ಸಿಂಗಲ್ ಟೆಂಡರ್‌ಗೆ ಅವಕಾಶ ಕೊಡುವುದಿಲ್ಲ: ಸುಳ್ಳು ಹೇಳುವುದೇ ಶಾಸಕ ನಾಡಗೌಡರ ಕಾಯಕ-ನಡಹಳ್ಳಿ

ಸಿಂಗಲ್ ಟೆಂಡರ್‌ಗೆ ಅವಕಾಶ ಕೊಡುವುದಿಲ್ಲ: ಸುಳ್ಳು ಹೇಳುವುದೇ ಶಾಸಕ ನಾಡಗೌಡರ ಕಾಯಕ-ನಡಹಳ್ಳಿ

ಮುದ್ದೇಬಿಹಾಳ : ಇವತ್ತಿನ ಶಾಸಕ ಅಪ್ಪಾಜಿ ನಾಡಗೌಡರಿಗೆ ಸರಕಾರದಿಂದ ಹಣ ತರುವ ಯೋಗ್ಯತೆ ಇಲ್ಲ. ಬೆಳಗ್ಗೆ ಎದ್ದರೆ ಸುಳ್ಳು ಹೇಳುವುದು, ಸಿಕ್ಕ ಸಿಕ್ಕ ವೇದಿಕೆಗಳಲ್ಲಿ ಸುಳ್ಳು ಹೇಳುವ, ನಾಟಕ ಮಾಡುವುದನ್ನು ಮಾಡುತ್ತಿದ್ದಾರೆ ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಆರೋಪಿಸಿದರು.
ಪಟ್ಟಣದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಶಾಸಕರ ವಿರುದ್ಧ ಹಲವು ಆರೋಪಗಳನ್ನು ಮಾಡಿದರು.

ನಾಲತವಾಡದಲ್ಲಿ ಹಕ್ಕುಪತ್ರ ವಿತರಿಸಿರುವಲ್ಲಿ, ಭೂಮಿ ಪೂಜೆ ಮಾಡಿರುವ ಸ್ಥಳಗಳಲ್ಲಿ ಜನರನ್ನು ಸುಳ್ಳು ಹೇಳಿ ಯಾಮಾರಿಸಿದ್ದಾರೆ.ಇವರು ರಾಜಕೀಯ ಜೀವನದಲ್ಲಿ ಏನೇನು ಮಾಡಿದ್ದಾರೋ ದಾಖಲೆಗಳ ಸಮೇತ ತೆರೆದಿಡುತ್ತೇನೆ.ವಾರದಲ್ಲಿ ಎರಡು ಪತ್ರಿಕಾಗೋಷ್ಠಿ ನಡೆಸಿ ಒಂದೊAದು ಹೊಸ ವಿಚಾರಗಳನ್ನು ದಾಖಲಾತಿಗಳ ಸಮೇತ ಬಿಚ್ಚಿಡುವ ಕೆಲಸ ಮಾಡುತ್ತೇನೆ ಎಂದು ಗುಡುಗಿದರು.

ಪದೇ ಪದೇ ಸುಳ್ಳಿಗೆ ಜನರು ಮಾರು ಹೋಗುವುದಿಲ್ಲ. ಸಿಂಗಲ್ ಟೆಂಡರ್ ನಿಮ್ಮ ಶಿಷ್ಯನಿಗೆ ಅದು ಹೇಗೆ ಕೊಡುತ್ತೀರಿ ಎಂದು ನೋಡುತ್ತೇನೆ ಎಂದು ಚಿಮ್ಮಲಗಿ ಏತ ನೀರಾವರಿ ಯೋಜನೆ ಅಮರೇಶ್ವರ ದೇವಸ್ಥಾನದ ಬಳಿ ಈಚೇಗೆ ಶಾಸಕರು ಭೂಮಿ ಪೂಜೆ ನೆರವೇರಿಸಿದ ಅನುದಾನದ ಕುರಿತು ಶಾಸಕರಿಗೆ ಸವಾಲು ಹಾಕಿದರು. ನಿಮ್ಮ ಸ್ವಾರ್ಥಕ್ಕೆ ಅಧಿಕಾರಿಗಳನ್ನು ಬಲಿಪಶು ಮಾಡಬೇಡಿ ಎಂದು ಹರಿಹಾಯ್ದರು.


ಬಡವರಿಗೆ ತೊಂದರೆ ಮಾಡಬೇಡಿ
ಮುದ್ದೇಬಿಹಾಳದ ಕ್ಷೇತ್ರದ ಈಗಿನ ಶಾಸಕರಿಗೆ ದಲಿತರು, ಬಡವರು ಕಂಡರೆ ಹೊಟ್ಟೆ ಕಿಚ್ಚು. ಓಟು ಹಾಕುವುದಕ್ಕಷ್ಟೇ ದಲಿತರು,ಬಡವರು ಬೇಕು.ಇವರು ಚುನಾವಣೆ ಸಮಯದಲ್ಲಿ ಯಾಮಾರಿಸಿ ಓಟು ಹಾಕಿಸಿಕೊಂಡಿದ್ದಾರೆ ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಹಾಲಿ ಶಾಸಕ ಅಪ್ಪಾಜಿ ನಾಡಗೌಡರ ವಿರುದ್ಧ ಹರಿಹಾಯ್ದರು.

ಬಡವರು ಸಾಲ ಮಾಡಿ ಅಂಗಡಿ ಹಾಕಿಕೊಂಡಿದ್ದಾರೆ. ಅಂತವರ ಅಂಗಡಿಗಳನ್ನು ಶಾಸಕರು ಮುರಿದು ಹಾಕಿಸಿದ್ದಾರೆ.ಬಡವರಾದ ಅವರಿಗೆ ಬೇರೆ ಉದ್ಯೋಗ ಇಲ್ಲ.ಅವರನ್ನು ಬೀದಿಗೆ ತಂದು ನಿಲ್ಲಿಸಿದ್ದಾರೆ.ಈ ಬಗ್ಗೆ ನಾನು ಪೊಲೀಸ್ ವರಿಷ್ಠಾಧಿಕಾರಿಗೆ, ತಾಲ್ಲೂಕಿನ ಅಧಿಕಾರಿಗಳಿಗೆ ಮಾತನಾಡಿ ನ್ಯಾಯಯುತವಾಗಿ ಬದುಕಲು ಬಿಡಿ ಎಂದು ಹೇಳಿದ್ದೇನೆ. ಅಪ್ಪಾಜಿಗೆ ಬಡವರ ಶಾಪ ತಟ್ಟುತ್ತದೆ.ಬಡವರ ಶಾಪ ದೇವರ ಶಾಪಕ್ಕಿಂತ ಕೆಟ್ಟದ್ದು ಎಂದು ಹೇಳಿದರಲ್ಲದೇ ಮುಂದಿನ ಚುನಾವಣೆಯಲ್ಲಿ ನಾನು ಆಯ್ಕೆಯಾದರೆ ಮುದ್ದೇಬಿಹಾಳ ಮತಕ್ಷೇತ್ರದ ಪ್ರಮುಖ ಪಟ್ಟಣಗಳಲ್ಲಿ ಎಸ್.ಸಿ.,ಎಸ್ಟಿ ,ಹಿಂದುಳಿದವರು, ಬಡವರು ಫುಟಪಾತ್‌ನಲ್ಲಿ ಅಂಗಡಿಗಳನ್ನು ಮಾಡಿಕೊಡುತ್ತೇನೆ.ಅಗತ್ಯವಿದ್ದರೆ ಸರ್ಕಾರದ ಅನುದಾನ ಪಡೆದುಕೊಂಡು ಅವರ ನೆರವಿಗೆ ನಿಲ್ಲುವು ಕೆಲಸ ಮಾಡುತ್ತೇನೆ ಎಂದು ನಡಹಳ್ಳಿ ಹೇಳಿದರು.ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ, ಅಶೋಕ ರಾಠೋಡ, ಪುರಸಭೆ ಸದಸ್ಯ ಬಸಪ್ಪ ತಟ್ಟಿ,ಸಹನಾ ಬಡಿಗೇರ ಇದ್ದರು.

Latest News

ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ : ನನಗೆ ಬಿ.ಎಸ್.ಯಡಿಯೂರಪ್ಪನವರು ರಾಜಕೀಯ ಗುರುಗಳು.ರಾಜಕೀಯ ಭವಿಷ್ಯ ಕಲ್ಪಿಸಿದ ಮಾರ್ಗದರ್ಶಕರಾಗಿದ್ದಾರೆ.ಮೇ.9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ:                ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ: ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಮುದ್ದೇಬಿಹಾಳ : ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಒಟ್ಟು ಮೂರು ಪೆನಲ್‌ಗಳು ಸ್ಪರ್ಧಿಸಿದ್ದವು.ಅದರಲ್ಲಿ

ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ನಿರ್ಲಕ್ಷ : ರೈತರ ಆಕ್ರೋಶ

ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ನಿರ್ಲಕ್ಷ : ರೈತರ ಆಕ್ರೋಶ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್ ಅಡಿ ನಿರ್ಮಿಸಲಾದ ಕಾಲುವೆ ಸಂಖ್ಯೆ 16ಎ- ಲ್ಯಾಟರಲ್ ನಂ.2 ಕಾಲುವೆ

ಸರ್ಕಾರಿ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ-ಸಿ.ಎಸ್.ನಾಡಗೌಡ

ಸರ್ಕಾರಿ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಖಾಸಗಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ದೊರೆಯುತ್ತದೆ ಎಂಬ ಪಾಲಕರಲ್ಲಿರುವ ಅಭಿಪ್ರಾಯ ಸರಿಯಲ್ಲ.ಸರ್ಕಾರಿ

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಹುಲ್ಲೂರ ಗ್ರಾಮದ ಎಸ್.ಎನ್.ಡಿ ನ್ಯಾಷನಲ್ ಪಬ್ಲಿಕ್ ಶಾಲೆಗೆ 2025-26ನೇ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್. ಸಿ ಪರೀಕ್ಷೆಯಲ್ಲಿ ಪ್ರಥಮ ವರ್ಷದಲ್ಲಿಯೇ ಶೇ. 100 ರಷ್ಟು ಫಲಿತಾಂಶ ದಾಖಲಿಸಿದೆ. ಮೂವರು ಡಿಸ್ಟಿಂಕ್ಷನ್,ಮೂವರು ಪ್ರಥಮ ದರ್ಜೆ,ಇಬ್ಬರು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ದೀಪಾ ಹರಿಂದ್ರಾಳ 90% ರಷ್ಟು ಅಂಕ ಪಡೆದು ಶಾಲೆಗೆ ಪ್ರಥಮ, ದೀಕ್ಷಾ ಬೂದಿಹಾಳ 86.24% ದ್ವಿತೀಯ ಸ್ಥಾನ ಹಾಗೂ ಪೂಜಾ ಕೆಸರಗೊಪ್ಪ 85.12 % ಪಡೆದುಕೊಂಡಿದ್ದಾರೆ. ಕನ್ನಡ ವಿಷಯಕ್ಕೆ

ಎಸ್.ಎಸ್.ಎಲ್.ಸಿ ಪರೀಕ್ಷೆ:                                         ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಎಸ್.ಎಸ್.ಎಲ್.ಸಿ ಪರೀಕ್ಷೆ: ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಸರೂರ ಕ್ರಾಸ್ ಬಳಿ ಇರುವ ಕವಡಿಮಟ್ಟಿಯ ದಿ ಆರ್ಚ್ ಏಂಜಲ್ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ಪ್ರಥಮ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. 100 ರಷ್ಟು ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾಗಿದ್ದ ಮೊದಲ ಬ್ಯಾಚ್‌ನ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ. ಸುಮೈಯಾ ವೈ. ಮುಲ್ಲಾ: ಶೇ. 96.32 ಶಾಲೆಗೆ ಪ್ರಥಮ,ಜವೇರಿಯಾ ಅಂಬರ್ ಕೆ. ಯತ್ತಿನಮನಿ ಶೇ. 94.56 ಹಾಗೂ ಉಮ್ಮೆಐಮನ್ ಎಸ್. ಯಲಿಗಾರ್