ಅಖಿಲ ಭಾರತ ದೇವಾಂಗ ಜಾಗೃತ ಸಮಾವೇಶ ಯಶಸ್ವಿಗೊಳಿಸಿ-ದಯಾನಂದಪುರಿ ಸ್ವಾಮೀಜಿ

ಅಖಿಲ ಭಾರತ ದೇವಾಂಗ ಜಾಗೃತ ಸಮಾವೇಶ ಯಶಸ್ವಿಗೊಳಿಸಿ-ದಯಾನಂದಪುರಿ ಸ್ವಾಮೀಜಿ

ಮುದ್ದೇಬಿಹಾಳ : ದೇವಾಂಗ(ನೇಕಾರ)ಸಮುದಾಯದ ಸಂಘಟನೆ,ಜಾಗೃತಿಗಾಗಿ ಅಖಿಲ ಭಾರತ ದೇವಾಂಗ ಬೃಹತ್ ಜನಜಾಗೃತಿ ಸಮಾವೇಶ ಹಾಗೂ ದಯಾನಂದಪುರಿ ಸ್ವಾಮೀಜಿಗಳ 36ನೇ ಪಟ್ಟಾಭಿಷೇಕ ಮಹೋತ್ಸವವನ್ನು ಮೇ.8 ಹಾಗೂ 9 ರಂದು ಬಾದಾಮಿ ತಾಲ್ಲೂಕು ಬನಶಂಕರಿ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದ್ದು ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ದೇವಾಂಗ ಸಮಾಜದ ಜಿಲ್ಲಾಧ್ಯಕ್ಷ ಬಸವರಾಜ ಚಿತ್ತರಗಿ ಹೇಳಿದರು.

ಪಟ್ಟಣದ ಬನಶಂಕರಿ ದೇವಸ್ಥಾನದಲ್ಲಿ ಬುಧವಾರ ಕಾರ್ಯಕ್ರಮಕ್ಕೆ ಆಹ್ವಾನ ನೀಡಲು ಹಂಪಿ ಹೇಮಕೂಟ ಶ್ರೀ ಗಾಯತ್ರಿಪೀಠದ ಜಗದ್ಗುರು ದಯಾನಂದಪುರಿ ಸ್ವಾಮೀಜಿಗಳು ಆಗಮಿಸಿದ್ದ ವೇಳೆ ಅವರು ಸಮಾಜದ ಬಾಂಧವರ ಸಭೆಯಲ್ಲಿ ಮಾತನಾಡಿದರು. ಹಂಪಿಯಲ್ಲಿ ದೇವಾಂಗ ಸಮಾಜದ ಮೂಲಮಠವಿದ್ದು ತಮಿಳುನಾಡಿನ ತ್ರಿಮೂರ್ತಿ ಮಲೈನಲ್ಲಿ,ಬಾದಾಮಿಯ ಬನಶಂಕರಿ ಕ್ಷೇತ್ರದಲ್ಲಿ,ವಿಜಾಪುರದಲ್ಲಿ ಮತ್ತು ನೆಲಮಂಗಲದ ಕೆಂಪಲಿAಗನಹಳ್ಳಿಯಲ್ಲಿ ಶ್ರೀಗಳು ಗಾಯತ್ರಿಪೀಠದ ಶಾಖಾ ಮಠಗಳನ್ನು ಸ್ಥಾಪಿಸಿ ಅಭಿವೃದ್ಧಿಪಡಿಸಿದ್ದಾರೆ ಎಂದು ಹೇಳಿದರು.

ಶ್ರೀ ಬನಶಂಕರಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ,ಪತ್ರಕರ್ತ ಶಂಕರ ಈ.ಹೆಬ್ಬಾಳ ಮಾತನಾಡಿ, ಹಂಪಿ ಹೇಮಕೂಟ ಗಾಯತ್ರಿಪೀಠ ಮಹಾಸಂಸ್ಥಾನ ಟ್ರಸ್ಟ್ ಹಾಗೂ ಕರ್ನಾಟಕ ರಾಜ್ಯ ದೇವಾಂಗ ಸಂಘದ ಸಹಯೋಗದಲ್ಲಿ ಅಖಿಲ ಭಾರತ ಮಟ್ಟದ ದೇವಾಂಗ ಜನಜಾಗೃತಿ ಸಮಾವೇಶ ಹಾಗೂ ದಯಾನಂದಪುರಿ ಸ್ವಾಮೀಜಿಗಳ 36ನೇ ಪಟ್ಟಾಭಿಷೇಕ ಮಹೋತ್ಸವನ್ನು ಸಂಘಟಿಸಿದ್ದಾರೆ.ರಾಷ್ಟಾçದಾದ್ಯOತ ಇರುವ ದೇವಾಂಗ ಸಮಾಜ ಬಾಂಧವರನ್ನು ಒಂದೆಡೆ ಸೇರಿಸಿ ನಮ್ಮ ಸಂಘಟನಾ ಶಕ್ತಿಯನ್ನು ತೋರಿಸುವ ಉದ್ದೇಶದಿಂದ ಹಾಗೂ ರಾಜಕೀಯ,ಆರ್ಥಿಕ,ಶೈಕ್ಷಣಿ ಹಾಗೂ ಔದ್ಯೋಗಿಕ ಕ್ಷೇತ್ರಗಳಲ್ಲಿ ಹಿಂದುಳಿದಿರುವ ನಮ್ಮ ಸಮಾಜಕ್ಕೆ ಶಕ್ತಿ ತುಂಬಲು ಸಮಾವೇಶ ಆಯೋಜಿಸಲಾಗಿದೆ ಎಂದು ಹೇಳಿದರು.

ಸಭೆಯ ದಿವ್ಯ ಸಾನಿಧ್ಯ ವಹಿಸಿದ್ದ ಹಂಪಿ ಹೇಮಕೂಟ ಗಾಯತ್ರಿ ಮಹಾಸಂಸ್ಥಾನ ಗುರುಪೀಠದ ದಯಾನಂದಪುರಿ ಸ್ವಾಮೀಜಿಗಳು ಮಾತನಾಡಿ,ಮಠದಿಂದ ಈಗಾಗಲೇ ಕೆಂಪಲಿOಗನಹಳ್ಳಿ ಶಾಖಾಮಠದ ಆವರಣದಲ್ಲಿ ಒಂದು ಶಾಲಾ ಕಟ್ಟಡ,ಬೃಹತ್ ಕಲ್ಯಾಣಮಂಟಪ ನಿರ್ಮಿಸಲಾಗಿದೆ.ದೇವಾಂಗ ಸಂಘವು ಸಮಾಝದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರ ನೀಡುತ್ತ ಬಂದಿದೆ.ಇದಲ್ಲದೇ ಹಲವಾರು ಕ್ಷೇತ್ರಗಳಲ್ಲಿ ಹಿಂದುಳಿದಿರುವ ನಮ್ಮ ಸಮಾಜಕ್ಕೆ ಮತ್ತು ನೇಕಾರಿಕೆಯನ್ನೇ ವೃತ್ತಿಯನ್ನಾಗಿ ಮಾಡಿಕೊಂಡಿರುವ ಸಮಾಜದ ಬಾಂಧವರಿಗೆ ಆಧುನಿಕ ತಂತ್ರಜ್ಞಾನದಿAದ ಆಗುತ್ತಿರುವ ಹಲವಾರು ತೊಂದರೆಗಳಿಗೆ ಪರಿಹಾರಗಳನ್ನು ಕಂಡುಕೊಳ್ಳಲು ಬೃಹತ್ ಸಂಘಟನೆಯ ಸಮಾವೇಶ ಆಯೋಜಿಸಲಾಗುತ್ತಿದೆ.ಕಾರ್ಯಕ್ರಮಕ್ಕೆ ರಾಜ್ಯದ ಮುಖ್ಯಮಂತ್ರಿಗಳು,ಉಪ ಮುಖ್ಯಮಂತ್ರಿಗಳು,ಅನ್ಯ ರಾಜ್ಯದ ಪೀಠಾಧಿಪತಿಗಳು,ದೇವಾಂಗ ಸಮಾಜದ ಅಧ್ಯಕ್ಷರು,ಮುಖಂಡರು ಆಗಮಿಸುತ್ತಿದ್ದಾರೆ.ಈ ಸಮಾವೇಶಕ್ಕೆ ನಾಡಿನ ಮೂಲೆ ಮೂಲೆಯಲ್ಲಿರುವ ದೇವಾಂಗ ಸಮಾಜದ ಕುಲಬಾಂಧವರು ಆಗಮಿಸಿ ಸಮಾವೇಶ ಯಶಸ್ವಿಗೆ ಶ್ರಮಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ಹಂಪಿ ಹೇಮಕೂಟ ಗಾಯತ್ರಿ ಪೀಠದ ಟ್ರಸ್ಟಿ ನಾಗೇಶ ಭಾವಿಕಟ್ಟಿ, ಸಮಾಜದ ಮುಖಂಡರಾದ ಮುತ್ತಣ್ಣ ಪ್ಯಾಟಿಗೌಡರ,ಸಿದ್ದಣ್ಣ ಚಿತ್ತರಗಿ,ಸಂಗಣ್ಣ ಡಂಬಳ,ಉಮ್ಮಣ್ಣ ಹೆಬ್ಬಾಳ, ಅಮರೀಶ ಡಂಬಳ,ನಾಗಪ್ಪ ಅಗಸಬಾಳ,ಉದಯ ಕುಪ್ಪಸ್ತ,ಯುವ ಘಟಕದ ಅಧ್ಯಕ್ಷ ಶಿವಶಂಕರ ಪ್ಯಾಟಿಗೌಡರ,ಶ್ರೀ ಬನಶಂಕರಿ ಪತ್ತಿನ ಸಹಕಾರಿ ಸಂಘದ ಪರವಾಗಿ ಶ್ರೀಗಳನ್ನು ಸನ್ಮಾನಿಸಲಾಯಿತು.ಸಂಘದ ಅಧ್ಯಕ್ಷ ಶಂಕರ ಹೆಬ್ಬಾಳ, ಉಪಾಧ್ಯಕ್ಷ ರಮೇಶ ಹೆಬ್ಬಾಳ,ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ವಿಜಯಲಕ್ಷಿö್ಮÃ ಪ್ಯಾಟಿಗೌಡರ,ನಿರ್ದೇಶಕರಾದ ಶ್ರೀಕಾಂತ ಹೆಬ್ಬಾಳ,ದ್ಯಾವಪ್ಪ ಹುಣಶ್ಯಾಳ ಸೇರಿದಂತೆ ಹಲವರು ಇದ್ದರು.

Latest News

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪಟ್ಟಣದ ಹಸಿರು ತೋರಣ ಗೆಳೆಯರ ಬಳಗ ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡಲಾಗುವ "ಪರಿಸರ ರಕ್ಷಕ" ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ. ಗಿಡಗಳನ್ನು ನೆಟ್ಟು ಬೆಳೆಸಿರುವ, ಸಂರಕ್ಷಿಸಿರುವ ವ್ಯಕ್ತಿಗಳಿಗೆ, ಶಾಲೆ ಕಾಲೇಜುಗಳ ಶಿಕ್ಷಕರು, ಸಂಘ, ಸಂಸ್ಥೆಗಳಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಮುದ್ದೇಬಿಹಾಳ ತಾಲ್ಲೂಕಿನ ವ್ಯಾಪ್ತಿಯಲ್ಲಿ ಪರಿಸರ ರಕ್ಷಣೆ ಮಾಡಿರುವ ಅರ್ಹರು ತಮ್ಮ ವಿವರಗಳುಳ್ಳ ಅರ್ಜಿಗಳನ್ನು ಜೂನ್ 3 ರೊಳಗೆ, ಅಧ್ಯಕ್ಷರು,

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಎಂ.ಬಿ.ಎಲ್ ಗ್ರೂಪನಿಂದ ಪಟ್ಟಣದಲ್ಲಿ ಮೂರು ವಾರಗಳಿಂದ ಜರುಗುತ್ತಿದ್ದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಾಮೆಂಟ್‌ನ ಫೈನಲ್ ಪಂದ್ಯಾವಳಿ ಮೇ.24 ರಂದು ಜರುಗಲಿದೆ ಎಂದು ಆಯೋಜಕರ ಬಳಗ ತಿಳಿಸಿದೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಫೈನಲ್ ಪಂದ್ಯಾವಳಿಯ ಕುರಿತು ಮಾಹಿತಿ ನೀಡಿದ ಸಂಘಟಕರಲ್ಲೊಬ್ಬರಾದ ಕಾಮರಾಜ ಬಿರಾದಾರ, ಈಗಾಗಲೇ ನಿಡಗುಂದಿ ತಂಡವನ್ನು ಸೋಲಿಸಿ ಆಲಮಟ್ಟಿ ತಂಡ ಫೈನಲ್ ತಲುಪಿದ್ದು ಮೇ.24 ರಂದು ಜರುಗಲಿರುವ ಸೆಮಿಫೈನಲ್ ಪಂದ್ಯದಲ್ಲಿ ಮುದ್ದೇಬಿಹಾಳ ಹಾಗೂ