ಪ್ರಿಯತಮನಿಗಾಗಿ ಮನೆ ಬಿಟ್ಟು ಓಡಿ ಬಂದ ₹12 ಕೋಟಿ ಆಸ್ತಿ ಒಡತಿ!

ಪ್ರಿಯತಮನಿಗಾಗಿ ಮನೆ ಬಿಟ್ಟು ಓಡಿ ಬಂದ ₹12 ಕೋಟಿ ಆಸ್ತಿ ಒಡತಿ!


ಬೆಳಗಾವಿ: ಪ್ರೀತಿಸಿ ಮದುವೆಯಾದ ಜೋಡಿ ಭದ್ರತೆ ನೀಡುವಂತೆ ಎಸ್​ಪಿ ಮೊರೆ ಹೋಗಿದ್ದಾರೆ.

ಬೆಂಗಳೂರು (Bengaluru) ಮೂಲದ ಯುವತಿ ಪ್ರಿಯಾಂಕಾ ಹಾಗೂ ಬೆಳಗಾವಿ ಮೂಲದ ಯುವಕ ರೋಹಿತ್ ದಾಂಪತ್ಯ ಜೀವನಕ್ಕೆ ಕಾಲಿಟ್ಟು ನವದಂಪತಿಗಳಾಗಿದ್ದಾರೆ. ಖಾನಾಪುರದ ದೇವಸ್ಥಾನವೊಂದರಲ್ಲಿ (Temple) ವೈವಾಹಿತ ಜೀವನಕ್ಕೆ (Marriage Life) ಕಾಲಿಟ್ಟಿದ್ದ ಜೋಡಿ ನೇರ ಎಸ್​ಪಿ ಕಚೇರಿ ಆಗಮಿಸಿ ರಕ್ಷಣೆ ನೀಡುವಂತೆ ಮನವಿ ಮಾಡಿದ್ದಾರೆ.

ಬೆಂಗಳೂರು ಮೂಲದ ಪ್ರಿಯಾಂಕಾ ಮೂರು ದಿನಗಳ ಹಿಂದೆಯಷ್ಟೇ ಮನೆ ಬಿಟ್ಟು ಪ್ರಿಯಕರನಿಗಾಗಿ ಬೆಳಗಾವಿಗೆ ಆಗಮಿಸಿದ್ದಾಳೆ. ಸದ್ಯ ರೋಹಿತ್, ಕುಟುಂಬ ಸದಸ್ಯರ ಸಮ್ಮುಖದಲ್ಲಿ ಪ್ರಿಯಾಂಕಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಅಂದಹಾಗೇ, ಪ್ರಿಯಾಂಕಾಗೆ ಬೆಂಗಳೂರಲ್ಲಿ ಸುಮಾರು 12 ಕೋಟಿ ಮೌಲ್ಯದ ಆಸ್ತಿ ಹೊಂದಿದ್ದಾರಂತೆ. ಆಕೆಯ ಪೋಷಕರು ಚಿಕ್ಕವಯಸ್ಸಿನಲ್ಲಿರುವಾಗಲೇ ಸಾವನ್ನಪ್ಪಿದ್ದು, ಸೋದರ ಮಾವನ ಆಶ್ರಯದಲ್ಲಿ ಬೆಳೆದಿದ್ದರಂತೆ.

ಇನ್ನು, ಶಿವಮೊಗ್ಗ ‌ಹಾಗೂ ಬೆಂಗಳೂರಲ್ಲಿ ಪ್ರಿಯಂಕಾ ತಂದೆ ಆಸ್ತಿ ಹೊಂದಿದ್ದು, ಪ್ರಿಯಾಂಕಾಗೆ 18 ವರ್ಷ ತುಂಬಿದ ಬಳಿಕ ಈ ಎಲ್ಲಾ ಆಸ್ತಿಗಳು ಪ್ರಿಯಂಕಾ ಹೆಸರಿಗೆ ವರ್ಗಾವಣೆಯಾಗಿದೆಯಂತೆ. ಆದರೆ ಸೋದರ ಮಾವನ ಕಿರಿಕಿರಿಗೆ ಬೇಸತ್ತು ಪ್ರಿಯಾಂಕಾ ಪ್ರಿಯಕರ ಮನೆಗೆ ಬಂದಿದ್ದರಂತೆ. ಆದರೆ ಪ್ರಿಯಾಂಕಾ-ರೋಹಿತ್ ಮದುವೆಯಾಗದಂತೆ ತಡೆಯಲು ಆಕೆಯ ಸಹೋದರ ಮಾವನ ಮಗ ಕಿರುಕುಳ ನೀಡಿದ್ದ ಎಂದು ಆರೋಪಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಮದುವೆ ಬಳಿಕ ಬೆಳಗಾವಿ ಎಸ್ ಪಿ ಡಾ. ಭೀಮಾಶಂಕರ ಗುಳೇದ್ ಅವರನ್ನು ಭೇಟಿಯಾಗಿ ಭದ್ರತೆ ಒದಗಿಸುವಂತೆ ಮನವಿ ಮಾಡಿದ್ದಾರೆ. ಖಾನಾಪುರ ಪೊಲೀಸರಿಂದ ಸೂಕ್ತ ಭದ್ರತೆ ನೀಡುವ ಭರವಸೆಯನ್ನು ಎಸ್​ಪಿ ನೀಡಿದ್ದಾರೆ.

ಇನ್ ಸ್ಟಾದಲ್ಲಿ ಪರಿಚಯ, ಲವ್ !
ಇನ್ನು, ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಪ್ರಿಯಾಂಕಾ, ಇಂದು ದೇವಸ್ಥಾನದಲ್ಲಿ ಮದುವೆಯಾಗಿದ್ದೇವೆ. ನನ್ನ ಬಳಿ ಯಾವುದೇ ದಾಖಲೆ ಇಲ್ಲ. ಬೆಂಗಳೂರಿನಲ್ಲಿ ರಕ್ಷಣೆ ಬೇಕು ಎಂದರೇ ಕಮಿಷನರ್ ಅವರನ್ನು ಭೇಟಿ ಮಾಡಲು ಹೇಳಿದ್ದಾರೆ. ಆದ್ದರಿಂದ ಅವರಿಗೆ ರಕ್ಷಣೆ ನೀಡಲು ಮನವಿ ಮಾಡಿದ್ದೇನೆ. ಮನೆಯಲ್ಲಿ ನನ್ನನ್ನು ಗೃಹ ಬಂಧನದಲ್ಲಿ ಇಟ್ಟಿದ್ದರು. ಅಲ್ಲಿಂದ ನಾನು ಬೆಳಗಾವಿಗೆ ಬಂದೇ, ಖಾನಾಪುರಕ್ಕೆ ಹೋಗಿ ಅಲ್ಲಿಯೂ ಪೊಲೀಸರಿಗೆ ದೂರು ನೀಡಿದ್ದೇವು ಎಂದು ತಿಳಿಸಿದ್ದಾರೆ.

ಪ್ರಿಯಾಂಕಾ ಹಾಗೂ ರೋಹಿತ್ ಗೆ ಇನ್ ಸ್ಟಾದಲ್ಲಿ ಪರಿಚಯ ಆಗಿದ್ದು, ಮದುವೆ ನಿಮಿತ್ತ ಬೆಳಗಾವಿಗೆ ಬಂದ ವೇಳೆ ಆಕೆ ಆತನನ್ನು ಮೊದಲ ಬಾರಿಗೆ ಭೇಟಿ ಆಗಿದ್ದಳಂತೆ. ರೋಹಿತ್ ಮನೆಯವರ ಅಕ್ಕರೆ ಹಾಗೂ ಯುವಕನ ಪ್ರೀತಿಗೆ ಮೆಚ್ಚಿ ಆತನನ್ನೇ ಮದುವೆಯಾಗಬೇಕು ಅಂತ ನಿರ್ಧಾರ ಮಾಡಿದ್ದೆ ಎಂದು ಪ್ರಿಯಾಂಕಾ ತಿಳಿಸಿದ್ದಾರೆ.

ಬೆಳಗಾವಿ ಎಸ್​ಪಿ ಹೇಳಿದ್ದೇನು?
ಘಟನೆ ಬಗ್ಗೆ ಮಾಹಿತಿ ನೀಡಿದ ಎಸ್​ಪಿ ಭೀಮಾಶಂಕರ ಗುಳೇದ್ ಅವರು, ಕಚೇರಿಗೆ ಯುವಕ-ಯುವತಿ ಆಗಮಿಸಿದ್ದರು. ಪ್ರೀತಿಸಿ ಮದುವೆಯಾಗಿದ್ದೇವೆ, ನಮಗೆ ಕಾನೂನು ರಕ್ಷಣೆ ಬೇಕು ಎಂದು ಮನವಿ ಮಾಡಿದ್ದರು. ಇದರಂತೆ ಖಾನಾಪುರ ಪೊಲೀಸರಿಗೆ ಸೂಕ್ತ ರಕ್ಷಣೆ ನೀಡುವಂತೆ ಸೂಚನೆ ನೀಡಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ. ಒಂದು ತಿಂಗಳ ಹಿಂದೆಯೇ ಖಾನಾಪುರ ಪೊಲೀಸ್ ಠಾಣೆಯಲ್ಲಿ ಯುವತಿ ದೂರು ನೀಡಿದ್ದರು. ಆಕೆಯ ದಾಖಲೆಗಳು ಹಾಗೂ ಆಸ್ತಿ ವಿಚಾರದ ಬಗ್ಗೆ ದೂರು ನೀಡಿದ್ದರು. ಆ ವೇಳೆ ಸಂಬಂಧಿಗಳನ್ನು ಕರೆದು ಕೇಳಿದಾಗ ಅವರು ಯಾವುದೇ ದಾಖಲೆಗಳು ನಮ್ಮ ಬಳಿ ಇಲ್ಲ ಎಂದು ತಿಳಿಸಿದ್ದರಂತೆ. ಆದ್ದರಿಂದ ಯುವತಿಗೆ ಸಂಬಂಧಪಟ್ಟ ಶಾಲಾ-ಕಾಲೇಜುಗಳಿಂದ ಮತ್ತೊಮ್ಮೆ ದಾಖಲೆ ಪಡೆದುಕೊಳ್ಳಲು ಸೂಚನೆ ನೀಡಿದ್ದೇವೆ. ಆಸ್ತಿ ವಿಚಾರ ಸಿವಿಲ್ ಕೇಸ್ ಆಗಿದ್ದು, ಕೋರ್ಟ್​ ಗೆ ಅರ್ಜಿ ಸಲ್ಲಿಕೆ ಮಾಡಲು ಸೂಚನೆ ನೀಡಿದ್ದೇವೆ ಎಂದು ವಿವರಿಸಿದರು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ