ಸಿಂಗಲ್ ಟೆಂಡರ್‌ಗೆ ಅವಕಾಶ ಕೊಡುವುದಿಲ್ಲ: ಸುಳ್ಳು ಹೇಳುವುದೇ ಶಾಸಕ ನಾಡಗೌಡರ ಕಾಯಕ-ನಡಹಳ್ಳಿ

ಸಿಂಗಲ್ ಟೆಂಡರ್‌ಗೆ ಅವಕಾಶ ಕೊಡುವುದಿಲ್ಲ: ಸುಳ್ಳು ಹೇಳುವುದೇ ಶಾಸಕ ನಾಡಗೌಡರ ಕಾಯಕ-ನಡಹಳ್ಳಿ

ಮುದ್ದೇಬಿಹಾಳ : ಇವತ್ತಿನ ಶಾಸಕ ಅಪ್ಪಾಜಿ ನಾಡಗೌಡರಿಗೆ ಸರಕಾರದಿಂದ ಹಣ ತರುವ ಯೋಗ್ಯತೆ ಇಲ್ಲ. ಬೆಳಗ್ಗೆ ಎದ್ದರೆ ಸುಳ್ಳು ಹೇಳುವುದು, ಸಿಕ್ಕ ಸಿಕ್ಕ ವೇದಿಕೆಗಳಲ್ಲಿ ಸುಳ್ಳು ಹೇಳುವ, ನಾಟಕ ಮಾಡುವುದನ್ನು ಮಾಡುತ್ತಿದ್ದಾರೆ ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಆರೋಪಿಸಿದರು.
ಪಟ್ಟಣದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಶಾಸಕರ ವಿರುದ್ಧ ಹಲವು ಆರೋಪಗಳನ್ನು ಮಾಡಿದರು.

ನಾಲತವಾಡದಲ್ಲಿ ಹಕ್ಕುಪತ್ರ ವಿತರಿಸಿರುವಲ್ಲಿ, ಭೂಮಿ ಪೂಜೆ ಮಾಡಿರುವ ಸ್ಥಳಗಳಲ್ಲಿ ಜನರನ್ನು ಸುಳ್ಳು ಹೇಳಿ ಯಾಮಾರಿಸಿದ್ದಾರೆ.ಇವರು ರಾಜಕೀಯ ಜೀವನದಲ್ಲಿ ಏನೇನು ಮಾಡಿದ್ದಾರೋ ದಾಖಲೆಗಳ ಸಮೇತ ತೆರೆದಿಡುತ್ತೇನೆ.ವಾರದಲ್ಲಿ ಎರಡು ಪತ್ರಿಕಾಗೋಷ್ಠಿ ನಡೆಸಿ ಒಂದೊAದು ಹೊಸ ವಿಚಾರಗಳನ್ನು ದಾಖಲಾತಿಗಳ ಸಮೇತ ಬಿಚ್ಚಿಡುವ ಕೆಲಸ ಮಾಡುತ್ತೇನೆ ಎಂದು ಗುಡುಗಿದರು.

ಪದೇ ಪದೇ ಸುಳ್ಳಿಗೆ ಜನರು ಮಾರು ಹೋಗುವುದಿಲ್ಲ. ಸಿಂಗಲ್ ಟೆಂಡರ್ ನಿಮ್ಮ ಶಿಷ್ಯನಿಗೆ ಅದು ಹೇಗೆ ಕೊಡುತ್ತೀರಿ ಎಂದು ನೋಡುತ್ತೇನೆ ಎಂದು ಚಿಮ್ಮಲಗಿ ಏತ ನೀರಾವರಿ ಯೋಜನೆ ಅಮರೇಶ್ವರ ದೇವಸ್ಥಾನದ ಬಳಿ ಈಚೇಗೆ ಶಾಸಕರು ಭೂಮಿ ಪೂಜೆ ನೆರವೇರಿಸಿದ ಅನುದಾನದ ಕುರಿತು ಶಾಸಕರಿಗೆ ಸವಾಲು ಹಾಕಿದರು. ನಿಮ್ಮ ಸ್ವಾರ್ಥಕ್ಕೆ ಅಧಿಕಾರಿಗಳನ್ನು ಬಲಿಪಶು ಮಾಡಬೇಡಿ ಎಂದು ಹರಿಹಾಯ್ದರು.


ಬಡವರಿಗೆ ತೊಂದರೆ ಮಾಡಬೇಡಿ
ಮುದ್ದೇಬಿಹಾಳದ ಕ್ಷೇತ್ರದ ಈಗಿನ ಶಾಸಕರಿಗೆ ದಲಿತರು, ಬಡವರು ಕಂಡರೆ ಹೊಟ್ಟೆ ಕಿಚ್ಚು. ಓಟು ಹಾಕುವುದಕ್ಕಷ್ಟೇ ದಲಿತರು,ಬಡವರು ಬೇಕು.ಇವರು ಚುನಾವಣೆ ಸಮಯದಲ್ಲಿ ಯಾಮಾರಿಸಿ ಓಟು ಹಾಕಿಸಿಕೊಂಡಿದ್ದಾರೆ ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಹಾಲಿ ಶಾಸಕ ಅಪ್ಪಾಜಿ ನಾಡಗೌಡರ ವಿರುದ್ಧ ಹರಿಹಾಯ್ದರು.

ಬಡವರು ಸಾಲ ಮಾಡಿ ಅಂಗಡಿ ಹಾಕಿಕೊಂಡಿದ್ದಾರೆ. ಅಂತವರ ಅಂಗಡಿಗಳನ್ನು ಶಾಸಕರು ಮುರಿದು ಹಾಕಿಸಿದ್ದಾರೆ.ಬಡವರಾದ ಅವರಿಗೆ ಬೇರೆ ಉದ್ಯೋಗ ಇಲ್ಲ.ಅವರನ್ನು ಬೀದಿಗೆ ತಂದು ನಿಲ್ಲಿಸಿದ್ದಾರೆ.ಈ ಬಗ್ಗೆ ನಾನು ಪೊಲೀಸ್ ವರಿಷ್ಠಾಧಿಕಾರಿಗೆ, ತಾಲ್ಲೂಕಿನ ಅಧಿಕಾರಿಗಳಿಗೆ ಮಾತನಾಡಿ ನ್ಯಾಯಯುತವಾಗಿ ಬದುಕಲು ಬಿಡಿ ಎಂದು ಹೇಳಿದ್ದೇನೆ. ಅಪ್ಪಾಜಿಗೆ ಬಡವರ ಶಾಪ ತಟ್ಟುತ್ತದೆ.ಬಡವರ ಶಾಪ ದೇವರ ಶಾಪಕ್ಕಿಂತ ಕೆಟ್ಟದ್ದು ಎಂದು ಹೇಳಿದರಲ್ಲದೇ ಮುಂದಿನ ಚುನಾವಣೆಯಲ್ಲಿ ನಾನು ಆಯ್ಕೆಯಾದರೆ ಮುದ್ದೇಬಿಹಾಳ ಮತಕ್ಷೇತ್ರದ ಪ್ರಮುಖ ಪಟ್ಟಣಗಳಲ್ಲಿ ಎಸ್.ಸಿ.,ಎಸ್ಟಿ ,ಹಿಂದುಳಿದವರು, ಬಡವರು ಫುಟಪಾತ್‌ನಲ್ಲಿ ಅಂಗಡಿಗಳನ್ನು ಮಾಡಿಕೊಡುತ್ತೇನೆ.ಅಗತ್ಯವಿದ್ದರೆ ಸರ್ಕಾರದ ಅನುದಾನ ಪಡೆದುಕೊಂಡು ಅವರ ನೆರವಿಗೆ ನಿಲ್ಲುವು ಕೆಲಸ ಮಾಡುತ್ತೇನೆ ಎಂದು ನಡಹಳ್ಳಿ ಹೇಳಿದರು.ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ, ಅಶೋಕ ರಾಠೋಡ, ಪುರಸಭೆ ಸದಸ್ಯ ಬಸಪ್ಪ ತಟ್ಟಿ,ಸಹನಾ ಬಡಿಗೇರ ಇದ್ದರು.

Latest News

ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ವಿಳಂಬ:                  ಕಾoಗ್ರೆಸ್‌ಗೆ ಮಹ್ಮದರಫೀಕ ಶಿರೋಳ ರಾಜೀನಾಮೆ

ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ವಿಳಂಬ: ಕಾoಗ್ರೆಸ್‌ಗೆ ಮಹ್ಮದರಫೀಕ ಶಿರೋಳ ರಾಜೀನಾಮೆ

ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಜಿಲ್ಲಾ ಯುವ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಸಕ್ರಿಯ ಕಾರ್ಯಕರ್ತ

ಜೂ.19 ರಂದು ಪಕ್ಷಾತೀತವಾಗಿ ವ್ಯಾಪಾರಸ್ಥರಿಂದ ಮುದ್ದೇಬಿಹಾಳ ಸ್ವಯಂಪ್ರೇರಿತ ಬಂದ್

ಜೂ.19 ರಂದು ಪಕ್ಷಾತೀತವಾಗಿ ವ್ಯಾಪಾರಸ್ಥರಿಂದ ಮುದ್ದೇಬಿಹಾಳ ಸ್ವಯಂಪ್ರೇರಿತ ಬಂದ್

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಆಗ್ರಹಿಸಿ ಜೂ.19

ಮುದ್ದೇಬಿಹಾಳ : ಬಲವಂತದ ಬಂದ್ ಕರೆ ಅಗತ್ಯವಿಲ್ಲ-ಪಂಪಣ್ಣವರ

ಮುದ್ದೇಬಿಹಾಳ : ಬಲವಂತದ ಬಂದ್ ಕರೆ ಅಗತ್ಯವಿಲ್ಲ-ಪಂಪಣ್ಣವರ

ಮುದ್ದೇಬಿಹಾಳ ; ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ ಅವರಿಗೆ ಅವರ ಸರ್ಕಾರದಲ್ಲಿ ಸಚಿವ ಸ್ಥಾನ ದೊರಕಲಿ.ಅವರ

‘ಶಾಸಕ ಸಿ.ಎಸ್.ನಾಡಗೌಡರಿಗೆ ಮಂತ್ರಿ ಮಾಡಿ,ಇಲ್ಲವೇ ನಮ್ಮ ರಾಜೀನಾಮೆ ಪಡೆದುಕೊಳ್ಳಿ’

‘ಶಾಸಕ ಸಿ.ಎಸ್.ನಾಡಗೌಡರಿಗೆ ಮಂತ್ರಿ ಮಾಡಿ,ಇಲ್ಲವೇ ನಮ್ಮ ರಾಜೀನಾಮೆ ಪಡೆದುಕೊಳ್ಳಿ’

ಮುದ್ದೇಬಿಹಾಳ : ಆರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡರಿಗೆ ನೂತನ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ ಟಿಸಿ ಒದಗಿಸುವಲ್ಲಿ ವಿಳಂಬ ಧೋರಣೆ ಖಂಡಿಸಿದ ರೈತರು ಸೋಮವಾರ ಇಲ್ಲಿನ ಹೆಸ್ಕಾಂ ಕಚೇರಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ತಾಲ್ಲೂಕಿನ ಅನೇಕ ಗ್ರಾಮಗಳಿಂದ ಬಂದಿದ್ದ ರೈತರು ತಮ್ಮೂರುಗಳಲ್ಲಿ ಎದುರಿಸುತ್ತಿರುವ ವಿದ್ಯುತ್ ಸಂಬoಧಿ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದರು. ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಜೂ.8 ರಿಂದ ಆಲಮಟ್ಟಿ ಕೆಬಿಜೆಎನ್‌ಎಲ್ ಮುಖ್ಯ ಇಂಜಿನಿಯರ್ ಕಚೇರಿ ಮುಂದೆ ರೈತರ ಬೃಹತ್ ಪ್ರತಿಭಟನೆ ನಡೆಸುವುದಾಗಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ತಿಳಿಸಿದರು. ಪಟ್ಟಣದ ಹುಡ್ಕೋದಲ್ಲಿರುವ ಪಂಜುರ್ಲಿ ಹೊಟೇಲ್ ಸಭಾಂಗಣದಲ್ಲಿ ಸೋಮವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕರ್ನಾಟಕ ರಾಜ್ಯ ರೈತ