ಸಿಂಗಲ್ ಟೆಂಡರ್‌ಗೆ ಅವಕಾಶ ಕೊಡುವುದಿಲ್ಲ: ಸುಳ್ಳು ಹೇಳುವುದೇ ಶಾಸಕ ನಾಡಗೌಡರ ಕಾಯಕ-ನಡಹಳ್ಳಿ

ಸಿಂಗಲ್ ಟೆಂಡರ್‌ಗೆ ಅವಕಾಶ ಕೊಡುವುದಿಲ್ಲ: ಸುಳ್ಳು ಹೇಳುವುದೇ ಶಾಸಕ ನಾಡಗೌಡರ ಕಾಯಕ-ನಡಹಳ್ಳಿ

ಮುದ್ದೇಬಿಹಾಳ : ಇವತ್ತಿನ ಶಾಸಕ ಅಪ್ಪಾಜಿ ನಾಡಗೌಡರಿಗೆ ಸರಕಾರದಿಂದ ಹಣ ತರುವ ಯೋಗ್ಯತೆ ಇಲ್ಲ. ಬೆಳಗ್ಗೆ ಎದ್ದರೆ ಸುಳ್ಳು ಹೇಳುವುದು, ಸಿಕ್ಕ ಸಿಕ್ಕ ವೇದಿಕೆಗಳಲ್ಲಿ ಸುಳ್ಳು ಹೇಳುವ, ನಾಟಕ ಮಾಡುವುದನ್ನು ಮಾಡುತ್ತಿದ್ದಾರೆ ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಆರೋಪಿಸಿದರು.
ಪಟ್ಟಣದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಶಾಸಕರ ವಿರುದ್ಧ ಹಲವು ಆರೋಪಗಳನ್ನು ಮಾಡಿದರು.

ನಾಲತವಾಡದಲ್ಲಿ ಹಕ್ಕುಪತ್ರ ವಿತರಿಸಿರುವಲ್ಲಿ, ಭೂಮಿ ಪೂಜೆ ಮಾಡಿರುವ ಸ್ಥಳಗಳಲ್ಲಿ ಜನರನ್ನು ಸುಳ್ಳು ಹೇಳಿ ಯಾಮಾರಿಸಿದ್ದಾರೆ.ಇವರು ರಾಜಕೀಯ ಜೀವನದಲ್ಲಿ ಏನೇನು ಮಾಡಿದ್ದಾರೋ ದಾಖಲೆಗಳ ಸಮೇತ ತೆರೆದಿಡುತ್ತೇನೆ.ವಾರದಲ್ಲಿ ಎರಡು ಪತ್ರಿಕಾಗೋಷ್ಠಿ ನಡೆಸಿ ಒಂದೊAದು ಹೊಸ ವಿಚಾರಗಳನ್ನು ದಾಖಲಾತಿಗಳ ಸಮೇತ ಬಿಚ್ಚಿಡುವ ಕೆಲಸ ಮಾಡುತ್ತೇನೆ ಎಂದು ಗುಡುಗಿದರು.

ಪದೇ ಪದೇ ಸುಳ್ಳಿಗೆ ಜನರು ಮಾರು ಹೋಗುವುದಿಲ್ಲ. ಸಿಂಗಲ್ ಟೆಂಡರ್ ನಿಮ್ಮ ಶಿಷ್ಯನಿಗೆ ಅದು ಹೇಗೆ ಕೊಡುತ್ತೀರಿ ಎಂದು ನೋಡುತ್ತೇನೆ ಎಂದು ಚಿಮ್ಮಲಗಿ ಏತ ನೀರಾವರಿ ಯೋಜನೆ ಅಮರೇಶ್ವರ ದೇವಸ್ಥಾನದ ಬಳಿ ಈಚೇಗೆ ಶಾಸಕರು ಭೂಮಿ ಪೂಜೆ ನೆರವೇರಿಸಿದ ಅನುದಾನದ ಕುರಿತು ಶಾಸಕರಿಗೆ ಸವಾಲು ಹಾಕಿದರು. ನಿಮ್ಮ ಸ್ವಾರ್ಥಕ್ಕೆ ಅಧಿಕಾರಿಗಳನ್ನು ಬಲಿಪಶು ಮಾಡಬೇಡಿ ಎಂದು ಹರಿಹಾಯ್ದರು.


ಬಡವರಿಗೆ ತೊಂದರೆ ಮಾಡಬೇಡಿ
ಮುದ್ದೇಬಿಹಾಳದ ಕ್ಷೇತ್ರದ ಈಗಿನ ಶಾಸಕರಿಗೆ ದಲಿತರು, ಬಡವರು ಕಂಡರೆ ಹೊಟ್ಟೆ ಕಿಚ್ಚು. ಓಟು ಹಾಕುವುದಕ್ಕಷ್ಟೇ ದಲಿತರು,ಬಡವರು ಬೇಕು.ಇವರು ಚುನಾವಣೆ ಸಮಯದಲ್ಲಿ ಯಾಮಾರಿಸಿ ಓಟು ಹಾಕಿಸಿಕೊಂಡಿದ್ದಾರೆ ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಹಾಲಿ ಶಾಸಕ ಅಪ್ಪಾಜಿ ನಾಡಗೌಡರ ವಿರುದ್ಧ ಹರಿಹಾಯ್ದರು.

ಬಡವರು ಸಾಲ ಮಾಡಿ ಅಂಗಡಿ ಹಾಕಿಕೊಂಡಿದ್ದಾರೆ. ಅಂತವರ ಅಂಗಡಿಗಳನ್ನು ಶಾಸಕರು ಮುರಿದು ಹಾಕಿಸಿದ್ದಾರೆ.ಬಡವರಾದ ಅವರಿಗೆ ಬೇರೆ ಉದ್ಯೋಗ ಇಲ್ಲ.ಅವರನ್ನು ಬೀದಿಗೆ ತಂದು ನಿಲ್ಲಿಸಿದ್ದಾರೆ.ಈ ಬಗ್ಗೆ ನಾನು ಪೊಲೀಸ್ ವರಿಷ್ಠಾಧಿಕಾರಿಗೆ, ತಾಲ್ಲೂಕಿನ ಅಧಿಕಾರಿಗಳಿಗೆ ಮಾತನಾಡಿ ನ್ಯಾಯಯುತವಾಗಿ ಬದುಕಲು ಬಿಡಿ ಎಂದು ಹೇಳಿದ್ದೇನೆ. ಅಪ್ಪಾಜಿಗೆ ಬಡವರ ಶಾಪ ತಟ್ಟುತ್ತದೆ.ಬಡವರ ಶಾಪ ದೇವರ ಶಾಪಕ್ಕಿಂತ ಕೆಟ್ಟದ್ದು ಎಂದು ಹೇಳಿದರಲ್ಲದೇ ಮುಂದಿನ ಚುನಾವಣೆಯಲ್ಲಿ ನಾನು ಆಯ್ಕೆಯಾದರೆ ಮುದ್ದೇಬಿಹಾಳ ಮತಕ್ಷೇತ್ರದ ಪ್ರಮುಖ ಪಟ್ಟಣಗಳಲ್ಲಿ ಎಸ್.ಸಿ.,ಎಸ್ಟಿ ,ಹಿಂದುಳಿದವರು, ಬಡವರು ಫುಟಪಾತ್‌ನಲ್ಲಿ ಅಂಗಡಿಗಳನ್ನು ಮಾಡಿಕೊಡುತ್ತೇನೆ.ಅಗತ್ಯವಿದ್ದರೆ ಸರ್ಕಾರದ ಅನುದಾನ ಪಡೆದುಕೊಂಡು ಅವರ ನೆರವಿಗೆ ನಿಲ್ಲುವು ಕೆಲಸ ಮಾಡುತ್ತೇನೆ ಎಂದು ನಡಹಳ್ಳಿ ಹೇಳಿದರು.ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ, ಅಶೋಕ ರಾಠೋಡ, ಪುರಸಭೆ ಸದಸ್ಯ ಬಸಪ್ಪ ತಟ್ಟಿ,ಸಹನಾ ಬಡಿಗೇರ ಇದ್ದರು.

Latest News

ಬರಪೀಡಿತ ಪಟ್ಟಿಯಿಂದ ಮುದ್ದೇಬಿಹಾಳ ಮತಕ್ಷೇತ್ರ ಔಟ್: ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ವಿರುದ್ಧ ಶಾಸಕ ನಾಡಗೌಡರ ತೀವ್ರ ವಾಗ್ದಾಳಿ

ಬರಪೀಡಿತ ಪಟ್ಟಿಯಿಂದ ಮುದ್ದೇಬಿಹಾಳ ಮತಕ್ಷೇತ್ರ ಔಟ್: ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ವಿರುದ್ಧ ಶಾಸಕ ನಾಡಗೌಡರ ತೀವ್ರ ವಾಗ್ದಾಳಿ

ಮುದ್ದೇಬಿಹಾಳ : ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದೇ ರೈತರು ಸಂಕಷ್ಟಕ್ಕೆ ಸಿಲುಕಿದ್ದರೂ

ಎರಡು ಅಂಬ್ಯುಲೆನ್ಸ್ ಜನಸೇವೆಗೆ ಲೋಕಾರ್ಪಣೆ:                     70 ಸಾವಿರ ಹುದ್ದೆಗಳ ಭರ್ತಿಗೆ ಕಾನೂನು ತೊಡಕು-ಶಾಸಕ ನಾಡಗೌಡ

ಎರಡು ಅಂಬ್ಯುಲೆನ್ಸ್ ಜನಸೇವೆಗೆ ಲೋಕಾರ್ಪಣೆ: 70 ಸಾವಿರ ಹುದ್ದೆಗಳ ಭರ್ತಿಗೆ ಕಾನೂನು ತೊಡಕು-ಶಾಸಕ ನಾಡಗೌಡ

ಮುದ್ದೇಬಿಹಾಳ : ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಸಿಎಸ್‌ಆರ್ ಅನುದಾನದಲ್ಲಿ ಮುದ್ದೇಬಿಹಾಳ ಹಾಗೂ

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಮುದ್ದೇಬಿಹಾಳ : ಹೆಚ್ಚುತ್ತಿರುವ ಜನಸಂಚಾರ ದಟ್ಟಣೆ ನಿಯಂತ್ರಣ ಹಾಗೂ ಪೊಲೀಸ್ ಇಲಾಖೆ ಮತ್ತಷ್ಟು ದಕ್ಷತೆಯಿಂದ

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಮುದ್ದೇಬಿಹಾಳ : ಪಾರ್ವತಿಬಾಯಿ ಭೂರಮಲ್ ಓಸ್ವಾಲ್ ಕುಟುಂಬದವರು ಪರಿಶ್ರಮದಿಂದ ಗಳಿಸಿದ ಆಸ್ತಿಯನ್ನು ದಾನ ಮಾಡುವ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ ವಕ್ಭ್ ನಿಯಮಗಳು 2017ರ ನಿಯಮ 25ರ ಅನ್ವಯ ವಿಜಯಪುರ ಜಿಲ್ಲಾ ವಕ್ಭ್ ಅಧಿಕಾರಿಗಳು ಅಂಜುಮನ್ ಕಮೀಟಿಯ ನೂತನ ಆಡಳಿತ ಮಂಡಳಿಯ ಅಧ್ಯಕ್ಷರು,ಉಪಾಧ್ಯಕ್ಷರು,ಕಾರ್ಯದರ್ಶಿಗಳು ಹಾಗೂ ಖಜಾಂಚಿಯ ಆಯ್ಕೆಗೆ ಹೊರಡಿಸಿರುವ ನೋಟಿಸ್ ಇದೀಗ ವಿವಾದಕ್ಕೆ ಕಾರಣವಾಗಿದೆ. ಆಯ್ಕೆಯಾದ ಸದಸ್ಯರಿಗೆ ಅದ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ನಡೆಸುವ ಸಭೆಯನ್ನು ನಡೆಸಲು ನೋಟಿಸ್‌ನ್ನು ನೋಂದಾಯಿತ ಅಂಚೆ ಮೂಲಕ ಒಂದು ವಾರದ ಕಾಲಾವಕಾಶದಲ್ಲಿ ಕಳಿಸಬೇಕು

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸನ್ಮಾನ ;                                      ಎರಡು ತಿಂಗಳಲ್ಲಿ ಬಾಕಿ ಹಣ ಬಿಡುಗಡೆಗೆ ಕ್ರಮ-ಸಚಿವ ಜಾರಕಿಹೊಳಿ

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸನ್ಮಾನ ; ಎರಡು ತಿಂಗಳಲ್ಲಿ ಬಾಕಿ ಹಣ ಬಿಡುಗಡೆಗೆ ಕ್ರಮ-ಸಚಿವ ಜಾರಕಿಹೊಳಿ

ವಿಜಯಪುರ : ಗುತ್ತಿಗೆದಾರರ ಬಾಕಿ ಬಿಲ್ ಬಿಡುಗಡೆ ಸೇರಿದಂತೆ ಗುತ್ತಿಗೆದಾರರ ಬೇಡಿಕೆಗಳನ್ನು ಆದ್ಯತೆ ಮೇರೆಗೆ ಈಡೇರಿಸುವುದಾಗಿ ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಭರವಸೆ ನೀಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ತಿಳಿಸಿದ್ದಾರೆ. ವಿಜಯಪುರ ನಗರದ ಜಿಲ್ಲಾ ಗುತ್ತಿಗೆದಾರರ ಸಂಘದ ನೂತನ ಕಟ್ಟಡ ಭೂಮಿ ಪೂಜೆ ಸಮಾರಂಭಕ್ಕೆ ಆಗಮಿಸಿದ ಸಂದರ್ಭದಲ್ಲಿ ಅವರನ್ನು ಭೇಟಿಯಾದ ವೇಳೆ ಮುದ್ದೇಬಿಹಾಳ ಮತಕ್ಷೇತ್ರದ ಕೊಣ್ಣೂರ ಗ್ರಾಮದ ಸಿಸಿ ರಸ್ತೆ ಹಾಗೂ ಚರಂಡಿ ಅಭಿವೃದ್ಧಿಗಾಗಿ ಸುಮಾರು ೨ಕೋಟಿ