ಸಿಂಗಲ್ ಟೆಂಡರ್‌ಗೆ ಅವಕಾಶ ಕೊಡುವುದಿಲ್ಲ: ಸುಳ್ಳು ಹೇಳುವುದೇ ಶಾಸಕ ನಾಡಗೌಡರ ಕಾಯಕ-ನಡಹಳ್ಳಿ

ಸಿಂಗಲ್ ಟೆಂಡರ್‌ಗೆ ಅವಕಾಶ ಕೊಡುವುದಿಲ್ಲ: ಸುಳ್ಳು ಹೇಳುವುದೇ ಶಾಸಕ ನಾಡಗೌಡರ ಕಾಯಕ-ನಡಹಳ್ಳಿ

ಮುದ್ದೇಬಿಹಾಳ : ಇವತ್ತಿನ ಶಾಸಕ ಅಪ್ಪಾಜಿ ನಾಡಗೌಡರಿಗೆ ಸರಕಾರದಿಂದ ಹಣ ತರುವ ಯೋಗ್ಯತೆ ಇಲ್ಲ. ಬೆಳಗ್ಗೆ ಎದ್ದರೆ ಸುಳ್ಳು ಹೇಳುವುದು, ಸಿಕ್ಕ ಸಿಕ್ಕ ವೇದಿಕೆಗಳಲ್ಲಿ ಸುಳ್ಳು ಹೇಳುವ, ನಾಟಕ ಮಾಡುವುದನ್ನು ಮಾಡುತ್ತಿದ್ದಾರೆ ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಆರೋಪಿಸಿದರು.
ಪಟ್ಟಣದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಶಾಸಕರ ವಿರುದ್ಧ ಹಲವು ಆರೋಪಗಳನ್ನು ಮಾಡಿದರು.

ನಾಲತವಾಡದಲ್ಲಿ ಹಕ್ಕುಪತ್ರ ವಿತರಿಸಿರುವಲ್ಲಿ, ಭೂಮಿ ಪೂಜೆ ಮಾಡಿರುವ ಸ್ಥಳಗಳಲ್ಲಿ ಜನರನ್ನು ಸುಳ್ಳು ಹೇಳಿ ಯಾಮಾರಿಸಿದ್ದಾರೆ.ಇವರು ರಾಜಕೀಯ ಜೀವನದಲ್ಲಿ ಏನೇನು ಮಾಡಿದ್ದಾರೋ ದಾಖಲೆಗಳ ಸಮೇತ ತೆರೆದಿಡುತ್ತೇನೆ.ವಾರದಲ್ಲಿ ಎರಡು ಪತ್ರಿಕಾಗೋಷ್ಠಿ ನಡೆಸಿ ಒಂದೊAದು ಹೊಸ ವಿಚಾರಗಳನ್ನು ದಾಖಲಾತಿಗಳ ಸಮೇತ ಬಿಚ್ಚಿಡುವ ಕೆಲಸ ಮಾಡುತ್ತೇನೆ ಎಂದು ಗುಡುಗಿದರು.

ಪದೇ ಪದೇ ಸುಳ್ಳಿಗೆ ಜನರು ಮಾರು ಹೋಗುವುದಿಲ್ಲ. ಸಿಂಗಲ್ ಟೆಂಡರ್ ನಿಮ್ಮ ಶಿಷ್ಯನಿಗೆ ಅದು ಹೇಗೆ ಕೊಡುತ್ತೀರಿ ಎಂದು ನೋಡುತ್ತೇನೆ ಎಂದು ಚಿಮ್ಮಲಗಿ ಏತ ನೀರಾವರಿ ಯೋಜನೆ ಅಮರೇಶ್ವರ ದೇವಸ್ಥಾನದ ಬಳಿ ಈಚೇಗೆ ಶಾಸಕರು ಭೂಮಿ ಪೂಜೆ ನೆರವೇರಿಸಿದ ಅನುದಾನದ ಕುರಿತು ಶಾಸಕರಿಗೆ ಸವಾಲು ಹಾಕಿದರು. ನಿಮ್ಮ ಸ್ವಾರ್ಥಕ್ಕೆ ಅಧಿಕಾರಿಗಳನ್ನು ಬಲಿಪಶು ಮಾಡಬೇಡಿ ಎಂದು ಹರಿಹಾಯ್ದರು.


ಬಡವರಿಗೆ ತೊಂದರೆ ಮಾಡಬೇಡಿ
ಮುದ್ದೇಬಿಹಾಳದ ಕ್ಷೇತ್ರದ ಈಗಿನ ಶಾಸಕರಿಗೆ ದಲಿತರು, ಬಡವರು ಕಂಡರೆ ಹೊಟ್ಟೆ ಕಿಚ್ಚು. ಓಟು ಹಾಕುವುದಕ್ಕಷ್ಟೇ ದಲಿತರು,ಬಡವರು ಬೇಕು.ಇವರು ಚುನಾವಣೆ ಸಮಯದಲ್ಲಿ ಯಾಮಾರಿಸಿ ಓಟು ಹಾಕಿಸಿಕೊಂಡಿದ್ದಾರೆ ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಹಾಲಿ ಶಾಸಕ ಅಪ್ಪಾಜಿ ನಾಡಗೌಡರ ವಿರುದ್ಧ ಹರಿಹಾಯ್ದರು.

ಬಡವರು ಸಾಲ ಮಾಡಿ ಅಂಗಡಿ ಹಾಕಿಕೊಂಡಿದ್ದಾರೆ. ಅಂತವರ ಅಂಗಡಿಗಳನ್ನು ಶಾಸಕರು ಮುರಿದು ಹಾಕಿಸಿದ್ದಾರೆ.ಬಡವರಾದ ಅವರಿಗೆ ಬೇರೆ ಉದ್ಯೋಗ ಇಲ್ಲ.ಅವರನ್ನು ಬೀದಿಗೆ ತಂದು ನಿಲ್ಲಿಸಿದ್ದಾರೆ.ಈ ಬಗ್ಗೆ ನಾನು ಪೊಲೀಸ್ ವರಿಷ್ಠಾಧಿಕಾರಿಗೆ, ತಾಲ್ಲೂಕಿನ ಅಧಿಕಾರಿಗಳಿಗೆ ಮಾತನಾಡಿ ನ್ಯಾಯಯುತವಾಗಿ ಬದುಕಲು ಬಿಡಿ ಎಂದು ಹೇಳಿದ್ದೇನೆ. ಅಪ್ಪಾಜಿಗೆ ಬಡವರ ಶಾಪ ತಟ್ಟುತ್ತದೆ.ಬಡವರ ಶಾಪ ದೇವರ ಶಾಪಕ್ಕಿಂತ ಕೆಟ್ಟದ್ದು ಎಂದು ಹೇಳಿದರಲ್ಲದೇ ಮುಂದಿನ ಚುನಾವಣೆಯಲ್ಲಿ ನಾನು ಆಯ್ಕೆಯಾದರೆ ಮುದ್ದೇಬಿಹಾಳ ಮತಕ್ಷೇತ್ರದ ಪ್ರಮುಖ ಪಟ್ಟಣಗಳಲ್ಲಿ ಎಸ್.ಸಿ.,ಎಸ್ಟಿ ,ಹಿಂದುಳಿದವರು, ಬಡವರು ಫುಟಪಾತ್‌ನಲ್ಲಿ ಅಂಗಡಿಗಳನ್ನು ಮಾಡಿಕೊಡುತ್ತೇನೆ.ಅಗತ್ಯವಿದ್ದರೆ ಸರ್ಕಾರದ ಅನುದಾನ ಪಡೆದುಕೊಂಡು ಅವರ ನೆರವಿಗೆ ನಿಲ್ಲುವು ಕೆಲಸ ಮಾಡುತ್ತೇನೆ ಎಂದು ನಡಹಳ್ಳಿ ಹೇಳಿದರು.ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ, ಅಶೋಕ ರಾಠೋಡ, ಪುರಸಭೆ ಸದಸ್ಯ ಬಸಪ್ಪ ತಟ್ಟಿ,ಸಹನಾ ಬಡಿಗೇರ ಇದ್ದರು.

Latest News

ಎಸ್.ಎಸ್.ಎಲ್.ಸಿ ಪರೀಕ್ಷೆ:                                         ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಎಸ್.ಎಸ್.ಎಲ್.ಸಿ ಪರೀಕ್ಷೆ: ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಸರೂರ ಕ್ರಾಸ್ ಬಳಿ ಇರುವ ಕವಡಿಮಟ್ಟಿಯ ದಿ ಆರ್ಚ್ ಏಂಜಲ್

ಉತ್ತಮ ಕಾರ್ಯನಿರ್ವಹಣೆ :                                              KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಉತ್ತಮ ಕಾರ್ಯನಿರ್ವಹಣೆ : KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಮುದ್ದೇಬಿಹಾಳ : ವಿಜಯಪುರದ ಕೆ.ಆರ್.ಐ.ಡಿ.ಎಲ್ ಇಲಾಖೆಯ ಇಇ ಆನಂದಸ್ವಾಮಿ ಅವರು ಇಲಾಖೆಯಲ್ಲಿ ಸಲ್ಲಿಸುತ್ತಿರುವ ಉತ್ತಮ

ತೆರಿಗೆ ವಸೂಲಾತಿಯಲ್ಲಿ ಸಾಧನೆ: ಆಲೂರು ಗ್ರಾ.ಪಂಗೆ ಪ್ರಶಸ್ತಿ ಪ್ರದಾನ

ತೆರಿಗೆ ವಸೂಲಾತಿಯಲ್ಲಿ ಸಾಧನೆ: ಆಲೂರು ಗ್ರಾ.ಪಂಗೆ ಪ್ರಶಸ್ತಿ ಪ್ರದಾನ

ನಾಲತವಾಡ : ತೆರಿಗೆ ವಸೂಲಾತಿಯಲ್ಲಿ ವಿಜಯಪುರ ಜಿಲ್ಲೆಗೆ ಮೂರನೇ ಸ್ಥಾನ ಪಡೆದುಕೊಂಡ ಹಿನ್ನೆಲೆಯಲ್ಲಿ ಮುದ್ದೇಬಿಹಾಳ

ರಾಜ್ಯದ ಟಾಪರ್ ಸ್ಥಾನಕ್ಕೆ ಒಂದೇ ಅಂಕ ಮಿಸ್ :  ವಿದ್ಯಾರ್ಥಿನಿ ಕಣ್ಣೀರು…!                                                                 ನಾಗರಬೆಟ್ಟ ಎಸ್.ಡಿ.ಕೆ ಪ್ರೌಢಶಾಲೆ ವಿದ್ಯಾರ್ಥಿನಿ ಪೂಜಾ ಲಮಾಣಿ ಸಾಧನೆ

ರಾಜ್ಯದ ಟಾಪರ್ ಸ್ಥಾನಕ್ಕೆ ಒಂದೇ ಅಂಕ ಮಿಸ್ : ವಿದ್ಯಾರ್ಥಿನಿ ಕಣ್ಣೀರು…! ನಾಗರಬೆಟ್ಟ ಎಸ್.ಡಿ.ಕೆ ಪ್ರೌಢಶಾಲೆ ವಿದ್ಯಾರ್ಥಿನಿ ಪೂಜಾ ಲಮಾಣಿ ಸಾಧನೆ

ಮುದ್ದೇಬಿಹಾಳ : ಸನ್ 2025-26 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶದಲ್ಲಿ ನಾಗರಬೆಟ್ಟದ ಎಸ್.ಡಿ.ಇ

ಶೋಷಿತರ ಧ್ವನಿ ಡಾ. ಬಿ.ಆರ್.ಅಂಬೇಡ್ಕರ್ – ಇಂದಿರಾ ಕುಂಬಾರ

ಶೋಷಿತರ ಧ್ವನಿ ಡಾ. ಬಿ.ಆರ್.ಅಂಬೇಡ್ಕರ್ – ಇಂದಿರಾ ಕುಂಬಾರ

​ಮುದ್ದೇಬಿಹಾಳ : ತಾಲ್ಲೂಕಿನ ಚವನಭಾವಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಮಂಗಳವಾರ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ಅತ್ಯಂತ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ​ಕಾರ್ಯಕ್ರಮದ ಆರಂಭದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನಗಳನ್ನು ಅರ್ಪಿಸಲಾಯಿತು. ​ಇದೆ ಸಂದರ್ಭದಲ್ಲಿ ಅಂಗನವಾಡಿ ಶಿಕ್ಷಕಿ ಇಂದಿರಾ ಕುಂಬಾರ ಅವರು ಮಾತನಾಡಿ,ಡಾ. ಬಿ.ಆರ್. ಅಂಬೇಡ್ಕರ್ ಅವರು ಈ ದೇಶಕ್ಕೆ ಸರ್ವಶ್ರೇಷ್ಠ ಸಂವಿಧಾನವನ್ನು ನೀಡಿದ

ಡಾ.ಬಿ.ಆರ್.ಅಂಬೇಡ್ಕರ್ ಭಾರತ ದೇಶದ ಆತ್ಮ-ಶಾಸಕ ಸಿ.ಎಸ್.ನಾಡಗೌಡ

ಡಾ.ಬಿ.ಆರ್.ಅಂಬೇಡ್ಕರ್ ಭಾರತ ದೇಶದ ಆತ್ಮ-ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಭಾರತದ ರಾಷ್ಟçಪಿತ ಮಹಾತ್ಮಾ ಗಾಂಧೀಜಿ ಆಗಿದ್ದರೆ,ಡಾ.ಅಂಬೇಡ್ಕರ್ ಅವರು ಈ ದೇಶದ ಆತ್ಮವಾಗಿದ್ದಾರೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಮಂಗಳವಾರ ತಾಲ್ಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಅಖಂಡ ಭಾರತ ಒಂದಾಗಿ ಉಳಿಯಲು ಮಾನವ ಧರ್ಮದ ಪರವಾಗಿ ಅಂಬೇಡ್ಕರ್ ಧ್ವನಿ ಎತ್ತಿದ್ದಾರೆ.ಅಂಬೇಡ್ಕರ್ ಅವರ ಬದುಕು ಪ್ರತಿ ದಿನ ಅಭ್ಯಾಸ ಮಾಡುವಂತಹದ್ದಾಗಿದೆ.ಅವರ ಚಿಂತನೆಗಳನ್ನು ಓದಬೇಕಿದೆ.ಒಂದು ದಿನದ ಆಚರಣೆ ಆಗಬಾರದು.ನಾವೆಲ್ಲರೂ