ಪ್ರಿಯತಮನಿಗಾಗಿ ಮನೆ ಬಿಟ್ಟು ಓಡಿ ಬಂದ ₹12 ಕೋಟಿ ಆಸ್ತಿ ಒಡತಿ!

ಪ್ರಿಯತಮನಿಗಾಗಿ ಮನೆ ಬಿಟ್ಟು ಓಡಿ ಬಂದ ₹12 ಕೋಟಿ ಆಸ್ತಿ ಒಡತಿ!


ಬೆಳಗಾವಿ: ಪ್ರೀತಿಸಿ ಮದುವೆಯಾದ ಜೋಡಿ ಭದ್ರತೆ ನೀಡುವಂತೆ ಎಸ್​ಪಿ ಮೊರೆ ಹೋಗಿದ್ದಾರೆ.

ಬೆಂಗಳೂರು (Bengaluru) ಮೂಲದ ಯುವತಿ ಪ್ರಿಯಾಂಕಾ ಹಾಗೂ ಬೆಳಗಾವಿ ಮೂಲದ ಯುವಕ ರೋಹಿತ್ ದಾಂಪತ್ಯ ಜೀವನಕ್ಕೆ ಕಾಲಿಟ್ಟು ನವದಂಪತಿಗಳಾಗಿದ್ದಾರೆ. ಖಾನಾಪುರದ ದೇವಸ್ಥಾನವೊಂದರಲ್ಲಿ (Temple) ವೈವಾಹಿತ ಜೀವನಕ್ಕೆ (Marriage Life) ಕಾಲಿಟ್ಟಿದ್ದ ಜೋಡಿ ನೇರ ಎಸ್​ಪಿ ಕಚೇರಿ ಆಗಮಿಸಿ ರಕ್ಷಣೆ ನೀಡುವಂತೆ ಮನವಿ ಮಾಡಿದ್ದಾರೆ.

ಬೆಂಗಳೂರು ಮೂಲದ ಪ್ರಿಯಾಂಕಾ ಮೂರು ದಿನಗಳ ಹಿಂದೆಯಷ್ಟೇ ಮನೆ ಬಿಟ್ಟು ಪ್ರಿಯಕರನಿಗಾಗಿ ಬೆಳಗಾವಿಗೆ ಆಗಮಿಸಿದ್ದಾಳೆ. ಸದ್ಯ ರೋಹಿತ್, ಕುಟುಂಬ ಸದಸ್ಯರ ಸಮ್ಮುಖದಲ್ಲಿ ಪ್ರಿಯಾಂಕಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಅಂದಹಾಗೇ, ಪ್ರಿಯಾಂಕಾಗೆ ಬೆಂಗಳೂರಲ್ಲಿ ಸುಮಾರು 12 ಕೋಟಿ ಮೌಲ್ಯದ ಆಸ್ತಿ ಹೊಂದಿದ್ದಾರಂತೆ. ಆಕೆಯ ಪೋಷಕರು ಚಿಕ್ಕವಯಸ್ಸಿನಲ್ಲಿರುವಾಗಲೇ ಸಾವನ್ನಪ್ಪಿದ್ದು, ಸೋದರ ಮಾವನ ಆಶ್ರಯದಲ್ಲಿ ಬೆಳೆದಿದ್ದರಂತೆ.

ಇನ್ನು, ಶಿವಮೊಗ್ಗ ‌ಹಾಗೂ ಬೆಂಗಳೂರಲ್ಲಿ ಪ್ರಿಯಂಕಾ ತಂದೆ ಆಸ್ತಿ ಹೊಂದಿದ್ದು, ಪ್ರಿಯಾಂಕಾಗೆ 18 ವರ್ಷ ತುಂಬಿದ ಬಳಿಕ ಈ ಎಲ್ಲಾ ಆಸ್ತಿಗಳು ಪ್ರಿಯಂಕಾ ಹೆಸರಿಗೆ ವರ್ಗಾವಣೆಯಾಗಿದೆಯಂತೆ. ಆದರೆ ಸೋದರ ಮಾವನ ಕಿರಿಕಿರಿಗೆ ಬೇಸತ್ತು ಪ್ರಿಯಾಂಕಾ ಪ್ರಿಯಕರ ಮನೆಗೆ ಬಂದಿದ್ದರಂತೆ. ಆದರೆ ಪ್ರಿಯಾಂಕಾ-ರೋಹಿತ್ ಮದುವೆಯಾಗದಂತೆ ತಡೆಯಲು ಆಕೆಯ ಸಹೋದರ ಮಾವನ ಮಗ ಕಿರುಕುಳ ನೀಡಿದ್ದ ಎಂದು ಆರೋಪಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಮದುವೆ ಬಳಿಕ ಬೆಳಗಾವಿ ಎಸ್ ಪಿ ಡಾ. ಭೀಮಾಶಂಕರ ಗುಳೇದ್ ಅವರನ್ನು ಭೇಟಿಯಾಗಿ ಭದ್ರತೆ ಒದಗಿಸುವಂತೆ ಮನವಿ ಮಾಡಿದ್ದಾರೆ. ಖಾನಾಪುರ ಪೊಲೀಸರಿಂದ ಸೂಕ್ತ ಭದ್ರತೆ ನೀಡುವ ಭರವಸೆಯನ್ನು ಎಸ್​ಪಿ ನೀಡಿದ್ದಾರೆ.

ಇನ್ ಸ್ಟಾದಲ್ಲಿ ಪರಿಚಯ, ಲವ್ !
ಇನ್ನು, ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಪ್ರಿಯಾಂಕಾ, ಇಂದು ದೇವಸ್ಥಾನದಲ್ಲಿ ಮದುವೆಯಾಗಿದ್ದೇವೆ. ನನ್ನ ಬಳಿ ಯಾವುದೇ ದಾಖಲೆ ಇಲ್ಲ. ಬೆಂಗಳೂರಿನಲ್ಲಿ ರಕ್ಷಣೆ ಬೇಕು ಎಂದರೇ ಕಮಿಷನರ್ ಅವರನ್ನು ಭೇಟಿ ಮಾಡಲು ಹೇಳಿದ್ದಾರೆ. ಆದ್ದರಿಂದ ಅವರಿಗೆ ರಕ್ಷಣೆ ನೀಡಲು ಮನವಿ ಮಾಡಿದ್ದೇನೆ. ಮನೆಯಲ್ಲಿ ನನ್ನನ್ನು ಗೃಹ ಬಂಧನದಲ್ಲಿ ಇಟ್ಟಿದ್ದರು. ಅಲ್ಲಿಂದ ನಾನು ಬೆಳಗಾವಿಗೆ ಬಂದೇ, ಖಾನಾಪುರಕ್ಕೆ ಹೋಗಿ ಅಲ್ಲಿಯೂ ಪೊಲೀಸರಿಗೆ ದೂರು ನೀಡಿದ್ದೇವು ಎಂದು ತಿಳಿಸಿದ್ದಾರೆ.

ಪ್ರಿಯಾಂಕಾ ಹಾಗೂ ರೋಹಿತ್ ಗೆ ಇನ್ ಸ್ಟಾದಲ್ಲಿ ಪರಿಚಯ ಆಗಿದ್ದು, ಮದುವೆ ನಿಮಿತ್ತ ಬೆಳಗಾವಿಗೆ ಬಂದ ವೇಳೆ ಆಕೆ ಆತನನ್ನು ಮೊದಲ ಬಾರಿಗೆ ಭೇಟಿ ಆಗಿದ್ದಳಂತೆ. ರೋಹಿತ್ ಮನೆಯವರ ಅಕ್ಕರೆ ಹಾಗೂ ಯುವಕನ ಪ್ರೀತಿಗೆ ಮೆಚ್ಚಿ ಆತನನ್ನೇ ಮದುವೆಯಾಗಬೇಕು ಅಂತ ನಿರ್ಧಾರ ಮಾಡಿದ್ದೆ ಎಂದು ಪ್ರಿಯಾಂಕಾ ತಿಳಿಸಿದ್ದಾರೆ.

ಬೆಳಗಾವಿ ಎಸ್​ಪಿ ಹೇಳಿದ್ದೇನು?
ಘಟನೆ ಬಗ್ಗೆ ಮಾಹಿತಿ ನೀಡಿದ ಎಸ್​ಪಿ ಭೀಮಾಶಂಕರ ಗುಳೇದ್ ಅವರು, ಕಚೇರಿಗೆ ಯುವಕ-ಯುವತಿ ಆಗಮಿಸಿದ್ದರು. ಪ್ರೀತಿಸಿ ಮದುವೆಯಾಗಿದ್ದೇವೆ, ನಮಗೆ ಕಾನೂನು ರಕ್ಷಣೆ ಬೇಕು ಎಂದು ಮನವಿ ಮಾಡಿದ್ದರು. ಇದರಂತೆ ಖಾನಾಪುರ ಪೊಲೀಸರಿಗೆ ಸೂಕ್ತ ರಕ್ಷಣೆ ನೀಡುವಂತೆ ಸೂಚನೆ ನೀಡಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ. ಒಂದು ತಿಂಗಳ ಹಿಂದೆಯೇ ಖಾನಾಪುರ ಪೊಲೀಸ್ ಠಾಣೆಯಲ್ಲಿ ಯುವತಿ ದೂರು ನೀಡಿದ್ದರು. ಆಕೆಯ ದಾಖಲೆಗಳು ಹಾಗೂ ಆಸ್ತಿ ವಿಚಾರದ ಬಗ್ಗೆ ದೂರು ನೀಡಿದ್ದರು. ಆ ವೇಳೆ ಸಂಬಂಧಿಗಳನ್ನು ಕರೆದು ಕೇಳಿದಾಗ ಅವರು ಯಾವುದೇ ದಾಖಲೆಗಳು ನಮ್ಮ ಬಳಿ ಇಲ್ಲ ಎಂದು ತಿಳಿಸಿದ್ದರಂತೆ. ಆದ್ದರಿಂದ ಯುವತಿಗೆ ಸಂಬಂಧಪಟ್ಟ ಶಾಲಾ-ಕಾಲೇಜುಗಳಿಂದ ಮತ್ತೊಮ್ಮೆ ದಾಖಲೆ ಪಡೆದುಕೊಳ್ಳಲು ಸೂಚನೆ ನೀಡಿದ್ದೇವೆ. ಆಸ್ತಿ ವಿಚಾರ ಸಿವಿಲ್ ಕೇಸ್ ಆಗಿದ್ದು, ಕೋರ್ಟ್​ ಗೆ ಅರ್ಜಿ ಸಲ್ಲಿಕೆ ಮಾಡಲು ಸೂಚನೆ ನೀಡಿದ್ದೇವೆ ಎಂದು ವಿವರಿಸಿದರು.

Latest News

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ;                                                                                 ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಅಭ್ಯುದಯ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ; ದ್ವಿತೀಯ ಪಿಯುಸಿ ಫಲಿತಾಂಶ : ಮುದ್ದೇಬಿಹಾಳಕ್ಕೆ ಆಸೀಫಾ ಪ್ರಥಮ

ಮುದ್ದೇಬಿಹಾಳ : ಪಟ್ಟಣದ ಅಭ್ಯುದಯ ಪಿಯು ಸೈನ್ಸ್ ಕಾಲೇಜಿನ ದ್ವಿತೀಯ ಪಿಯುಸಿ ಫಲಿತಾಂಶ ಶೇ.100ರಷ್ಟಾಗಿದೆ.ಪರೀಕ್ಷೆಗೆ

ಯೂರಿಯಾ,ಡಿಎಪಿ ರಸಗೊಬ್ಬರ ವಿತರಣೆಗೆ ಎಫ್.ಐ.ಡಿ ಕಡ್ಡಾಯ

ಯೂರಿಯಾ,ಡಿಎಪಿ ರಸಗೊಬ್ಬರ ವಿತರಣೆಗೆ ಎಫ್.ಐ.ಡಿ ಕಡ್ಡಾಯ

ಮುದ್ದೇಬಿಹಾಳ : ಮುಂಗಾರು ಹಂಗಾಮಿನಲ್ಲಿ ಯೂರಿಯಾ ವಿತರಣೆಗೆ ಆಪ್ ಅಭಿವೃದ್ಧಿಪಡಿಸಲಾಗಿದ್ದು ಎಲ್ಲ ಕೃಷಿ ಪರಿಕರ

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS  ವಿದ್ಯಾರ್ಥಿಗಳ ಸನ್ಮಾನ                                                                         ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS ವಿದ್ಯಾರ್ಥಿಗಳ ಸನ್ಮಾನ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಮುದ್ದೇಬಿಹಾಳ : ಮುದ್ದೇಬಿಹಾಳ ತಾಲ್ಲೂಕು ಗುರುತಿಸಿಕೊಳ್ಳುವುದೇ ನಾಗರಬೆಟ್ಟದ ಶಿಕ್ಷಣ ಸಂಸ್ಥೆಯ ಶೈಕ್ಷಣಿಕ ಸಾಧನೆಯ ಕಾರಣಕ್ಕಾಗಿ.ಈ ಭಾಗದಲ್ಲಿ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ ಎಂದು ಸಮಾಜ ಸೇವಕ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಸೈನ್ಸ್ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಆಕ್ಸಫರ್ಡ್ ಪಾಟೀಲ್ಸ್ ಜೀನಿಯಸ್ ಅವಾರ್ಡ್ ಸ್ಪರ್ಧೆಯಲ್ಲಿ ಅವರು ಮಾತನಾಡಿದರು. ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳಿಗೆ ಸಂಸ್ಕಾರ,ಸoಸ್ಕೃತಿ,ಪರoಪರೆ ನೀಡುವಲ್ಲಿ ನಾವು ಮರೆತಿದ್ದೇವೆ.ಅದನ್ನು ನೀಡುವ ಕಾರ್ಯ

ಎರಡು ಮೇಕೆಗಳು, 20ಕ್ಕೂ ಅಧಿಕ ಕೋಳಿಗಳು ಸಜೀವ ದಹನ

ಎರಡು ಮೇಕೆಗಳು, 20ಕ್ಕೂ ಅಧಿಕ ಕೋಳಿಗಳು ಸಜೀವ ದಹನ

ಮುದ್ದೇಬಿಹಾಳ : ಬಿರು ಬಿಸಿಲಿನ ತಾಪದ ತೀವ್ರತೆಗೆ ಗುಡಿಸಲು ಹಾಗೂ ಜಾನುವಾರು ಕಟ್ಟುವ ಶೆಡ್‌ಗಳಿಗೆ ಆಕಸ್ಮಿಕ ಬೆಂಕಿ ತಗುಲಿ ಎರಡು ಮೇಕೆ ಹಾಗೂ 20ಕ್ಕೂ ಅಧಿಕ ಕೋಳಿಗಳು ಸಜೀವ ದಹನಗೊಂಡಿರುವ ಘಟನೆ ತಾಲ್ಲೂಕಿನ ಅಡವಿ ಹುಲಗಬಾಳದಲ್ಲಿ ಶನಿವಾರ ನಡೆದಿದೆ. ಅಡವಿ ಹುಲಗಬಾಳ ಗ್ರಾಮದ ಮೋತಿಲಾಲ ರಾಠೋಡ ಅವರ ಹೊಲದಲ್ಲಿದ್ದ ವಾಸಕ್ಕಿದ್ದ ಶೆಡ್ ಹಾಗೂ ಪ್ರಾಣಿಗಳಿದ್ದ ಶೆಡ್‌ಗೆ ಬೆಂಕಿ ತಗುಲಿದೆ.ಈ ವೇಳೆ 23 ಮೇಕೆಗಳ ಪೈಕಿ 2 ಮೇಕೆಗಳು ಹಾಗೂ 20ಕ್ಕೂ