ಸಿಂಗಲ್ ಟೆಂಡರ್‌ಗೆ ಅವಕಾಶ ಕೊಡುವುದಿಲ್ಲ: ಸುಳ್ಳು ಹೇಳುವುದೇ ಶಾಸಕ ನಾಡಗೌಡರ ಕಾಯಕ-ನಡಹಳ್ಳಿ

ಸಿಂಗಲ್ ಟೆಂಡರ್‌ಗೆ ಅವಕಾಶ ಕೊಡುವುದಿಲ್ಲ: ಸುಳ್ಳು ಹೇಳುವುದೇ ಶಾಸಕ ನಾಡಗೌಡರ ಕಾಯಕ-ನಡಹಳ್ಳಿ

ಮುದ್ದೇಬಿಹಾಳ : ಇವತ್ತಿನ ಶಾಸಕ ಅಪ್ಪಾಜಿ ನಾಡಗೌಡರಿಗೆ ಸರಕಾರದಿಂದ ಹಣ ತರುವ ಯೋಗ್ಯತೆ ಇಲ್ಲ. ಬೆಳಗ್ಗೆ ಎದ್ದರೆ ಸುಳ್ಳು ಹೇಳುವುದು, ಸಿಕ್ಕ ಸಿಕ್ಕ ವೇದಿಕೆಗಳಲ್ಲಿ ಸುಳ್ಳು ಹೇಳುವ, ನಾಟಕ ಮಾಡುವುದನ್ನು ಮಾಡುತ್ತಿದ್ದಾರೆ ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಆರೋಪಿಸಿದರು.
ಪಟ್ಟಣದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಶಾಸಕರ ವಿರುದ್ಧ ಹಲವು ಆರೋಪಗಳನ್ನು ಮಾಡಿದರು.

ನಾಲತವಾಡದಲ್ಲಿ ಹಕ್ಕುಪತ್ರ ವಿತರಿಸಿರುವಲ್ಲಿ, ಭೂಮಿ ಪೂಜೆ ಮಾಡಿರುವ ಸ್ಥಳಗಳಲ್ಲಿ ಜನರನ್ನು ಸುಳ್ಳು ಹೇಳಿ ಯಾಮಾರಿಸಿದ್ದಾರೆ.ಇವರು ರಾಜಕೀಯ ಜೀವನದಲ್ಲಿ ಏನೇನು ಮಾಡಿದ್ದಾರೋ ದಾಖಲೆಗಳ ಸಮೇತ ತೆರೆದಿಡುತ್ತೇನೆ.ವಾರದಲ್ಲಿ ಎರಡು ಪತ್ರಿಕಾಗೋಷ್ಠಿ ನಡೆಸಿ ಒಂದೊAದು ಹೊಸ ವಿಚಾರಗಳನ್ನು ದಾಖಲಾತಿಗಳ ಸಮೇತ ಬಿಚ್ಚಿಡುವ ಕೆಲಸ ಮಾಡುತ್ತೇನೆ ಎಂದು ಗುಡುಗಿದರು.

ಪದೇ ಪದೇ ಸುಳ್ಳಿಗೆ ಜನರು ಮಾರು ಹೋಗುವುದಿಲ್ಲ. ಸಿಂಗಲ್ ಟೆಂಡರ್ ನಿಮ್ಮ ಶಿಷ್ಯನಿಗೆ ಅದು ಹೇಗೆ ಕೊಡುತ್ತೀರಿ ಎಂದು ನೋಡುತ್ತೇನೆ ಎಂದು ಚಿಮ್ಮಲಗಿ ಏತ ನೀರಾವರಿ ಯೋಜನೆ ಅಮರೇಶ್ವರ ದೇವಸ್ಥಾನದ ಬಳಿ ಈಚೇಗೆ ಶಾಸಕರು ಭೂಮಿ ಪೂಜೆ ನೆರವೇರಿಸಿದ ಅನುದಾನದ ಕುರಿತು ಶಾಸಕರಿಗೆ ಸವಾಲು ಹಾಕಿದರು. ನಿಮ್ಮ ಸ್ವಾರ್ಥಕ್ಕೆ ಅಧಿಕಾರಿಗಳನ್ನು ಬಲಿಪಶು ಮಾಡಬೇಡಿ ಎಂದು ಹರಿಹಾಯ್ದರು.


ಬಡವರಿಗೆ ತೊಂದರೆ ಮಾಡಬೇಡಿ
ಮುದ್ದೇಬಿಹಾಳದ ಕ್ಷೇತ್ರದ ಈಗಿನ ಶಾಸಕರಿಗೆ ದಲಿತರು, ಬಡವರು ಕಂಡರೆ ಹೊಟ್ಟೆ ಕಿಚ್ಚು. ಓಟು ಹಾಕುವುದಕ್ಕಷ್ಟೇ ದಲಿತರು,ಬಡವರು ಬೇಕು.ಇವರು ಚುನಾವಣೆ ಸಮಯದಲ್ಲಿ ಯಾಮಾರಿಸಿ ಓಟು ಹಾಕಿಸಿಕೊಂಡಿದ್ದಾರೆ ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಹಾಲಿ ಶಾಸಕ ಅಪ್ಪಾಜಿ ನಾಡಗೌಡರ ವಿರುದ್ಧ ಹರಿಹಾಯ್ದರು.

ಬಡವರು ಸಾಲ ಮಾಡಿ ಅಂಗಡಿ ಹಾಕಿಕೊಂಡಿದ್ದಾರೆ. ಅಂತವರ ಅಂಗಡಿಗಳನ್ನು ಶಾಸಕರು ಮುರಿದು ಹಾಕಿಸಿದ್ದಾರೆ.ಬಡವರಾದ ಅವರಿಗೆ ಬೇರೆ ಉದ್ಯೋಗ ಇಲ್ಲ.ಅವರನ್ನು ಬೀದಿಗೆ ತಂದು ನಿಲ್ಲಿಸಿದ್ದಾರೆ.ಈ ಬಗ್ಗೆ ನಾನು ಪೊಲೀಸ್ ವರಿಷ್ಠಾಧಿಕಾರಿಗೆ, ತಾಲ್ಲೂಕಿನ ಅಧಿಕಾರಿಗಳಿಗೆ ಮಾತನಾಡಿ ನ್ಯಾಯಯುತವಾಗಿ ಬದುಕಲು ಬಿಡಿ ಎಂದು ಹೇಳಿದ್ದೇನೆ. ಅಪ್ಪಾಜಿಗೆ ಬಡವರ ಶಾಪ ತಟ್ಟುತ್ತದೆ.ಬಡವರ ಶಾಪ ದೇವರ ಶಾಪಕ್ಕಿಂತ ಕೆಟ್ಟದ್ದು ಎಂದು ಹೇಳಿದರಲ್ಲದೇ ಮುಂದಿನ ಚುನಾವಣೆಯಲ್ಲಿ ನಾನು ಆಯ್ಕೆಯಾದರೆ ಮುದ್ದೇಬಿಹಾಳ ಮತಕ್ಷೇತ್ರದ ಪ್ರಮುಖ ಪಟ್ಟಣಗಳಲ್ಲಿ ಎಸ್.ಸಿ.,ಎಸ್ಟಿ ,ಹಿಂದುಳಿದವರು, ಬಡವರು ಫುಟಪಾತ್‌ನಲ್ಲಿ ಅಂಗಡಿಗಳನ್ನು ಮಾಡಿಕೊಡುತ್ತೇನೆ.ಅಗತ್ಯವಿದ್ದರೆ ಸರ್ಕಾರದ ಅನುದಾನ ಪಡೆದುಕೊಂಡು ಅವರ ನೆರವಿಗೆ ನಿಲ್ಲುವು ಕೆಲಸ ಮಾಡುತ್ತೇನೆ ಎಂದು ನಡಹಳ್ಳಿ ಹೇಳಿದರು.ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ, ಅಶೋಕ ರಾಠೋಡ, ಪುರಸಭೆ ಸದಸ್ಯ ಬಸಪ್ಪ ತಟ್ಟಿ,ಸಹನಾ ಬಡಿಗೇರ ಇದ್ದರು.

Latest News

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆದಿರುವ ಧರಣಿ ಸತ್ಯಾಗ್ರಹ ಮೂರು ದಿನ ಪೂರೈಸಿದ್ದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಯರಝರಿ ಜಿಪಂ ಭಾಗದ ರೈತರು ಬುಧವಾರದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಶಾಸಕರು,ಸರಕಾರಕ್ಕೆ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಮಳೆ ಕೊರತೆ ಇದೆ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ ಹೇಳಿಕೆಯನ್ನು ತಗೆದುಕೊಂಡರೋ ಗೊತ್ತಿಲ್ಲ.ಸದ್ಯಕ್ಕೆ ಮುಖ್ಯಮಂತ್ರಿಗಳು ಪತ್ರವ್ಯವಹಾರ ನಿಲ್ಲಿಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಸುಮ್ಮನಾಗಿದ್ದೇನೆ.ನನ್ನದು ಸಿದ್ಧಾಂತದ ಮೇಲೆ ಹೋರಾಟ ನಡೆಯುತ್ತದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಬಳಿ ತಮ್ಮನ್ನು ಎದುರಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.ನನ್ನ ಮಾನಸಿಕ ಸ್ಥಿತಿ ಹೇಗಿದೆ ? ಎಂಬುದನ್ನು ಮತ್ತೊಬ್ಬರಿಂದ ಹೇಳಿಸಿಕೊಳ್ಳಬೇಕಾಗಿಲ್ಲ.ಮಾನಸಿಕ ಚಿಕಿತ್ಸೆಯ ಬಗ್ಗೆ ಕೊಟ್ಟಿರುವ ಮಾತಿಗೆ ನಾನು