ಪ್ರಿಯತಮನಿಗಾಗಿ ಮನೆ ಬಿಟ್ಟು ಓಡಿ ಬಂದ ₹12 ಕೋಟಿ ಆಸ್ತಿ ಒಡತಿ!

ಪ್ರಿಯತಮನಿಗಾಗಿ ಮನೆ ಬಿಟ್ಟು ಓಡಿ ಬಂದ ₹12 ಕೋಟಿ ಆಸ್ತಿ ಒಡತಿ!


ಬೆಳಗಾವಿ: ಪ್ರೀತಿಸಿ ಮದುವೆಯಾದ ಜೋಡಿ ಭದ್ರತೆ ನೀಡುವಂತೆ ಎಸ್​ಪಿ ಮೊರೆ ಹೋಗಿದ್ದಾರೆ.

ಬೆಂಗಳೂರು (Bengaluru) ಮೂಲದ ಯುವತಿ ಪ್ರಿಯಾಂಕಾ ಹಾಗೂ ಬೆಳಗಾವಿ ಮೂಲದ ಯುವಕ ರೋಹಿತ್ ದಾಂಪತ್ಯ ಜೀವನಕ್ಕೆ ಕಾಲಿಟ್ಟು ನವದಂಪತಿಗಳಾಗಿದ್ದಾರೆ. ಖಾನಾಪುರದ ದೇವಸ್ಥಾನವೊಂದರಲ್ಲಿ (Temple) ವೈವಾಹಿತ ಜೀವನಕ್ಕೆ (Marriage Life) ಕಾಲಿಟ್ಟಿದ್ದ ಜೋಡಿ ನೇರ ಎಸ್​ಪಿ ಕಚೇರಿ ಆಗಮಿಸಿ ರಕ್ಷಣೆ ನೀಡುವಂತೆ ಮನವಿ ಮಾಡಿದ್ದಾರೆ.

ಬೆಂಗಳೂರು ಮೂಲದ ಪ್ರಿಯಾಂಕಾ ಮೂರು ದಿನಗಳ ಹಿಂದೆಯಷ್ಟೇ ಮನೆ ಬಿಟ್ಟು ಪ್ರಿಯಕರನಿಗಾಗಿ ಬೆಳಗಾವಿಗೆ ಆಗಮಿಸಿದ್ದಾಳೆ. ಸದ್ಯ ರೋಹಿತ್, ಕುಟುಂಬ ಸದಸ್ಯರ ಸಮ್ಮುಖದಲ್ಲಿ ಪ್ರಿಯಾಂಕಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಅಂದಹಾಗೇ, ಪ್ರಿಯಾಂಕಾಗೆ ಬೆಂಗಳೂರಲ್ಲಿ ಸುಮಾರು 12 ಕೋಟಿ ಮೌಲ್ಯದ ಆಸ್ತಿ ಹೊಂದಿದ್ದಾರಂತೆ. ಆಕೆಯ ಪೋಷಕರು ಚಿಕ್ಕವಯಸ್ಸಿನಲ್ಲಿರುವಾಗಲೇ ಸಾವನ್ನಪ್ಪಿದ್ದು, ಸೋದರ ಮಾವನ ಆಶ್ರಯದಲ್ಲಿ ಬೆಳೆದಿದ್ದರಂತೆ.

ಇನ್ನು, ಶಿವಮೊಗ್ಗ ‌ಹಾಗೂ ಬೆಂಗಳೂರಲ್ಲಿ ಪ್ರಿಯಂಕಾ ತಂದೆ ಆಸ್ತಿ ಹೊಂದಿದ್ದು, ಪ್ರಿಯಾಂಕಾಗೆ 18 ವರ್ಷ ತುಂಬಿದ ಬಳಿಕ ಈ ಎಲ್ಲಾ ಆಸ್ತಿಗಳು ಪ್ರಿಯಂಕಾ ಹೆಸರಿಗೆ ವರ್ಗಾವಣೆಯಾಗಿದೆಯಂತೆ. ಆದರೆ ಸೋದರ ಮಾವನ ಕಿರಿಕಿರಿಗೆ ಬೇಸತ್ತು ಪ್ರಿಯಾಂಕಾ ಪ್ರಿಯಕರ ಮನೆಗೆ ಬಂದಿದ್ದರಂತೆ. ಆದರೆ ಪ್ರಿಯಾಂಕಾ-ರೋಹಿತ್ ಮದುವೆಯಾಗದಂತೆ ತಡೆಯಲು ಆಕೆಯ ಸಹೋದರ ಮಾವನ ಮಗ ಕಿರುಕುಳ ನೀಡಿದ್ದ ಎಂದು ಆರೋಪಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಮದುವೆ ಬಳಿಕ ಬೆಳಗಾವಿ ಎಸ್ ಪಿ ಡಾ. ಭೀಮಾಶಂಕರ ಗುಳೇದ್ ಅವರನ್ನು ಭೇಟಿಯಾಗಿ ಭದ್ರತೆ ಒದಗಿಸುವಂತೆ ಮನವಿ ಮಾಡಿದ್ದಾರೆ. ಖಾನಾಪುರ ಪೊಲೀಸರಿಂದ ಸೂಕ್ತ ಭದ್ರತೆ ನೀಡುವ ಭರವಸೆಯನ್ನು ಎಸ್​ಪಿ ನೀಡಿದ್ದಾರೆ.

ಇನ್ ಸ್ಟಾದಲ್ಲಿ ಪರಿಚಯ, ಲವ್ !
ಇನ್ನು, ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಪ್ರಿಯಾಂಕಾ, ಇಂದು ದೇವಸ್ಥಾನದಲ್ಲಿ ಮದುವೆಯಾಗಿದ್ದೇವೆ. ನನ್ನ ಬಳಿ ಯಾವುದೇ ದಾಖಲೆ ಇಲ್ಲ. ಬೆಂಗಳೂರಿನಲ್ಲಿ ರಕ್ಷಣೆ ಬೇಕು ಎಂದರೇ ಕಮಿಷನರ್ ಅವರನ್ನು ಭೇಟಿ ಮಾಡಲು ಹೇಳಿದ್ದಾರೆ. ಆದ್ದರಿಂದ ಅವರಿಗೆ ರಕ್ಷಣೆ ನೀಡಲು ಮನವಿ ಮಾಡಿದ್ದೇನೆ. ಮನೆಯಲ್ಲಿ ನನ್ನನ್ನು ಗೃಹ ಬಂಧನದಲ್ಲಿ ಇಟ್ಟಿದ್ದರು. ಅಲ್ಲಿಂದ ನಾನು ಬೆಳಗಾವಿಗೆ ಬಂದೇ, ಖಾನಾಪುರಕ್ಕೆ ಹೋಗಿ ಅಲ್ಲಿಯೂ ಪೊಲೀಸರಿಗೆ ದೂರು ನೀಡಿದ್ದೇವು ಎಂದು ತಿಳಿಸಿದ್ದಾರೆ.

ಪ್ರಿಯಾಂಕಾ ಹಾಗೂ ರೋಹಿತ್ ಗೆ ಇನ್ ಸ್ಟಾದಲ್ಲಿ ಪರಿಚಯ ಆಗಿದ್ದು, ಮದುವೆ ನಿಮಿತ್ತ ಬೆಳಗಾವಿಗೆ ಬಂದ ವೇಳೆ ಆಕೆ ಆತನನ್ನು ಮೊದಲ ಬಾರಿಗೆ ಭೇಟಿ ಆಗಿದ್ದಳಂತೆ. ರೋಹಿತ್ ಮನೆಯವರ ಅಕ್ಕರೆ ಹಾಗೂ ಯುವಕನ ಪ್ರೀತಿಗೆ ಮೆಚ್ಚಿ ಆತನನ್ನೇ ಮದುವೆಯಾಗಬೇಕು ಅಂತ ನಿರ್ಧಾರ ಮಾಡಿದ್ದೆ ಎಂದು ಪ್ರಿಯಾಂಕಾ ತಿಳಿಸಿದ್ದಾರೆ.

ಬೆಳಗಾವಿ ಎಸ್​ಪಿ ಹೇಳಿದ್ದೇನು?
ಘಟನೆ ಬಗ್ಗೆ ಮಾಹಿತಿ ನೀಡಿದ ಎಸ್​ಪಿ ಭೀಮಾಶಂಕರ ಗುಳೇದ್ ಅವರು, ಕಚೇರಿಗೆ ಯುವಕ-ಯುವತಿ ಆಗಮಿಸಿದ್ದರು. ಪ್ರೀತಿಸಿ ಮದುವೆಯಾಗಿದ್ದೇವೆ, ನಮಗೆ ಕಾನೂನು ರಕ್ಷಣೆ ಬೇಕು ಎಂದು ಮನವಿ ಮಾಡಿದ್ದರು. ಇದರಂತೆ ಖಾನಾಪುರ ಪೊಲೀಸರಿಗೆ ಸೂಕ್ತ ರಕ್ಷಣೆ ನೀಡುವಂತೆ ಸೂಚನೆ ನೀಡಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ. ಒಂದು ತಿಂಗಳ ಹಿಂದೆಯೇ ಖಾನಾಪುರ ಪೊಲೀಸ್ ಠಾಣೆಯಲ್ಲಿ ಯುವತಿ ದೂರು ನೀಡಿದ್ದರು. ಆಕೆಯ ದಾಖಲೆಗಳು ಹಾಗೂ ಆಸ್ತಿ ವಿಚಾರದ ಬಗ್ಗೆ ದೂರು ನೀಡಿದ್ದರು. ಆ ವೇಳೆ ಸಂಬಂಧಿಗಳನ್ನು ಕರೆದು ಕೇಳಿದಾಗ ಅವರು ಯಾವುದೇ ದಾಖಲೆಗಳು ನಮ್ಮ ಬಳಿ ಇಲ್ಲ ಎಂದು ತಿಳಿಸಿದ್ದರಂತೆ. ಆದ್ದರಿಂದ ಯುವತಿಗೆ ಸಂಬಂಧಪಟ್ಟ ಶಾಲಾ-ಕಾಲೇಜುಗಳಿಂದ ಮತ್ತೊಮ್ಮೆ ದಾಖಲೆ ಪಡೆದುಕೊಳ್ಳಲು ಸೂಚನೆ ನೀಡಿದ್ದೇವೆ. ಆಸ್ತಿ ವಿಚಾರ ಸಿವಿಲ್ ಕೇಸ್ ಆಗಿದ್ದು, ಕೋರ್ಟ್​ ಗೆ ಅರ್ಜಿ ಸಲ್ಲಿಕೆ ಮಾಡಲು ಸೂಚನೆ ನೀಡಿದ್ದೇವೆ ಎಂದು ವಿವರಿಸಿದರು.

Latest News

ಸರದಿಯಲ್ಲಿ ನಿಂತು ಶಿವಲಿಂಗದ ದರ್ಶನ;                    ಎಲ್ಲೆಲ್ಲೂ ಅನುರಣಿಸಿದ ಶಿವನಾಮ

ಸರದಿಯಲ್ಲಿ ನಿಂತು ಶಿವಲಿಂಗದ ದರ್ಶನ; ಎಲ್ಲೆಲ್ಲೂ ಅನುರಣಿಸಿದ ಶಿವನಾಮ

ಮುದ್ದೇಬಿಹಾಳ : ಪಟ್ಟಣದಾದ್ಯಂತ ಶಿವರಾತ್ರಿ ಅಂಗವಾಗಿ ಭಕ್ತರು ಭಾನುವಾರ ಸಂಜೆ ಶಿವನ ದೇವಾಲಯಗಳಲ್ಲಿ ಸರದಿಯಲ್ಲಿ

ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್ ಉದ್ಘಾಟನೆ:            ಕಾಲು ಹಿಡಿದು ಜಗ್ಗುವವರೇ ಬಹಳಷ್ಟು ಜನ-ಸಿ.ಎಸ್.ನಾಡಗೌಡ

ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್ ಉದ್ಘಾಟನೆ: ಕಾಲು ಹಿಡಿದು ಜಗ್ಗುವವರೇ ಬಹಳಷ್ಟು ಜನ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಸಮಾಜದಲ್ಲಿ ಒಂದು ಸಂಸ್ಥೆ, ಕಾರ್ಖಾನೆ , ಒಬ್ಬ ವ್ಯಕ್ತಿ ಬೆಳೆಯುತ್ತಿದ್ದಾನೆ ಎಂದರೆ

ದೇಶದ ಪ್ರಗತಿಗೆ ಸಂಸ್ಕಾರಭರಿತ ಶಿಕ್ಷಣ ಅವಶ್ಯ-ಆರ್.ಎಸ್.ಬಂಗಿ

ದೇಶದ ಪ್ರಗತಿಗೆ ಸಂಸ್ಕಾರಭರಿತ ಶಿಕ್ಷಣ ಅವಶ್ಯ-ಆರ್.ಎಸ್.ಬಂಗಿ

ಮುದ್ದೇಬಿಹಾಳ : ದೇಶದ ಪ್ರಗತಿ ಪಥದ ಚಾಲನೆಗೆ ಸಂಸ್ಕಾರ ಭರಿತ ಶಿಕ್ಷಣ ಅವಶ್ಯಕ ಎಂದು

ಸಂಘಟನೆಗೆ ಆದ್ಯತೆ ನೀಡಿ-ಅಶೋಕ ಚಟ್ಟೇರ

ಸಂಘಟನೆಗೆ ಆದ್ಯತೆ ನೀಡಿ-ಅಶೋಕ ಚಟ್ಟೇರ

ಮುದ್ದೇಬಿಹಾಳ : ಬಣಜಿಗ ಸಮಾಜದ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಬೇಕು.ಸಮಾಜದಲ್ಲಿ ಬೆಳೆಯುತ್ತಿರುವ ಪ್ರೋತ್ಸಾಹ ನೀಡುವ

ದೇಶದ ಸೇವೆ ಆಯ್ಕೆ ಮಾಡಿಕೊಂಡವರು ಅದೃಷ್ಟವಂತರು-ಎಂ.ಎಸ್.ಕೊಪ್ಪ

ದೇಶದ ಸೇವೆ ಆಯ್ಕೆ ಮಾಡಿಕೊಂಡವರು ಅದೃಷ್ಟವಂತರು-ಎಂ.ಎಸ್.ಕೊಪ್ಪ

ಮುದ್ದೇಬಿಹಾಳ : ದೇಶದ ಗಡಿ ಕಾಯುವ ಸೇವೆಯನ್ನು ಆಯ್ಕೆ ಮಾಡಿಕೊಂಡ ಆಯೇಷಾ ವಾಲೀಕಾರ, ಕಾಶೀಬಾಯಿ ಚಲವಾದಿ ಹೆಣ್ಣು ಮಕ್ಕಳಿಗೆ ಸ್ಪೂರ್ತಿಯಾಗಿದ್ದಾರೆ ಎಂದು ಹುಲ್ಲೂರು ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಹೇಳಿದರು.ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು. ದೇಶದ ಗಡಿ ಕಾಯುವ ಕೆಲಸ ಸಾಮಾನ್ಯವಾದದ್ದಲ್ಲ.ಅದಕ್ಕೆ ಸಾಕಷ್ಟು ತಯಾರಿ ಬೇಕಾಗುತ್ತದೆ.ಬಡತನದಲ್ಲಿ ಇಂತಹ ದೊಡ್ಡ ಸಾಧನೆ ಮಾಡಿದ ನಮ್ಮ ತಾಲ್ಲೂಕಿನ

ಹುಲ್ಲೂರು ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯಲ್ಲಿ ಆಯೋಜನೆ:                                                                       ಎಕ್ಸಾಂ ಬರೆಯಿರಿ ಐದು ಲಕ್ಷ ರೂ.ಸ್ಕಾಲರ್‌ಶಿಪ್ ಪಡೆಯಿರಿ-ಎಂ.ಎಸ್.ಕೊಪ್ಪ

ಹುಲ್ಲೂರು ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯಲ್ಲಿ ಆಯೋಜನೆ: ಎಕ್ಸಾಂ ಬರೆಯಿರಿ ಐದು ಲಕ್ಷ ರೂ.ಸ್ಕಾಲರ್‌ಶಿಪ್ ಪಡೆಯಿರಿ-ಎಂ.ಎಸ್.ಕೊಪ್ಪ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ಗ್ರಾಮದ ಚೆನ್ನಬಸವ ಶ್ರೀ ಎಜ್ಯುಕೇಷನ್ ರೂರಲ್ ಕಲ್ಚರಲ್ ಸೊಸೈಟಿ ಅಡಿಯಲ್ಲಿ ನಡೆಯುತ್ತಿರುವ ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಸ್ಕೂಲ್ ಹಾಗೂ ಪ್ರೌಢಶಾಲೆಯಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಐದು ಲಕ್ಷ ರೂ.ಸ್ಕಾಲರ್‌ಶಿಪ್ ಯೋಜನೆಯನ್ನು ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಪ್ರಕಟಿಸಿದ್ದಾರೆ. ಪರೀಕ್ಷೆ ಎರಡು ವಿಭಾಗಗಳಲ್ಲಿ ನಡೆಯಲಿದ್ದು ದಿನಾಂಕ 8-03-2026 ರಂದು ಬೆಳಗ್ಗೆ 11.30ಕ್ಕೆ ನಡೆಯಲಿರುವ ಪರೀಕ್ಷೆಗೆ 4ನೇ ತರಗತಿ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದ್ದು ಇದರಲ್ಲಿ ಪಾಲ್ಗೊಳ್ಳುವ ಮಕ್ಕಳಲ್ಲಿ ಮೊದಲ ಹತ್ತು