ಸಿಂಗಲ್ ಟೆಂಡರ್‌ಗೆ ಅವಕಾಶ ಕೊಡುವುದಿಲ್ಲ: ಸುಳ್ಳು ಹೇಳುವುದೇ ಶಾಸಕ ನಾಡಗೌಡರ ಕಾಯಕ-ನಡಹಳ್ಳಿ

ಸಿಂಗಲ್ ಟೆಂಡರ್‌ಗೆ ಅವಕಾಶ ಕೊಡುವುದಿಲ್ಲ: ಸುಳ್ಳು ಹೇಳುವುದೇ ಶಾಸಕ ನಾಡಗೌಡರ ಕಾಯಕ-ನಡಹಳ್ಳಿ

ಮುದ್ದೇಬಿಹಾಳ : ಇವತ್ತಿನ ಶಾಸಕ ಅಪ್ಪಾಜಿ ನಾಡಗೌಡರಿಗೆ ಸರಕಾರದಿಂದ ಹಣ ತರುವ ಯೋಗ್ಯತೆ ಇಲ್ಲ. ಬೆಳಗ್ಗೆ ಎದ್ದರೆ ಸುಳ್ಳು ಹೇಳುವುದು, ಸಿಕ್ಕ ಸಿಕ್ಕ ವೇದಿಕೆಗಳಲ್ಲಿ ಸುಳ್ಳು ಹೇಳುವ, ನಾಟಕ ಮಾಡುವುದನ್ನು ಮಾಡುತ್ತಿದ್ದಾರೆ ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಆರೋಪಿಸಿದರು.
ಪಟ್ಟಣದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಶಾಸಕರ ವಿರುದ್ಧ ಹಲವು ಆರೋಪಗಳನ್ನು ಮಾಡಿದರು.

ನಾಲತವಾಡದಲ್ಲಿ ಹಕ್ಕುಪತ್ರ ವಿತರಿಸಿರುವಲ್ಲಿ, ಭೂಮಿ ಪೂಜೆ ಮಾಡಿರುವ ಸ್ಥಳಗಳಲ್ಲಿ ಜನರನ್ನು ಸುಳ್ಳು ಹೇಳಿ ಯಾಮಾರಿಸಿದ್ದಾರೆ.ಇವರು ರಾಜಕೀಯ ಜೀವನದಲ್ಲಿ ಏನೇನು ಮಾಡಿದ್ದಾರೋ ದಾಖಲೆಗಳ ಸಮೇತ ತೆರೆದಿಡುತ್ತೇನೆ.ವಾರದಲ್ಲಿ ಎರಡು ಪತ್ರಿಕಾಗೋಷ್ಠಿ ನಡೆಸಿ ಒಂದೊAದು ಹೊಸ ವಿಚಾರಗಳನ್ನು ದಾಖಲಾತಿಗಳ ಸಮೇತ ಬಿಚ್ಚಿಡುವ ಕೆಲಸ ಮಾಡುತ್ತೇನೆ ಎಂದು ಗುಡುಗಿದರು.

ಪದೇ ಪದೇ ಸುಳ್ಳಿಗೆ ಜನರು ಮಾರು ಹೋಗುವುದಿಲ್ಲ. ಸಿಂಗಲ್ ಟೆಂಡರ್ ನಿಮ್ಮ ಶಿಷ್ಯನಿಗೆ ಅದು ಹೇಗೆ ಕೊಡುತ್ತೀರಿ ಎಂದು ನೋಡುತ್ತೇನೆ ಎಂದು ಚಿಮ್ಮಲಗಿ ಏತ ನೀರಾವರಿ ಯೋಜನೆ ಅಮರೇಶ್ವರ ದೇವಸ್ಥಾನದ ಬಳಿ ಈಚೇಗೆ ಶಾಸಕರು ಭೂಮಿ ಪೂಜೆ ನೆರವೇರಿಸಿದ ಅನುದಾನದ ಕುರಿತು ಶಾಸಕರಿಗೆ ಸವಾಲು ಹಾಕಿದರು. ನಿಮ್ಮ ಸ್ವಾರ್ಥಕ್ಕೆ ಅಧಿಕಾರಿಗಳನ್ನು ಬಲಿಪಶು ಮಾಡಬೇಡಿ ಎಂದು ಹರಿಹಾಯ್ದರು.


ಬಡವರಿಗೆ ತೊಂದರೆ ಮಾಡಬೇಡಿ
ಮುದ್ದೇಬಿಹಾಳದ ಕ್ಷೇತ್ರದ ಈಗಿನ ಶಾಸಕರಿಗೆ ದಲಿತರು, ಬಡವರು ಕಂಡರೆ ಹೊಟ್ಟೆ ಕಿಚ್ಚು. ಓಟು ಹಾಕುವುದಕ್ಕಷ್ಟೇ ದಲಿತರು,ಬಡವರು ಬೇಕು.ಇವರು ಚುನಾವಣೆ ಸಮಯದಲ್ಲಿ ಯಾಮಾರಿಸಿ ಓಟು ಹಾಕಿಸಿಕೊಂಡಿದ್ದಾರೆ ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಹಾಲಿ ಶಾಸಕ ಅಪ್ಪಾಜಿ ನಾಡಗೌಡರ ವಿರುದ್ಧ ಹರಿಹಾಯ್ದರು.

ಬಡವರು ಸಾಲ ಮಾಡಿ ಅಂಗಡಿ ಹಾಕಿಕೊಂಡಿದ್ದಾರೆ. ಅಂತವರ ಅಂಗಡಿಗಳನ್ನು ಶಾಸಕರು ಮುರಿದು ಹಾಕಿಸಿದ್ದಾರೆ.ಬಡವರಾದ ಅವರಿಗೆ ಬೇರೆ ಉದ್ಯೋಗ ಇಲ್ಲ.ಅವರನ್ನು ಬೀದಿಗೆ ತಂದು ನಿಲ್ಲಿಸಿದ್ದಾರೆ.ಈ ಬಗ್ಗೆ ನಾನು ಪೊಲೀಸ್ ವರಿಷ್ಠಾಧಿಕಾರಿಗೆ, ತಾಲ್ಲೂಕಿನ ಅಧಿಕಾರಿಗಳಿಗೆ ಮಾತನಾಡಿ ನ್ಯಾಯಯುತವಾಗಿ ಬದುಕಲು ಬಿಡಿ ಎಂದು ಹೇಳಿದ್ದೇನೆ. ಅಪ್ಪಾಜಿಗೆ ಬಡವರ ಶಾಪ ತಟ್ಟುತ್ತದೆ.ಬಡವರ ಶಾಪ ದೇವರ ಶಾಪಕ್ಕಿಂತ ಕೆಟ್ಟದ್ದು ಎಂದು ಹೇಳಿದರಲ್ಲದೇ ಮುಂದಿನ ಚುನಾವಣೆಯಲ್ಲಿ ನಾನು ಆಯ್ಕೆಯಾದರೆ ಮುದ್ದೇಬಿಹಾಳ ಮತಕ್ಷೇತ್ರದ ಪ್ರಮುಖ ಪಟ್ಟಣಗಳಲ್ಲಿ ಎಸ್.ಸಿ.,ಎಸ್ಟಿ ,ಹಿಂದುಳಿದವರು, ಬಡವರು ಫುಟಪಾತ್‌ನಲ್ಲಿ ಅಂಗಡಿಗಳನ್ನು ಮಾಡಿಕೊಡುತ್ತೇನೆ.ಅಗತ್ಯವಿದ್ದರೆ ಸರ್ಕಾರದ ಅನುದಾನ ಪಡೆದುಕೊಂಡು ಅವರ ನೆರವಿಗೆ ನಿಲ್ಲುವು ಕೆಲಸ ಮಾಡುತ್ತೇನೆ ಎಂದು ನಡಹಳ್ಳಿ ಹೇಳಿದರು.ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ, ಅಶೋಕ ರಾಠೋಡ, ಪುರಸಭೆ ಸದಸ್ಯ ಬಸಪ್ಪ ತಟ್ಟಿ,ಸಹನಾ ಬಡಿಗೇರ ಇದ್ದರು.

Latest News

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ಮುದ್ದೇಬಿಹಾಳ : ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳು ಸಂಪೂರ್ಣವಾಗಿ ತಮ್ಮನ್ನು ಆಧುನಿಕ ಮಾಧ್ಯಮಗಳಲ್ಲಿ ಮಗ್ನರಾಗಿದ್ದು ಮಾನವೀಯ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್‌ದಿಂದ ಎ.ಎಲ್.ಬಿ.ಸಿ ಕಾಲುವೆಯ ಕೆಲಸಕ್ಕೆಂದು ಬಂದಿದ್ದ ಕಾರ್ಮಿಕನೋರ್ವ ಸಿಡಿಲಿಗೆ ಬಲಿಯಾಗಿರುವ ಘಟನೆ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ತಾಂಡಾದ ಮಾರುತೇಶ್ವರ ಜಾತ್ರೆಯ ಅಂಗವಾಗಿ ಹಮ್ಮಿಕೊಂಡಿದ್ದ ತೆರಬಂಡಿ ಸ್ಪರ್ಧೆಯಲ್ಲಿ ಶ್ರೀ ಲಕ್ಷ್ಮಿದೇವಿ ಕಮೀಟಿ ರೂಢಗಿ ಎತ್ತುಗಳು ಪ್ರಥಮ, ರೂಢಗಿ ಎಸ್.ಕೆ.ಟಿ ತಂಡ ದ್ವಿತೀಯ ಸ್ಥಾನ ಪಡೆದುಕೊಂಡವು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸಂತೋಷ ಚವ್ಹಾಣ, ಗ್ರಾಮೀಣ ಪ್ರದೇಶದಲ್ಲಿ ರೈತರು ಎತ್ತುಗಳ ಸಂಸ್ಕೃತಿಯನ್ನು ಜೀವಂತವಾಗಿಡುವ ಸಲುವಾಗಿ ಇಂತಹ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ ಎಂದರು. ಗ್ರಾಪಂ ಸದಸ್ಯ ಶಿವಾನಂದ ಲಮಾಣಿ, ಮಾಜಿ ಸದಸ್ಯ ಥಾವರಪ್ಪ

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಬಾಗಲಕೋಟೆ :ಮುರನಾಳ ಗ್ರಾಮದ ಶ್ರೀ ಗದಿಗೆಪ್ಪಗೌಡ ವೆಂಕಪ್ಪ ಕೋನಪ್ಪನವರ ( ೮೩ ) ಇವರು ವಿದ್ಯಾಗಿರಿ , ಬಾಗಲಕೋಟೆ ನಿವಾಸದಲ್ಲಿ ಸ್ವರ್ಗಸ್ಥರಾದರು. ಸೋಮವಾರ ದಿ ೧೨ ಮೇ ೨೦೨೫ ರಂದು ಬೆಳಿಗ್ಗೆ ೧೦ ಗಂಟೆಗೆ ನಂದೀಶ್ವರ ನಗರ, ವಿದ್ಯಾಗಿರಿ ಬಾಗಲಕೋಟೆ ದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವದು. ಸಂಪರ್ಕ ಮೊಬೈಲ್ ನಂಬರ್9740339050 _ಓಂ ಶಾಂತಿ