ಸಿಂಗಲ್ ಟೆಂಡರ್‌ಗೆ ಅವಕಾಶ ಕೊಡುವುದಿಲ್ಲ: ಸುಳ್ಳು ಹೇಳುವುದೇ ಶಾಸಕ ನಾಡಗೌಡರ ಕಾಯಕ-ನಡಹಳ್ಳಿ

ಸಿಂಗಲ್ ಟೆಂಡರ್‌ಗೆ ಅವಕಾಶ ಕೊಡುವುದಿಲ್ಲ: ಸುಳ್ಳು ಹೇಳುವುದೇ ಶಾಸಕ ನಾಡಗೌಡರ ಕಾಯಕ-ನಡಹಳ್ಳಿ

ಮುದ್ದೇಬಿಹಾಳ : ಇವತ್ತಿನ ಶಾಸಕ ಅಪ್ಪಾಜಿ ನಾಡಗೌಡರಿಗೆ ಸರಕಾರದಿಂದ ಹಣ ತರುವ ಯೋಗ್ಯತೆ ಇಲ್ಲ. ಬೆಳಗ್ಗೆ ಎದ್ದರೆ ಸುಳ್ಳು ಹೇಳುವುದು, ಸಿಕ್ಕ ಸಿಕ್ಕ ವೇದಿಕೆಗಳಲ್ಲಿ ಸುಳ್ಳು ಹೇಳುವ, ನಾಟಕ ಮಾಡುವುದನ್ನು ಮಾಡುತ್ತಿದ್ದಾರೆ ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಆರೋಪಿಸಿದರು.
ಪಟ್ಟಣದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಶಾಸಕರ ವಿರುದ್ಧ ಹಲವು ಆರೋಪಗಳನ್ನು ಮಾಡಿದರು.

ನಾಲತವಾಡದಲ್ಲಿ ಹಕ್ಕುಪತ್ರ ವಿತರಿಸಿರುವಲ್ಲಿ, ಭೂಮಿ ಪೂಜೆ ಮಾಡಿರುವ ಸ್ಥಳಗಳಲ್ಲಿ ಜನರನ್ನು ಸುಳ್ಳು ಹೇಳಿ ಯಾಮಾರಿಸಿದ್ದಾರೆ.ಇವರು ರಾಜಕೀಯ ಜೀವನದಲ್ಲಿ ಏನೇನು ಮಾಡಿದ್ದಾರೋ ದಾಖಲೆಗಳ ಸಮೇತ ತೆರೆದಿಡುತ್ತೇನೆ.ವಾರದಲ್ಲಿ ಎರಡು ಪತ್ರಿಕಾಗೋಷ್ಠಿ ನಡೆಸಿ ಒಂದೊAದು ಹೊಸ ವಿಚಾರಗಳನ್ನು ದಾಖಲಾತಿಗಳ ಸಮೇತ ಬಿಚ್ಚಿಡುವ ಕೆಲಸ ಮಾಡುತ್ತೇನೆ ಎಂದು ಗುಡುಗಿದರು.

ಪದೇ ಪದೇ ಸುಳ್ಳಿಗೆ ಜನರು ಮಾರು ಹೋಗುವುದಿಲ್ಲ. ಸಿಂಗಲ್ ಟೆಂಡರ್ ನಿಮ್ಮ ಶಿಷ್ಯನಿಗೆ ಅದು ಹೇಗೆ ಕೊಡುತ್ತೀರಿ ಎಂದು ನೋಡುತ್ತೇನೆ ಎಂದು ಚಿಮ್ಮಲಗಿ ಏತ ನೀರಾವರಿ ಯೋಜನೆ ಅಮರೇಶ್ವರ ದೇವಸ್ಥಾನದ ಬಳಿ ಈಚೇಗೆ ಶಾಸಕರು ಭೂಮಿ ಪೂಜೆ ನೆರವೇರಿಸಿದ ಅನುದಾನದ ಕುರಿತು ಶಾಸಕರಿಗೆ ಸವಾಲು ಹಾಕಿದರು. ನಿಮ್ಮ ಸ್ವಾರ್ಥಕ್ಕೆ ಅಧಿಕಾರಿಗಳನ್ನು ಬಲಿಪಶು ಮಾಡಬೇಡಿ ಎಂದು ಹರಿಹಾಯ್ದರು.


ಬಡವರಿಗೆ ತೊಂದರೆ ಮಾಡಬೇಡಿ
ಮುದ್ದೇಬಿಹಾಳದ ಕ್ಷೇತ್ರದ ಈಗಿನ ಶಾಸಕರಿಗೆ ದಲಿತರು, ಬಡವರು ಕಂಡರೆ ಹೊಟ್ಟೆ ಕಿಚ್ಚು. ಓಟು ಹಾಕುವುದಕ್ಕಷ್ಟೇ ದಲಿತರು,ಬಡವರು ಬೇಕು.ಇವರು ಚುನಾವಣೆ ಸಮಯದಲ್ಲಿ ಯಾಮಾರಿಸಿ ಓಟು ಹಾಕಿಸಿಕೊಂಡಿದ್ದಾರೆ ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಹಾಲಿ ಶಾಸಕ ಅಪ್ಪಾಜಿ ನಾಡಗೌಡರ ವಿರುದ್ಧ ಹರಿಹಾಯ್ದರು.

ಬಡವರು ಸಾಲ ಮಾಡಿ ಅಂಗಡಿ ಹಾಕಿಕೊಂಡಿದ್ದಾರೆ. ಅಂತವರ ಅಂಗಡಿಗಳನ್ನು ಶಾಸಕರು ಮುರಿದು ಹಾಕಿಸಿದ್ದಾರೆ.ಬಡವರಾದ ಅವರಿಗೆ ಬೇರೆ ಉದ್ಯೋಗ ಇಲ್ಲ.ಅವರನ್ನು ಬೀದಿಗೆ ತಂದು ನಿಲ್ಲಿಸಿದ್ದಾರೆ.ಈ ಬಗ್ಗೆ ನಾನು ಪೊಲೀಸ್ ವರಿಷ್ಠಾಧಿಕಾರಿಗೆ, ತಾಲ್ಲೂಕಿನ ಅಧಿಕಾರಿಗಳಿಗೆ ಮಾತನಾಡಿ ನ್ಯಾಯಯುತವಾಗಿ ಬದುಕಲು ಬಿಡಿ ಎಂದು ಹೇಳಿದ್ದೇನೆ. ಅಪ್ಪಾಜಿಗೆ ಬಡವರ ಶಾಪ ತಟ್ಟುತ್ತದೆ.ಬಡವರ ಶಾಪ ದೇವರ ಶಾಪಕ್ಕಿಂತ ಕೆಟ್ಟದ್ದು ಎಂದು ಹೇಳಿದರಲ್ಲದೇ ಮುಂದಿನ ಚುನಾವಣೆಯಲ್ಲಿ ನಾನು ಆಯ್ಕೆಯಾದರೆ ಮುದ್ದೇಬಿಹಾಳ ಮತಕ್ಷೇತ್ರದ ಪ್ರಮುಖ ಪಟ್ಟಣಗಳಲ್ಲಿ ಎಸ್.ಸಿ.,ಎಸ್ಟಿ ,ಹಿಂದುಳಿದವರು, ಬಡವರು ಫುಟಪಾತ್‌ನಲ್ಲಿ ಅಂಗಡಿಗಳನ್ನು ಮಾಡಿಕೊಡುತ್ತೇನೆ.ಅಗತ್ಯವಿದ್ದರೆ ಸರ್ಕಾರದ ಅನುದಾನ ಪಡೆದುಕೊಂಡು ಅವರ ನೆರವಿಗೆ ನಿಲ್ಲುವು ಕೆಲಸ ಮಾಡುತ್ತೇನೆ ಎಂದು ನಡಹಳ್ಳಿ ಹೇಳಿದರು.ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ, ಅಶೋಕ ರಾಠೋಡ, ಪುರಸಭೆ ಸದಸ್ಯ ಬಸಪ್ಪ ತಟ್ಟಿ,ಸಹನಾ ಬಡಿಗೇರ ಇದ್ದರು.

Latest News

ಕಾಂಗ್ರೆಸ್‌ ವಿರುದ್ಧ ಪ್ರತಿಭಟನೆ: BJP ಕಾರ್ಯಕರ್ತನ ಪ್ಯಾಂಟ್‌ಗೆ ತಾಗಿದ ಬೆಂಕಿ

ಕಾಂಗ್ರೆಸ್‌ ವಿರುದ್ಧ ಪ್ರತಿಭಟನೆ: BJP ಕಾರ್ಯಕರ್ತನ ಪ್ಯಾಂಟ್‌ಗೆ ತಾಗಿದ ಬೆಂಕಿ

ಗದಗ: ನಗರದ ಗಾಂಧಿ ವೃತ್ತದಲ್ಲಿ ಕಾಂಗ್ರೆಸ್‌ ನಾಯಕರ ವಿರುದ್ಧ ಬಿಜೆಪಿ ಯುವ ಮೋರ್ಚಾ ವತಿಯಿಂದ

ನನಗೆ ಸಚಿವ ಸ್ಥಾನ ಕೈ ತಪ್ಪಲು ಸಚಿವ ಎಂ.ಬಿ.ಪಾಟೀಲ್ ನೇರ ಕಾರಣ-ಸಿ.ಎಸ್.ನಾಡಗೌಡ

ನನಗೆ ಸಚಿವ ಸ್ಥಾನ ಕೈ ತಪ್ಪಲು ಸಚಿವ ಎಂ.ಬಿ.ಪಾಟೀಲ್ ನೇರ ಕಾರಣ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಜಿಲ್ಲೆಯ ರಾಜಕಾರಣದಲ್ಲಿ ಸಾಸನೂರ ಬಿ.ಎಸ್.ಪಾಟೀಲ,ಪ್ರಕಾಶ ರಾಠೋಡ ,ಶರಣಪ್ಪ ಸುಣಗಾರ,ಮನೋಹರ ಐನಾಪೂರ ಅವರನ್ನು

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ:      ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಅಂಜುಮನ್ ಚುನಾವಣೆಯಲ್ಲಿ ಮಹತ್ವದ ಬೆಳವಣಿಗೆ: ಮಕಾನದಾರ,ದಫೇದಾರ,ಸೋಠೆ,ಗೋಲಂದಾಜಗೆ ಹೈಕೋರ್ಟ್ ಬಿಗ್ ರಿಲೀಫ್

ಅಂಜುಮನ್ ಚುನಾವಣೆಯಲ್ಲಿ ಮಹತ್ವದ ಬೆಳವಣಿಗೆ: ಮಕಾನದಾರ,ದಫೇದಾರ,ಸೋಠೆ,ಗೋಲಂದಾಜಗೆ ಹೈಕೋರ್ಟ್ ಬಿಗ್ ರಿಲೀಫ್

ಮುದ್ದೇಬಿಹಾಳ : ಮಹತ್ವದ ಬೆಳವಣಿಗೆಯೊಂದರಲ್ಲಿ ಪಟ್ಟಣದ ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆಯಲ್ಲಿ ತಿರಸ್ಕಾರಗೊಂಡಿದ್ದ ನಾಲ್ವರ ನಾಮಪತ್ರಗಳನ್ನು ಕ್ರಮಬದ್ಧಗೊಳಿಸಿ ಅವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಕಲ್ಪಿಸುವಂತೆ ಕಲ್ಬುರ್ಗಿ ಉಚ್ಛ ನ್ಯಾಯಾಲಯ ಮಧ್ಯಂತರ ಆದೇಶ ನೀಡಿರುವ ಬೆಳವಣಿಗೆ ಮಂಗಳವಾರ ಜರುಗಿದೆ. ಪಟ್ಟಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತ ವಿವರಣೆ ನೀಡಿದ ಮುಖಂಡ ಹಾಗೂ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಅಬ್ದುಲಗಫೂರ ಮಕಾನದಾರ ಅವರು, ಚುನಾವಣಾಧಿಕಾರಿಗಳು ನಮ್ಮ ನಾಮಪತ್ರಗಳನ್ನು ತಿರಸ್ಕರಿಸಿ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿ

ಕುಂಟೋಜಿ ಎಸ್ಡಿಎಂಸಿ ರಚನೆಯಲ್ಲಿ ನಿಯಮ ಉಲ್ಲಂಘನೆ ಆರೋಪ

ಕುಂಟೋಜಿ ಎಸ್ಡಿಎಂಸಿ ರಚನೆಯಲ್ಲಿ ನಿಯಮ ಉಲ್ಲಂಘನೆ ಆರೋಪ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ಸಮೀತಿ ರಚನೆಯಲ್ಲಿ ಅಕ್ರಮ ನಡೆದಿದ್ದು ತನಿಖೆ ನಡೆಸಿ ನಿಯಮಾನುಸಾರ ಸಮೀತಿಯನ್ನು ಮರು ರಚಿಸಬೇಕು ಎಂದು ಆಗ್ರಹಿಸಿ ಗ್ರಾಮದ ಯುವಕರು,ಕೆಲ ಮುಖಂಡರು ಬಿಇಓಗೆ ಸೋಮವಾರ ಮನವಿ ಪತ್ರ ಸಲ್ಲಿಸಿದ್ದಾರೆ. ಪಟ್ಟಣದ ಬಿಇಓ ಕಚೇರಿಗೆ ಆಗಮಿಸಿದ್ದ ಗ್ರಾಮದ ಯುವಕರು,ಮುಖಂಡರು ಬಿಇಓ ಬಿ.ಎಸ್.ಸಾವಳಗಿ ಅವರಿಗೆ ಮನವಿ ಸಲ್ಲಿಸಿದರು.ಈ ಕುರಿತು ಸಲ್ಲಿಸಿದ ಮನವಿಯಲ್ಲಿ, ಕುಂಟೋಜಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ