ಸಿಂಗಲ್ ಟೆಂಡರ್‌ಗೆ ಅವಕಾಶ ಕೊಡುವುದಿಲ್ಲ: ಸುಳ್ಳು ಹೇಳುವುದೇ ಶಾಸಕ ನಾಡಗೌಡರ ಕಾಯಕ-ನಡಹಳ್ಳಿ

ಸಿಂಗಲ್ ಟೆಂಡರ್‌ಗೆ ಅವಕಾಶ ಕೊಡುವುದಿಲ್ಲ: ಸುಳ್ಳು ಹೇಳುವುದೇ ಶಾಸಕ ನಾಡಗೌಡರ ಕಾಯಕ-ನಡಹಳ್ಳಿ

ಮುದ್ದೇಬಿಹಾಳ : ಇವತ್ತಿನ ಶಾಸಕ ಅಪ್ಪಾಜಿ ನಾಡಗೌಡರಿಗೆ ಸರಕಾರದಿಂದ ಹಣ ತರುವ ಯೋಗ್ಯತೆ ಇಲ್ಲ. ಬೆಳಗ್ಗೆ ಎದ್ದರೆ ಸುಳ್ಳು ಹೇಳುವುದು, ಸಿಕ್ಕ ಸಿಕ್ಕ ವೇದಿಕೆಗಳಲ್ಲಿ ಸುಳ್ಳು ಹೇಳುವ, ನಾಟಕ ಮಾಡುವುದನ್ನು ಮಾಡುತ್ತಿದ್ದಾರೆ ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಆರೋಪಿಸಿದರು.
ಪಟ್ಟಣದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಶಾಸಕರ ವಿರುದ್ಧ ಹಲವು ಆರೋಪಗಳನ್ನು ಮಾಡಿದರು.

ನಾಲತವಾಡದಲ್ಲಿ ಹಕ್ಕುಪತ್ರ ವಿತರಿಸಿರುವಲ್ಲಿ, ಭೂಮಿ ಪೂಜೆ ಮಾಡಿರುವ ಸ್ಥಳಗಳಲ್ಲಿ ಜನರನ್ನು ಸುಳ್ಳು ಹೇಳಿ ಯಾಮಾರಿಸಿದ್ದಾರೆ.ಇವರು ರಾಜಕೀಯ ಜೀವನದಲ್ಲಿ ಏನೇನು ಮಾಡಿದ್ದಾರೋ ದಾಖಲೆಗಳ ಸಮೇತ ತೆರೆದಿಡುತ್ತೇನೆ.ವಾರದಲ್ಲಿ ಎರಡು ಪತ್ರಿಕಾಗೋಷ್ಠಿ ನಡೆಸಿ ಒಂದೊAದು ಹೊಸ ವಿಚಾರಗಳನ್ನು ದಾಖಲಾತಿಗಳ ಸಮೇತ ಬಿಚ್ಚಿಡುವ ಕೆಲಸ ಮಾಡುತ್ತೇನೆ ಎಂದು ಗುಡುಗಿದರು.

ಪದೇ ಪದೇ ಸುಳ್ಳಿಗೆ ಜನರು ಮಾರು ಹೋಗುವುದಿಲ್ಲ. ಸಿಂಗಲ್ ಟೆಂಡರ್ ನಿಮ್ಮ ಶಿಷ್ಯನಿಗೆ ಅದು ಹೇಗೆ ಕೊಡುತ್ತೀರಿ ಎಂದು ನೋಡುತ್ತೇನೆ ಎಂದು ಚಿಮ್ಮಲಗಿ ಏತ ನೀರಾವರಿ ಯೋಜನೆ ಅಮರೇಶ್ವರ ದೇವಸ್ಥಾನದ ಬಳಿ ಈಚೇಗೆ ಶಾಸಕರು ಭೂಮಿ ಪೂಜೆ ನೆರವೇರಿಸಿದ ಅನುದಾನದ ಕುರಿತು ಶಾಸಕರಿಗೆ ಸವಾಲು ಹಾಕಿದರು. ನಿಮ್ಮ ಸ್ವಾರ್ಥಕ್ಕೆ ಅಧಿಕಾರಿಗಳನ್ನು ಬಲಿಪಶು ಮಾಡಬೇಡಿ ಎಂದು ಹರಿಹಾಯ್ದರು.


ಬಡವರಿಗೆ ತೊಂದರೆ ಮಾಡಬೇಡಿ
ಮುದ್ದೇಬಿಹಾಳದ ಕ್ಷೇತ್ರದ ಈಗಿನ ಶಾಸಕರಿಗೆ ದಲಿತರು, ಬಡವರು ಕಂಡರೆ ಹೊಟ್ಟೆ ಕಿಚ್ಚು. ಓಟು ಹಾಕುವುದಕ್ಕಷ್ಟೇ ದಲಿತರು,ಬಡವರು ಬೇಕು.ಇವರು ಚುನಾವಣೆ ಸಮಯದಲ್ಲಿ ಯಾಮಾರಿಸಿ ಓಟು ಹಾಕಿಸಿಕೊಂಡಿದ್ದಾರೆ ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಹಾಲಿ ಶಾಸಕ ಅಪ್ಪಾಜಿ ನಾಡಗೌಡರ ವಿರುದ್ಧ ಹರಿಹಾಯ್ದರು.

ಬಡವರು ಸಾಲ ಮಾಡಿ ಅಂಗಡಿ ಹಾಕಿಕೊಂಡಿದ್ದಾರೆ. ಅಂತವರ ಅಂಗಡಿಗಳನ್ನು ಶಾಸಕರು ಮುರಿದು ಹಾಕಿಸಿದ್ದಾರೆ.ಬಡವರಾದ ಅವರಿಗೆ ಬೇರೆ ಉದ್ಯೋಗ ಇಲ್ಲ.ಅವರನ್ನು ಬೀದಿಗೆ ತಂದು ನಿಲ್ಲಿಸಿದ್ದಾರೆ.ಈ ಬಗ್ಗೆ ನಾನು ಪೊಲೀಸ್ ವರಿಷ್ಠಾಧಿಕಾರಿಗೆ, ತಾಲ್ಲೂಕಿನ ಅಧಿಕಾರಿಗಳಿಗೆ ಮಾತನಾಡಿ ನ್ಯಾಯಯುತವಾಗಿ ಬದುಕಲು ಬಿಡಿ ಎಂದು ಹೇಳಿದ್ದೇನೆ. ಅಪ್ಪಾಜಿಗೆ ಬಡವರ ಶಾಪ ತಟ್ಟುತ್ತದೆ.ಬಡವರ ಶಾಪ ದೇವರ ಶಾಪಕ್ಕಿಂತ ಕೆಟ್ಟದ್ದು ಎಂದು ಹೇಳಿದರಲ್ಲದೇ ಮುಂದಿನ ಚುನಾವಣೆಯಲ್ಲಿ ನಾನು ಆಯ್ಕೆಯಾದರೆ ಮುದ್ದೇಬಿಹಾಳ ಮತಕ್ಷೇತ್ರದ ಪ್ರಮುಖ ಪಟ್ಟಣಗಳಲ್ಲಿ ಎಸ್.ಸಿ.,ಎಸ್ಟಿ ,ಹಿಂದುಳಿದವರು, ಬಡವರು ಫುಟಪಾತ್‌ನಲ್ಲಿ ಅಂಗಡಿಗಳನ್ನು ಮಾಡಿಕೊಡುತ್ತೇನೆ.ಅಗತ್ಯವಿದ್ದರೆ ಸರ್ಕಾರದ ಅನುದಾನ ಪಡೆದುಕೊಂಡು ಅವರ ನೆರವಿಗೆ ನಿಲ್ಲುವು ಕೆಲಸ ಮಾಡುತ್ತೇನೆ ಎಂದು ನಡಹಳ್ಳಿ ಹೇಳಿದರು.ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ, ಅಶೋಕ ರಾಠೋಡ, ಪುರಸಭೆ ಸದಸ್ಯ ಬಸಪ್ಪ ತಟ್ಟಿ,ಸಹನಾ ಬಡಿಗೇರ ಇದ್ದರು.

Latest News

ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪಕದನಕ್ಕೆ ಮಹೂರ್ತ ಫಿಕ್ಸ್..

ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪಕದನಕ್ಕೆ ಮಹೂರ್ತ ಫಿಕ್ಸ್..

ಬೆಂಗಳೂರು: ರಾಜ್ಯದಲ್ಲಿ ಇಬ್ಬರು ಶಾಸಕರ ನಿಧನದಿಂದ ತೆರವಾಗಿದ್ದ ಬಾಗಲಕೋಟೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ

ಟಗರಿನ ಕಾಳಗ ಪ್ರಮುಖ ಆಕರ್ಷಣೆ:                              ಮುದ್ದೇಬಿಹಾಳ : ಮಾ.18 ರಂದು ಪಿಲೇಕೆಮ್ಮ ದೇವಿ ಜಾತ್ರಾ ಮಹೋತ್ಸವ

ಟಗರಿನ ಕಾಳಗ ಪ್ರಮುಖ ಆಕರ್ಷಣೆ: ಮುದ್ದೇಬಿಹಾಳ : ಮಾ.18 ರಂದು ಪಿಲೇಕೆಮ್ಮ ದೇವಿ ಜಾತ್ರಾ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದ ಪಿಲೇಕೆಮ್ಮ ನಗರದಲ್ಲಿರುವ ಪಿಲೇಕೆಮ್ಮ ದೇವಿ ಜಾತ್ರಾಮಹೋತ್ಸವ ಮಾ.18 ಹಾಗೂ 19ರಂದು

ಮಾ.15 ರಂದು ಕಾಶಿನಕುಂಟಿಯಲ್ಲಿ ಇಫ್ತಾರಕೂಟ

ಮಾ.15 ರಂದು ಕಾಶಿನಕುಂಟಿಯಲ್ಲಿ ಇಫ್ತಾರಕೂಟ

ಮುದ್ದೇಬಿಹಾಳ : ರಂಜಾನ್ ಹಬ್ಬದ ನಿಮಿತ್ಯ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ಮಾ.15 ರಂದು ಸಂಜೆ

ಮುದ್ದೇಬಿಹಾಳ : ಬಸ್ ನಿಲ್ದಾಣದ ಪಕ್ಕದಲ್ಲೇ ಪೊಲೀಸ್ ಠಾಣೆ ಆರಂಭ-ನಾಡಗೌಡ

ಮುದ್ದೇಬಿಹಾಳ : ಬಸ್ ನಿಲ್ದಾಣದ ಪಕ್ಕದಲ್ಲೇ ಪೊಲೀಸ್ ಠಾಣೆ ಆರಂಭ-ನಾಡಗೌಡ

ಮುದ್ದೇಬಿಹಾಳ : ಪಟ್ಟಣದ ಬಸ್ ನಿಲ್ದಾಣದ ಪಕ್ಕದಲ್ಲಿರುವ ಹಳೇ ಸಿಪಿಐ ಕ್ವಾಟರ‍್ಸ್ನಲ್ಲಿ ಪೊಲೀಸ್ ಠಾಣೆಯನ್ನು

ಜನ್ಮದಿನದ ಆಚರಣೆಗಳ ನೆಪದಲ್ಲಿ ದುಂದುವೆಚ್ಚ ಬೇಡ-ಕಾಶೀಬಾಯಿ ರಾಂಪೂರ

ಜನ್ಮದಿನದ ಆಚರಣೆಗಳ ನೆಪದಲ್ಲಿ ದುಂದುವೆಚ್ಚ ಬೇಡ-ಕಾಶೀಬಾಯಿ ರಾಂಪೂರ

ಮುದ್ದೇಬಿಹಾಳ : ಜನ್ಮದಿನ,ಮದುವೆ ವಾರ್ಷಿಕೋತ್ಸವ ಹಾಗೂ ಇನ್ನೀತರ ವಯಕ್ತಿಕ ಶುಭ ಸಂದರ್ಭಗಳಲ್ಲಿ ದುಂದುವೆಚ್ಚ ಮಾಡದೇ ನಾಲ್ಕು ಜನ ಹಸಿದವರಿಗೆ ಅನ್ನದಾನ ಮಾಡಿದರೆ ಅವರಿಗೆ ಹೊಟ್ಟೆ ತುಂಬಿಸಿದ ಪುಣ್ಯ ನಮಗೆ ದೊರಕುತ್ತದೆ ಎಂದು ಬಿಜೆಪಿ ಜಿಲ್ಲಾ ನಿಕಟಪೂರ್ವ ಕಾರ್ಯದರ್ಶಿ ಕಾಶೀಬಾಯಿ ಎಸ್.ರಾಂಪೂರ ಹೇಳಿದರು. ಪಟ್ಟಣದ ಸರಕಾರಿ ಆಸ್ಪತ್ರೆಯಲ್ಲಿ ಗುರುವಾರ ಲಯನ್ಸ್ ಕ್ಲಬ್ ಸಹಯೋಗದಲ್ಲಿ ತಮ್ಮ ಜನ್ಮದಿನದ ನಿಮಿತ್ಯ ಸರ್ಕಾರಿ ಆಸ್ಪತ್ರೆಗೆ ಬಂದ ರೋಗಿಗಳು, ಸಾರ್ವಜನಿಕರಿಗೆ ಅನ್ನಸಂತರ್ಪಣೆ ಕೈಗೊಂಡು ಅವರು ಮಾತನಾಡಿರು.ಹಬ್ಬ ಹಾಗೂ

ಮುದ್ದೇಬಿಹಾಳ : ಮಾ.15 ರಂದು ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್

ಮುದ್ದೇಬಿಹಾಳ : ಮಾ.15 ರಂದು ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್

ಮುದ್ದೇಬಿಹಾಳ : ಪಟ್ಟಣದ ವಿದ್ಯಾನಗರದ ಶಿರವಾಳ ಲೇಔಟ್‌ದಲ್ಲಿರುವ ಪ್ರಗತಿ ಜೆಸಿ ಶಿಕ್ಷಣ ಸಂಸ್ಥೆಯಡಿ ನಡೆಯುತ್ತಿರುವ ಚಿನ್ಮಯ ಜೆಸಿ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಇದೇ ಪ್ರಥಮ ಬಾರಿಗೆ ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್ ಪರೀಕ್ಷೆ-2026-27 ಹಮ್ಮಿಕೊಳ್ಳಲಾಗಿದೆ ಎಂದು ಶಾಲೆಯ ಅಧ್ಯಕ್ಷ ಡಾ.ವೀರೇಶ ಪಾಟೀಲ ಹೇಳಿದರು. ಪಟ್ಟಣದ ಚಿನ್ಮಯ ಜೆಸಿ ಶಾಲೆಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.4-9 ತರಗತಿ ಮಕ್ಕಳಿಗಾಗಿ ಮಾ.15 ರಂದು ಬೆಳಗ್ಗೆ 11 ರಿಂದ 12.30ರವರೆಗೆ