನಿ ಹೇಳಿದರು.

ಪಟ್ಟಣದ ಹುಡ್ಕೋದ ಹಸಿರು ತೋರಣ ಉದ್ಯಾನವನದಲ್ಲಿ ಗುರುವಾರ ಹಸಿರು ತೋರಣ ಗೆಳೆಯರ ಬಳಗ, ಅರಣ್ಯ ಇಲಾಖೆ, ಪುರಸಭೆ ಮತ್ತು ತಾಲ್ಲೂಕು ಆಡಳಿತದ ಸಂಯುಕ್ತಾಶ್ರದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕೊರೊನಾ ಸಂಕಷ್ಟದ ಸಮಯದಲ್ಲಿ ಆಮ್ಲಜನಕದ ಕೊರತೆಯಿಂದ ಲಕ್ಷಾಂತರ ಜನ ಪ್ರಾಣ ಕಳೆದುಕೊಂಡ ಘಟನೆ ಕಣ್ಣೆದುರಿಗೇ ಇದೆ. ದೊಡ್ಡ ನಗರಗಳಲ್ಲಿ ಆಮ್ಲಜನಕವನ್ನು ಹಣ ಕೊಟ್ಟು ಕೊಳ್ಳುವ ಪರಿಸ್ಥಿತಿ ಇದೆ ಎಂದು ನಾವು ಅರಿಯಬೇಕು ಎಂದರು.

ಪ್ರಾದೇಶಿಕ ವಲಯ ಅರಣ್ಯಾಧಿಕಾರಿ ಬಸನಗೌಡ ಬಿರಾದಾರ ಮಾತನಾಡಿ, ಹಸಿರು ತೋರಣ ಗೆಳೆಯರ ಬಳಗದ ಸದಸ್ಯರು ಬಹಳಷ್ಟು ಸಂಘಟಿತರಾಗಿ ಸಮಾಜಮುಖಿ ಕೆಲಸ ಮಾಡುತ್ತಿದ್ದಾರೆ. ಇದು ಜಿಲ್ಲೆಗೇ ಮಾದರಿಯಾಗಿದೆ ಎಂದರು.

ಸಾಮಾಜಿಕ ವಲಯ ಅರಣ್ಯಾಧಿಕಾರಿ ಗಿರೀಶ ಆಲಕುಡೆ, ಪುರಸಭೆ ಅಧ್ಯಕ್ಷ ಮಹಿಬೂಬ ಗೊಳಸಂಗಿ, ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಸದಸ್ಯೆ ಸಂಗಮ್ಮ ದೇವರಳ್ಳಿ ಮಾತನಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ, ಕೆಬಿಜೆನ್ನೆಲ್ ವಿಭಾಗದ ಉಪ ಅರಣ್ಯಾಧಿಕಾರಿ ಶ್ರೀಕಾಂತ ಘೋರ್ಪಡೆ,ಹಸಿರು ತೋರಣ ಬಳಗದ ಅಧ್ಯಕ್ಷ ಬಿ.ಎಚ್.ಬಳಬಟ್ಟಿ ಇದ್ದರು.

“ಪರಿಸರ ರಕ್ಷಕ” ಪ್ರಶಸ್ತಿಗೆ ಆಯ್ಕೆಯಾದ ಶರಣಪ್ಪ ನಾಗಾವಿ, ಅನಿಲಕುಮಾರ ಚಲವಾದಿ, ಶರಣಬಸಪ್ಪ ನೆಲವಾಸಿ, ಸಿದ್ದನಗೌಡ ಲಿಂಗದಳ್ಳಿ ಅವರನ್ನು ಸನ್ಮಾನಿಸಲಾಯಿತು. ಹಸಿರು ತೋರಣ, ಮನೆಯಲ್ಲಿ ಮಹಾಮನೆ, ಪುರಸಭೆ, ಅರಣ್ಯ ಇಲಾಖೆ, ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಕಾರ್ಯಕ್ರಮದ ಆರಂಭದಲ್ಲಿ ಗಿಡಗಳನ್ನು ನೆಟ್ಟು ನೀರೆರೆಯುವ ಮೂಲಕ ವಿಶ್ವ ಪರಿಸರ ದಿನಾಚರಣೆಗೆ ಚಾಲನೆ ನೀಡಲಾಯಿತು. ಪ್ರೇರಣಾ ಬೆಳಗಲ್ಲ ಪರಿಸರ ಗೀತೆ ಹಾಡಿದಳು. ಅಮರೇಶ ಗೂಳಿ ಸ್ವಾಗತಿಸಿದರು. ವೀರೇಶ ಢವಳಗಿ ಸನ್ಮಾನಿತರನ್ನು ಪರಿಚಯಿಸಿದರು. ಸಂಚಾಲಕ ಮಹಾಬಲೇಶ್ವರ ಗಡೇದ ನಿರೂಪಿಸಿದರು. ರವಿ ಗೂಳಿ ವಂದಿಸಿದರು.

Latest News

ಗ್ರಾಮದೇವತೆ ಜಾತ್ರೆಯ ನಿಮಿತ್ಯ ಸ್ಪರ್ಧೆ: ರಂಗೋಲಿ ಸ್ಪರ್ಧೆ ವಿಜೇತರಿಗೆ ನಗದು ಬಹುಮಾನ

ಗ್ರಾಮದೇವತೆ ಜಾತ್ರೆಯ ನಿಮಿತ್ಯ ಸ್ಪರ್ಧೆ: ರಂಗೋಲಿ ಸ್ಪರ್ಧೆ ವಿಜೇತರಿಗೆ ನಗದು ಬಹುಮಾನ

ಮುದ್ದೇಬಿಹಾಳ : ಪಟ್ಟಣದ ಗ್ರಾಮ ದೇವತೆ ಜಾತ್ರೆಯ ಅಂಗವಾಡಿ ಅಂಬೇಡ್ಕರ್ ಸಭಾಂಗಣದಲ್ಲಿ ಮಹಿಳೆಯರಿಗಾಗಿ ಏರ್ಪಡಿಸಿದ್ದ

ಕ್ರೀಡಾಪಟುಗಳಿಗೆ ಅನ್ಯಾಯವಾಗದಂತೆ ಕಾರ್ಯನಿರ್ವಹಿಸಿ-ಸಾವಳಗಿ

ಕ್ರೀಡಾಪಟುಗಳಿಗೆ ಅನ್ಯಾಯವಾಗದಂತೆ ಕಾರ್ಯನಿರ್ವಹಿಸಿ-ಸಾವಳಗಿ

ಮುದ್ದೇಬಿಹಾಳ : ಕ್ರೀಡಾಪಟುಗಳನ್ನು ಅವರ ಕೌಟುಂಬಿಕ ಹಿನ್ನೆಲೆ, ಜಾತಿ, ಮತದ ಆಧಾರದ ಮೇಲೆ ಗುರುತಿಸದೇ

ಪರಿಸರ ದಿನಾಚರಣೆ ಅಂಗವಾಗಿ ಮಗುವಿಗೊಂದು ಮರ ಕಾರ್ಯಕ್ರಮ

ಪರಿಸರ ದಿನಾಚರಣೆ ಅಂಗವಾಗಿ ಮಗುವಿಗೊಂದು ಮರ ಕಾರ್ಯಕ್ರಮ

ಕುಳಗೇರಿ ಕ್ರಾಸ್: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಸೋಮನಕೊಪ್ಪದಲ್ಲಿ

ಆರ್‌ಸಿಬಿಗೆ ಕಪ್: ಮೇರೆ ಮೀರಿದ ಅಭಿಮಾನಿಗಳ ಉತ್ಸಾಹ

ಆರ್‌ಸಿಬಿಗೆ ಕಪ್: ಮೇರೆ ಮೀರಿದ ಅಭಿಮಾನಿಗಳ ಉತ್ಸಾಹ

ಸಂಭ್ರಮಾಚರಣೆ ವೇಳೆ ಪೊಲೀಸರಿಂದ ಲಾಠಿ ಪ್ರಹಾರ ಮುದ್ದೇಬಿಹಾಳ : ಬೆಂಗಳೂರಿನ ರಾಯಲ್ ಚಾಲೆಂರ‍್ಸ್ ತಂಡ

ಪೊಲೀಸರಿಂದ ಲಘುಲಾಠಿ ಪ್ರಹಾರ: ಡಿಜೆ ಜಾನಪದ ಜಾತ್ರೆಗೆ ಹರಿದು ಬಂದ ಜನಸಾಗರ

ಪೊಲೀಸರಿಂದ ಲಘುಲಾಠಿ ಪ್ರಹಾರ: ಡಿಜೆ ಜಾನಪದ ಜಾತ್ರೆಗೆ ಹರಿದು ಬಂದ ಜನಸಾಗರ

ಮುದ್ದೇಬಿಹಾಳ : ಪಟ್ಟಣದ ತಾಲ್ಲೂಕು ಪಂಚಾಯತಿ ಕ್ವಾರ್ಟರ್ಸ್ನಲ್ಲಿರುವ ಗ್ರಾಮದೇವತೆ ವೇದಿಕೆಯಲ್ಲಿ ಶನಿವಾರ ರಾತ್ರಿ ಹಮ್ಮಿಕೊಂಡಿದ್ದ ಜಾನಪದ ಜಾತ್ರೆ ಕಾರ್ಯಕ್ರಮಕ್ಕೆ ಜನಸಾಗರವೇ ಹರಿದು ಬಂದಿತು. ಸಂಘಟಕರ ನಿರೀಕ್ಷೆಗೂ ಮೀರಿ ಜನರು ಆಗಮಿಸಿದ್ದರಿಂದ ಕಾರ್ಯಕ್ರಮಕ್ಕೆಂದು ಹಾಕಿದ್ದ ಎಲ್‌ಇಡಿ ಪರದೆಗಳ ಸಂಪರ್ಕ ಕಡಿತಗೊಂಡಿತು. ಅಲ್ಲದೇ ಕೆಲವರು ಜನರೇಟರ್ ಮೇಲೆ ಹತ್ತಿ ಕೂತಿದ್ದರಿಂದ ಕಾರ್ಯಕ್ರಮವನ್ನು ಎರಡು ಬಾರಿ ಮುಂದೂಡಿ ಮತ್ತೆ ಆರಂಭಿಸಲಾಯಿತು. ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಸಮೀತಿಯ ಪ್ರಮುಖರಾದ ನೇತಾಜಿ ನಲವಡೆ, ಸಂಗಮೇಶ ನಾಲತವಾಡ,

ಪ್ರತಿಭಾನ್ವೇಷಣೆ, ಸಾಧಕರ ಸನ್ಮಾನ: ಮಕ್ಕಳ ಕೈಯ್ಯಲ್ಲಿ ಮೊಬೈಲ್ ಬದಲು ಪುಸ್ತಕ ಕೊಡಿ

ಪ್ರತಿಭಾನ್ವೇಷಣೆ, ಸಾಧಕರ ಸನ್ಮಾನ: ಮಕ್ಕಳ ಕೈಯ್ಯಲ್ಲಿ ಮೊಬೈಲ್ ಬದಲು ಪುಸ್ತಕ ಕೊಡಿ

ಮುದ್ದೇಬಿಹಾಳ : ಮಕ್ಕಳ ಕೈಯ್ಯಲ್ಲಿ ಮೊಬೈಲ್ ಕೊಡದೇ ಪುಸ್ತಕ ಕೊಟ್ಟರೆ ಅವರ ಭವಿಷ್ಯ ಉಜ್ವಲವಾಗುತ್ತದೆ ಎಂದು ಲೊಟಗೇರಿಯ ಗುರುಮೂರ್ತಿ ಕಣಕಾಲಮಠ ಸ್ವಾಮೀಜಿ ಹೇಳಿದರು. ಪಟ್ಟಣದ ಎಸ್.ಎಸ್.ಶಿವಾಚಾರ್ಯ ಪದವಿ ಪೂರ್ವ ಕಾಲೇಜಿನಲ್ಲಿ ಭಾನುವಾರ ಸ್ವಾಮಿ ವಿವೇಕಾನಂದ ಇಂಟರ್‌ನ್ಯಾಶನಲ್ ಸ್ಕೂಲ್ ಹಾಗೂ ಚಾಲೆಂಜ್ ನವೋದಯ ಕೋಚಿಂಗ ಕ್ಲಾಸಿಸ್ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಾನ್ವೇಷಣೆ ಪರೀಕ್ಷೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಕ್ಕಳಿಗೆ ಶಾಲೆಗೆ ಹೆಸರು ನೋಂದಣಿ ಮಾಡಿಬಿಟ್ಟರೆ ಆಯಿತು ಎಂಬ ಸ್ವಭಾವದಲ್ಲಿ