ಪ್ರಿಯತಮನಿಗಾಗಿ ಮನೆ ಬಿಟ್ಟು ಓಡಿ ಬಂದ ₹12 ಕೋಟಿ ಆಸ್ತಿ ಒಡತಿ!

ಪ್ರಿಯತಮನಿಗಾಗಿ ಮನೆ ಬಿಟ್ಟು ಓಡಿ ಬಂದ ₹12 ಕೋಟಿ ಆಸ್ತಿ ಒಡತಿ!


ಬೆಳಗಾವಿ: ಪ್ರೀತಿಸಿ ಮದುವೆಯಾದ ಜೋಡಿ ಭದ್ರತೆ ನೀಡುವಂತೆ ಎಸ್​ಪಿ ಮೊರೆ ಹೋಗಿದ್ದಾರೆ.

ಬೆಂಗಳೂರು (Bengaluru) ಮೂಲದ ಯುವತಿ ಪ್ರಿಯಾಂಕಾ ಹಾಗೂ ಬೆಳಗಾವಿ ಮೂಲದ ಯುವಕ ರೋಹಿತ್ ದಾಂಪತ್ಯ ಜೀವನಕ್ಕೆ ಕಾಲಿಟ್ಟು ನವದಂಪತಿಗಳಾಗಿದ್ದಾರೆ. ಖಾನಾಪುರದ ದೇವಸ್ಥಾನವೊಂದರಲ್ಲಿ (Temple) ವೈವಾಹಿತ ಜೀವನಕ್ಕೆ (Marriage Life) ಕಾಲಿಟ್ಟಿದ್ದ ಜೋಡಿ ನೇರ ಎಸ್​ಪಿ ಕಚೇರಿ ಆಗಮಿಸಿ ರಕ್ಷಣೆ ನೀಡುವಂತೆ ಮನವಿ ಮಾಡಿದ್ದಾರೆ.

ಬೆಂಗಳೂರು ಮೂಲದ ಪ್ರಿಯಾಂಕಾ ಮೂರು ದಿನಗಳ ಹಿಂದೆಯಷ್ಟೇ ಮನೆ ಬಿಟ್ಟು ಪ್ರಿಯಕರನಿಗಾಗಿ ಬೆಳಗಾವಿಗೆ ಆಗಮಿಸಿದ್ದಾಳೆ. ಸದ್ಯ ರೋಹಿತ್, ಕುಟುಂಬ ಸದಸ್ಯರ ಸಮ್ಮುಖದಲ್ಲಿ ಪ್ರಿಯಾಂಕಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಅಂದಹಾಗೇ, ಪ್ರಿಯಾಂಕಾಗೆ ಬೆಂಗಳೂರಲ್ಲಿ ಸುಮಾರು 12 ಕೋಟಿ ಮೌಲ್ಯದ ಆಸ್ತಿ ಹೊಂದಿದ್ದಾರಂತೆ. ಆಕೆಯ ಪೋಷಕರು ಚಿಕ್ಕವಯಸ್ಸಿನಲ್ಲಿರುವಾಗಲೇ ಸಾವನ್ನಪ್ಪಿದ್ದು, ಸೋದರ ಮಾವನ ಆಶ್ರಯದಲ್ಲಿ ಬೆಳೆದಿದ್ದರಂತೆ.

ಇನ್ನು, ಶಿವಮೊಗ್ಗ ‌ಹಾಗೂ ಬೆಂಗಳೂರಲ್ಲಿ ಪ್ರಿಯಂಕಾ ತಂದೆ ಆಸ್ತಿ ಹೊಂದಿದ್ದು, ಪ್ರಿಯಾಂಕಾಗೆ 18 ವರ್ಷ ತುಂಬಿದ ಬಳಿಕ ಈ ಎಲ್ಲಾ ಆಸ್ತಿಗಳು ಪ್ರಿಯಂಕಾ ಹೆಸರಿಗೆ ವರ್ಗಾವಣೆಯಾಗಿದೆಯಂತೆ. ಆದರೆ ಸೋದರ ಮಾವನ ಕಿರಿಕಿರಿಗೆ ಬೇಸತ್ತು ಪ್ರಿಯಾಂಕಾ ಪ್ರಿಯಕರ ಮನೆಗೆ ಬಂದಿದ್ದರಂತೆ. ಆದರೆ ಪ್ರಿಯಾಂಕಾ-ರೋಹಿತ್ ಮದುವೆಯಾಗದಂತೆ ತಡೆಯಲು ಆಕೆಯ ಸಹೋದರ ಮಾವನ ಮಗ ಕಿರುಕುಳ ನೀಡಿದ್ದ ಎಂದು ಆರೋಪಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಮದುವೆ ಬಳಿಕ ಬೆಳಗಾವಿ ಎಸ್ ಪಿ ಡಾ. ಭೀಮಾಶಂಕರ ಗುಳೇದ್ ಅವರನ್ನು ಭೇಟಿಯಾಗಿ ಭದ್ರತೆ ಒದಗಿಸುವಂತೆ ಮನವಿ ಮಾಡಿದ್ದಾರೆ. ಖಾನಾಪುರ ಪೊಲೀಸರಿಂದ ಸೂಕ್ತ ಭದ್ರತೆ ನೀಡುವ ಭರವಸೆಯನ್ನು ಎಸ್​ಪಿ ನೀಡಿದ್ದಾರೆ.

ಇನ್ ಸ್ಟಾದಲ್ಲಿ ಪರಿಚಯ, ಲವ್ !
ಇನ್ನು, ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಪ್ರಿಯಾಂಕಾ, ಇಂದು ದೇವಸ್ಥಾನದಲ್ಲಿ ಮದುವೆಯಾಗಿದ್ದೇವೆ. ನನ್ನ ಬಳಿ ಯಾವುದೇ ದಾಖಲೆ ಇಲ್ಲ. ಬೆಂಗಳೂರಿನಲ್ಲಿ ರಕ್ಷಣೆ ಬೇಕು ಎಂದರೇ ಕಮಿಷನರ್ ಅವರನ್ನು ಭೇಟಿ ಮಾಡಲು ಹೇಳಿದ್ದಾರೆ. ಆದ್ದರಿಂದ ಅವರಿಗೆ ರಕ್ಷಣೆ ನೀಡಲು ಮನವಿ ಮಾಡಿದ್ದೇನೆ. ಮನೆಯಲ್ಲಿ ನನ್ನನ್ನು ಗೃಹ ಬಂಧನದಲ್ಲಿ ಇಟ್ಟಿದ್ದರು. ಅಲ್ಲಿಂದ ನಾನು ಬೆಳಗಾವಿಗೆ ಬಂದೇ, ಖಾನಾಪುರಕ್ಕೆ ಹೋಗಿ ಅಲ್ಲಿಯೂ ಪೊಲೀಸರಿಗೆ ದೂರು ನೀಡಿದ್ದೇವು ಎಂದು ತಿಳಿಸಿದ್ದಾರೆ.

ಪ್ರಿಯಾಂಕಾ ಹಾಗೂ ರೋಹಿತ್ ಗೆ ಇನ್ ಸ್ಟಾದಲ್ಲಿ ಪರಿಚಯ ಆಗಿದ್ದು, ಮದುವೆ ನಿಮಿತ್ತ ಬೆಳಗಾವಿಗೆ ಬಂದ ವೇಳೆ ಆಕೆ ಆತನನ್ನು ಮೊದಲ ಬಾರಿಗೆ ಭೇಟಿ ಆಗಿದ್ದಳಂತೆ. ರೋಹಿತ್ ಮನೆಯವರ ಅಕ್ಕರೆ ಹಾಗೂ ಯುವಕನ ಪ್ರೀತಿಗೆ ಮೆಚ್ಚಿ ಆತನನ್ನೇ ಮದುವೆಯಾಗಬೇಕು ಅಂತ ನಿರ್ಧಾರ ಮಾಡಿದ್ದೆ ಎಂದು ಪ್ರಿಯಾಂಕಾ ತಿಳಿಸಿದ್ದಾರೆ.

ಬೆಳಗಾವಿ ಎಸ್​ಪಿ ಹೇಳಿದ್ದೇನು?
ಘಟನೆ ಬಗ್ಗೆ ಮಾಹಿತಿ ನೀಡಿದ ಎಸ್​ಪಿ ಭೀಮಾಶಂಕರ ಗುಳೇದ್ ಅವರು, ಕಚೇರಿಗೆ ಯುವಕ-ಯುವತಿ ಆಗಮಿಸಿದ್ದರು. ಪ್ರೀತಿಸಿ ಮದುವೆಯಾಗಿದ್ದೇವೆ, ನಮಗೆ ಕಾನೂನು ರಕ್ಷಣೆ ಬೇಕು ಎಂದು ಮನವಿ ಮಾಡಿದ್ದರು. ಇದರಂತೆ ಖಾನಾಪುರ ಪೊಲೀಸರಿಗೆ ಸೂಕ್ತ ರಕ್ಷಣೆ ನೀಡುವಂತೆ ಸೂಚನೆ ನೀಡಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ. ಒಂದು ತಿಂಗಳ ಹಿಂದೆಯೇ ಖಾನಾಪುರ ಪೊಲೀಸ್ ಠಾಣೆಯಲ್ಲಿ ಯುವತಿ ದೂರು ನೀಡಿದ್ದರು. ಆಕೆಯ ದಾಖಲೆಗಳು ಹಾಗೂ ಆಸ್ತಿ ವಿಚಾರದ ಬಗ್ಗೆ ದೂರು ನೀಡಿದ್ದರು. ಆ ವೇಳೆ ಸಂಬಂಧಿಗಳನ್ನು ಕರೆದು ಕೇಳಿದಾಗ ಅವರು ಯಾವುದೇ ದಾಖಲೆಗಳು ನಮ್ಮ ಬಳಿ ಇಲ್ಲ ಎಂದು ತಿಳಿಸಿದ್ದರಂತೆ. ಆದ್ದರಿಂದ ಯುವತಿಗೆ ಸಂಬಂಧಪಟ್ಟ ಶಾಲಾ-ಕಾಲೇಜುಗಳಿಂದ ಮತ್ತೊಮ್ಮೆ ದಾಖಲೆ ಪಡೆದುಕೊಳ್ಳಲು ಸೂಚನೆ ನೀಡಿದ್ದೇವೆ. ಆಸ್ತಿ ವಿಚಾರ ಸಿವಿಲ್ ಕೇಸ್ ಆಗಿದ್ದು, ಕೋರ್ಟ್​ ಗೆ ಅರ್ಜಿ ಸಲ್ಲಿಕೆ ಮಾಡಲು ಸೂಚನೆ ನೀಡಿದ್ದೇವೆ ಎಂದು ವಿವರಿಸಿದರು.

Latest News

ಮುನ್ನೆಚ್ಚರಿಕೆ ಕ್ರಮ ಅನುಸರಿಸಲು ವೈದ್ಯರ ಸೂಚನೆ : ಉಲ್ಬಣಗೊಂಡ ನೆಗಡಿ,ಕೆಮ್ಮು,ಜ್ವರ : ದಿನಕ್ಕೆ 600 ಜನರ ತಪಾಸಣೆ

ಮುನ್ನೆಚ್ಚರಿಕೆ ಕ್ರಮ ಅನುಸರಿಸಲು ವೈದ್ಯರ ಸೂಚನೆ : ಉಲ್ಬಣಗೊಂಡ ನೆಗಡಿ,ಕೆಮ್ಮು,ಜ್ವರ : ದಿನಕ್ಕೆ 600 ಜನರ ತಪಾಸಣೆ

ಮುದ್ದೇಬಿಹಾಳ : ಹೆಚ್ಚುತ್ತಿರುವ ಶೀತಗಾಳಿ,ಜ್ವರದಿಂದ ಮಕ್ಕಳು,ವೃದ್ಧರು,ಮಹಿಳೆಯರಲ್ಲಿ ನೆಗಡಿ,ಕೆಮ್ಮು,ಜ್ವರ ಉಲ್ಬಣಗೊಂಡಿದ್ದು ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆ ಪಡೆದುಕೊಳ್ಳಲು

ಇಂದು ವಿಜಯಪುರ ನಗರಕ್ಕೆ  ಸಿಎಂ, ಡಿಸಿಎಂ ಭೇಟಿ:

ಇಂದು ವಿಜಯಪುರ ನಗರಕ್ಕೆ  ಸಿಎಂ, ಡಿಸಿಎಂ ಭೇಟಿ:

ಮುಖ್ಯಮಂತ್ರಿ,  ಉಪ ಮುಖ್ಯಮಂತ್ರಿಗಳಿಂದ ಹಲವು ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ವಿಜಯಪುರ : ಬಸ್ ನಿಲ್ದಾಣದ

ಪಿಪಿಪಿ ಮೆಡಿಕಲ್ ಕಾಲೇಜು ವಿರೋಧಿಸಿದ್ದವರ ಬಂಧನ-ಬಿಡುಗಡೆಗೆ ಆಗ್ರಹ

ಪಿಪಿಪಿ ಮೆಡಿಕಲ್ ಕಾಲೇಜು ವಿರೋಧಿಸಿದ್ದವರ ಬಂಧನ-ಬಿಡುಗಡೆಗೆ ಆಗ್ರಹ

ಮುದ್ದೇಬಿಹಾಳ : ಜಿಲ್ಲೆಯಲ್ಲಿ ಖಾಸಗಿ ಸ್ವಾಮ್ಯದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸದೇ ಸರ್ಕಾರಿ ಸ್ವಾಮ್ಯದಲ್ಲಿ ಮೆಡಿಕಲ್

ಮಹಿಳೆಯರು ಹಿಂದೂ ಸಮ್ಮೇಳನ ಯಶಸ್ವಿಗೊಳಿಸಿ-ಕಾಶೀಬಾಯಿ ರಾಂಪೂರ

ಮಹಿಳೆಯರು ಹಿಂದೂ ಸಮ್ಮೇಳನ ಯಶಸ್ವಿಗೊಳಿಸಿ-ಕಾಶೀಬಾಯಿ ರಾಂಪೂರ

ಮುದ್ದೇಬಿಹಾಳ : ಪಟ್ಟಣದಲ್ಲಿ ಜ.11 ರಂದು ನಡೆಯಲಿರುವ ಹಿಂದೂ ಮಹಾ ಸಮ್ಮೇಳನ ಯಶಸ್ವಿಗೊಳಿಸುವಂತೆ ವೀರಶೈವ

ಪ್ರಥಮ ಬಾರಿಗೆ ಲಿಂಗಸ್ಗೂರಿನಲ್ಲಿ ಆಯೋಜನೆ:                       ಜ.11 ರಂದು ಆಕ್ಸಫರ್ಡ್ ಪಾಟೀಲ್ಸ್ ಮಾಸ್ಟರ್ ಮೈಂಡ್ ಅವಾರ್ಡ್

ಪ್ರಥಮ ಬಾರಿಗೆ ಲಿಂಗಸ್ಗೂರಿನಲ್ಲಿ ಆಯೋಜನೆ: ಜ.11 ರಂದು ಆಕ್ಸಫರ್ಡ್ ಪಾಟೀಲ್ಸ್ ಮಾಸ್ಟರ್ ಮೈಂಡ್ ಅವಾರ್ಡ್

ಮುದ್ದೇಬಿಹಾಳ : ಇದೇ ಪ್ರಥಮ ಬಾರಿಗೆ ಲಿಂಗಸುಗೂರಿನಲ್ಲಿ ಜ.11 ರಂದು ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಕಾಲೇಜಿನಿಂದ ಮಾಸ್ಟರ್ ಮೈಂಡ್ ಆವಾರ್ಡ್ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಆಡಳಿತಾಧಿಕಾರಿ ಅಮೀತಗೌಡ ಎಂ.ಪಾಟೀಲ ತಿಳಿಸಿದ್ದಾರೆ. ಪರೀಕ್ಷೆಯನ್ನು 10ನೇ ತರಗತಿ ಸ್ಟೇಟ್ ಬೋರ್ಡ್,ಐಸಿಎಸ್‌ಇ,ಸಿಬಿಎಸ್‌ಇ ವಿದ್ಯಾರ್ಥಿಗಳಿಗೆ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪರೀಕ್ಷೆ ತಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಳ್ಳುವ ವಿದ್ಯಾರ್ಥಿಗೆ 50 ಸಾವಿರ,ದ್ವಿತೀಯ ಸ್ಥಾನ 40 ಸಾವಿರ, ಮೂರನೇ ಸ್ಥಾನ

ಕೃಷಿ ಭಾಗ್ಯ ಯೋಜನೆ : ಕೃಷಿ ಹೊಂಡ ನಿರ್ಮಿಸಿಕೊಳ್ಳಲು ಅರ್ಜಿ ಆಹ್ವಾನ

ಕೃಷಿ ಭಾಗ್ಯ ಯೋಜನೆ : ಕೃಷಿ ಹೊಂಡ ನಿರ್ಮಿಸಿಕೊಳ್ಳಲು ಅರ್ಜಿ ಆಹ್ವಾನ

ಮುದ್ದೇಬಿಹಾಳ : ಸನ್ 2025-26ನೇ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಯಡಿ ರೈತರು ಹೊಲಗಳಲ್ಲಿ ಕೃಷಿ ಹೊಂಡ ನಿರ್ಮಿಸಿಕೊಳ್ಳಲು ಕೃಷಿ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಎಸ್.ಡಿ.ಭಾವಿಕಟ್ಟಿ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು,ಮುದ್ದೇಬಿಹಾಳ,ನಾಲತವಾಡ,ಢವಳಗಿ ಹಾಗೂ ತಾಳಿಕೋಟಿ ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ ಎಂದು ಮಾಹಿತಿ ನೀಡಿದ್ದಾರೆ.