ಪ್ರಿಯತಮನಿಗಾಗಿ ಮನೆ ಬಿಟ್ಟು ಓಡಿ ಬಂದ ₹12 ಕೋಟಿ ಆಸ್ತಿ ಒಡತಿ!

ಪ್ರಿಯತಮನಿಗಾಗಿ ಮನೆ ಬಿಟ್ಟು ಓಡಿ ಬಂದ ₹12 ಕೋಟಿ ಆಸ್ತಿ ಒಡತಿ!


ಬೆಳಗಾವಿ: ಪ್ರೀತಿಸಿ ಮದುವೆಯಾದ ಜೋಡಿ ಭದ್ರತೆ ನೀಡುವಂತೆ ಎಸ್​ಪಿ ಮೊರೆ ಹೋಗಿದ್ದಾರೆ.

ಬೆಂಗಳೂರು (Bengaluru) ಮೂಲದ ಯುವತಿ ಪ್ರಿಯಾಂಕಾ ಹಾಗೂ ಬೆಳಗಾವಿ ಮೂಲದ ಯುವಕ ರೋಹಿತ್ ದಾಂಪತ್ಯ ಜೀವನಕ್ಕೆ ಕಾಲಿಟ್ಟು ನವದಂಪತಿಗಳಾಗಿದ್ದಾರೆ. ಖಾನಾಪುರದ ದೇವಸ್ಥಾನವೊಂದರಲ್ಲಿ (Temple) ವೈವಾಹಿತ ಜೀವನಕ್ಕೆ (Marriage Life) ಕಾಲಿಟ್ಟಿದ್ದ ಜೋಡಿ ನೇರ ಎಸ್​ಪಿ ಕಚೇರಿ ಆಗಮಿಸಿ ರಕ್ಷಣೆ ನೀಡುವಂತೆ ಮನವಿ ಮಾಡಿದ್ದಾರೆ.

ಬೆಂಗಳೂರು ಮೂಲದ ಪ್ರಿಯಾಂಕಾ ಮೂರು ದಿನಗಳ ಹಿಂದೆಯಷ್ಟೇ ಮನೆ ಬಿಟ್ಟು ಪ್ರಿಯಕರನಿಗಾಗಿ ಬೆಳಗಾವಿಗೆ ಆಗಮಿಸಿದ್ದಾಳೆ. ಸದ್ಯ ರೋಹಿತ್, ಕುಟುಂಬ ಸದಸ್ಯರ ಸಮ್ಮುಖದಲ್ಲಿ ಪ್ರಿಯಾಂಕಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಅಂದಹಾಗೇ, ಪ್ರಿಯಾಂಕಾಗೆ ಬೆಂಗಳೂರಲ್ಲಿ ಸುಮಾರು 12 ಕೋಟಿ ಮೌಲ್ಯದ ಆಸ್ತಿ ಹೊಂದಿದ್ದಾರಂತೆ. ಆಕೆಯ ಪೋಷಕರು ಚಿಕ್ಕವಯಸ್ಸಿನಲ್ಲಿರುವಾಗಲೇ ಸಾವನ್ನಪ್ಪಿದ್ದು, ಸೋದರ ಮಾವನ ಆಶ್ರಯದಲ್ಲಿ ಬೆಳೆದಿದ್ದರಂತೆ.

ಇನ್ನು, ಶಿವಮೊಗ್ಗ ‌ಹಾಗೂ ಬೆಂಗಳೂರಲ್ಲಿ ಪ್ರಿಯಂಕಾ ತಂದೆ ಆಸ್ತಿ ಹೊಂದಿದ್ದು, ಪ್ರಿಯಾಂಕಾಗೆ 18 ವರ್ಷ ತುಂಬಿದ ಬಳಿಕ ಈ ಎಲ್ಲಾ ಆಸ್ತಿಗಳು ಪ್ರಿಯಂಕಾ ಹೆಸರಿಗೆ ವರ್ಗಾವಣೆಯಾಗಿದೆಯಂತೆ. ಆದರೆ ಸೋದರ ಮಾವನ ಕಿರಿಕಿರಿಗೆ ಬೇಸತ್ತು ಪ್ರಿಯಾಂಕಾ ಪ್ರಿಯಕರ ಮನೆಗೆ ಬಂದಿದ್ದರಂತೆ. ಆದರೆ ಪ್ರಿಯಾಂಕಾ-ರೋಹಿತ್ ಮದುವೆಯಾಗದಂತೆ ತಡೆಯಲು ಆಕೆಯ ಸಹೋದರ ಮಾವನ ಮಗ ಕಿರುಕುಳ ನೀಡಿದ್ದ ಎಂದು ಆರೋಪಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಮದುವೆ ಬಳಿಕ ಬೆಳಗಾವಿ ಎಸ್ ಪಿ ಡಾ. ಭೀಮಾಶಂಕರ ಗುಳೇದ್ ಅವರನ್ನು ಭೇಟಿಯಾಗಿ ಭದ್ರತೆ ಒದಗಿಸುವಂತೆ ಮನವಿ ಮಾಡಿದ್ದಾರೆ. ಖಾನಾಪುರ ಪೊಲೀಸರಿಂದ ಸೂಕ್ತ ಭದ್ರತೆ ನೀಡುವ ಭರವಸೆಯನ್ನು ಎಸ್​ಪಿ ನೀಡಿದ್ದಾರೆ.

ಇನ್ ಸ್ಟಾದಲ್ಲಿ ಪರಿಚಯ, ಲವ್ !
ಇನ್ನು, ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಪ್ರಿಯಾಂಕಾ, ಇಂದು ದೇವಸ್ಥಾನದಲ್ಲಿ ಮದುವೆಯಾಗಿದ್ದೇವೆ. ನನ್ನ ಬಳಿ ಯಾವುದೇ ದಾಖಲೆ ಇಲ್ಲ. ಬೆಂಗಳೂರಿನಲ್ಲಿ ರಕ್ಷಣೆ ಬೇಕು ಎಂದರೇ ಕಮಿಷನರ್ ಅವರನ್ನು ಭೇಟಿ ಮಾಡಲು ಹೇಳಿದ್ದಾರೆ. ಆದ್ದರಿಂದ ಅವರಿಗೆ ರಕ್ಷಣೆ ನೀಡಲು ಮನವಿ ಮಾಡಿದ್ದೇನೆ. ಮನೆಯಲ್ಲಿ ನನ್ನನ್ನು ಗೃಹ ಬಂಧನದಲ್ಲಿ ಇಟ್ಟಿದ್ದರು. ಅಲ್ಲಿಂದ ನಾನು ಬೆಳಗಾವಿಗೆ ಬಂದೇ, ಖಾನಾಪುರಕ್ಕೆ ಹೋಗಿ ಅಲ್ಲಿಯೂ ಪೊಲೀಸರಿಗೆ ದೂರು ನೀಡಿದ್ದೇವು ಎಂದು ತಿಳಿಸಿದ್ದಾರೆ.

ಪ್ರಿಯಾಂಕಾ ಹಾಗೂ ರೋಹಿತ್ ಗೆ ಇನ್ ಸ್ಟಾದಲ್ಲಿ ಪರಿಚಯ ಆಗಿದ್ದು, ಮದುವೆ ನಿಮಿತ್ತ ಬೆಳಗಾವಿಗೆ ಬಂದ ವೇಳೆ ಆಕೆ ಆತನನ್ನು ಮೊದಲ ಬಾರಿಗೆ ಭೇಟಿ ಆಗಿದ್ದಳಂತೆ. ರೋಹಿತ್ ಮನೆಯವರ ಅಕ್ಕರೆ ಹಾಗೂ ಯುವಕನ ಪ್ರೀತಿಗೆ ಮೆಚ್ಚಿ ಆತನನ್ನೇ ಮದುವೆಯಾಗಬೇಕು ಅಂತ ನಿರ್ಧಾರ ಮಾಡಿದ್ದೆ ಎಂದು ಪ್ರಿಯಾಂಕಾ ತಿಳಿಸಿದ್ದಾರೆ.

ಬೆಳಗಾವಿ ಎಸ್​ಪಿ ಹೇಳಿದ್ದೇನು?
ಘಟನೆ ಬಗ್ಗೆ ಮಾಹಿತಿ ನೀಡಿದ ಎಸ್​ಪಿ ಭೀಮಾಶಂಕರ ಗುಳೇದ್ ಅವರು, ಕಚೇರಿಗೆ ಯುವಕ-ಯುವತಿ ಆಗಮಿಸಿದ್ದರು. ಪ್ರೀತಿಸಿ ಮದುವೆಯಾಗಿದ್ದೇವೆ, ನಮಗೆ ಕಾನೂನು ರಕ್ಷಣೆ ಬೇಕು ಎಂದು ಮನವಿ ಮಾಡಿದ್ದರು. ಇದರಂತೆ ಖಾನಾಪುರ ಪೊಲೀಸರಿಗೆ ಸೂಕ್ತ ರಕ್ಷಣೆ ನೀಡುವಂತೆ ಸೂಚನೆ ನೀಡಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ. ಒಂದು ತಿಂಗಳ ಹಿಂದೆಯೇ ಖಾನಾಪುರ ಪೊಲೀಸ್ ಠಾಣೆಯಲ್ಲಿ ಯುವತಿ ದೂರು ನೀಡಿದ್ದರು. ಆಕೆಯ ದಾಖಲೆಗಳು ಹಾಗೂ ಆಸ್ತಿ ವಿಚಾರದ ಬಗ್ಗೆ ದೂರು ನೀಡಿದ್ದರು. ಆ ವೇಳೆ ಸಂಬಂಧಿಗಳನ್ನು ಕರೆದು ಕೇಳಿದಾಗ ಅವರು ಯಾವುದೇ ದಾಖಲೆಗಳು ನಮ್ಮ ಬಳಿ ಇಲ್ಲ ಎಂದು ತಿಳಿಸಿದ್ದರಂತೆ. ಆದ್ದರಿಂದ ಯುವತಿಗೆ ಸಂಬಂಧಪಟ್ಟ ಶಾಲಾ-ಕಾಲೇಜುಗಳಿಂದ ಮತ್ತೊಮ್ಮೆ ದಾಖಲೆ ಪಡೆದುಕೊಳ್ಳಲು ಸೂಚನೆ ನೀಡಿದ್ದೇವೆ. ಆಸ್ತಿ ವಿಚಾರ ಸಿವಿಲ್ ಕೇಸ್ ಆಗಿದ್ದು, ಕೋರ್ಟ್​ ಗೆ ಅರ್ಜಿ ಸಲ್ಲಿಕೆ ಮಾಡಲು ಸೂಚನೆ ನೀಡಿದ್ದೇವೆ ಎಂದು ವಿವರಿಸಿದರು.

Latest News

ಮುದ್ದೇಬಿಹಾಳ : TAPCMS  ಆಡಳಿತ ಮತ್ತೆ ಮನೋಹರ ಮೇಟಿ ‘ಕೈ’ಗೆ

ಮುದ್ದೇಬಿಹಾಳ : TAPCMS ಆಡಳಿತ ಮತ್ತೆ ಮನೋಹರ ಮೇಟಿ ‘ಕೈ’ಗೆ

ಮುದ್ದೇಬಿಹಾಳ : ಇಲ್ಲಿನ ಟಿ.ಎ.ಪಿ.ಸಿ.ಎಂ.ಎಸ್ ಆಡಳಿತ ಮತ್ತೆ ಎರಡನೇ ಬಾರಿಗೆ ಅಧ್ಯಕ್ಷರಾಗಿ ಮನೋಹರ ಮೇಟಿ

ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾವಳಿಗೆ ಆಯ್ಕೆ :            ಕರ್ನಾಟಕ ತಂಡಕ್ಕೆ ಮುದ್ದೇಬಿಹಾಳದ ಮೂವರು ಆಟಗಾರರ ಆಯ್ಕೆ

ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾವಳಿಗೆ ಆಯ್ಕೆ : ಕರ್ನಾಟಕ ತಂಡಕ್ಕೆ ಮುದ್ದೇಬಿಹಾಳದ ಮೂವರು ಆಟಗಾರರ ಆಯ್ಕೆ

ಮುದ್ದೇಬಿಹಾಳ : ತುಮಕೂರಿನಲ್ಲಿ ನಡೆದ ರಾಜ್ಯಮಟ್ಟದ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ

ಗುಡಿಮನಿಗೆ ಕರ್ನಾಟಕ ವಾಲ್ಮೀಕಿ ರತ್ನ ಪ್ರಶಸ್ತಿ

ಗುಡಿಮನಿಗೆ ಕರ್ನಾಟಕ ವಾಲ್ಮೀಕಿ ರತ್ನ ಪ್ರಶಸ್ತಿ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯಿತಿ ನೌಕರ ಎಂ.ಕೆ.ಗುಡಿಮನಿ ಅವರಿಗೆ 2025ನೇ ಸಾಲಿನ

ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನಲ್ಲಿ ಸನ್ಮಾನ ಕಾರ್ಯಕ್ರಮ: 2026ಕ್ಕೆ  200 ಮೆಡಿಕಲ್ ಸೀಟು ಆಯ್ಕೆಯ ಗುರಿ-ಅಮೀತಗೌಡ ಪಾಟೀಲ್

ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನಲ್ಲಿ ಸನ್ಮಾನ ಕಾರ್ಯಕ್ರಮ: 2026ಕ್ಕೆ 200 ಮೆಡಿಕಲ್ ಸೀಟು ಆಯ್ಕೆಯ ಗುರಿ-ಅಮೀತಗೌಡ ಪಾಟೀಲ್

ಮುದ್ದೇಬಿಹಾಳ : ಉತ್ತರ ಕರ್ನಾಟಕ ಭಾಗದಲ್ಲಿ ಅತೀ ಹೆಚ್ಚು ಮೆಡಿಕಲ್ ಸೀಟುಗಳನ್ನು ಪಡೆದುಕೊಳ್ಳುವಲ್ಲಿ ಹಿರಿಮೆ

ರಾಯಚೂರು: ವಿವಿಧ ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ

ರಾಯಚೂರು: ವಿವಿಧ ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ

ರಾಯಚೂರು ಅಕ್ಟೋಬರ್ 15: ಇ- ಕಾಮರ್ಸ್‌ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ವಿಮಾ ಯೋಜನೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಉದ್ಯೋಗ ನೀಡುವ ಖಾಸಗಿ ಉದ್ಯೋಗದಾತರಿಗೆ ಮರುಪಾವತಿಯ ಆಶಾದೀಪ ಹಾಗೂ ಕರ್ನಾಟಕ ಸಿನೆಮಾ ಮತ್ತು ಸಾಂಸ್ಮೃತಿಕ‌ ಚಟುವಟಿಕೆಯಲ್ಲಿ ತೊಡಗಿದ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಸೌಲಭ್ಯ ಒದಗಿಸಲು ಹೊಸದಾಗಿ ಸಿನೇಮಾ ಕಾರ್ಮಿಕರ ಸುಂಕ ಅಧಿನಿಯಮ ಜಾರಿಯಂತಹ ವಿನೂತನ ಯೋಜನೆಗಳನ್ನು ರಾಜ್ಯ ಕಾರ್ಮಿಕ ಇಲಾಖೆಯು ರೂಪಿಸಿ ಇಡೀ ದೇಶವೇ ಕರ್ನಾಟಕ

ಅಸಂಘಟಿತ ವಲಯದ ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ ಹಲವು ಕ್ರಮ: ಸಚಿವ ಲಾಡ್

ಅಸಂಘಟಿತ ವಲಯದ ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ ಹಲವು ಕ್ರಮ: ಸಚಿವ ಲಾಡ್

ಯಾದಗಿರಿ, ಅಕ್ಟೋಬರ್.15: ರಾಜ್ಯದ ಅಸಂಘಟಿತ ವಲಯದ ಎಲ್ಲ ವರ್ಗಗಳ ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ, ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಸ್ಥಾಪಿಸಲಾಗಿದೆ. ರಾಜ್ಯದಲ್ಲಿ ಈಗಾಗಲೇ ಗುರುತಿಸಿರುವ 101 ಅಸಂಘಟಿತ ಕಾರ್ಮಿಕ ವರ್ಗಗಳ ಕಾರ್ಮಿಕರು ತಕ್ಷಣ ನೋಂದಣಿ ಮಾಡಿಕೊಂಡು ಸ್ಮಾರ್ಟ್ ಕಾರ್ಡ್ ಮೂಲಕ ಸವಲತ್ತುಗಳ ಲಾಭ ಪಡೆದುಕೊಳ್ಳುವಂತೆ ರಾಜ್ಯ ಕಾರ್ಮಿಕ ಖಾತೆ ಸಚಿವರಾದ ಶ್ರೀ ಸಂತೋಷ್ ಲಾಡ್ ಅವರು ಹೇಳಿದರು. ನಗರದ ಶುಭಂ ಪೆಟ್ರೋಲ್ ಪಂಪ್ ಹಿಂಭಾಗದ, ಪಾಟೀಲ್ ಕನ್ವೆನ್ಷನ್