ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಮುದ್ದೇಬಿಹಾಳ(ಜಿಲ್ಲೆ : ವಿಜಯಪುರ) : ದೇಶದ ಪ್ರತಿಷ್ಠಿತ ಐಐಟಿ ಕಾಲೇಜುಗಳಲ್ಲಿ ಒಂದಾಗಿರುವ ಕಾನ್ಪುರದ ಐಐಟಿ ಕಾಲೇಜಿಗೆ ಮುದ್ದೇಬಿಹಾಳ ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ಅದಿತಿ ಸವಣೂರ ಆಯ್ಕೆಯಾಗಿದ್ದು ಸಂಸ್ಥೆಗೆ ಹೆಮ್ಮೆ ತಂದಿದೆ ಎಂದು ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಅಮೀತಗೌಡ ಎಂ.ಪಾಟೀಲ್ ತಿಳಿಸಿದರು.

ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನಲ್ಲಿ ಗುರುವಾರ ಹಮ್ಮಿಕೊಂಡಿದ್ದ ವಿದ್ಯಾರ್ಥಿನಿಯ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ನಮ್ಮ ಸಂಸ್ಥೆಯಿoದ 6-8 ವಿದ್ಯಾರ್ಥಿಗಳು ಪ್ರತಿಷ್ಠಿತ ಐಐಟಿ ಕಾಲೇಜುಗಳಲ್ಲಿ ಪ್ರವೇಶ ಪಡೆದುಕೊಂಡಿದ್ದು ಅದರಲ್ಲಿ ಗದಗ ಜಿಲ್ಲೆ ಗಜೇಂದ್ರಗಡದಲ್ಲಿ ಶೋಷಿತ ಸಮುದಾಯದಿಂದ ಬಂದಿರುವ ವಿದ್ಯಾರ್ಥಿನಿ ಅದಿತಿ ಪ್ರತಿಭಾವಂತೆಯಾಗಿದ್ದು ನಮ್ಮ ವಿದ್ಯಾಸಂಸ್ಥೆಯಲ್ಲಿ ಎರಡು ವರ್ಷದ ಪಿಯು ಶಿಕ್ಷಣವನ್ನು ಸಂಪೂರ್ಣ ಉಚಿತವಾಗಿ ನೀಡಲಾಗಿತ್ತು.ಈಗ ಐಐಟಿ ತರಬೇತಿ ಪಡೆದು ಕಾನ್ಪುರದ ಕಾಲೇಜಿಗೆ ಆಯ್ಕೆಯಾಗಿದ್ದಾಳೆ ಎಂದು ಹೇಳಿದರು.

ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲರ ಮಾರ್ಗದರ್ಶನದ ಮೇರೆಗೆ ವಿದ್ಯಾರ್ಥಿನಿಗೆ ಉಚಿತ ಶಿಕ್ಷಣಕ್ಕೆ ಆಯ್ಕೆ ಮಾಡಲಾಗಿತ್ತು.ಐಐಟಿ ಓದಲು ಆಕೆಗೆ ಸ್ವಯಂಸೇವಾ ಸಂಸ್ಥೆಯ ಸಹಯೋಗದಲ್ಲಿ ಪ್ರತಿ ವರ್ಷ ಒಂದು ಲಕ್ಷ ರೂ.ಸ್ಕಾಲರ್‌ಶಿಪ್ ದೊರೆಯುವ ವ್ಯವಸ್ಥೆ ಸಂಸ್ಥೆ ಮಾಡಿದೆ.ನಮ್ಮ ವಿದ್ಯಾಸಂಸ್ಥೆಯಿoದ ಆಕೆಗೆ 50 ಸಾವಿರ ರೂ.ನಗದು ಪುರಸ್ಕಾರ ನೀಡಿ ಪ್ರೋತ್ಸಾಹಿಸಿದ್ದೇವೆ ಎಂದು ಹೇಳಿದರು.

ಪಿಯು ಕಾಲೇಜಿನ ಪ್ರಾಚಾರ್ಯ ರೇವಣಸಿದ್ದ ಚಲವಾದಿ(ಮುರಾಳ) ಮಾತನಾಡಿ, ವಿದ್ಯಾರ್ಥಿನಿ ಅದಿತಿ ಸವಣೂರ ಪ್ರತಿಭೆ ಗುರುತಿಸಿ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಆಕೆಗೆ ಭವಿಷ್ಯದ ಕನಸಿಗೆ ಆಸರೆಯಾಗಿ ನಿಂತಿದೆ.ಸoಸ್ಥೆಯ ಅಧ್ಯಕ್ಷರಾದ ಎಂ.ಎಸ್.ಪಾಟೀಲ,ಆಡಳಿತಾಧಿಕಾರಿಗಳಾದ ಅಮಿತಗೌಡ ಪಾಟೀಲ , ಆಡಳಿತ ಮಂಡಳಿಯವರ ಪ್ರೋತ್ಸಾಹದಿಂದ ಉನ್ನತ ಮಟ್ಟದ ವಿದ್ಯಾಸಂಸ್ಥೆಯಲ್ಲಿ ಓದುವಂತಾಗಿರುವುದು ಖುಷಿ ತರಿಸಿದೆ ಎಂದು ಹೇಳಿದರು.

ವಿದ್ಯಾರ್ಥಿನಿ ಅದಿತಿ ನೀಲಕಂಠಪ್ಪ ಸವಣೂರ ಮಾತನಾಡಿ, ನನಗೆ ಎರಡು ವರ್ಷಗಳ ಕಾಲ ಉಚಿತ ಶಿಕ್ಷಣವನ್ನು ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆಯಿoದ ನೀಡಿದ್ದಾರೆ.ನಾನು ಎಸ್ಸಿ ಜಾತಿಯವಳಾಗಿದ್ದರೂ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲರು ನನ್ನನ್ನು ತಮ್ಮ ಮಗಳಂತೆ ನೋಡಿಕೊಂಡಿದ್ದಾರೆ.ಯಾವುದೇ ಜಾತಿ ಬೇಧಭಾವ ಮಾಡಿಲ್ಲ.ನನ್ನ ಸಹೋದರನೂ ಸಂಸ್ಥೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಆಯ್ಕೆಯಾಗಿ ಉಚಿತ ಶಿಕ್ಷಣ ಪಡೆದುಕೊಳ್ಳುತ್ತಿದ್ದಾನೆ ಎಂದು ಹೇಳಿದಳು. ಈ ಸಂದರ್ಭದಲ್ಲಿ ಪ್ರಾಚಾರ್ಯರಾದ ಸಿ.ಬಿ.ದೇಸಾಯಿ, ಮಾರ್ಗದರ್ಶಕರಾದ ಎನ್.ಎ.ಬಿರಾಜದಾರ,ಕಾರ್ಯದರ್ಶಿ ವಿಜಯಕುಮಾರ ಪಾಟೀಲ,ಮುಖ್ಯಗುರುಗಳಾದ ಇಸ್ಮಾಯಿಲ್ ಮನಿಯಾರ,ರಾಜಶೇಖರ ಹಿರೇಮಠ ಮೊದಲಾದವರು ಇದ್ದರು.

ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆಯಲ್ಲಿ ಒಳ್ಳೆಯ ಜವಾರಿ ಊಟವನ್ನೇ ಕೊಡುತ್ತಾರೆ.ಕಾಳುಪಲ್ಯೆ,ರೊಟ್ಟಿಯಂತಹ ಆಹಾರ ಇಂದಿನವರಿಗೆ ಹಿಡಿಸಲಿಕ್ಕಿಲ್ಲ.ಆದರೆ ಕೊಡುವ ಊಟ ಒಳ್ಳೆಯದಾಗಿದೆ.ಇಂದಿನವರಿಗೆ ಜಂಕ್ ಫುಡ್ ಇಷ್ಟವಾಗುತ್ತದೆ.ಆದರೆ ಊಟದ ವಿಷಯದಲ್ಲಿ ಆಕ್ಸಫರ್ಡ್ ಪಾಟೀಲ್ಸ್ ಸಂಸ್ಥೆಯಿoದ ಒಳ್ಳೆಯ ಊಟ ಕೊಡುತ್ತಾರೆ.
–ಅದಿತಿ ಸವಣೂರ,ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿ

Latest News

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಅವರಿಗೆ ಸಂಪುಟ ವಿಸ್ತರಣೆಯಲ್ಲಿ ಅವಕಾಶ ಕಲ್ಪಿಸಬೇಕೆಂದು ಆಗ್ರಹಿಸಿ ಮುದ್ದೇಬಿಹಾಳ ಮತ್ತು ತಾಳಿಕೋಟೆ ತಾಲೂಕಿನಿಂದ ಕಾಂಗ್ರೆಸ್ ಪಕ್ಷದ ನಿಯೋಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ. ಬೆಂಗಳೂರಿನಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸದಾಶಿವ ನಗರದಲ್ಲಿರುವ ನಿವಾಸಕ್ಕೆ ತೆರಳಿದ ನಿಯೋಗವು ಖರ್ಗೆ ಅವರನ್ನು ಭೇಟಿಯಾದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ನಿಯೋಗದ ಉಸ್ತುವಾರಿ ವಹಿಸಿದ್ದ ವಾಯ್.ಎಚ್.ವಿಜಯಕರ್