ಸಿಂಗಲ್ ಟೆಂಡರ್‌ಗೆ ಅವಕಾಶ ಕೊಡುವುದಿಲ್ಲ: ಸುಳ್ಳು ಹೇಳುವುದೇ ಶಾಸಕ ನಾಡಗೌಡರ ಕಾಯಕ-ನಡಹಳ್ಳಿ

ಸಿಂಗಲ್ ಟೆಂಡರ್‌ಗೆ ಅವಕಾಶ ಕೊಡುವುದಿಲ್ಲ: ಸುಳ್ಳು ಹೇಳುವುದೇ ಶಾಸಕ ನಾಡಗೌಡರ ಕಾಯಕ-ನಡಹಳ್ಳಿ

ಮುದ್ದೇಬಿಹಾಳ : ಇವತ್ತಿನ ಶಾಸಕ ಅಪ್ಪಾಜಿ ನಾಡಗೌಡರಿಗೆ ಸರಕಾರದಿಂದ ಹಣ ತರುವ ಯೋಗ್ಯತೆ ಇಲ್ಲ. ಬೆಳಗ್ಗೆ ಎದ್ದರೆ ಸುಳ್ಳು ಹೇಳುವುದು, ಸಿಕ್ಕ ಸಿಕ್ಕ ವೇದಿಕೆಗಳಲ್ಲಿ ಸುಳ್ಳು ಹೇಳುವ, ನಾಟಕ ಮಾಡುವುದನ್ನು ಮಾಡುತ್ತಿದ್ದಾರೆ ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಆರೋಪಿಸಿದರು.
ಪಟ್ಟಣದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಶಾಸಕರ ವಿರುದ್ಧ ಹಲವು ಆರೋಪಗಳನ್ನು ಮಾಡಿದರು.

ನಾಲತವಾಡದಲ್ಲಿ ಹಕ್ಕುಪತ್ರ ವಿತರಿಸಿರುವಲ್ಲಿ, ಭೂಮಿ ಪೂಜೆ ಮಾಡಿರುವ ಸ್ಥಳಗಳಲ್ಲಿ ಜನರನ್ನು ಸುಳ್ಳು ಹೇಳಿ ಯಾಮಾರಿಸಿದ್ದಾರೆ.ಇವರು ರಾಜಕೀಯ ಜೀವನದಲ್ಲಿ ಏನೇನು ಮಾಡಿದ್ದಾರೋ ದಾಖಲೆಗಳ ಸಮೇತ ತೆರೆದಿಡುತ್ತೇನೆ.ವಾರದಲ್ಲಿ ಎರಡು ಪತ್ರಿಕಾಗೋಷ್ಠಿ ನಡೆಸಿ ಒಂದೊAದು ಹೊಸ ವಿಚಾರಗಳನ್ನು ದಾಖಲಾತಿಗಳ ಸಮೇತ ಬಿಚ್ಚಿಡುವ ಕೆಲಸ ಮಾಡುತ್ತೇನೆ ಎಂದು ಗುಡುಗಿದರು.

ಪದೇ ಪದೇ ಸುಳ್ಳಿಗೆ ಜನರು ಮಾರು ಹೋಗುವುದಿಲ್ಲ. ಸಿಂಗಲ್ ಟೆಂಡರ್ ನಿಮ್ಮ ಶಿಷ್ಯನಿಗೆ ಅದು ಹೇಗೆ ಕೊಡುತ್ತೀರಿ ಎಂದು ನೋಡುತ್ತೇನೆ ಎಂದು ಚಿಮ್ಮಲಗಿ ಏತ ನೀರಾವರಿ ಯೋಜನೆ ಅಮರೇಶ್ವರ ದೇವಸ್ಥಾನದ ಬಳಿ ಈಚೇಗೆ ಶಾಸಕರು ಭೂಮಿ ಪೂಜೆ ನೆರವೇರಿಸಿದ ಅನುದಾನದ ಕುರಿತು ಶಾಸಕರಿಗೆ ಸವಾಲು ಹಾಕಿದರು. ನಿಮ್ಮ ಸ್ವಾರ್ಥಕ್ಕೆ ಅಧಿಕಾರಿಗಳನ್ನು ಬಲಿಪಶು ಮಾಡಬೇಡಿ ಎಂದು ಹರಿಹಾಯ್ದರು.


ಬಡವರಿಗೆ ತೊಂದರೆ ಮಾಡಬೇಡಿ
ಮುದ್ದೇಬಿಹಾಳದ ಕ್ಷೇತ್ರದ ಈಗಿನ ಶಾಸಕರಿಗೆ ದಲಿತರು, ಬಡವರು ಕಂಡರೆ ಹೊಟ್ಟೆ ಕಿಚ್ಚು. ಓಟು ಹಾಕುವುದಕ್ಕಷ್ಟೇ ದಲಿತರು,ಬಡವರು ಬೇಕು.ಇವರು ಚುನಾವಣೆ ಸಮಯದಲ್ಲಿ ಯಾಮಾರಿಸಿ ಓಟು ಹಾಕಿಸಿಕೊಂಡಿದ್ದಾರೆ ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಹಾಲಿ ಶಾಸಕ ಅಪ್ಪಾಜಿ ನಾಡಗೌಡರ ವಿರುದ್ಧ ಹರಿಹಾಯ್ದರು.

ಬಡವರು ಸಾಲ ಮಾಡಿ ಅಂಗಡಿ ಹಾಕಿಕೊಂಡಿದ್ದಾರೆ. ಅಂತವರ ಅಂಗಡಿಗಳನ್ನು ಶಾಸಕರು ಮುರಿದು ಹಾಕಿಸಿದ್ದಾರೆ.ಬಡವರಾದ ಅವರಿಗೆ ಬೇರೆ ಉದ್ಯೋಗ ಇಲ್ಲ.ಅವರನ್ನು ಬೀದಿಗೆ ತಂದು ನಿಲ್ಲಿಸಿದ್ದಾರೆ.ಈ ಬಗ್ಗೆ ನಾನು ಪೊಲೀಸ್ ವರಿಷ್ಠಾಧಿಕಾರಿಗೆ, ತಾಲ್ಲೂಕಿನ ಅಧಿಕಾರಿಗಳಿಗೆ ಮಾತನಾಡಿ ನ್ಯಾಯಯುತವಾಗಿ ಬದುಕಲು ಬಿಡಿ ಎಂದು ಹೇಳಿದ್ದೇನೆ. ಅಪ್ಪಾಜಿಗೆ ಬಡವರ ಶಾಪ ತಟ್ಟುತ್ತದೆ.ಬಡವರ ಶಾಪ ದೇವರ ಶಾಪಕ್ಕಿಂತ ಕೆಟ್ಟದ್ದು ಎಂದು ಹೇಳಿದರಲ್ಲದೇ ಮುಂದಿನ ಚುನಾವಣೆಯಲ್ಲಿ ನಾನು ಆಯ್ಕೆಯಾದರೆ ಮುದ್ದೇಬಿಹಾಳ ಮತಕ್ಷೇತ್ರದ ಪ್ರಮುಖ ಪಟ್ಟಣಗಳಲ್ಲಿ ಎಸ್.ಸಿ.,ಎಸ್ಟಿ ,ಹಿಂದುಳಿದವರು, ಬಡವರು ಫುಟಪಾತ್‌ನಲ್ಲಿ ಅಂಗಡಿಗಳನ್ನು ಮಾಡಿಕೊಡುತ್ತೇನೆ.ಅಗತ್ಯವಿದ್ದರೆ ಸರ್ಕಾರದ ಅನುದಾನ ಪಡೆದುಕೊಂಡು ಅವರ ನೆರವಿಗೆ ನಿಲ್ಲುವು ಕೆಲಸ ಮಾಡುತ್ತೇನೆ ಎಂದು ನಡಹಳ್ಳಿ ಹೇಳಿದರು.ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ, ಅಶೋಕ ರಾಠೋಡ, ಪುರಸಭೆ ಸದಸ್ಯ ಬಸಪ್ಪ ತಟ್ಟಿ,ಸಹನಾ ಬಡಿಗೇರ ಇದ್ದರು.

Latest News

BREAKING: ಭೀಕರ ಅಪಘಾತ.. ಐವರು ಸಾವು

BREAKING: ಭೀಕರ ಅಪಘಾತ.. ಐವರು ಸಾವು

ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಬೈಕ್‌'ಗೆ ಸಾರಿಗೆ ಬಸ್‌ ಡಿಕ್ಕಿಯಾಗಿ ಐವರು

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

ಗೃಹಲಕ್ಷ್ಮಿ ಯೋಜನೆಯ (Gruhalakshmi Yojane) 16ನೇ ಕಂತಿನ ಹಣದ ಕುರಿತು ಮಾಹಿತಿ ಇಲ್ಲಿದೆ. ಪ್ರತಿ

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: ಸರ್ಕಾರದಿಂದ ಆಧಾರ್ ಕಾರ್ಡ್ ಹೊಂದಿದವರಿಗೆ 5 ಹೊಸ ರೂಲ್ಸ್ ಜಾರಿ ಮಾಡಿದೆ. ಈ ಐದೂ ನಿಮಯ ಪಾಲಿಸದಿದ್ದರೆ ದಂಡ ಗ್ಯಾರಂಟಿ! ಆಧಾರ್ ಕಾರ್ಡ್ ಅನ್ನು ಪ್ರತಿಯೊಬ್ಬ ನಾಗರಿಕನ ಅಗತ್ಯ ದಾಖಲೆಯಾಗಿ ಗುರುತಿಸಲಾಗಿದೆ. ಇದು ನಮ್ಮ ಗುರುತಿನ ಕಡ್ಡಾಯ ದಾಖಲೆಯಾಗಿದೆ. ಎಲ್ಲಾ ಸರ್ಕಾರಿ ಯೋಜನೆಗಳು ಮತ್ತು ಹಣಕಾಸು ಸೇವೆಗಳು ನಮ್ಮನ್ನು ತಲುಪಲು ಆಧಾರ್ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಅಗತ್ಯವಿರುತ್ತದೆ. Join Our Telegram: https://t.me/dcgkannada

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ವಿರಾಟ್ ಕಳಪೆ ಫಾರ್ಮ್ ನಿಂದ ನಿವೃತ್ತಿ ಕುರಿತು ಚರ್ಚೆ ಶುರುವಾಗಿದೆ. ಈ ಸರಣಿಯಲ್ಲಿ 9 ಇನಿಂಗ್ಸ್ ಆಡಿದ್ದ ವಿರಾಟ್ ಕೊಹ್ಲಿ 23.75 ರ ಕಳಪೆ ಸರಾಸರಿಯೊಂದಿಗೆ 190 ರನ್ ಮಾತ್ರ ಕಲೆಹಾಕಿದ್ದಾರೆ. ಈ ಕಳಪೆ ಪ್ರದರ್ಶನದ ಬೆನ್ನಲ್ಲೇ ಕೊಹ್ಲಿ ನಿವೃತ್ತರಾಗುವುದು ಉತ್ತಮ ಎಂಬ ಕೂಗುಗಳು ಕೇಳಿಬಂದಿದ್ದವು. ಆದರೀಗ ವಿರಾಟ್ ಕೊಹ್ಲಿ ತಾವು ಯಾವಾಗ ನಿವೃತ್ತಿ ಆಗುತ್ತೇನೆ ಎಂಬುದರ