ಪ್ರಿಯತಮನಿಗಾಗಿ ಮನೆ ಬಿಟ್ಟು ಓಡಿ ಬಂದ ₹12 ಕೋಟಿ ಆಸ್ತಿ ಒಡತಿ!

ಪ್ರಿಯತಮನಿಗಾಗಿ ಮನೆ ಬಿಟ್ಟು ಓಡಿ ಬಂದ ₹12 ಕೋಟಿ ಆಸ್ತಿ ಒಡತಿ!


ಬೆಳಗಾವಿ: ಪ್ರೀತಿಸಿ ಮದುವೆಯಾದ ಜೋಡಿ ಭದ್ರತೆ ನೀಡುವಂತೆ ಎಸ್​ಪಿ ಮೊರೆ ಹೋಗಿದ್ದಾರೆ.

ಬೆಂಗಳೂರು (Bengaluru) ಮೂಲದ ಯುವತಿ ಪ್ರಿಯಾಂಕಾ ಹಾಗೂ ಬೆಳಗಾವಿ ಮೂಲದ ಯುವಕ ರೋಹಿತ್ ದಾಂಪತ್ಯ ಜೀವನಕ್ಕೆ ಕಾಲಿಟ್ಟು ನವದಂಪತಿಗಳಾಗಿದ್ದಾರೆ. ಖಾನಾಪುರದ ದೇವಸ್ಥಾನವೊಂದರಲ್ಲಿ (Temple) ವೈವಾಹಿತ ಜೀವನಕ್ಕೆ (Marriage Life) ಕಾಲಿಟ್ಟಿದ್ದ ಜೋಡಿ ನೇರ ಎಸ್​ಪಿ ಕಚೇರಿ ಆಗಮಿಸಿ ರಕ್ಷಣೆ ನೀಡುವಂತೆ ಮನವಿ ಮಾಡಿದ್ದಾರೆ.

ಬೆಂಗಳೂರು ಮೂಲದ ಪ್ರಿಯಾಂಕಾ ಮೂರು ದಿನಗಳ ಹಿಂದೆಯಷ್ಟೇ ಮನೆ ಬಿಟ್ಟು ಪ್ರಿಯಕರನಿಗಾಗಿ ಬೆಳಗಾವಿಗೆ ಆಗಮಿಸಿದ್ದಾಳೆ. ಸದ್ಯ ರೋಹಿತ್, ಕುಟುಂಬ ಸದಸ್ಯರ ಸಮ್ಮುಖದಲ್ಲಿ ಪ್ರಿಯಾಂಕಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಅಂದಹಾಗೇ, ಪ್ರಿಯಾಂಕಾಗೆ ಬೆಂಗಳೂರಲ್ಲಿ ಸುಮಾರು 12 ಕೋಟಿ ಮೌಲ್ಯದ ಆಸ್ತಿ ಹೊಂದಿದ್ದಾರಂತೆ. ಆಕೆಯ ಪೋಷಕರು ಚಿಕ್ಕವಯಸ್ಸಿನಲ್ಲಿರುವಾಗಲೇ ಸಾವನ್ನಪ್ಪಿದ್ದು, ಸೋದರ ಮಾವನ ಆಶ್ರಯದಲ್ಲಿ ಬೆಳೆದಿದ್ದರಂತೆ.

ಇನ್ನು, ಶಿವಮೊಗ್ಗ ‌ಹಾಗೂ ಬೆಂಗಳೂರಲ್ಲಿ ಪ್ರಿಯಂಕಾ ತಂದೆ ಆಸ್ತಿ ಹೊಂದಿದ್ದು, ಪ್ರಿಯಾಂಕಾಗೆ 18 ವರ್ಷ ತುಂಬಿದ ಬಳಿಕ ಈ ಎಲ್ಲಾ ಆಸ್ತಿಗಳು ಪ್ರಿಯಂಕಾ ಹೆಸರಿಗೆ ವರ್ಗಾವಣೆಯಾಗಿದೆಯಂತೆ. ಆದರೆ ಸೋದರ ಮಾವನ ಕಿರಿಕಿರಿಗೆ ಬೇಸತ್ತು ಪ್ರಿಯಾಂಕಾ ಪ್ರಿಯಕರ ಮನೆಗೆ ಬಂದಿದ್ದರಂತೆ. ಆದರೆ ಪ್ರಿಯಾಂಕಾ-ರೋಹಿತ್ ಮದುವೆಯಾಗದಂತೆ ತಡೆಯಲು ಆಕೆಯ ಸಹೋದರ ಮಾವನ ಮಗ ಕಿರುಕುಳ ನೀಡಿದ್ದ ಎಂದು ಆರೋಪಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಮದುವೆ ಬಳಿಕ ಬೆಳಗಾವಿ ಎಸ್ ಪಿ ಡಾ. ಭೀಮಾಶಂಕರ ಗುಳೇದ್ ಅವರನ್ನು ಭೇಟಿಯಾಗಿ ಭದ್ರತೆ ಒದಗಿಸುವಂತೆ ಮನವಿ ಮಾಡಿದ್ದಾರೆ. ಖಾನಾಪುರ ಪೊಲೀಸರಿಂದ ಸೂಕ್ತ ಭದ್ರತೆ ನೀಡುವ ಭರವಸೆಯನ್ನು ಎಸ್​ಪಿ ನೀಡಿದ್ದಾರೆ.

ಇನ್ ಸ್ಟಾದಲ್ಲಿ ಪರಿಚಯ, ಲವ್ !
ಇನ್ನು, ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಪ್ರಿಯಾಂಕಾ, ಇಂದು ದೇವಸ್ಥಾನದಲ್ಲಿ ಮದುವೆಯಾಗಿದ್ದೇವೆ. ನನ್ನ ಬಳಿ ಯಾವುದೇ ದಾಖಲೆ ಇಲ್ಲ. ಬೆಂಗಳೂರಿನಲ್ಲಿ ರಕ್ಷಣೆ ಬೇಕು ಎಂದರೇ ಕಮಿಷನರ್ ಅವರನ್ನು ಭೇಟಿ ಮಾಡಲು ಹೇಳಿದ್ದಾರೆ. ಆದ್ದರಿಂದ ಅವರಿಗೆ ರಕ್ಷಣೆ ನೀಡಲು ಮನವಿ ಮಾಡಿದ್ದೇನೆ. ಮನೆಯಲ್ಲಿ ನನ್ನನ್ನು ಗೃಹ ಬಂಧನದಲ್ಲಿ ಇಟ್ಟಿದ್ದರು. ಅಲ್ಲಿಂದ ನಾನು ಬೆಳಗಾವಿಗೆ ಬಂದೇ, ಖಾನಾಪುರಕ್ಕೆ ಹೋಗಿ ಅಲ್ಲಿಯೂ ಪೊಲೀಸರಿಗೆ ದೂರು ನೀಡಿದ್ದೇವು ಎಂದು ತಿಳಿಸಿದ್ದಾರೆ.

ಪ್ರಿಯಾಂಕಾ ಹಾಗೂ ರೋಹಿತ್ ಗೆ ಇನ್ ಸ್ಟಾದಲ್ಲಿ ಪರಿಚಯ ಆಗಿದ್ದು, ಮದುವೆ ನಿಮಿತ್ತ ಬೆಳಗಾವಿಗೆ ಬಂದ ವೇಳೆ ಆಕೆ ಆತನನ್ನು ಮೊದಲ ಬಾರಿಗೆ ಭೇಟಿ ಆಗಿದ್ದಳಂತೆ. ರೋಹಿತ್ ಮನೆಯವರ ಅಕ್ಕರೆ ಹಾಗೂ ಯುವಕನ ಪ್ರೀತಿಗೆ ಮೆಚ್ಚಿ ಆತನನ್ನೇ ಮದುವೆಯಾಗಬೇಕು ಅಂತ ನಿರ್ಧಾರ ಮಾಡಿದ್ದೆ ಎಂದು ಪ್ರಿಯಾಂಕಾ ತಿಳಿಸಿದ್ದಾರೆ.

ಬೆಳಗಾವಿ ಎಸ್​ಪಿ ಹೇಳಿದ್ದೇನು?
ಘಟನೆ ಬಗ್ಗೆ ಮಾಹಿತಿ ನೀಡಿದ ಎಸ್​ಪಿ ಭೀಮಾಶಂಕರ ಗುಳೇದ್ ಅವರು, ಕಚೇರಿಗೆ ಯುವಕ-ಯುವತಿ ಆಗಮಿಸಿದ್ದರು. ಪ್ರೀತಿಸಿ ಮದುವೆಯಾಗಿದ್ದೇವೆ, ನಮಗೆ ಕಾನೂನು ರಕ್ಷಣೆ ಬೇಕು ಎಂದು ಮನವಿ ಮಾಡಿದ್ದರು. ಇದರಂತೆ ಖಾನಾಪುರ ಪೊಲೀಸರಿಗೆ ಸೂಕ್ತ ರಕ್ಷಣೆ ನೀಡುವಂತೆ ಸೂಚನೆ ನೀಡಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ. ಒಂದು ತಿಂಗಳ ಹಿಂದೆಯೇ ಖಾನಾಪುರ ಪೊಲೀಸ್ ಠಾಣೆಯಲ್ಲಿ ಯುವತಿ ದೂರು ನೀಡಿದ್ದರು. ಆಕೆಯ ದಾಖಲೆಗಳು ಹಾಗೂ ಆಸ್ತಿ ವಿಚಾರದ ಬಗ್ಗೆ ದೂರು ನೀಡಿದ್ದರು. ಆ ವೇಳೆ ಸಂಬಂಧಿಗಳನ್ನು ಕರೆದು ಕೇಳಿದಾಗ ಅವರು ಯಾವುದೇ ದಾಖಲೆಗಳು ನಮ್ಮ ಬಳಿ ಇಲ್ಲ ಎಂದು ತಿಳಿಸಿದ್ದರಂತೆ. ಆದ್ದರಿಂದ ಯುವತಿಗೆ ಸಂಬಂಧಪಟ್ಟ ಶಾಲಾ-ಕಾಲೇಜುಗಳಿಂದ ಮತ್ತೊಮ್ಮೆ ದಾಖಲೆ ಪಡೆದುಕೊಳ್ಳಲು ಸೂಚನೆ ನೀಡಿದ್ದೇವೆ. ಆಸ್ತಿ ವಿಚಾರ ಸಿವಿಲ್ ಕೇಸ್ ಆಗಿದ್ದು, ಕೋರ್ಟ್​ ಗೆ ಅರ್ಜಿ ಸಲ್ಲಿಕೆ ಮಾಡಲು ಸೂಚನೆ ನೀಡಿದ್ದೇವೆ ಎಂದು ವಿವರಿಸಿದರು.

Latest News

ಫೆ.19 ರಂದು ನೌಕಾಪಡೆ ನಿವೃತ ಯೋಧ ಸತೀಶ ನಾಯ್ಕಗೆ ಅಭಿನಂದನಾ ಸಮಾರಂಭ

ಫೆ.19 ರಂದು ನೌಕಾಪಡೆ ನಿವೃತ ಯೋಧ ಸತೀಶ ನಾಯ್ಕಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : 15 ವರ್ಷಗಳ ಕಾಲ ನೌಕಾಪಡೆಯಲ್ಲಿ ಸೇವೆ ಸಲ್ಲಿಸಿ ಮರಳಿ ತವರಿಗೆ ಆಗಮಿಸುತ್ತಿರುವ

ಸುಡುಗಾಡ ಸಿದ್ಧರ ಕುಟುಂಬಗಳಿಗೆ ನೆರವು:                         ಸಿಎಂ ಪರಿಹಾರ ನಿಧಿಯಿಂದ ಆರು ಲಕ್ಷ ರೂ. ಪರಿಹಾರ ಧನ ಬಿಡುಗಡೆ

ಸುಡುಗಾಡ ಸಿದ್ಧರ ಕುಟುಂಬಗಳಿಗೆ ನೆರವು: ಸಿಎಂ ಪರಿಹಾರ ನಿಧಿಯಿಂದ ಆರು ಲಕ್ಷ ರೂ. ಪರಿಹಾರ ಧನ ಬಿಡುಗಡೆ

ಮುದ್ದೇಬಿಹಾಳ : ತಾಲ್ಲೂಕಿನ ಶಿರೋಳ ಗ್ರಾಮದ ಹತ್ತಿರ ಕಾಲುವೆಯಲ್ಲಿ ನ.11, 2025ರಂದು ಒಂದೇ ಕುಟುಂಬದ

ಶಿವರಾತ್ರಿ ಅಂಗವಾಗಿ ದಿನಸಿ ಕಿಟ್,ಬಟ್ಟೆ ವಿತರಣೆ:               ದಾನ ಕೊಡುವ ಪ್ರವೃತ್ತಿ ಬೆಳೆಸಿಕೊಳ್ಳಿ-ಕಾಶೀಬಾಯಿ ರಾಂಪೂರ

ಶಿವರಾತ್ರಿ ಅಂಗವಾಗಿ ದಿನಸಿ ಕಿಟ್,ಬಟ್ಟೆ ವಿತರಣೆ: ದಾನ ಕೊಡುವ ಪ್ರವೃತ್ತಿ ಬೆಳೆಸಿಕೊಳ್ಳಿ-ಕಾಶೀಬಾಯಿ ರಾಂಪೂರ

ಮುದ್ದೇಬಿಹಾಳ : ಸಮಾಜದಲ್ಲಿ ಸಾಕಷ್ಟು ಜನ ಸಂಪತ್ತು ಹೊಂದಿದವರಿದ್ದಾರೆ.ಆದರೆ ಕೊಡುವ ಮನಸ್ಸು ಎಲ್ಲರಲ್ಲೂ ಇರುವುದಿಲ್ಲ.ನಿಸ್ವಾರ್ಥದಿಂದ

ಅತೀ ಹೆಚ್ಚು ಮೊತ್ತಕ್ಕೆ ಬಿಡ್ ಮಾಡಿದ ಮೋಮಿನ: ಮುದ್ದೇಬಿಹಾಳ : ಸಂತೆ ಕರ 15 ಲಕ್ಷ ರೂ.ಗೆ ಹರಾಜು

ಅತೀ ಹೆಚ್ಚು ಮೊತ್ತಕ್ಕೆ ಬಿಡ್ ಮಾಡಿದ ಮೋಮಿನ: ಮುದ್ದೇಬಿಹಾಳ : ಸಂತೆ ಕರ 15 ಲಕ್ಷ ರೂ.ಗೆ ಹರಾಜು

ಮುದ್ದೇಬಿಹಾಳ : ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿರುವ ಜಾಗೆಯಲ್ಲಿ ದೈನಂದಿನ ಸಂತೆ ಕರ ವಸೂಲಿಗಾಗಿ ಮಂಗಳವಾರ

ಬಸವೇಶ್ವರ ಪತ್ತಿನ ಸಹಕಾರಿ ಸಂಘದ ಶಾಖೆ ಉದ್ಘಾಟನೆ: ಶ್ರಮಿಕ ಜನರ ಆರ್ಥಿಕ ಮಟ್ಟದ ಸುಧಾರಣೆಗೆ ಶ್ರಮಿಸಿ-ನಾಡಗೌಡ

ಬಸವೇಶ್ವರ ಪತ್ತಿನ ಸಹಕಾರಿ ಸಂಘದ ಶಾಖೆ ಉದ್ಘಾಟನೆ: ಶ್ರಮಿಕ ಜನರ ಆರ್ಥಿಕ ಮಟ್ಟದ ಸುಧಾರಣೆಗೆ ಶ್ರಮಿಸಿ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ಭಾಗದ ಶ್ರಮಿಕರು, ವ್ಯಾಪಾರಸ್ಥರಿಗೆ ಆರ್ಥಿಕವಾಗಿ ಆಸರೆಯಾಗುವ ಕಾರ್ಯ ಮಾಡುವ ಮೂಲಕ ಅವರ ಆರ್ಥಿಕ ಮಟ್ಟದ ವೃದ್ಧಿಗೆ ಸಹಕಾರ ಸಂಸ್ಥೆಗಳು ಶ್ರಮಿಸಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ತಂಗಡಗಿ ರಸ್ತೆಯಲ್ಲಿ ಸೋಮವಾರ ಕಮತಗಿಯ ಶ್ರೀ ಬಸವೇಶ್ವರ ಪತ್ತಿನ ಸಹಕಾರಿ ಸಂಘದ ಮುದ್ದೇಬಿಹಾಳ ಶಾಖೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮುದ್ದೇಬಿಹಾಳ ತಾಲ್ಲೂಕು ಆರ್ಥಿಕವಾಗಿ ಸುಧಾರಣೆಯಾಗುತ್ತಿರುವುದಕ್ಕೆ ಇಂದು ಹತ್ತಾರು ಸಹಕಾರಿ ಶಾಖೆಗಳು ಇಲ್ಲಿ ಆರಂಭಗೊಳ್ಳುತ್ತಿರುವುದು ಆಶಾದಾಯಕ ಬೆಳವಣಿಗೆ ತೋರಿಸುತ್ತದೆ.ಸಮಾನ

ಸರದಿಯಲ್ಲಿ ನಿಂತು ಶಿವಲಿಂಗದ ದರ್ಶನ;                    ಎಲ್ಲೆಲ್ಲೂ ಅನುರಣಿಸಿದ ಶಿವನಾಮ

ಸರದಿಯಲ್ಲಿ ನಿಂತು ಶಿವಲಿಂಗದ ದರ್ಶನ; ಎಲ್ಲೆಲ್ಲೂ ಅನುರಣಿಸಿದ ಶಿವನಾಮ

ಮುದ್ದೇಬಿಹಾಳ : ಪಟ್ಟಣದಾದ್ಯಂತ ಶಿವರಾತ್ರಿ ಅಂಗವಾಗಿ ಭಕ್ತರು ಭಾನುವಾರ ಸಂಜೆ ಶಿವನ ದೇವಾಲಯಗಳಲ್ಲಿ ಸರದಿಯಲ್ಲಿ ನಿಂತುಕೊoಡು ಈಶ್ವರ ಲಿಂಗದ ದರ್ಶನ ಪಡೆದುಕೊಂಡು ಪುನೀತರಾದರು. ದಿನವೀಡಿ ಉಪವಾಸ ವ್ರತ ಆಚರಿಸಿದ ಶಿವನ ಆರಾಧಕರು ಸಂಜೆ ವೇಳೆ ವಿವಿಧ ವಿಶೇಷ ಖಾದ್ಯಗಳನ್ನು ತಯಾರಿಸಿ ಶಿವಲಿಂಗಕ್ಕೆ ನೈವೇದ್ಯ ಅರ್ಪಿಸಿ ಉಪವಾಸ ವ್ರತ ಅಂತ್ಯಗೊಳಿಸಿದರು. ಪಟ್ಟಣದ ಕಿಲ್ಲಾದ ಹಳೇ ಈಶ್ವರಲಿಂಗ ದೇವಸ್ಥಾನ, ವಿಜಯ ವಿಠ್ಠಲ ಮಂದಿರ,ಕಾಶೀ ವಿಶ್ವನಾಥ ದೇವಸ್ಥಾನ,ಮರುಳಸಿದ್ದಪ್ಪನ ಗುಡಿ, ಹಳೇ ಕೋರ್ಟ್ ಆವರಣದಲ್ಲಿರುವ ಈಶ್ವರ