ಸಿಂಗಲ್ ಟೆಂಡರ್‌ಗೆ ಅವಕಾಶ ಕೊಡುವುದಿಲ್ಲ: ಸುಳ್ಳು ಹೇಳುವುದೇ ಶಾಸಕ ನಾಡಗೌಡರ ಕಾಯಕ-ನಡಹಳ್ಳಿ

ಸಿಂಗಲ್ ಟೆಂಡರ್‌ಗೆ ಅವಕಾಶ ಕೊಡುವುದಿಲ್ಲ: ಸುಳ್ಳು ಹೇಳುವುದೇ ಶಾಸಕ ನಾಡಗೌಡರ ಕಾಯಕ-ನಡಹಳ್ಳಿ

ಮುದ್ದೇಬಿಹಾಳ : ಇವತ್ತಿನ ಶಾಸಕ ಅಪ್ಪಾಜಿ ನಾಡಗೌಡರಿಗೆ ಸರಕಾರದಿಂದ ಹಣ ತರುವ ಯೋಗ್ಯತೆ ಇಲ್ಲ. ಬೆಳಗ್ಗೆ ಎದ್ದರೆ ಸುಳ್ಳು ಹೇಳುವುದು, ಸಿಕ್ಕ ಸಿಕ್ಕ ವೇದಿಕೆಗಳಲ್ಲಿ ಸುಳ್ಳು ಹೇಳುವ, ನಾಟಕ ಮಾಡುವುದನ್ನು ಮಾಡುತ್ತಿದ್ದಾರೆ ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಆರೋಪಿಸಿದರು.
ಪಟ್ಟಣದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಶಾಸಕರ ವಿರುದ್ಧ ಹಲವು ಆರೋಪಗಳನ್ನು ಮಾಡಿದರು.

ನಾಲತವಾಡದಲ್ಲಿ ಹಕ್ಕುಪತ್ರ ವಿತರಿಸಿರುವಲ್ಲಿ, ಭೂಮಿ ಪೂಜೆ ಮಾಡಿರುವ ಸ್ಥಳಗಳಲ್ಲಿ ಜನರನ್ನು ಸುಳ್ಳು ಹೇಳಿ ಯಾಮಾರಿಸಿದ್ದಾರೆ.ಇವರು ರಾಜಕೀಯ ಜೀವನದಲ್ಲಿ ಏನೇನು ಮಾಡಿದ್ದಾರೋ ದಾಖಲೆಗಳ ಸಮೇತ ತೆರೆದಿಡುತ್ತೇನೆ.ವಾರದಲ್ಲಿ ಎರಡು ಪತ್ರಿಕಾಗೋಷ್ಠಿ ನಡೆಸಿ ಒಂದೊAದು ಹೊಸ ವಿಚಾರಗಳನ್ನು ದಾಖಲಾತಿಗಳ ಸಮೇತ ಬಿಚ್ಚಿಡುವ ಕೆಲಸ ಮಾಡುತ್ತೇನೆ ಎಂದು ಗುಡುಗಿದರು.

ಪದೇ ಪದೇ ಸುಳ್ಳಿಗೆ ಜನರು ಮಾರು ಹೋಗುವುದಿಲ್ಲ. ಸಿಂಗಲ್ ಟೆಂಡರ್ ನಿಮ್ಮ ಶಿಷ್ಯನಿಗೆ ಅದು ಹೇಗೆ ಕೊಡುತ್ತೀರಿ ಎಂದು ನೋಡುತ್ತೇನೆ ಎಂದು ಚಿಮ್ಮಲಗಿ ಏತ ನೀರಾವರಿ ಯೋಜನೆ ಅಮರೇಶ್ವರ ದೇವಸ್ಥಾನದ ಬಳಿ ಈಚೇಗೆ ಶಾಸಕರು ಭೂಮಿ ಪೂಜೆ ನೆರವೇರಿಸಿದ ಅನುದಾನದ ಕುರಿತು ಶಾಸಕರಿಗೆ ಸವಾಲು ಹಾಕಿದರು. ನಿಮ್ಮ ಸ್ವಾರ್ಥಕ್ಕೆ ಅಧಿಕಾರಿಗಳನ್ನು ಬಲಿಪಶು ಮಾಡಬೇಡಿ ಎಂದು ಹರಿಹಾಯ್ದರು.


ಬಡವರಿಗೆ ತೊಂದರೆ ಮಾಡಬೇಡಿ
ಮುದ್ದೇಬಿಹಾಳದ ಕ್ಷೇತ್ರದ ಈಗಿನ ಶಾಸಕರಿಗೆ ದಲಿತರು, ಬಡವರು ಕಂಡರೆ ಹೊಟ್ಟೆ ಕಿಚ್ಚು. ಓಟು ಹಾಕುವುದಕ್ಕಷ್ಟೇ ದಲಿತರು,ಬಡವರು ಬೇಕು.ಇವರು ಚುನಾವಣೆ ಸಮಯದಲ್ಲಿ ಯಾಮಾರಿಸಿ ಓಟು ಹಾಕಿಸಿಕೊಂಡಿದ್ದಾರೆ ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಹಾಲಿ ಶಾಸಕ ಅಪ್ಪಾಜಿ ನಾಡಗೌಡರ ವಿರುದ್ಧ ಹರಿಹಾಯ್ದರು.

ಬಡವರು ಸಾಲ ಮಾಡಿ ಅಂಗಡಿ ಹಾಕಿಕೊಂಡಿದ್ದಾರೆ. ಅಂತವರ ಅಂಗಡಿಗಳನ್ನು ಶಾಸಕರು ಮುರಿದು ಹಾಕಿಸಿದ್ದಾರೆ.ಬಡವರಾದ ಅವರಿಗೆ ಬೇರೆ ಉದ್ಯೋಗ ಇಲ್ಲ.ಅವರನ್ನು ಬೀದಿಗೆ ತಂದು ನಿಲ್ಲಿಸಿದ್ದಾರೆ.ಈ ಬಗ್ಗೆ ನಾನು ಪೊಲೀಸ್ ವರಿಷ್ಠಾಧಿಕಾರಿಗೆ, ತಾಲ್ಲೂಕಿನ ಅಧಿಕಾರಿಗಳಿಗೆ ಮಾತನಾಡಿ ನ್ಯಾಯಯುತವಾಗಿ ಬದುಕಲು ಬಿಡಿ ಎಂದು ಹೇಳಿದ್ದೇನೆ. ಅಪ್ಪಾಜಿಗೆ ಬಡವರ ಶಾಪ ತಟ್ಟುತ್ತದೆ.ಬಡವರ ಶಾಪ ದೇವರ ಶಾಪಕ್ಕಿಂತ ಕೆಟ್ಟದ್ದು ಎಂದು ಹೇಳಿದರಲ್ಲದೇ ಮುಂದಿನ ಚುನಾವಣೆಯಲ್ಲಿ ನಾನು ಆಯ್ಕೆಯಾದರೆ ಮುದ್ದೇಬಿಹಾಳ ಮತಕ್ಷೇತ್ರದ ಪ್ರಮುಖ ಪಟ್ಟಣಗಳಲ್ಲಿ ಎಸ್.ಸಿ.,ಎಸ್ಟಿ ,ಹಿಂದುಳಿದವರು, ಬಡವರು ಫುಟಪಾತ್‌ನಲ್ಲಿ ಅಂಗಡಿಗಳನ್ನು ಮಾಡಿಕೊಡುತ್ತೇನೆ.ಅಗತ್ಯವಿದ್ದರೆ ಸರ್ಕಾರದ ಅನುದಾನ ಪಡೆದುಕೊಂಡು ಅವರ ನೆರವಿಗೆ ನಿಲ್ಲುವು ಕೆಲಸ ಮಾಡುತ್ತೇನೆ ಎಂದು ನಡಹಳ್ಳಿ ಹೇಳಿದರು.ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ, ಅಶೋಕ ರಾಠೋಡ, ಪುರಸಭೆ ಸದಸ್ಯ ಬಸಪ್ಪ ತಟ್ಟಿ,ಸಹನಾ ಬಡಿಗೇರ ಇದ್ದರು.

Latest News

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

4 ತಿಂಗಳ ಗರ್ಭಿಣಿ ಆತ್ಮಹತ್ಯೆ..!

4 ತಿಂಗಳ ಗರ್ಭಿಣಿ ಆತ್ಮಹತ್ಯೆ..!

ಕಲಬುರಗಿ: ಪ್ರೀತಿಸಿ ಮದುವೆಯಾದ ಪತಿಯ ನಿರಂತರ ಕಿರುಕುಳಕ್ಕೆ ಬೇಸತ್ತು 4 ತಿಂಗಳ ಗರ್ಭಿಣಿಯೊಬ್ಬರು ತವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಕಲಬುರಗಿ ತಾಲೂಕಿನ ಔರಾದ್ (ಬಿ) ಗ್ರಾಮದಲ್ಲಿ ನಡೆದಿದೆ. ಶೃತಿ (22 ವರ್ಷ) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. 2 ವರ್ಷಗಳ ಹಿಂದೆ ಈಕೆ ಗೋಪಾಲ್ ಎಂಬಾತನನ್ನು ಪ್ರೀತಿಸಿ ಮದುವೆಯಾಗಿದ್ದರು. ಆದರೆ ವಿವಾಹದ ಬಳಿಕ ಕುಡಿತ, ಜೂಜಾಟ ಹಾಗೂ ದುಶ್ಚಟಗಳಿಗೆ ದಾಸನಾಗಿದ್ದ ಗೋಪಾಲ್, ಸಾಲ ತೀರಿಸಲು ಮನೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.