ಸಿಂಗಲ್ ಟೆಂಡರ್‌ಗೆ ಅವಕಾಶ ಕೊಡುವುದಿಲ್ಲ: ಸುಳ್ಳು ಹೇಳುವುದೇ ಶಾಸಕ ನಾಡಗೌಡರ ಕಾಯಕ-ನಡಹಳ್ಳಿ

ಸಿಂಗಲ್ ಟೆಂಡರ್‌ಗೆ ಅವಕಾಶ ಕೊಡುವುದಿಲ್ಲ: ಸುಳ್ಳು ಹೇಳುವುದೇ ಶಾಸಕ ನಾಡಗೌಡರ ಕಾಯಕ-ನಡಹಳ್ಳಿ

ಮುದ್ದೇಬಿಹಾಳ : ಇವತ್ತಿನ ಶಾಸಕ ಅಪ್ಪಾಜಿ ನಾಡಗೌಡರಿಗೆ ಸರಕಾರದಿಂದ ಹಣ ತರುವ ಯೋಗ್ಯತೆ ಇಲ್ಲ. ಬೆಳಗ್ಗೆ ಎದ್ದರೆ ಸುಳ್ಳು ಹೇಳುವುದು, ಸಿಕ್ಕ ಸಿಕ್ಕ ವೇದಿಕೆಗಳಲ್ಲಿ ಸುಳ್ಳು ಹೇಳುವ, ನಾಟಕ ಮಾಡುವುದನ್ನು ಮಾಡುತ್ತಿದ್ದಾರೆ ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಆರೋಪಿಸಿದರು.
ಪಟ್ಟಣದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಶಾಸಕರ ವಿರುದ್ಧ ಹಲವು ಆರೋಪಗಳನ್ನು ಮಾಡಿದರು.

ನಾಲತವಾಡದಲ್ಲಿ ಹಕ್ಕುಪತ್ರ ವಿತರಿಸಿರುವಲ್ಲಿ, ಭೂಮಿ ಪೂಜೆ ಮಾಡಿರುವ ಸ್ಥಳಗಳಲ್ಲಿ ಜನರನ್ನು ಸುಳ್ಳು ಹೇಳಿ ಯಾಮಾರಿಸಿದ್ದಾರೆ.ಇವರು ರಾಜಕೀಯ ಜೀವನದಲ್ಲಿ ಏನೇನು ಮಾಡಿದ್ದಾರೋ ದಾಖಲೆಗಳ ಸಮೇತ ತೆರೆದಿಡುತ್ತೇನೆ.ವಾರದಲ್ಲಿ ಎರಡು ಪತ್ರಿಕಾಗೋಷ್ಠಿ ನಡೆಸಿ ಒಂದೊAದು ಹೊಸ ವಿಚಾರಗಳನ್ನು ದಾಖಲಾತಿಗಳ ಸಮೇತ ಬಿಚ್ಚಿಡುವ ಕೆಲಸ ಮಾಡುತ್ತೇನೆ ಎಂದು ಗುಡುಗಿದರು.

ಪದೇ ಪದೇ ಸುಳ್ಳಿಗೆ ಜನರು ಮಾರು ಹೋಗುವುದಿಲ್ಲ. ಸಿಂಗಲ್ ಟೆಂಡರ್ ನಿಮ್ಮ ಶಿಷ್ಯನಿಗೆ ಅದು ಹೇಗೆ ಕೊಡುತ್ತೀರಿ ಎಂದು ನೋಡುತ್ತೇನೆ ಎಂದು ಚಿಮ್ಮಲಗಿ ಏತ ನೀರಾವರಿ ಯೋಜನೆ ಅಮರೇಶ್ವರ ದೇವಸ್ಥಾನದ ಬಳಿ ಈಚೇಗೆ ಶಾಸಕರು ಭೂಮಿ ಪೂಜೆ ನೆರವೇರಿಸಿದ ಅನುದಾನದ ಕುರಿತು ಶಾಸಕರಿಗೆ ಸವಾಲು ಹಾಕಿದರು. ನಿಮ್ಮ ಸ್ವಾರ್ಥಕ್ಕೆ ಅಧಿಕಾರಿಗಳನ್ನು ಬಲಿಪಶು ಮಾಡಬೇಡಿ ಎಂದು ಹರಿಹಾಯ್ದರು.


ಬಡವರಿಗೆ ತೊಂದರೆ ಮಾಡಬೇಡಿ
ಮುದ್ದೇಬಿಹಾಳದ ಕ್ಷೇತ್ರದ ಈಗಿನ ಶಾಸಕರಿಗೆ ದಲಿತರು, ಬಡವರು ಕಂಡರೆ ಹೊಟ್ಟೆ ಕಿಚ್ಚು. ಓಟು ಹಾಕುವುದಕ್ಕಷ್ಟೇ ದಲಿತರು,ಬಡವರು ಬೇಕು.ಇವರು ಚುನಾವಣೆ ಸಮಯದಲ್ಲಿ ಯಾಮಾರಿಸಿ ಓಟು ಹಾಕಿಸಿಕೊಂಡಿದ್ದಾರೆ ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಹಾಲಿ ಶಾಸಕ ಅಪ್ಪಾಜಿ ನಾಡಗೌಡರ ವಿರುದ್ಧ ಹರಿಹಾಯ್ದರು.

ಬಡವರು ಸಾಲ ಮಾಡಿ ಅಂಗಡಿ ಹಾಕಿಕೊಂಡಿದ್ದಾರೆ. ಅಂತವರ ಅಂಗಡಿಗಳನ್ನು ಶಾಸಕರು ಮುರಿದು ಹಾಕಿಸಿದ್ದಾರೆ.ಬಡವರಾದ ಅವರಿಗೆ ಬೇರೆ ಉದ್ಯೋಗ ಇಲ್ಲ.ಅವರನ್ನು ಬೀದಿಗೆ ತಂದು ನಿಲ್ಲಿಸಿದ್ದಾರೆ.ಈ ಬಗ್ಗೆ ನಾನು ಪೊಲೀಸ್ ವರಿಷ್ಠಾಧಿಕಾರಿಗೆ, ತಾಲ್ಲೂಕಿನ ಅಧಿಕಾರಿಗಳಿಗೆ ಮಾತನಾಡಿ ನ್ಯಾಯಯುತವಾಗಿ ಬದುಕಲು ಬಿಡಿ ಎಂದು ಹೇಳಿದ್ದೇನೆ. ಅಪ್ಪಾಜಿಗೆ ಬಡವರ ಶಾಪ ತಟ್ಟುತ್ತದೆ.ಬಡವರ ಶಾಪ ದೇವರ ಶಾಪಕ್ಕಿಂತ ಕೆಟ್ಟದ್ದು ಎಂದು ಹೇಳಿದರಲ್ಲದೇ ಮುಂದಿನ ಚುನಾವಣೆಯಲ್ಲಿ ನಾನು ಆಯ್ಕೆಯಾದರೆ ಮುದ್ದೇಬಿಹಾಳ ಮತಕ್ಷೇತ್ರದ ಪ್ರಮುಖ ಪಟ್ಟಣಗಳಲ್ಲಿ ಎಸ್.ಸಿ.,ಎಸ್ಟಿ ,ಹಿಂದುಳಿದವರು, ಬಡವರು ಫುಟಪಾತ್‌ನಲ್ಲಿ ಅಂಗಡಿಗಳನ್ನು ಮಾಡಿಕೊಡುತ್ತೇನೆ.ಅಗತ್ಯವಿದ್ದರೆ ಸರ್ಕಾರದ ಅನುದಾನ ಪಡೆದುಕೊಂಡು ಅವರ ನೆರವಿಗೆ ನಿಲ್ಲುವು ಕೆಲಸ ಮಾಡುತ್ತೇನೆ ಎಂದು ನಡಹಳ್ಳಿ ಹೇಳಿದರು.ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ, ಅಶೋಕ ರಾಠೋಡ, ಪುರಸಭೆ ಸದಸ್ಯ ಬಸಪ್ಪ ತಟ್ಟಿ,ಸಹನಾ ಬಡಿಗೇರ ಇದ್ದರು.

Latest News

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಈ ವರ್ಷ ಹಿಂದೆoದಿಗಿoತಲೂ ಅಧಿಕ ಪ್ರಮಾಣದಲ್ಲಿ ಬರಗಾಲ ಕಾಡುತ್ತಿದೆ.ಆದರೆ ಕೆಲವರು ಬರಗಾಲವನ್ನು

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಅವೈಜ್ಞಾನಿಕ ಆದಾಯ ಮಿತಿ ರದ್ದುಗೊಳಿಸಲು ವಿಕಲಚೇತನರ ಆಗ್ರಹ

ಅವೈಜ್ಞಾನಿಕ ಆದಾಯ ಮಿತಿ ರದ್ದುಗೊಳಿಸಲು ವಿಕಲಚೇತನರ ಆಗ್ರಹ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಸರಕಾರ ಸಾಮಾಜಿಕ ಭದ್ರತೆ ಯೋಜನೆಗಳ ಅಡಿ ನೀಡಲಾಗುವ ಮಾಶಾಸನಕ್ಕೆ

ಎಂಎಲ್‌ಎ,ಮಂತ್ರಿಗಳ ವೇತನ,ಭತ್ಯೆ ಕಡಿತಗೊಳಿಸಿ-ಎ.ಎಸ್.ಪಾಟೀಲ್ ನಡಹಳ್ಳಿ

ಎಂಎಲ್‌ಎ,ಮಂತ್ರಿಗಳ ವೇತನ,ಭತ್ಯೆ ಕಡಿತಗೊಳಿಸಿ-ಎ.ಎಸ್.ಪಾಟೀಲ್ ನಡಹಳ್ಳಿ

ಮುದ್ದೇಬಿಹಾಳ : ಹಿಂದೆoದೂ ಕಂಡರಿಯದoತ ಭೀಕರ ಬರಗಾಲ ಈ ವರ್ಷ ಬಂದಿದ್ದು ರೈತರ ಖಾತೆಗೆ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ ವಿದ್ಯಾಕಣ್ವವಿರಾಜ್ ತೀರ್ಥ ಶ್ರೀಗಳು ತಮ್ಮ ಏಳನೇ ಚಾತುರ್ಮಾಸ್ಯವನ್ನು ಶನಿವಾರದಿಂದ ಕೈಗೊಂಡಿದ್ದು ಸಂಕಲ್ಪಪೂರ್ವ ಚಾತುರ್ಮಾಸ್ಯ ದೀಕ್ಷೆ ತನ್ನಿಮಿತ್ಯ ಶ್ರೀಗಳನ್ನು ಚಾತುರ್ಮಾಸ್ಯ ಮಹೋತ್ಸವ ಸಮೀತಿ ಹಾಗೂ ಸಮಸ್ತ ವಿಪ್ರ ಸಮಾಜದ ಬಾಂಧವರು ಭವ್ಯ ಮೆರವಣಿಗೆ ಮೂಲಕ ಶಿವ ಚಿದಂಬರ ದೇವಸ್ಥಾನಕ್ಕೆ ಕರೆದೊಯ್ಯರು. ಪಟ್ಟಣದ ರಾಘವೇಂದ್ರ ಮಠದಿಂದ ಪೂಜ್ಯರನ್ನು ಅಲಂಕೃತ ಸಾರೋಟಿನಲ್ಲಿ ಕೂರಿಸಿ ಸಕಲ ವಾದ್ಯವೈಭವಗಳೊಂದಿಗೆ ಮೆರವಣಿಗೆ ನಡೆಸಲಾಯಿತು.ಮೆರವಣಿಗೆಯಲ್ಲಿ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಕನ್ನಡ ಜಾನಪದ ಪರಿಷತ್ ತಾಲೂಕು ಘಟಕದ ಉದ್ಘಾಟನೆ,ಪದ ಪ್ರದಾನ ಹಾಗೂ ಜಾನಪದ ಬುಡಕಟ್ಟು ದಿನಾಚರಣೆ ಸಮಾರಂಭ ಆ.8 ರಂದು ಮದ್ಯಾಹ್ನ 12.30ಕ್ಕೆ ಪಟ್ಟಣದ ಎಂಜಿಎoಕೆ ಶಾಲೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಪರಿಷತ್ ರಾಜ್ಯಾಧ್ಯಕ್ಷ ಜಾನಪದ ಎಸ್.ಬಾಲಾಜಿ ಉದ್ಘಾಟಿಸುವರು.ಎಂಜಿಎAಕೆ ಸಂಸ್ಥೆಯ ಅಧ್ಯಕ್ಷ ಮನೋಹರ ಕೋರಿ ಉಪಸ್ಥಿತರಿರುವರು.ಕನ್ನಡ ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಬಾಳನಗೌಡ ಪಾಟೀಲ ಅಧ್ಯಕ್ಷತೆ ವಹಿಸುವರು.ಬಾಗಲಕೋಟ ಕಜಾಪ ಜಿಲ್ಲಾಧ್ಯಕ್ಷ ಡಿ.ಎಂ.ಸಾಹುಕಾರ ಪ್ರಾಸ್ತಾವಿಕ ನುಡಿಗಳನ್ನಾಡುವರು. ಕಜಾಪ ಜಿಲ್ಲಾ ಸಂಚಾಲಕ ಪುಂಡಲೀಕ ಮುರಾಳ