Let's live selflessly on the Earth with the award of the Eco Protector Award: Balarama Kattimani

ಪರಿಸರ ರಕ್ಷಕ” ಪ್ರಶಸ್ತಿ ಪ್ರದಾನ ಭೂಮಿ ಮೇಲೆ ಸ್ವಾರ್ಥವಿಲ್ಲದೇ ಬದುಕು ನಡೆಸೋಣ: ಬಲರಾಮ ಕಟ್ಟಿಮನಿ

ಪರಿಸರ ರಕ್ಷಕ” ಪ್ರಶಸ್ತಿ ಪ್ರದಾನ ಭೂಮಿ ಮೇಲೆ ಸ್ವಾರ್ಥವಿಲ್ಲದೇ ಬದುಕು ನಡೆಸೋಣ: ಬಲರಾಮ ಕಟ್ಟಿಮನಿ

ಮುದ್ದೇಬಿಹಾಳ : ಭೂಮಿಯ ಮೇಳೆ ಮನುಷ್ಯ ಸ್ವಾರ್ಥವಿಲ್ಲದ ಜೀವನ ನಡೆಸಬೇಕು. ಈ ಭೂಮಿಯ ಮೇಲೆ ಮನುಷ್ಯನಿಗೆ ಇರುವಷ್ಟೇ ಹಕ್ಕು ಪ್ರಾಣಿ, ಪಕ್ಷಿಗಳಿಗೂ ಇದೆ ಎಂಬುದನ್ನು ಅರಿತುಕೊಂಡು ಜೀವನ ನಡೆಸಬೇಕು ಎಂದು ತಹಶೀಲ್ದಾರ್ ಬಲರಾಮ ಕಟ್ಟಿಮನಿ ಹೇಳಿದರು.

ಪಟ್ಟಣದ ಹುಡ್ಕೋದ ಹಸಿರು ತೋರಣ ಉದ್ಯಾನವನದಲ್ಲಿ ಗುರುವಾರ ಹಸಿರು ತೋರಣ ಗೆಳೆಯರ ಬಳಗ, ಅರಣ್ಯ ಇಲಾಖೆ, ಪುರಸಭೆ ಮತ್ತು ತಾಲ್ಲೂಕು ಆಡಳಿತದ ಸಂಯುಕ್ತಾಶ್ರದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕೊರೊನಾ ಸಂಕಷ್ಟದ ಸಮಯದಲ್ಲಿ ಆಮ್ಲಜನಕದ ಕೊರತೆಯಿಂದ ಲಕ್ಷಾಂತರ ಜನ ಪ್ರಾಣ ಕಳೆದುಕೊಂಡ ಘಟನೆ ಕಣ್ಣೆದುರಿಗೇ ಇದೆ. ದೊಡ್ಡ ನಗರಗಳಲ್ಲಿ ಆಮ್ಲಜನಕವನ್ನು ಹಣ ಕೊಟ್ಟು ಕೊಳ್ಳುವ ಪರಿಸ್ಥಿತಿ ಇದೆ ಎಂದು ನಾವು ಅರಿಯಬೇಕು ಎಂದರು.

ಪ್ರಾದೇಶಿಕ ವಲಯ ಅರಣ್ಯಾಧಿಕಾರಿ ಬಸನಗೌಡ ಬಿರಾದಾರ ಮಾತನಾಡಿ, ಹಸಿರು ತೋರಣ ಗೆಳೆಯರ ಬಳಗದ ಸದಸ್ಯರು ಬಹಳಷ್ಟು ಸಂಘಟಿತರಾಗಿ ಸಮಾಜಮುಖಿ ಕೆಲಸ ಮಾಡುತ್ತಿದ್ದಾರೆ. ಇದು ಜಿಲ್ಲೆಗೇ ಮಾದರಿಯಾಗಿದೆ ಎಂದರು.

ಸಾಮಾಜಿಕ ವಲಯ ಅರಣ್ಯಾಧಿಕಾರಿ ಗಿರೀಶ ಆಲಕುಡೆ, ಪುರಸಭೆ ಅಧ್ಯಕ್ಷ ಮಹಿಬೂಬ ಗೊಳಸಂಗಿ, ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಸದಸ್ಯೆ ಸಂಗಮ್ಮ ದೇವರಳ್ಳಿ ಮಾತನಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ, ಕೆಬಿಜೆನ್ನೆಲ್ ವಿಭಾಗದ ಉಪ ಅರಣ್ಯಾಧಿಕಾರಿ ಶ್ರೀಕಾಂತ ಘೋರ್ಪಡೆ,ಹಸಿರು ತೋರಣ ಬಳಗದ ಅಧ್ಯಕ್ಷ ಬಿ.ಎಚ್.ಬಳಬಟ್ಟಿ ಇದ್ದರು.

“ಪರಿಸರ ರಕ್ಷಕ” ಪ್ರಶಸ್ತಿಗೆ ಆಯ್ಕೆಯಾದ ಶರಣಪ್ಪ ನಾಗಾವಿ, ಅನಿಲಕುಮಾರ ಚಲವಾದಿ, ಶರಣಬಸಪ್ಪ ನೆಲವಾಸಿ, ಸಿದ್ದನಗೌಡ ಲಿಂಗದಳ್ಳಿ ಅವರನ್ನು ಸನ್ಮಾನಿಸಲಾಯಿತು. ಹಸಿರು ತೋರಣ, ಮನೆಯಲ್ಲಿ ಮಹಾಮನೆ, ಪುರಸಭೆ, ಅರಣ್ಯ ಇಲಾಖೆ, ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಕಾರ್ಯಕ್ರಮದ ಆರಂಭದಲ್ಲಿ ಗಿಡಗಳನ್ನು ನೆಟ್ಟು ನೀರೆರೆಯುವ ಮೂಲಕ ವಿಶ್ವ ಪರಿಸರ ದಿನಾಚರಣೆಗೆ ಚಾಲನೆ ನೀಡಲಾಯಿತು. ಪ್ರೇರಣಾ ಬೆಳಗಲ್ಲ ಪರಿಸರ ಗೀತೆ ಹಾಡಿದಳು. ಅಮರೇಶ ಗೂಳಿ ಸ್ವಾಗತಿಸಿದರು. ವೀರೇಶ ಢವಳಗಿ ಸನ್ಮಾನಿತರನ್ನು ಪರಿಚಯಿಸಿದರು. ಸಂಚಾಲಕ ಮಹಾಬಲೇಶ್ವರ ಗಡೇದ ನಿರೂಪಿಸಿದರು. ರವಿ ಗೂಳಿ ವಂದಿಸಿದರು.

Latest News

Free Slots Enjoy 32,178+ Slot Demonstrations Galera Bet app No Install

BlogsWhat are the secret differences when considering totally free ports and

Troll casino Eucasino 50 free spins Seekers Position ️ Play On line Free

ContentCasino Eucasino 50 free spins | Blood Moonlight WildsHigh-Investing SignsFederal CasinoDon’t

ಗ್ರಾಪಂ ಮಟ್ಟದ ಸೇವೆ ಅಸ್ತವ್ಯಸ್ತ ಸಾಧ್ಯತೆ:ಗ್ರಾ.ಪಂ ನೌಕರರನ್ನು ಸಮೀಕ್ಷೆಯಿಂದ ಕೈಬಿಡಲು ಒತ್ತಾಯ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ,ಶೈಕ್ಷಣಿಕ ಹಾಗೂ ಆರ್ಥಿಕ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ತಾಳಿಕೋಟಿ : ತಂದೆ ತಾಯಿ ಹುಟ್ಟಿನಿಂದ ನೀಡುವ ಸಂಸ್ಕಾರವು ಮಗುವಿನ ಭವಿಷ್ಯ ನಿರ್ಧರಿಸುತ್ತದೆ. ಈ ಮಣ್ಣಿನ ಸಂಸ್ಕೃತಿಯನ್ನು ಅಳವಡಿಸುವಂತಹ ಕಾರ್ಯ ಮಾಡಿದರೆ ಪ್ರತಿ ಮನೆಯಲ್ಲಿಯೂ ರಾಜ ಮಹಾರಾಜರನ್ನು ಕಾಣಲು ಸಾಧ್ಯವಾಗಲಿದೆ.ಬಿದ್ದಾಗ ಕೈ ಹಿಡಿದೆತ್ತಿಕೊಂಡು ಜೋಪಾನ ಮಾಡುವ ಸಂಸ್ಕಾರವನ್ನು ಮಕ್ಕಳಲ್ಲಿ ಪಾಲಕರು ಬಿತ್ತಬೇಕು ಎಂದು ಕಾರ್ಕಳದ ಖ್ಯಾತ ವಾಗ್ಮಿ ಅಕ್ಷಯಾ ಗೋಖಲೆ ಹೇಳಿದರು. ತಾಳಿಕೋಟಿ ತಾಲ್ಲೂಕಿನ ಮೈಲೇಶ್ವರದಲ್ಲಿ ಶನಿವಾರ ಬ್ರಿಲಿಯಂಟ್ ಕಲಾ ವೈಭವ-2026 ಕಾರ್ಯಕ್ರಮದ ಎರಡನೇ ದಿನದ ಕಾರ್ಯಕ್ರಮದಲ್ಲಿ ಅವರು ವಿಶೇಷ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ ಬಡವನ ಸ್ನೇಹ ಮಾಡಿದರೆ ಆತ ಬದುಕಿನ ಅನುಭವದ ಪಾಠ ಹೇಳುತ್ತಾನೆ ಎಂದು ಹಿರಿಯ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಗಣೇಶ ನಗರದಲ್ಲಿ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದಾಶಿವ ಮಠ ಹಾಗೂ ಮೊಹ್ಮದ ರಫೀಕ ಶಿರೋಳ ಅವರ ತಂದೆಯವರು ನನಗೆ ಆಪ್ತರು.ಅವರ