ಸಿಂಗಲ್ ಟೆಂಡರ್‌ಗೆ ಅವಕಾಶ ಕೊಡುವುದಿಲ್ಲ: ಸುಳ್ಳು ಹೇಳುವುದೇ ಶಾಸಕ ನಾಡಗೌಡರ ಕಾಯಕ-ನಡಹಳ್ಳಿ

ಸಿಂಗಲ್ ಟೆಂಡರ್‌ಗೆ ಅವಕಾಶ ಕೊಡುವುದಿಲ್ಲ: ಸುಳ್ಳು ಹೇಳುವುದೇ ಶಾಸಕ ನಾಡಗೌಡರ ಕಾಯಕ-ನಡಹಳ್ಳಿ

ಮುದ್ದೇಬಿಹಾಳ : ಇವತ್ತಿನ ಶಾಸಕ ಅಪ್ಪಾಜಿ ನಾಡಗೌಡರಿಗೆ ಸರಕಾರದಿಂದ ಹಣ ತರುವ ಯೋಗ್ಯತೆ ಇಲ್ಲ. ಬೆಳಗ್ಗೆ ಎದ್ದರೆ ಸುಳ್ಳು ಹೇಳುವುದು, ಸಿಕ್ಕ ಸಿಕ್ಕ ವೇದಿಕೆಗಳಲ್ಲಿ ಸುಳ್ಳು ಹೇಳುವ, ನಾಟಕ ಮಾಡುವುದನ್ನು ಮಾಡುತ್ತಿದ್ದಾರೆ ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಆರೋಪಿಸಿದರು.
ಪಟ್ಟಣದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಶಾಸಕರ ವಿರುದ್ಧ ಹಲವು ಆರೋಪಗಳನ್ನು ಮಾಡಿದರು.

ನಾಲತವಾಡದಲ್ಲಿ ಹಕ್ಕುಪತ್ರ ವಿತರಿಸಿರುವಲ್ಲಿ, ಭೂಮಿ ಪೂಜೆ ಮಾಡಿರುವ ಸ್ಥಳಗಳಲ್ಲಿ ಜನರನ್ನು ಸುಳ್ಳು ಹೇಳಿ ಯಾಮಾರಿಸಿದ್ದಾರೆ.ಇವರು ರಾಜಕೀಯ ಜೀವನದಲ್ಲಿ ಏನೇನು ಮಾಡಿದ್ದಾರೋ ದಾಖಲೆಗಳ ಸಮೇತ ತೆರೆದಿಡುತ್ತೇನೆ.ವಾರದಲ್ಲಿ ಎರಡು ಪತ್ರಿಕಾಗೋಷ್ಠಿ ನಡೆಸಿ ಒಂದೊAದು ಹೊಸ ವಿಚಾರಗಳನ್ನು ದಾಖಲಾತಿಗಳ ಸಮೇತ ಬಿಚ್ಚಿಡುವ ಕೆಲಸ ಮಾಡುತ್ತೇನೆ ಎಂದು ಗುಡುಗಿದರು.

ಪದೇ ಪದೇ ಸುಳ್ಳಿಗೆ ಜನರು ಮಾರು ಹೋಗುವುದಿಲ್ಲ. ಸಿಂಗಲ್ ಟೆಂಡರ್ ನಿಮ್ಮ ಶಿಷ್ಯನಿಗೆ ಅದು ಹೇಗೆ ಕೊಡುತ್ತೀರಿ ಎಂದು ನೋಡುತ್ತೇನೆ ಎಂದು ಚಿಮ್ಮಲಗಿ ಏತ ನೀರಾವರಿ ಯೋಜನೆ ಅಮರೇಶ್ವರ ದೇವಸ್ಥಾನದ ಬಳಿ ಈಚೇಗೆ ಶಾಸಕರು ಭೂಮಿ ಪೂಜೆ ನೆರವೇರಿಸಿದ ಅನುದಾನದ ಕುರಿತು ಶಾಸಕರಿಗೆ ಸವಾಲು ಹಾಕಿದರು. ನಿಮ್ಮ ಸ್ವಾರ್ಥಕ್ಕೆ ಅಧಿಕಾರಿಗಳನ್ನು ಬಲಿಪಶು ಮಾಡಬೇಡಿ ಎಂದು ಹರಿಹಾಯ್ದರು.


ಬಡವರಿಗೆ ತೊಂದರೆ ಮಾಡಬೇಡಿ
ಮುದ್ದೇಬಿಹಾಳದ ಕ್ಷೇತ್ರದ ಈಗಿನ ಶಾಸಕರಿಗೆ ದಲಿತರು, ಬಡವರು ಕಂಡರೆ ಹೊಟ್ಟೆ ಕಿಚ್ಚು. ಓಟು ಹಾಕುವುದಕ್ಕಷ್ಟೇ ದಲಿತರು,ಬಡವರು ಬೇಕು.ಇವರು ಚುನಾವಣೆ ಸಮಯದಲ್ಲಿ ಯಾಮಾರಿಸಿ ಓಟು ಹಾಕಿಸಿಕೊಂಡಿದ್ದಾರೆ ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಹಾಲಿ ಶಾಸಕ ಅಪ್ಪಾಜಿ ನಾಡಗೌಡರ ವಿರುದ್ಧ ಹರಿಹಾಯ್ದರು.

ಬಡವರು ಸಾಲ ಮಾಡಿ ಅಂಗಡಿ ಹಾಕಿಕೊಂಡಿದ್ದಾರೆ. ಅಂತವರ ಅಂಗಡಿಗಳನ್ನು ಶಾಸಕರು ಮುರಿದು ಹಾಕಿಸಿದ್ದಾರೆ.ಬಡವರಾದ ಅವರಿಗೆ ಬೇರೆ ಉದ್ಯೋಗ ಇಲ್ಲ.ಅವರನ್ನು ಬೀದಿಗೆ ತಂದು ನಿಲ್ಲಿಸಿದ್ದಾರೆ.ಈ ಬಗ್ಗೆ ನಾನು ಪೊಲೀಸ್ ವರಿಷ್ಠಾಧಿಕಾರಿಗೆ, ತಾಲ್ಲೂಕಿನ ಅಧಿಕಾರಿಗಳಿಗೆ ಮಾತನಾಡಿ ನ್ಯಾಯಯುತವಾಗಿ ಬದುಕಲು ಬಿಡಿ ಎಂದು ಹೇಳಿದ್ದೇನೆ. ಅಪ್ಪಾಜಿಗೆ ಬಡವರ ಶಾಪ ತಟ್ಟುತ್ತದೆ.ಬಡವರ ಶಾಪ ದೇವರ ಶಾಪಕ್ಕಿಂತ ಕೆಟ್ಟದ್ದು ಎಂದು ಹೇಳಿದರಲ್ಲದೇ ಮುಂದಿನ ಚುನಾವಣೆಯಲ್ಲಿ ನಾನು ಆಯ್ಕೆಯಾದರೆ ಮುದ್ದೇಬಿಹಾಳ ಮತಕ್ಷೇತ್ರದ ಪ್ರಮುಖ ಪಟ್ಟಣಗಳಲ್ಲಿ ಎಸ್.ಸಿ.,ಎಸ್ಟಿ ,ಹಿಂದುಳಿದವರು, ಬಡವರು ಫುಟಪಾತ್‌ನಲ್ಲಿ ಅಂಗಡಿಗಳನ್ನು ಮಾಡಿಕೊಡುತ್ತೇನೆ.ಅಗತ್ಯವಿದ್ದರೆ ಸರ್ಕಾರದ ಅನುದಾನ ಪಡೆದುಕೊಂಡು ಅವರ ನೆರವಿಗೆ ನಿಲ್ಲುವು ಕೆಲಸ ಮಾಡುತ್ತೇನೆ ಎಂದು ನಡಹಳ್ಳಿ ಹೇಳಿದರು.ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ, ಅಶೋಕ ರಾಠೋಡ, ಪುರಸಭೆ ಸದಸ್ಯ ಬಸಪ್ಪ ತಟ್ಟಿ,ಸಹನಾ ಬಡಿಗೇರ ಇದ್ದರು.

Latest News

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ : ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ಸಮಗ್ರ ಪ್ರಶಸ್ತಿ

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ : ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ಸಮಗ್ರ ಪ್ರಶಸ್ತಿ

ಮುದ್ದೇಬಿಹಾಳ : ತಾಲ್ಲೂಕಿನ ಕೊಪ್ಪ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಹುಲ್ಲೂರ ಕ್ಲಸ್ಟರ್

ಮನೆಮನೆಗೆ ಪೋಲಿಸ್ ಭೇಟಿ ನೀಡಿ ಕಾನೂನು ಅರಿವು ಕಾರ್ಯಕ್ರಮ

ಮನೆಮನೆಗೆ ಪೋಲಿಸ್ ಭೇಟಿ ನೀಡಿ ಕಾನೂನು ಅರಿವು ಕಾರ್ಯಕ್ರಮ

ನಾಲತವಾಡ: ಸ್ಥಳೀಯ ಹೊರ ಪೋಲಿಸ್ ಠಾಣೆ ಆರಕ್ಷಕ ಸಿಬ್ಬಂದಿ ಘಾಳಪೂಜಿ, ಬಿಜ್ಜೂರ, ಖಾನೀಕೇರಿ, ಲೊಟಗೇರಿ

ಪ್ರತಿಭಾ ಕಾರಂಜಿಯಲ್ಲಿ ಮಕ್ಕಳ ಕಲರವ

ಪ್ರತಿಭಾ ಕಾರಂಜಿಯಲ್ಲಿ ಮಕ್ಕಳ ಕಲರವ

ನಾಲತವಾಡ: ಸಮೀಪದ ಲೊಟಗೇರಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಸ್ಕೃತಿಯ ಕಾಂತಿ ಮಕ್ಕಳ ಮೂಲಕ

ಮಹಿಳೆಯರಿಗೆ ಋತುಚಕ್ರ ರಜೆ :ಸರ್ಕಾರದಿಂದ ಮಾನವೀಯ ಸಂವೇದನೆಯ ಆದೇಶ-ಸಂಗೀತಾ ನಾಡಗೌಡ

ಮಹಿಳೆಯರಿಗೆ ಋತುಚಕ್ರ ರಜೆ :ಸರ್ಕಾರದಿಂದ ಮಾನವೀಯ ಸಂವೇದನೆಯ ಆದೇಶ-ಸಂಗೀತಾ ನಾಡಗೌಡ

ಮುದ್ದೇಬಿಹಾಳ : ರಾಜ್ಯ ಸರ್ಕಾರ ಎರಡು ದಿನಗಳ ಹಿಂದಷ್ಟೇ ರಾಜ್ಯದ ಸರ್ಕಾರಿ,ಖಾಸಗಿ.ಗುತ್ತಿಗೆ,ಹೊರಗುತ್ತಿಗೆ ಕ್ಷೇತ್ರದಲ್ಲಿ ಸೇವೆ

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆಯ ಅಭಿವೃದ್ಧಿಗೆ ಕೈ ಜೋಡಿಸೋಣ

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆಯ ಅಭಿವೃದ್ಧಿಗೆ ಕೈ ಜೋಡಿಸೋಣ

ಮುದ್ದೇಬಿಹಾಳ : ಮುಸ್ಲಿಂ ಸಮಾಜದ ಪ್ರಾತಿನಿಧಿಕ ಸಂಸ್ಥೆ ಅಂಜುಮನ್ ಇಸ್ಲಾಂ ಕಮೀಟಿಗೆ ಆಡಳಿತ ಮಂಡಳಿ ರಚನೆಗೊಂಡರೆ ಸಮಾಜದ ಶೈಕ್ಷಣಿಕ ಹಾಗೂ ಔದ್ಯೋಗಿಕ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಲು ಆದ್ಯತೆ ದೊರೆಯುತ್ತದೆ ಎಂದು ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಅಂಜುಮನ್ ಇಸ್ಲಾಂ ಕಮೀಟಿ ಕಚೇರಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಹರನಾಳ ಪಿಕೆಪಿಎಸ್ ಅಧ್ಯಕ್ಷ ಕಾಶೀಂಪಟೇಲ್ ಮೂಕಿಹಾಳ ಹಾಗೂ ಅಂಜುಮನ್ ಸಂಸ್ಥೆಯ ಮತದಾರ ಸದಸ್ಯರ ದಾಖಲಾತಿ ಅಧಿಕಾರಿಯಾಗಿ ನೇಮಕವಾದ ಹುಸೇನ ನಾಯಕೋಡಿ ಅವರ

ಬಸರಕೋಡ ಪಿಕೆಪಿಎಸ್‌ಗೆ ಅವಿರೋಧ ಆಯ್ಕೆ : ಮತ್ತೆ ಹೇಮರೆಡ್ಡಿ ಮೇಟಿ ಪೆನಲ್‌ಗೆ ಮುನ್ನಡೆ

ಬಸರಕೋಡ ಪಿಕೆಪಿಎಸ್‌ಗೆ ಅವಿರೋಧ ಆಯ್ಕೆ : ಮತ್ತೆ ಹೇಮರೆಡ್ಡಿ ಮೇಟಿ ಪೆನಲ್‌ಗೆ ಮುನ್ನಡೆ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ವಿವಿಧೋದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ 12 ಸ್ಥಾನಗಳಿಗೆ ಸೋಮವಾರ ಅವಿರೋಧ ಆಯ್ಕೆ ನಡೆದಿದ್ದು ಹಿಂದಿನ ಅಧ್ಯಕ್ಷ ಹೇಮರೆಡ್ಡಿ ಮೇಟಿ ಪೆನಲ್‌ಗೆ ಮುನ್ನಡೆ ದೊರೆತಿದೆ. ಚುನಾವಣಾಧಿಕಾರಿ, ಸಹಕಾರ ಅಭಿವೃದ್ಧಿ ಅಧಿಕಾರಿ ವಿ.ಎಸ್.ಉತ್ನಾಳ ಅವರು 12 ನಿರ್ದೇಶಕರು ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಘೋಷಿಸಿದರು. ಸಾಮಾನ್ಯ ವರ್ಗದಿಂದ ಹಿಂದಿನ ಅಧ್ಯಕ್ಷ ಹೇಮಣ್ಣ ಮೇಟಿ, ಬಸವರಾಜ ಪಾಟೀಲ, ಶಾಂತಪ್ಪ ಸಂಕನಾಳ, ಬಾಬು ಸೂಳಿಭಾವಿ,ಸಿಂದೂಬಲ್ಲಾಳ ನಾಡಗೌಡ, ಹಿಂದುಳಿದ ಅ